Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 30:5 - ಪರಿಶುದ್ದ ಬೈಬಲ್‌

5 “ಜನರು ಭಯದಿಂದ ಗೋಳಿಡುವದನ್ನು ನಾವು ಕೇಳುತ್ತಿದ್ದೇವೆ. ಜನರು ಅಂಜಿಕೊಂಡಿದ್ದಾರೆ; ನೆಮ್ಮದಿಯಿಲ್ಲದವರಾಗಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 “ಯೆಹೋವನು ಇಂತೆನ್ನುತ್ತಾನೆ, ಭೀತಿಯಿಂದಾಗುವ ಶಬ್ದವು ಕೇಳಿಸಿದೆ; ಭಯವೇ ಹೊರತು ಸಮಾಧಾನವಿಲ್ಲ;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

5 “ಸರ್ವೇಶ್ವರ ಹೀಗೆನ್ನುತ್ತಾರೆ: ಕೇಳಿಸಿದೆ ಭಯದಿಂದ ಕೂಡಿದ ಶಬ್ದ ಹೌದು, ಅದು ಕೂಡಿದೆ ಭೀತಿಯಿಂದ, ಶಾಂತಿಯಿಂದಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

5 ಯೆಹೋವನು ಇಂತೆನ್ನುತ್ತಾನೆ, ಭೀತಿಯಿಂದಾಗುವ ಶಬ್ದವು ಕೇಳಿಸಿದೆ; ಭಯವೇ ಹೊರತು ಸಮಾಧಾನವಿಲ್ಲ;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

5 “ಯೆಹೋವ ದೇವರು ಹೀಗೆ ಹೇಳುತ್ತಾರೆ: “ ‘ನಾವು ನಡುಗುವಿಕೆಯ ಮತ್ತು ಭಯದ ಧ್ವನಿಯನ್ನು ಕೇಳಿದ್ದೇವೆಯೇ ಹೊರತು, ಸಮಾಧಾನದ್ದಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 30:5
22 ತಿಳಿವುಗಳ ಹೋಲಿಕೆ  

ನಿಮ್ಮ ಸಂತಸದ ದಿವಸಗಳನ್ನು ಸತ್ತವರಿಗಾಗಿ ರೋದಿಸುವ ದಿವಸಗಳನ್ನಾಗಿ ಮಾಡುವೆನು. ನಿಮ್ಮ ಹಾಡುಗಳೆಲ್ಲಾ ಶೋಕಗೀತೆಯಾಗುವವು. ಎಲ್ಲರೂ ಶೋಕಬಟ್ಟೆಯನ್ನು ಧರಿಸುವಂತೆ ಮಾಡುವೆನು. ಪ್ರತಿ ತಲೆಯನ್ನು ಬೋಳು ತಲೆಯನ್ನಾಗಿ ಮಾಡುವೆನು. ಒಬ್ಬನೇ ಮಗನನ್ನು ಕಳೆದುಕೊಳ್ಳುವಾಗ ರೋದಿಸುವ ಹಾಗೆ ಗಟ್ಟಿಯಾಗಿ ರೋದಿಸುವಂತೆ ಮಾಡುತ್ತೇನೆ. ಅದರ ಅಂತ್ಯ ಕಹಿಯಾಗಿರುವುದು.”


ಆದ್ದರಿಂದ ಸಮುದ್ರವು ಭೋರ್ಗರೆಯವಂತೆ ಆ ದಿನದಲ್ಲಿ ಗರ್ಜನೆಯಿರುವುದು. ಸೆರೆಹಿಡಿಯಲ್ಪಟ್ಟ ಜನರು ನೆಲದ ಕಡೆ ನೋಡುವರು. ಅಲ್ಲಿ ಬರೇ ಕತ್ತಲೆಯೇ. ಆ ದಟ್ಟವಾದ ಮೋಡಗಳಲ್ಲಿ ಎಲ್ಲವೂ ಕಪ್ಪಾಗಿಯೇ ಕಾಣುತ್ತದೆ.


ನಾನು ನೋಡುತ್ತಿರುವುದೇನು? ಸೈನ್ಯವು ಗಾಬರಿಪಟ್ಟಿದೆ. ಸೈನಿಕರು ಓಡಿಹೋಗುತ್ತಿದ್ದಾರೆ. ಅವರ ಶೂರಸೈನಿಕರು ಸೋತಿದ್ದಾರೆ. ಅವರು ಅವಸರದಿಂದ ಓಡಿಹೋಗುತ್ತಿದ್ದಾರೆ. ಅವರು ಹಿಂದಕ್ಕೆ ತಿರುಗಿ ಸಹ ನೋಡುತ್ತಿಲ್ಲ. ಎಲ್ಲಾ ಕಡೆಗೂ ಭೀತಿ ಆವರಿಸಿಕೊಂಡಿದೆ” ಯೆಹೋವನು ಹೀಗೆಂದನು.


ಕುರುಬರ ಕೂಗಾಟ ನನಗೆ ಕೇಳುತ್ತಿದೆ. ಕುರಿಗಳ ಗೋಳಾಟ ನನಗೆ ಕೇಳಿಬರುತ್ತಿದೆ. ಯೆಹೋವನು ಅವರ ದೇಶವನ್ನು ನಾಶಮಾಡುತ್ತಿದ್ದಾನೆ.


“ಚೀಯೋನಿನಿಂದ ಮಹಾಗೋಳಾಟವು ಕೇಳಿಸುತ್ತಿದೆ: ‘ನಿಜವಾಗಿಯೂ ನಾವು ಹಾಳಾಗಿಹೋದೆವು. ನಿಜವಾಗಿಯೂ ನಾವು ನಾಚಿಕೆಪಡುವಂತಾಗಿದೆ. ನಾವು ನಮ್ಮ ನಾಡನ್ನು ಬಿಡಬೇಕು, ಏಕೆಂದರೆ ನಮ್ಮ ಮನೆಗಳನ್ನು ನಾಶಪಡಿಸಲಾಗಿದೆ.’”


ನನ್ನ ಜನರ ಮೊರೆಯನ್ನು ಆಲಿಸು. ದೇಶದ ಎಲ್ಲೆಡೆಯಲ್ಲಿಯೂ ಅವರು ಸಹಾಯಕ್ಕಾಗಿ ಕೂಗುತ್ತಿದ್ದಾರೆ. “ಈಗಲೂ ಯೆಹೋವನು ಚೀಯೋನಿನಲ್ಲಿದ್ದಾನೆಯೇ? ಚೀಯೋನಿನ ರಾಜನು ಈಗಲೂ ಅಲ್ಲಿದ್ದಾನೆಯೇ?” ಎಂದು ಅವರು ಕೇಳುತ್ತಾರೆ. ದೇವರು ಹೀಗೆನ್ನುತ್ತಾನೆ: “ಯೆಹೂದದ ಜನರು ತಮ್ಮ ವಿಗ್ರಹಗಳನ್ನು ಪೂಜಿಸಿ ನನ್ನ ಕೋಪವನ್ನು ಏಕೆ ಕೆರಳಿಸುತ್ತಾರೆ? ಅವರು ನಿಷ್ಪ್ರಯೋಜಕವಾದ ಅನ್ಯದೇವರ ವಿಗ್ರಹಗಳನ್ನು ಪೂಜಿಸಿದರು.”


ನಾವೆಲ್ಲಾ ಗುಣುಗುಟ್ಟುತ್ತೇವೆ. ನಾವು ಕರಡಿಗಳಂತೆ ಗುರುಗುಟ್ಟುತ್ತಿದ್ದೇವೆ, ಪಾರಿವಾಳಗಳಂತೆ ಮೂಲುಗುತ್ತಿದ್ದೇವೆ. ಜನರು ಧರ್ಮವನ್ನು ಅನುಸರಿಸುವ ಸಮಯಕ್ಕಾಗಿ ನಾವು ಕಾಯುತ್ತಿದ್ದೇವೆ. ಆದರೆ ಧರ್ಮವೇ ಇಲ್ಲ. ನಾವು ರಕ್ಷಣೆಗಾಗಿ ಕಾಯುತ್ತಿದ್ದೇವೆ. ಆದರೆ ರಕ್ಷಣೆಯು ಬಹುದೂರವಿದೆ.


ದಾನ್‌ಕುಲದವರ ಪ್ರದೇಶದಿಂದ ನಾವು ಶತ್ರುಗಳ ಕುದುರೆಗಳ ಕೆನೆತವನ್ನು ಕೇಳುತ್ತಿದ್ದೇವೆ. ಅವುಗಳ ಪಾದಗಳ ಬಡಿತದಿಂದ ಭೂಮಿ ನಡುಗುತ್ತಿದೆ. ಅವರು ನಮ್ಮ ಪ್ರದೇಶವನ್ನು ಮತ್ತು ಅಲ್ಲಿದ್ದ ಎಲ್ಲವನ್ನು ಹಾಳುಮಾಡಲು ಬಂದಿದ್ದಾರೆ. ಅವರು ನಗರವನ್ನು ಮತ್ತು ಅಲ್ಲಿದ್ದ ಎಲ್ಲಾ ಜನರನ್ನು ಹಾಳುಮಾಡಲು ಬಂದಿದ್ದಾರೆ.


ಅನೇಕ ಸೈನಿಕರು ಆ ಬೋಳುಬೆಟ್ಟಗಳನ್ನು ತುಳಿದುಕೊಂಡು ಹೋದರು. ಆ ಸೈನ್ಯಗಳಿಂದ ಯೆಹೋವನು ಆ ದೇಶವನ್ನು ದಂಡಿಸಿದನು. ಆ ದೇಶದ ಒಂದು ತುದಿಯಿಂದ ಇನ್ನೊಂದು ತುದಿಯವರೆಗೆ ವಾಸಿಸಿದ ಎಲ್ಲಾ ಜನರನ್ನು ದಂಡಿಸಲಾಯಿತು. ಯಾರೂ ಸುರಕ್ಷಿತವಾಗಿ ಉಳಿಯಲಿಲ್ಲ.


ಇಸ್ರೇಲಿನ ಮತ್ತು ಯೆಹೂದದ ಜನರ ಬಗ್ಗೆ ಯೆಹೋವನು ಈ ಸಂದೇಶವನ್ನು ಕೊಟ್ಟನು:


ಯೆಹೋವನು ಹೇಳುವುದೇನೆಂದರೆ: “ಉತ್ತರ ದಿಕ್ಕಿನಿಂದ ಒಂದು ಸೈನ್ಯವು ಬರಲಿದೆ. ಭೂಮಿಯ ಬಹುದೂರದ ಸ್ಥಳಗಳಿಂದ ಒಂದು ಮಹಾಜನಾಂಗವು ಬರಲಿದೆ.


ಅಯ್ಯೋ ನನ್ನ ಜನರೇ, ಗೋಣಿತಟ್ಟನ್ನು ಸುತ್ತಿಕೊಂಡು ಬೂದಿಯಲ್ಲಿ ಹೊರಳಾಡಿರಿ. ಸತ್ತವರಿಗಾಗಿ ದೊಡ್ಡ ಧ್ವನಿಯಲ್ಲಿ ರೋದಿಸಿರಿ. ಇದ್ದೊಬ್ಬ ಮಗನನ್ನು ಕಳೆದುಕೊಂಡಂತೆ ಬೋರ ಪ್ರಲಾಪ ಮಾಡಿರಿ. ವಿನಾಶಕನು ತಕ್ಷಣ ನಮ್ಮ ಮೇಲೆರಗುವನು.


ನಾನು ಬಾಬಿಲೋನಿನವರನ್ನು ಬಲಾಢ್ಯ ಜನಾಂಗವಾಗಿ ಮಾಡುವೆನು. ಅವರು ಬಲಶಾಲಿಗಳೂ ನಿರ್ದಯಿಗಳೂ ಆಗಿದ್ದಾರೆ. ಅವರು ಲೋಕದಲ್ಲೆಲ್ಲಾ ಸಂಚರಿಸುವರು. ತಮ್ಮದಲ್ಲದ ಮನೆಗಳನ್ನು ಮತ್ತು ನಗರಗಳನ್ನು ತಮ್ಮ ವಶಮಾಡಿಕೊಳ್ಳುವರು.


“ಇತರ ಜನಾಂಗದ ಅರಸರನ್ನು ಬಾಬಿಲೋನಿನ ಸೈನಿಕರು ಗೇಲಿ ಮಾಡುತ್ತಾರೆ. ಪರದೇಶದ ಅರಸರು ಅವರಿಗೆ ಹಾಸ್ಯಾಸ್ಪದವಾಗಿರುತ್ತಾರೆ. ಕೋಟೆಕೊತ್ತಲುಗಳಿರುವ ನಗರವನ್ನು ನೋಡಿ ಅವರು ನಗಾಡುವರು. ಆ ಸೈನಿಕರು ಕೋಟೆಯ ಗೋಡೆಯ ತನಕ ಮಣ್ಣಿನದಿಬ್ಬವನ್ನೇರಿಸಿ, ಸುಲಭವಾಗಿ ಪಟ್ಟಣಗಳನ್ನು ವಶಮಾಡಿಕೊಳ್ಳುವರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು