ಯೆರೆಮೀಯ 31:14 - ಪರಿಶುದ್ದ ಬೈಬಲ್14 ಯಾಜಕರು ತಮಗೆ ಬೇಕಾಗುವದಕ್ಕಿಂತ ಹೆಚ್ಚಿನ ಪ್ರಮಾಣದಲ್ಲಿ ನೈವೇದ್ಯಗಳನ್ನು ಪಡೆಯುವರು. ನಾನು ಅವರಿಗೆ ಕೊಡುವ ಉತ್ತಮ ವಸ್ತುಗಳನ್ನು ಮನದಣಿಯುವ ಹಾಗೆ ಅನುಭವಿಸಿ ನನ್ನ ಜನರು ತೃಪ್ತಿಪಡುವರು.” ಇದು ಯೆಹೋವನ ನುಡಿ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201914 ಯಾಜಕರನ್ನು ಮೃಷ್ಟಾನ್ನಭೋಜನದಿಂದ ತೃಪ್ತಿಗೊಳಿಸುವೆನು; ನಾನು ಅನುಗ್ರಹಿಸುವ ಮೇಲುಗಳನ್ನು ನನ್ನ ಜನರು ಸಮೃದ್ಧಿಯಾಗಿ ಅನುಭವಿಸುವರು. ಇದು ಯೆಹೋವನ ನುಡಿ.” ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)14 ಯಾಜಕರನ್ನು ಮೃಷ್ಟಾನ್ನದಿಂದ ತೃಪ್ತಿಪಡಿಸುವೆನು ನನ್ನ ಜನ ಸವಿಯುವರು ಯಥೇಚ್ಛವಾಗಿ ನನ್ನ ವರದಾನಗಳನ್ನು. ಇದು ಸರ್ವೇಶ್ವರನಾದ ನನ್ನ ನುಡಿ.” ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)14 ಯಾಜಕರನ್ನು ಮೃಷ್ಟಭೋಜನದಿಂದ ತಂಪುಗೊಳಿಸುವೆನು; ನಾನು ಅನುಗ್ರಹಿಸುವ ಮೇಲುಗಳನ್ನು ನನ್ನ ಜನರು ಸಮೃದ್ಧಿಯಾಗಿ ಅನುಭವಿಸುವರು. ಇದು ಯೆಹೋವನ ನುಡಿ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ14 ಇದಲ್ಲದೆ ಯಾಜಕರನ್ನು ಹೇರಳವಾಗಿ ತೃಪ್ತಿಗೊಳಿಸುವೆನು. ನನ್ನ ಜನರು ನನ್ನ ಒಳ್ಳೆಯತನದಿಂದ ತೃಪ್ತಿಪಡುವರು,” ಎಂದು ಯೆಹೋವ ದೇವರು ಹೇಳುತ್ತಾರೆ. ಅಧ್ಯಾಯವನ್ನು ನೋಡಿ |
ಇಸ್ರೇಲ್ ಜನರು ಮತ್ತು ಲೇವಿಯರು ತಮ್ಮ ಕಾಣಿಕೆಗಳಾದ ದವಸಧಾನ್ಯ, ಹೊಸ ದ್ರಾಕ್ಷಾರಸ, ಎಣ್ಣೆ ಇವುಗಳನ್ನು ತಂದು ದೇವಾಲಯದ ಉಗ್ರಾಣಗಳಲ್ಲಿ ಇಡಬೇಕು. ದೇವಾಲಯಕ್ಕೋಸ್ಕರ ಮೀಸಲಾದ ಎಲ್ಲಾ ವಸ್ತುಗಳನ್ನು ಆ ಉಗ್ರಾಣಗಳಲ್ಲಿ ಇಡಬೇಕು. ಕೆಲಸದಲ್ಲಿ ನಿರತರಾಗಿರುವ ಯಾಜಕರು, ಗಾಯಕರು, ದ್ವಾರಪಾಲಕರು ಅಲ್ಲೇ ಇರಬೇಕು. “ನಮ್ಮ ದೇವರ ಆಲಯವನ್ನು ನಾವು ನೋಡಿಕೊಳ್ಳುವುದಾಗಿ ನಾವೆಲ್ಲರೂ ಪ್ರಮಾಣಮಾಡುತ್ತೇವೆ!”