Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 31:10 - ಪರಿಶುದ್ದ ಬೈಬಲ್‌

10 “ಜನಾಂಗಗಳೇ, ಯೆಹೋವನ ಈ ಸಂದೇಶವನ್ನು ಕೇಳಿರಿ. ಈ ಸಂದೇಶವನ್ನು ಸಮುದ್ರದಡದ ದೂರದೂರದ ಪ್ರದೇಶಗಳಲ್ಲಿ ತಿಳಿಸಿರಿ. ‘ಇಸ್ರೇಲರನ್ನು ಚದರಿಸಿದಾತನು ಅವರನ್ನು ಮತ್ತೆ ಒಟ್ಟುಗೂಡಿಸುವನು. ಆತನು ತನ್ನ ಹಿಂಡನ್ನು ಕುರುಬನಂತೆ ನೋಡಿಕೊಳ್ಳುವನು’ ಎಂದು ಹೇಳಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 ಜನಾಂಗಗಳೇ, ಯೆಹೋವನ ವಾಕ್ಯವನ್ನು ಕೇಳಿರಿ, ದೂರ ದ್ವೀಪಗಳಲ್ಲಿ ಸಾರಿರಿ! ಇಸ್ರಾಯೇಲರನ್ನು ಚದರಿಸಿದಾತನು, ‘ಮಂದೆಯನ್ನು ಕಾಯುವ ಕುರುಬನಂತೆ ಅವರನ್ನು ಕೂಡಿಸಿ ಕಾಪಾಡುವನು’ ಎಂದು ಪ್ರಕಟಿಸಿರಿ. ಯೆಹೋವನು ಯಾಕೋಬ್ಯರನ್ನು ವಿಮೋಚಿಸಿದ್ದಾನಲ್ಲಾ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

10 ರಾಷ್ಟ್ರಗಳೇ, ಸರ್ವೇಶ್ವರನ ವಾಕ್ಯವನ್ನು ಕೇಳಿರಿ: ದೂರದ ದ್ವೀಪಗಳಲ್ಲೂ ಅದನ್ನು ಸಾರಿರಿ: ಇಸ್ರಯೇಲರನ್ನು ಚದುರಿಸಿದಾತ ಕುರಿಮಂದೆಯನ್ನು ಕಾಯುವ ಕುರುಬನಂತೆ ಅವರನ್ನು ಕೂಡಿಸಿ ಕಾಪಾಡುವನೆಂದು ಪ್ರಕಟಿಸಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

10 ಜನಾಂಗಗಳೇ, ಯೆಹೋವನ ವಾಕ್ಯವನ್ನು ಕೇಳಿರಿ, ದೂರದ್ವೀಪಗಳಲ್ಲಿ ಸಾರಿರಿ! ಇಸ್ರಾಯೇಲ್ಯರನ್ನು ಚದರಿಸಿದಾತನು ಕುರುಬನು ಮಂದೆಯನ್ನು ಕಾಯುವ ಕುರುಬನಂತೆ ಅವರನ್ನು ಕೂಡಿಸಿ ಕಾಪಾಡುವನು ಎಂದು ಪ್ರಕಟಿಸಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

10 “ಜನಾಂಗಗಳೇ, ಯೆಹೋವ ದೇವರ ವಾಕ್ಯವನ್ನು ಕೇಳಿರಿ: ದೂರದಲ್ಲಿರುವ ದ್ವೀಪಗಳಲ್ಲಿ ಅದನ್ನು ಸಾರಿರಿ! ‘ಇಸ್ರಾಯೇಲನ್ನು ಚದರಿಸಿದಾತನೇ ಅವರನ್ನು ಕೂಡಿಸಿ, ಕುರುಬನು ತನ್ನ ಮಂದೆಯನ್ನು ಕಾಯುವ ಹಾಗೆ ಅವರನ್ನು ಕಾಯುವನು’ ಎಂದು ಪ್ರಕಟಿಸಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 31:10
43 ತಿಳಿವುಗಳ ಹೋಲಿಕೆ  

ಯೆಹೋವನು ತನ್ನ ಜನರನ್ನು ನಡಿಸುತ್ತಾನೆ. ಕುರಿಗಳನ್ನು ನಡಿಸುವ ಕುರುಬನಂತೆ ಯೆಹೋವನು ತನ್ನ ಭುಜಬಲದಿಂದ ತನ್ನ ಕುರಿಗಳನ್ನು ಒಟ್ಟುಗೂಡಿಸುವನು. ಯೆಹೋವನು ಕುರಿಮರಿಗಳನ್ನು ಎತ್ತಿಕೊಂಡು ಅಪ್ಪಿಕೊಳ್ಳುವನು. ಅದರ ತಾಯಿ ಆತನ ಪಕ್ಕದಲ್ಲೇ ನಡೆಯುವವು.


ತಪ್ಪಿಹೋದ ಕುರಿಗಳಿಗಾಗಿ ಹುಡುಕುವ ಕುರುಬನಂತೆ ನನ್ನ ಕುರಿಗಳನ್ನು ಹುಡುಕಿ ರಕ್ಷಿಸುವೆನು. ಮೋಡ ಕವಿದ ಕಾರ್ಗತ್ತಲೆಯ ದಿನದಲ್ಲಿ ತಪ್ಪಿಸಿಕೊಂಡ ಅವುಗಳನ್ನು ಹುಡುಕಿ ತರುವೆನು.


ಅವರಲ್ಲಿ ಕೆಲವರಿಗೆ ನಾನು ಗುರುತು ಹಾಕುವೆನು. ನಾನು ಅವರನ್ನು ರಕ್ಷಿಸುವೆನು. ರಕ್ಷಿಸಲ್ಪಟ್ಟ ಕೆಲವರನ್ನು ನಾನು ತಾರ್ಷೀಷ್, ಲಿಬ್ಯ, ಲೂದ್, ತೂಬಾಲ್, ಗ್ರೀಸ್ ಮತ್ತು ದೂರದೇಶಗಳಿಗೆ ಕಳುಹಿಸುವೆನು. ಅಲ್ಲಿಯ ಜನರು ನನ್ನ ಬೋಧನೆಯನ್ನು ಎಂದೂ ಕೇಳಿರಲಿಲ್ಲ. ಅವರು ನನ್ನ ಮಹಿಮೆಯನ್ನು ಎಂದೂ ಕಂಡಿರಲಿಲ್ಲ. ಆದ್ದರಿಂದ ರಕ್ಷಿಸಲ್ಪಟ್ಟ ಜನರು ನನ್ನ ಮಹಿಮೆಯನ್ನು ಅವರಿಗೆ ತಿಳಿಸುವರು.


ಲೋಕದ ಕಟ್ಟಕಡೆಯ ಸ್ಥಳಕ್ಕೆ ನೀವು ಚದರಿಹೋದರೂ ಅಲ್ಲಿಂದ ನಿಮ್ಮನ್ನು ಹಿಂದಕ್ಕೆ ತರುವನು.


ಹೌದು, ಯೆಹೂದ್ಯರಿಗಾಗಿಯೂ ಲೋಕದಲ್ಲೆಲ್ಲಾ ಚದರಿಹೋಗಿರುವ ದೇವರ ಮಕ್ಕಳನ್ನೆಲ್ಲ ಒಂದುಗೂಡಿಸುವುದಕ್ಕಾಗಿಯೂ ಆತನು ಸಾಯಲಿದ್ದನು.


ನನ್ನ ಕುರಿಗಳು ನನ್ನ ಸ್ವರಕ್ಕೆ ಕಿವಿಗೊಡುತ್ತವೆ. ನಾನು ಅವುಗಳನ್ನು ಬಲ್ಲೆನು ಮತ್ತು ಅವುಗಳು ನನ್ನನ್ನು ಹಿಂಬಾಲಿಸುತ್ತವೆ.


ಆ ಸಮಯದಲ್ಲಿ, ನಿನಗೆ ಕೇಡುಮಾಡುವವರನ್ನು ಶಿಕ್ಷಿಸುವೆನು. ಗಾಯಗೊಂಡಿರುವ ನಿನ್ನ ಜನರನ್ನು ರಕ್ಷಿಸುವೆನು. ತಮ್ಮ ದೇಶದಿಂದ ದೂರಕ್ಕೆ ಚದರಿಸಲ್ಪಟ್ಟ ಜನರನ್ನು ನಾನು ಹಿಂದಕ್ಕೆ ಕರೆದುಕೊಂಡು ಬರುವೆನು. ನಾನು ಅವರನ್ನು ಪ್ರಸಿದ್ಧಿಪಡಿಸುವೆನು. ಎಲ್ಲಾ ಜನರು ಅವರನ್ನು ಹೊಗಳುವರು.


“ಚಿಕ್ಕ ಮಂದೆಯೇ, ಹೆದರಬೇಡ, ನಿಮಗೆ ರಾಜ್ಯವನ್ನು ಕೊಡಲು ನಿಮ್ಮ ತಂದೆ ಬಯಸಿದ್ದಾನೆ.


ಆ ಸಮಯಗಳಲ್ಲಿ ದೇವರಾದ ಯೆಹೋವನು, ಕುರುಬನು ತನ್ನ ಕುರಿಗಳನ್ನು ಸಂರಕ್ಷಿಸುವ ರೀತಿಯಲ್ಲಿ ತನ್ನ ಜನರನ್ನು ರಕ್ಷಿಸುವನು. ಅವರು ಆತನಿಗೆ ಅಮೂಲ್ಯರಾಗಿರುವರು. ಆತನ ಕೈಯಲ್ಲಿ ಹೊಳೆಯುವ ಆಭರಣದಂತಿರುವರು.


ಅವರು ಯೆಹೋವನಿಗೆ ಭಯಪಡುವರು. ಯಾಕೆಂದರೆ ಆತನು ಅವರ ದೇವರುಗಳನ್ನು ನಾಶಮಾಡಿದ್ದಾನೆ. ಆಗ ದೂರದಲ್ಲಿರುವ ಜನರೆಲ್ಲರೂ ಆತನನ್ನು ಆರಾಧಿಸುವರು.


ಆಗ ಇಸ್ರೇಲರನ್ನು ಆಳುವಾತನು ಯೆಹೋವನ ಶಕ್ತಿಯಲ್ಲಿಯೂ ತನ್ನ ದೇವರಾದ ಯೆಹೋವನ ಹೆಸರಿನಲ್ಲಿಯೂ ನಿಂತು ತನ್ನ ಮಂದೆಗೆ ಆಹಾರವನ್ನೀಯುವನು. ಆತನ ಮಹತ್ತು ಭೂಮಿಯ ಕಟ್ಟಕಡೆಗೆ ಪ್ರಸರಿಸುವದರಿಂದ ಅವರು ಸಮಾಧಾನದಿಂದ ವಾಸಿಸುವರು.


ಯೆಹೋವನು ಹೇಳುವುದೇನೆಂದರೆ, “ಜೆರುಸಲೇಮು ಗಾಯಗೊಂಡು ಕುಂಟಾಗಿದೆ; ತಳ್ಳಲ್ಪಟ್ಟಿದೆ; ಗಾಯಗೊಂಡು ಶಿಕ್ಷಿಸಲ್ಪಟ್ಟಿದೆ. ಆದರೆ ನಾನು ಆಕೆಯನ್ನು ನನ್ನ ಬಳಿಗೆ ಬರಮಾಡುವೆನು.


ಯಾಕೋಬಿನ ಜನರೇ, ನಾನು ನಿಮ್ಮೆಲ್ಲರನ್ನು ಒಟ್ಟಾಗಿ ಸೇರಿಸುತ್ತೇನೆ. ಇಸ್ರೇಲಿನಲ್ಲಿ ಉಳಿದವರನ್ನೆಲ್ಲಾ ಒಟ್ಟುಗೂಡಿಸುತ್ತೇನೆ. ಹಟ್ಟಿಯೊಳಗೆ ಕುರಿಗಳನ್ನು ಸೇರಿಸುವಂತೆ, ಹುಲ್ಲುಗಾವಲಿನಲ್ಲಿ ಕುರಿಮಂದೆ ಸೇರಿಸಲ್ಪಡುವಂತೆ ನಾನು ಅವರನ್ನು ಒಟ್ಟುಗೂಡಿಸುವೆನು. ಆಗ ಆ ಸ್ಥಳವು ಜನಸಮೂಹದ ಗದ್ದಲದಿಂದ ತುಂಬಿಹೋಗುವುದು.


“‘ನನ್ನ ಸೇವಕನಾದ ದಾವೀದನು ಅವರ ರಾಜನಾಗುವನು. ಅವರೆಲ್ಲರಿಗೆ ಒಬ್ಬನೇ ಕುರುಬನಿರುವನು. ನಾನು ಹೇಳಿದ ಮಾತುಗಳಿಗೆ ಅವರು ವಿಧೇಯರಾಗುವರು; ನನ್ನ ಕಟ್ಟಳೆ ನಿಯಮಗಳಲ್ಲಿ ಅವರು ಬಾಳುವರು.


ಪರದೇಶಗಳಿಂದ ನಾನು ನಿಮ್ಮನ್ನು ಹೊರತರುವೆನು. ನಾನು ಆ ದೇಶಗಳಲ್ಲಿ ನಿಮ್ಮನ್ನು ಚದರಿಸಿದೆನು. ಆದರೆ ಆ ದೇಶಗಳಿಂದ ನಾನು ನಿಮ್ಮನ್ನು ಒಟ್ಟುಗೂಡಿಸಿ ಹಿಂದಕ್ಕೆ ಬರಮಾಡುವೆನು. ನನ್ನ ಬಲವಾದ ಕೈಯನ್ನು ಮತ್ತು ಶಕ್ತಿಯುತವಾದ ತೋಳನ್ನು ಮೇಲೆತ್ತಿ ನಿಮ್ಮನ್ನು ಶಿಕ್ಷಿಸಿ ನನ್ನ ಕೋಪವನ್ನು ಪ್ರದರ್ಶಿಸುವೆನು.


“ಆದ್ದರಿಂದ ಜನರಿಗೆ ಹೀಗೆ ಹೇಳು: ನಮ್ಮ ಒಡೆಯನಾದ ಯೆಹೋವನು ಹೇಳುವುದೇನೆಂದರೆ: ‘ನಾನು ನನ್ನ ಜನರನ್ನು ಬಹುದೂರದಲ್ಲಿರುವ ಜನಾಂಗಗಳ ಮಧ್ಯಕ್ಕೆ ಹೋಗುವಂತೆ ಮಾಡಿದ್ದು ನಿಜ. ನಾನು ಅನೇಕ ದೇಶಗಳಲ್ಲಿ ಅವರನ್ನು ಚದರಿಸಿರುತ್ತೇನೆ. ಅವರು ಪರದೇಶಗಳಲ್ಲಿರುವಾಗ ಸ್ವಲ್ಪಕಾಲ ನಾನೇ ಅವರಿಗೆ ದೇವಾಲಯವಾಗಿರುವೆನು.


ಜೆರುಸಲೇಮಿನ ಜನರು ಹಸಿವೆ ತಾಳಲಾರದೆ ತಮ್ಮ ಸ್ವಂತ ಮಕ್ಕಳನ್ನು ಕಬಳಿಸುವರು ಮತ್ತು ಮಕ್ಕಳು ತಮ್ಮ ತಂದೆತಾಯಿಗಳನ್ನೇ ತಿನ್ನುವರು. ಬೇರೆಬೇರೆ ರೀತಿಯಲ್ಲಿ ನಾನು ನಿಮ್ಮನ್ನು ಶಿಕ್ಷಿಸುವೆನು. ಜೀವದಿಂದುಳಿದವರನ್ನು ನಾನು ಗಾಳಿಗೆ ತೂರಿಬಿಡುವೆನು.”


“‘ಆದರೆ ಇಸ್ರೇಲನ್ನು ಪುನಃ ಅದರ ಹುಲ್ಲುಗಾವಲಿಗೆ ತರುವೆನು. ಅದು ಕರ್ಮೆಲ್ ಬೆಟ್ಟದ ಮೇಲೆ ಮತ್ತು ಬಾಷಾನಿನ ಪ್ರದೇಶದಲ್ಲಿ ಮೇಯುವದು. ಅದು ತಿಂದು ತೇಗುವದು. ಅದು ಎಫ್ರಾಯೀಮಿನ ಮತ್ತು ಗಿಲ್ಯಾದಿನ ಬೆಟ್ಟಗಳಲ್ಲಿ ತಿಂದು ತೃಪ್ತಿಪಡುವದು.’”


“ಇಸ್ರೇಲು ದೇಶಗಳಲ್ಲೆಲ್ಲಾ ಚದರಿಹೋದ ಕುರಿಹಿಂಡಿನಂತಾಗಿದೆ. ಸಿಂಹಗಳಿಗೆ ಹೆದರಿ ಓಡಿಹೋದ ಕುರಿಗಳಂತಾಗಿದೆ ಇಸ್ರೇಲು. ಅದನ್ನು ತಿಂದು ಮುಗಿಸಿದ ಮೊದಲನೆ ಸಿಂಹವೆಂದರೆ ಅಶ್ಶೂರದ ರಾಜನು. ಅದರ ಎಲುಬುಗಳನ್ನು ಜಗಿದ ಕೊನೆಯ ಸಿಂಹವೆಂದರೆ ಬಾಬಿಲೋನಿನ ರಾಜನಾದ ನೆಬೂಕದ್ನೆಚ್ಚರನು.


ತೂರಿನ ಮತ್ತು ಚೀದೋನಿನ ಎಲ್ಲಾ ರಾಜರು ಈ ಪಾತ್ರೆಯಿಂದ ಕುಡಿಯುವಂತೆ ಮಾಡಿದೆ. ಬಹಳ ದೂರದೇಶದ ರಾಜರು ಸಹ ಈ ಪಾತ್ರೆಯಿಂದ ಕುಡಿಯುವಂತೆ ಮಾಡಿದೆ.


ದೂರ ಪ್ರಾಂತ್ಯಗಳು ನನಗಾಗಿ ಕಾದಿವೆ. ದೊಡ್ಡ ಸರಕು ಸಾಗಿಸುವ ಹಡಗುಗಳು ಹೊರಡಲು ತಯಾರಾಗಿವೆ. ಈ ಹಡಗುಗಳು ದೂರ ಪ್ರಾಂತ್ಯದಲ್ಲಿರುವ ನಿನ್ನ ಮಕ್ಕಳನ್ನು ಕರೆತರಲು ತಯಾರಾಗಿವೆ. ಅವರು ಬೆಳ್ಳಿಬಂಗಾರಗಳನ್ನು ತಮ್ಮೊಂದಿಗೆ ತಂದು ಇಸ್ರೇಲಿನ ಪರಿಶುದ್ಧನಾದ ಯೆಹೋವನನ್ನು ಘನಪಡಿಸುವರು. ಯೆಹೋವನು ನಿನಗೆ ಆಶ್ಚರ್ಯಕರವಾದ ಸಂಗತಿಗಳನ್ನು ಮಾಡುವನು.


ದೇವರು ಹೇಳುವುದೇನೆಂದರೆ: “ನಾನು ನಿನ್ನನ್ನು ತೊರೆದೆನು. ಆದರೆ ಸ್ವಲ್ಪ ಸಮಯಕ್ಕಾಗಿ ಮಾತ್ರ. ನಿನ್ನನ್ನು ಮತ್ತೆ ನನಗಾಗಿ ಒಟ್ಟುಗೂಡಿಸುವೆನು. ಆಗ ನಿನಗೆ ಅತ್ಯಂತ ದಯೆಯನ್ನು ತೋರಿಸುವೆನು.


ದೂರದೇಶಗಳಲ್ಲಿರುವ ಜನರೇ, ಯೆಹೋವನಿಗೆ ಹೊಸ ಗೀತೆಯನ್ನು ಹಾಡಿರಿ. ಸಾಗರಗಳಲ್ಲಿ ಪ್ರಯಾಣಿಸುವ ಜನರೆಲ್ಲರೂ ಸಮುದ್ರಜೀವಿಗಳೆಲ್ಲವೂ ದೂರದೇಶಗಳವರೆಲ್ಲರೂ ದೇವರಿಗೆ ಸ್ತೋತ್ರಮಾಡಲಿ.


ಲೋಕದಲ್ಲಿ ನ್ಯಾಯವನ್ನು ಸ್ಥಾಪಿಸುವ ತನಕ ಆತನು ಬಲಹೀನನಾಗುವದಿಲ್ಲ; ಮುಗ್ಗರಿಸುವುದೂ ಇಲ್ಲ. ದೂರದೇಶದಲ್ಲಿರುವವರು ಸಹ ಆತನ ಬೋಧನೆಯನ್ನು ನಂಬುವರು.”


ಯೆಹೋವನು ಹೇಳುವುದೇನೆಂದರೆ: “ಬಹು ದೂರದಲ್ಲಿರುವ ಜನಾಂಗಗಳವರೇ, ಮೌನವಾಗಿದ್ದು ನನ್ನ ಬಳಿಗೆ ಬನ್ನಿರಿ. ಜನಾಂಗಗಳೇ, ಮತ್ತೆ ಬಲಿಷ್ಠರಾಗಿರಿ. ನನ್ನ ಬಳಿಗೆ ಬಂದು ನನ್ನೊಂದಿಗೆ ಮಾತಾಡಿರಿ. ನಾವು ಒಟ್ಟಾಗಿ ಸೇರಿಬಂದು ಯಾರು ಸರಿ ಎಂದು ವಾದಿಸೋಣ!


ಆ ಸಮಯದಲ್ಲಿ, ಯೆಹೋವನು ತನ್ನ ಜನರನ್ನು ಬೇರೆಯವರಿಂದ ಬೇರ್ಪಡಿಸುವನು. ಆತನು ಯೂಫ್ರೇಟೀಸ್ ನದಿಯಿಂದ ಪ್ರಾರಂಭಿಸಿ ಈಜಿಪ್ಟಿನ ನದಿಯತನಕ ಎಲ್ಲಾ ಜನರನ್ನು ಒಟ್ಟುಗೂಡಿಸುವನು. ಇಸ್ರೇಲ್ ಜನರೇ, ನೀವು ಒಬ್ಬೊಬ್ಬರಾಗಿಯೇ ಒಟ್ಟುಗೂಡಿಸಲ್ಪಡುವಿರಿ.


ಉಳಿದ ಜನರು ಚೀರಾಡುವರು. ಅದು ಭೋರ್ಗರೆಯುವ ಸಮುದ್ರದ ಶಬ್ದಕ್ಕಿಂತಲೂ ಜೋರಾಗಿ ಕೇಳಿಸುವದು. ದೇವರ ಕೃಪೆಯ ನಿಮಿತ್ತ ಅವರು ಸಂತೋಷದಲ್ಲಿರುವರು.


ತಾರ್ಷೀಷಿನ ರಾಜರುಗಳೂ ಬಹುದೂರದ ದೇಶಗಳವರೂ ಅವನಿಗೆ ಉಡುಗೊರೆಗಳನ್ನು ಕೊಡಲಿ. ಶೆಬಾ ಮತ್ತು ಸೆಬಾ ಪ್ರಾಂತ್ಯಗಳ ರಾಜರುಗಳು ಅವನಿಗೆ ಕಪ್ಪಕಾಣಿಕೆಗಳನ್ನು ತಂದು ಕೊಡಲಿ.


“‘ನಾನು ಇಸ್ರೇಲರನ್ನು ಸಂಪೂರ್ಣವಾಗಿ ನಿರ್ಮೂಲ ಮಾಡಲು ಯೋಚಿಸಿದೆನು. ಲೋಕದಲ್ಲಿ ಅವರ ಹೆಸರು ಉಳಿಯದಂತೆ ಮಾಡುವೆನು ಎಂದು ನೆನಸಿದೆನು.


ತೀರ ಪ್ರದೇಶದ ಜನರೆಲ್ಲರು ಯೆಫೆತನ ಮಕ್ಕಳ ಸಂತಾನಕ್ಕೆ ಸೇರಿದವರು. ಅವನ ಪ್ರತಿಯೊಬ್ಬ ಮಗನಿಗೂ ಸ್ವಂತ ಭೂಮಿ ಇತ್ತು. ಅವರೆಲ್ಲರ ಕುಟುಂಬಗಳು ವೃದ್ಧಿಗೊಂಡು ಅನೇಕ ಜನಾಂಗಗಳಾದವು. ಪ್ರತಿಯೊಂದು ಜನಾಂಗಕ್ಕೂ ಸ್ವಂತ ಭಾಷೆಯಿತ್ತು.


ನಾನು ನಿಮ್ಮನ್ನು ಜನಾಂಗಗಳ ಮಧ್ಯದಲ್ಲಿ ಚದರಿಸಿಬಿಡುವೆನು. ಕತ್ತಿಯನ್ನು ಇರಿದು ನಿಮ್ಮನ್ನು ನಾಶಮಾಡುವೆ. ನಿಮ್ಮ ಭೂಮಿ ಬರಿದಾಗುವುದು ಮತ್ತು ನಿಮ್ಮ ಪಟ್ಟಣಗಳು ನಾಶವಾಗುವವು.


ಯೆಹೋವನೇ ನನಗೆ ಕುರುಬನು. ನನಗೆ ಕೊರತೆಯೇ ಇಲ್ಲ.


ನಿನ್ನ ಕುರಿಗಳನ್ನೂ ಪಶುಗಳನ್ನೂ ಎಚ್ಚರಿಕೆಯಿಂದ ಕಾಯ್ದುಕೊಂಡಿರು; ನಿನ್ನಿಂದಾದಷ್ಟು ಮಟ್ಟಿಗೆ ಅವುಗಳ ಮೇಲೆ ಗಮನವಿಟ್ಟು ನೋಡಿಕೊ.


ನಿನ್ನ ದೇವರು ಹೇಳುವುದೇನೆಂದರೆ: “ನನ್ನ ಜನರನ್ನು ಸಂತೈಸು, ಸಂತೈಸು.


ನನ್ನ ಜನರೇ, ಬಾಬಿಲೋನನ್ನು ತೊರೆಯಿರಿ. ನನ್ನ ಜನರೇ, ಕಸ್ದೀಯರಿಂದ ಓಡಿಹೋಗಿರಿ. ಈ ವರ್ತಮಾನವನ್ನು ಜನರಿಗೆ ಹರ್ಷಿಸುತ್ತಾ ತಿಳಿಸಿರಿ. ಲೋಕದ ಕಟ್ಟಕಡೆಯ ಸ್ಥಳದಲ್ಲೂ ಈ ವರ್ತಮಾನವನ್ನು ಪ್ರಕಟಿಸಿರಿ. “ಯಾಕೋಬನನ್ನು ಯೆಹೋವನು ರಕ್ಷಿಸಿದನೆಂದು” ಜನರಿಗೆಲ್ಲಾ ತಿಳಿಸಿರಿ.


ನಿಮಗೆ ಹೊಸ ಪಾಲಕರನ್ನು ನೇಮಿಸುವೆನು. ಆ ಪಾಲಕರು ನನಗೆ ನಂಬಿಗಸ್ತರಾಗಿರುತ್ತಾರೆ. ಅವರು ಬುದ್ಧಿ ಮತ್ತು ಜ್ಞಾನಗಳಿಂದ ನಿಮಗೆ ಮಾರ್ಗದರ್ಶನ ಮಾಡುತ್ತಾರೆ.


ನನ್ನ ಕುರಿಗಳನ್ನು ನೋಡಿಕೊಳ್ಳುವದಕ್ಕೆ ನಾನು ಹೊಸ ಕುರುಬರನ್ನು ನೇಮಿಸುವೆನು. ಆ ಕುರುಬರು ನನ್ನ ಕುರಿಗಳ ಯೋಗಕ್ಷೇಮವನ್ನು ನೋಡಿಕೊಳ್ಳುವರು. ನನ್ನ ಕುರಿಗಳು ಬೆದರುವದಿಲ್ಲ, ಭಯಪಡುವದಿಲ್ಲ. ನನ್ನ ಒಂದು ಕುರಿಯೂ ಕಳೆದುಹೋಗುವದಿಲ್ಲ.” ಇದು ಯೆಹೋವನ ಸಂದೇಶ.


“ಆಮೇಲೆ ಉತ್ತರದ ರಾಜನು ಭೂಮಧ್ಯ ಸಾಗರದ ಕರಾವಳಿಯ ದೇಶಗಳ ಕಡೆಗೆ ಗಮನಹರಿಸುವನು. ಅವನು ಅನೇಕ ನಗರಗಳನ್ನು ಗೆಲ್ಲುವನು. ಆದರೆ ಆಗ ಒಬ್ಬ ಸೇನಾಧಿಪತಿಯು ಉತ್ತರದ ರಾಜನ ಅಹಂಕಾರವನ್ನೂ ಸೊಕ್ಕನ್ನೂ ಮುರಿದುಬಿಡುವನು; ಅವನಿಗೆ ಅವಮಾನ ಮಾಡುವನು.


ಯೆಹೋವನು ಹೀಗೆನ್ನುತ್ತಾನೆ, “ಅವಸರಪಡುತ್ತಾ ಉತ್ತರದ ದೇಶಗಳಿಂದ ಹೊರಬನ್ನಿರಿ. ಹೌದು, ನಾನು ನಿಮ್ಮ ಜನರನ್ನು ಪ್ರತಿಯೊಂದು ದಿಕ್ಕಿಗೂ ಚದರಿಸಿರುವುದು ನಿಜ.


ಯೆಹೋವನು ಜೆರುಸಲೇಮನ್ನು ಕಟ್ಟಿದನು. ಸೆರೆಯಾಳುಗಳಾಗಿ ಒಯ್ಯಲ್ಪಟ್ಟಿದ್ದ ಇಸ್ರೇಲರನ್ನು ಆತನು ಹಿಂದಕ್ಕೆ ಕರೆತಂದನು.


“ನಾನು ಸಿಳ್ಳು ಹೊಡೆದು ಎಲ್ಲರನ್ನು ಒಟ್ಟುಗೂಡಿಸುವೆನು. ನಾನು ನಿಜವಾಗಿಯೂ ಅವರನ್ನು ರಕ್ಷಿಸುವೆನು. ಜನರು ಕಿಕ್ಕಿರಿದು ತುಂಬಿಹೋಗುವರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು