“ದರ್ಶನದಲ್ಲಿ ಕಾಣಿಸಿಕೊಂಡ ಮನುಷ್ಯನು, ದಾನಿಯೇಲನೇ, ಆಗ ದೇವದೂತನಾದ ಮಿಕಾಯೇಲನು ಏಳುವನು. ಮಿಕಾಯೇಲನು ಯೆಹೂದ್ಯರಾದ ನಿಮ್ಮ ಹಿತಾಸಕ್ತಿಗಳನ್ನು ನೋಡಿಕೊಳ್ಳುವನು. ಮಹಾಸಂಕಟದ ಕಾಲ ಬರುವದು. ಭೂಮಿಯ ಮೇಲೆ ರಾಷ್ಟ್ರಗಳು ಹುಟ್ಟಿದಂದಿನಿಂದ ಸಂಭವಿಸದಂತಹ ಸಂಕಟಗಳು ಸಂಭವಿಸುವವು. ಆದರೆ ದಾನಿಯೇಲನೇ, ನಿಮ್ಮ ಜನಗಳಲ್ಲಿ ಯಾರ ಹೆಸರುಗಳು ‘ಜೀವಬಾಧ್ಯರ ಗ್ರಂಥದಲ್ಲಿ’ ಬರೆಯಲ್ಪಟ್ಟಿದೆಯೋ ಅವರೆಲ್ಲರನ್ನು ರಕ್ಷಿಸಲಾಗುವುದು.
“ಆ ನ್ಯಾಯತೀರ್ಪಿನ ದಿನವು ಬರುತ್ತಿದೆ. ಅದು ಕುಲುಮೆಯಂತೆ ತೀಕ್ಷ್ಣವಾಗಿರುವದು. ಅಹಂಕಾರಿಗಳೆಲ್ಲಾ ಶಿಕ್ಷಿಸಲ್ಪಡುವರು. ದುಷ್ಟಜನರೆಲ್ಲಾ ಹುಲ್ಲಿನಂತೆ ಸುಡುವರು. ಆ ಸಮಯದಲ್ಲಿ ಒಂದು ಪೊದೆ ಬೆಂಕಿಯಲ್ಲಿ ಸುಡುವಂತೆ ಸುಡುವರು. ಆದರೆ ಕೊಂಬೆ ಅಥವಾ ಬೇರು ಯಾವದೂ ಉಳಿಯುವದಿಲ್ಲ.” ಇದು ಸರ್ವಶಕ್ತನಾದ ಯೆಹೋವನ ನುಡಿ.
“ನಮಗೂ ನಮ್ಮ ನಾಯಕರುಗಳಿಗೂ ನೀನು ಹೇಳಿದಂತೆಯೇ ಮಾಡಿರುವೆ. ನೀನು ನಮ್ಮ ಮೇಲೆ ದೊಡ್ಡ ಕೇಡನ್ನು ಬರಮಾಡಿರುವೆ. ಜೆರುಸಲೇಮ್ ನಗರಕ್ಕೆ ಉಂಟಾದಷ್ಟು ಕೇಡು ಭೂಮಂಡಲದಲ್ಲಿ ಯಾವ ನಗರಕ್ಕೂ ಆಗಿಲ್ಲ.
ಯೆಹೋವನು ತನ್ನ ಸೈನ್ಯವನ್ನು ಮಹಾಧ್ವನಿಯಿಂದ ಕರೆಯುತ್ತಾನೆ. ಆತನ ಶಿಬಿರವು ದೊಡ್ಡದಾಗಿದೆ. ಆ ಸೈನ್ಯವು ಆತನ ಆಜ್ಞೆಯನ್ನು ಪಾಲಿಸುತ್ತದೆ; ಆ ಸೈನ್ಯವು ಮಹಾ ಬಲಿಷ್ಠವಾಗಿದೆ. ಯೆಹೋವನ ಮಹಾದಿನವು ಮಹಾ ಭಯಂಕರವಾದ ದಿನವಾಗಿದೆ. ಅದನ್ನು ಸಹಿಸಲು ಯಾರಿಗೂ ಸಾಧ್ಯವಿಲ್ಲ.
ಹೀಗೆ ಎಲ್ಲಾ ಇಸ್ರೇಲರು ರಕ್ಷಣೆ ಹೊಂದುವರು. ಪವಿತ್ರ ಗ್ರಂಥದಲ್ಲಿ ಹೀಗೆ ಬರೆಯಲ್ಪಟ್ಟಿದೆ: “ಸಿಯೋನಿನಿಂದ ರಕ್ಷಕನು ಬರುವನು: ಆತನು ಯಾಕೋಬನ ಕುಟುಂಬದಿಂದ ಎಲ್ಲಾ ದುಷ್ಟತನವನ್ನು ನಿವಾರಣೆ ಮಾಡುವನು.
“ಆಗ ಇಸ್ರೇಲಿನ ಪ್ರಜೆಗಳು ಮತ್ತು ಯೆಹೂದ ಪ್ರಾಂತ್ಯದ ಪ್ರಜೆಗಳು ಒಂದಾಗಿ ಸೇರಲ್ಪಡುವರು. ತಮಗೆ ಒಬ್ಬ ಅರಸನನ್ನು ಅವರು ಆರಿಸಿಕೊಳ್ಳುವರು. ಅವರ ಜನಾಂಗಕ್ಕೆ ಆ ದೇಶವು ಸಾಲದೆ ಹೋಗುವದು. ಇಜ್ರೇಲನ ದಿನವು ನಿಜವಾಗಿಯೂ ಮಹತ್ವವುಳ್ಳದ್ದಾಗಿರುವದು.”
ರಸ್ತೆಯಲ್ಲಿ ಹಾದುಹೋಗುವ ಜನರೇ, ನೀವು ನನ್ನ ಬಗ್ಗೆ ಯೋಚಿಸುವುದಿಲ್ಲವೆಂದು ತೋರುತ್ತದೆ. ನನ್ನ ಕಡೆಗೆ ಗಮನ ಕೊಡಿ. ನನ್ನ ನೋವಿನಂಥ ನೋವು ಮತ್ತೊಂದು ಇದೆಯೇ? ನನಗೆ ಬಂದಂಥ ನೋವು ಇನ್ನಾವುದಾದರೂ ಇದೆಯೇ? ದಂಡನೆಯಾಗಿ ಯೆಹೋವನು ನನಗೆ ಕೊಟ್ಟ ನೋವಿನಂಥ ನೋವು ಮತ್ತೊಂದು ಇದೆಯೇ? ಆತನು ತನ್ನ ಮಹಾಕೋಪದ ದಿನದಂದು ನನ್ನನ್ನು ದಂಡಿಸಿರುವನು.
ಯೆಹೋವನು ಹೀಗೆಂದನು: “ನನ್ನ ಸೇವಕನಾದ ಯಾಕೋಬನೇ, ಭಯಪಡಬೇಡ! ಇಸ್ರೇಲೇ, ಅಂಜಬೇಡ, ನಾನು ನಿಮ್ಮನ್ನು ಆ ದೂರಪ್ರದೇಶದಿಂದ ರಕ್ಷಿಸುವೆನು. ಆ ದೂರದೇಶದಲ್ಲಿ ನೀವು ಬಂಧಿಗಳಾಗಿದ್ದೀರಿ, ಆದರೆ ನಾನು ನಿಮ್ಮ ವಂಶದವರನ್ನು ರಕ್ಷಿಸುತ್ತೇನೆ. ಅವರನ್ನು ಆ ನಾಡಿನಿಂದ ಮತ್ತೆ ಕರೆದುತರುತ್ತೇನೆ. ಯಾಕೋಬು ಮತ್ತೆ ನೆಮ್ಮದಿಯಿಂದ ಇರುವುದು. ಜನರು ಯಾಕೋಬನನ್ನು ಪೀಡಿಸುವದಿಲ್ಲ; ನನ್ನ ಜನರನ್ನು ಹೆದರಿಸುವ ಶತ್ರುಗಳಿರುವದಿಲ್ಲ.” ಇದು ಯೆಹೋವನ ನುಡಿ.
ನನ್ನ ಪ್ರಿಯ ಜೆರುಸಲೇಮೇ, ನಾನು ನಿನ್ನ ಬಗ್ಗೆ ಏನು ಹೇಳಲಿ? ನಾನು ನಿನ್ನನ್ನು ಯಾವುದಕ್ಕೆ ಹೋಲಿಸಲಿ? ನೀನು ಎಂಥವಳೆಂದು ಹೇಳಲಿ? ನನ್ನ ಚೀಯೋನೇ, ನಾನು ನಿನ್ನನ್ನು ಹೇಗೆ ಸಂತೈಸಲಿ. ನಿನ್ನ ವಿನಾಶವು ಸಾಗರದಷ್ಟು ಅಪಾರ. ಯಾರೂ ನಿನ್ನನ್ನು ಸ್ವಸ್ಥ ಮಾಡಲಾರರು ಎಂದೆನಿಸುತ್ತದೆ.
ಯಾಕೋಬನಿಗೆ ಭಯವಾಯಿತು. ಅವನು ತನ್ನೊಡನೆ ಇದ್ದ ಜನರನ್ನು ಎರಡು ಗುಂಪುಗಳನ್ನಾಗಿ ವಿಂಗಡಿಸಿದನು. ಅವನು ಎಲ್ಲಾ ಆಡುಕುರಿಗಳನ್ನೂ ದನಕರುಗಳನ್ನೂ ಒಂಟೆಗಳನ್ನೂ ಎರಡು ಗುಂಪುಗಳನ್ನಾಗಿ ವಿಂಗಡಿಸಿದನು.
ಸಮುದ್ರ ತೀರದಲ್ಲಿ ವಾಸಿಸುವವರು ಹೀಗೆ ಹೇಳುವರು: “ಆ ದೇಶದವರು ನಮಗೆ ಸಹಾಯ ಮಾಡುವರೆಂದು ಅವರನ್ನು ನಂಬಿದೆವು. ಅಶ್ಶೂರದ ಅರಸನಿಂದ ನಮ್ಮನ್ನು ಕಾಪಾಡುವಂತೆ ನಾವು ಅವರ ಬಳಿಗೆ ಓಡಿಹೋದೆವು. ಆದರೆ ಈಗ ನೋಡಿ, ಆ ದೇಶದವರು ಸೋತು ಹೋಗಿ ವೈರಿವಶವಾಗಿದ್ದಾರೆ. ಈಗ ನಾವು ಪಾರಾಗಲು ಹೇಗೆ ಸಾಧ್ಯ?”
ಅವರು ಮರದ ತುಂಡುಗಳೊಡನೆ ಮಾತನಾಡಿ, ‘ನೀನು ನಮ್ಮ ತಂದೆ’ ಎಂದು ಹೇಳುವರು. ಆ ಜನರು ಕಲ್ಲುಬಂಡೆಯೊಂದಿಗೆ ಮಾತನಾಡಿ, ‘ನೀನು ನಮಗೆ ಜನ್ಮಕೊಟ್ಟ ತಾಯಿ’ ಎಂದು ಹೇಳುವರು. ಆ ಜನರೆಲ್ಲರು ನಾಚಿಕೆಪಡುವರು. ಅವರು ನನ್ನ ಕಡೆಗೆ ನೋಡುವದಿಲ್ಲ. ಅವರು ನನಗೆ ವಿಮುಖರಾಗಿದ್ದಾರೆ. ಆದರೆ ಯೆಹೂದದ ಜನರು ಕಷ್ಟದಲ್ಲಿ ಸಿಕ್ಕಿಹಾಕಿಕೊಂಡಾಗ, ‘ಬಾ ನಮ್ಮನ್ನು ರಕ್ಷಿಸು’ ಎಂದು ನನ್ನನ್ನು ಕೇಳುತ್ತಾರೆ.
ಆ ವಿಗ್ರಹಗಳು ಬಂದು ನಿಮ್ಮನ್ನು ರಕ್ಷಿಸಲಿ, ನೀವು ಮಾಡಿದ ವಿಗ್ರಹಗಳು ಎಲ್ಲಿವೆ? ನೀವು ಕಷ್ಟದಲ್ಲಿದ್ದಾಗ ಆ ವಿಗ್ರಹಗಳು ಬಂದು ನಿಮ್ಮನ್ನು ರಕ್ಷಿಸುವವೇ ಎಂಬುದನ್ನು ನೋಡೋಣ. ಯೆಹೂದದ ನಿವಾಸಿಗಳೇ, ನಿಮ್ಮಲ್ಲಿ ಎಷ್ಟು ಪಟ್ಟಣಗಳಿವೆಯೋ ಅಷ್ಟು ವಿಗ್ರಹಗಳಿವೆ.
ಯೆಹೋವನೇ, ನೀನು ಇಸ್ರೇಲರ ಆಶಾಕಿರಣ, ಕಷ್ಟಕಾಲದಲ್ಲಿ ಇಸ್ರೇಲನ್ನು ನೀನು ಕಾಪಾಡುವೆ. ಆದರೆ ಈಗ ನೀನು ಈ ದೇಶದಲ್ಲಿ ಪರದೇಶಿಯಂತೆ ಕಾಣುವೆ. ಕೇವಲ ಒಂದು ರಾತ್ರಿ ಮಾತ್ರ ಉಳಿಯುವ ಪ್ರಯಾಣಿಕನಂತೆ ಕಾಣುವೆ.
ನಾಯಕರೇ, ಈ ಸಂದೇಶಕ್ಕೆ ಕಿವಿಗೊಡಿರಿ. ದೇಶದಲ್ಲಿ ವಾಸಿಸುವ ಎಲ್ಲಾ ಜನರೇ, ನನ್ನ ಮಾತುಗಳನ್ನು ಆಲೈಸಿರಿ. ನಿಮ್ಮ ಜೀವಮಾನಕಾಲದಲ್ಲಿ ಇಂಥಾ ಸಂಗತಿ ಎಂದಾದರೂ ಸಂಭವಿಸಿದೆಯೋ? ಇಲ್ಲ! ನಿಮ್ಮ ತಂದೆಗಳ ಕಾಲದಲ್ಲಿಯಾದರೂ ಇಂಥಾ ಸಂಗತಿಗಳು ಸಂಭವಿಸಿದೆಯೋ? ಇಲ್ಲ!
ಯಾಕೆ ನೀನು ಗಟ್ಟಿಯಾಗಿ ಅರಚಿಕೊಳ್ಳುವೆ? ನೀನು ನಿನ್ನ ನಾಯಕನನ್ನು ಕಳೆದುಕೊಂಡೆಯಾ? ನಿನ್ನ ರಾಜನು ನಿನ್ನನ್ನು ಬಿಟ್ಟುಹೋದನೋ? ಈ ಕಾರಣದಿಂದ ನೀನು ಪ್ರಸವವೇದನೆಯನ್ನು ಅನುಭವಿಸುವ ಸ್ತ್ರೀಯಂತೆ ಶ್ರಮೆಯನ್ನು ಅನುಭವಿಸುತ್ತಿರುವೆಯೋ?
ಆ ವಿಷಯವನ್ನು ಕೇಳಿದಾಗ ನನ್ನ ಶರೀರವೆಲ್ಲಾ ನಡುಗಿತು. ಆಶ್ಟರ್ಯದಿಂದ ನಾನು ಸಿಳ್ಳುಹಾಕಿದೆ. ನನ್ನ ಎಲುಬುಗಳ ಬಲಹೀನತೆಯಿಂದ ನಾನು ನಡುಗುವವನಾಗಿ ನಿಂತೆನು. ಅವರು ಜನರ ಮೇಲೆ ಬೀಳಲು ಬರುವಾಗ ನಾನು ಅವರ ನಾಶನದ ದಿವಸವನ್ನು ಎದುರುನೋಡುತ್ತಿದ್ದೇನೆ.