Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 31:17 - ಪರಿಶುದ್ದ ಬೈಬಲ್‌

17 ಆದ್ದರಿಂದ ಇಸ್ರೇಲೇ, ನಿನ್ನ ಮಕ್ಕಳು ತಮ್ಮ ದೇಶಕ್ಕೆ ಹಿಂತಿರುಗಿ ಬರುವರೆಂಬ ನಿರೀಕ್ಷೆ ನಿನಗಿರಲಿ.” ಇದು ಯೆಹೋವನ ನುಡಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

17 ಯೆಹೋವನು ಇಂತೆನ್ನುತ್ತಾನೆ, “ನಿನಗೆ ಮುಂದೆ ಒಳ್ಳೆಯ ಗತಿಯಾಗುವುದೆಂದು ನಿರೀಕ್ಷೆಯಿದೆ. ನಿನ್ನ ಮಕ್ಕಳು ಹಿಂದಿರುಗಿ ಸ್ವಂತ ಸೀಮೆಯನ್ನು ಸೇರುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

17 ಸರ್ವೇಶ್ವರ ಇಂತೆನ್ನುತ್ತಾರೆ: “ನಿನ್ನ ಭವಿಷ್ಯದ ಬಗ್ಗೆ ಭರವಸೆಯಿಂದಿರು ನಿನ್ನ ಮಕ್ಕಳು ಹಿಂದಿರುಗಿ ಸ್ವದೇಶ ಸೇರುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

17 ಯೆಹೋವನು ಇಂತೆನ್ನುತ್ತಾನೆ - ನಿನಗೆ ಮುಂದೆ ಒಳ್ಳೆಯ ಗತಿಯಾಗುವದೆಂದು ನಿರೀಕ್ಷೆಯಿದೆ. ನಿನ್ನ ಮಕ್ಕಳು ಹಿಂದಿರುಗಿ ಸ್ವಂತ ಸೀಮೆಯನ್ನು ಸೇರುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

17 ನಿನ್ನ ಭವಿಷ್ಯದಲ್ಲಿ ನಿರೀಕ್ಷೆಯಿದೆ,” ಎಂದು ಯೆಹೋವ ದೇವರು ಹೇಳುತ್ತಾರೆ. “ಏಕೆಂದರೆ ನಿನ್ನ ಮಕ್ಕಳು ತಮ್ಮ ಸ್ವಂತ ದೇಶಕ್ಕೆ ತಿರುಗಿ ಬರುವರು.”

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 31:17
19 ತಿಳಿವುಗಳ ಹೋಲಿಕೆ  

ಆದರೆ ನಾನು ಬೇರೊಂದನ್ನು ಯೋಚಿಸಿಕೊಂಡಾಗ ನಾನು ನಿರೀಕ್ಷೆಯುಳ್ಳವನಾಗುವೆನು. ನಾನು ಯೋಚಿಸಿಕೊಳ್ಳುವದೇನೆಂದರೆ:


ಹೀಗೆ ಇದ್ದ ಬಳಿಕ ಇಸ್ರೇಲರು ಹಿಂತಿರುಗಿ ಬರುವರು. ಆಗ ಅವರು ತಮ್ಮ ದೇವರಾದ ಯೆಹೋವನನ್ನೂ ಅವರ ಅರಸನಾದ ದಾವೀದನನ್ನೂ ಹುಡುಕುವರು. ಕೊನೆಯ ದಿವಸಗಳಲ್ಲಿ ತಮ್ಮ ದೇವರಾದ ಯೆಹೋವನನ್ನೂ ಆತನ ಒಳ್ಳೆಯತನವನ್ನೂ ಗೌರವಿಸಲು ಬರುವರು.


ಅಲ್ಲಿ ಆಕೆಗೆ ನಾನು ದ್ರಾಕ್ಷಿತೋಟಗಳನ್ನು ಕೊಡುವೆನು. ಆಕೆಗೆ ಆಕೋರ್ ತಗ್ಗುಪ್ರದೇಶವನ್ನು ನಿರೀಕ್ಷೆಯ ಬಾಗಿಲಾಗಿ ಕೊಡುವೆನು. ಆಗ ಅವಳು ತಾನು ಈಜಿಪ್ಟಿನಿಂದ ಹೊರಬಂದ ತನ್ನ ಯೌವನದ ದಿನಗಳಲ್ಲಿ ಹೇಗೆ ನನ್ನ ಸಂಗಡ ಮಾತನಾಡಿದಳೋ ಹಾಗೆಯೇ ನನ್ನೊಂದಿಗೆ ಮಾತನಾಡುವಳು.”


ತನ್ನ ರಕ್ಷಣೆಗಾಗಿ ಯೆಹೋವನಿಗಾಗಿಯೇ ಮೌನದಿಂದ ಕಾಯುವುದು ಮನುಷ್ಯನಿಗೆ ಒಳ್ಳೆಯದು.


ನಾನು ನನ್ನೊಳಗೆ, “ಯೆಹೋವನು ನನಗೆ ಸಹಾಯ ಮಾಡುತ್ತಾನೆ ಎಂಬ ನಿರೀಕ್ಷೆ ಇನ್ನೆಂದಿಗೂ ನನಗಿಲ್ಲ” ಎಂದು ಕೊಂಡೆನು.


“ದೇವರು ಭಯಂಕರವಾದ ಆ ಸಮಯವನ್ನು ಕಡಿಮೆಗೊಳಿಸಲು ತೀರ್ಮಾನಿಸಿದ್ದಾನೆ. ಇಲ್ಲವಾದರೆ, ಜೀವದಿಂದ ಉಳಿಯಲು ಯಾರಿಗೂ ಸಾಧ್ಯವಿಲ್ಲ. ತಾನು ಆರಿಸಿಕೊಂಡ ಜನರ ನಿಮಿತ್ತ ದೇವರು ಆ ಸಮಯವನ್ನು ಕಡಿಮೆ ಮಾಡಿದ್ದಾನೆ.


ನಾನು ನನ್ನ ಸೇವಕನಾದ ಯಾಕೋಬನಿಗೆ ಕೊಟ್ಟಿರುವ ದೇಶದಲ್ಲಿ ಅವರು ವಾಸಿಸುವರು. ನಿಮ್ಮ ಪೂರ್ವಿಕರು ಆ ಪ್ರಾಂತ್ಯದಲ್ಲಿ ವಾಸವಾಗಿದ್ದರು. ನನ್ನ ಜನರು ಅಲ್ಲಿಯೇ ವಾಸಮಾಡುವರು. ಅವರೂ ಅವರ ಮಕ್ಕಳೂ ಮೊಮ್ಮಕ್ಕಳೂ ಅಲ್ಲಿ ನಿತ್ಯಕಾಲಕ್ಕೂ ಜೀವಿಸುವರು. ನನ್ನ ಸೇವಕನಾದ ದಾವೀದನು ಅವರ ನಿತ್ಯಕಾಲದ ರಾಜನು.


ಆದರೆ ದೇಶದಲ್ಲಿ ಹತ್ತನೆ ಒಂದು ಭಾಗದಷ್ಟು ಜನರು ಮಾತ್ರ ಉಳಿಯುವರು. ಇವರು ನಾಶವಾಗುವುದಿಲ್ಲ. ಯಾಕೆಂದರೆ ಇವರು ಯೆಹೋವನ ಬಳಿಗೆ ಹಿಂತಿರುಗಿ ಬಂದವರು. ಇವರು ಓಕ್ ಮರದಂತಿರುವರು. ಆ ಮರವು ಕಡಿಯಲ್ಪಟ್ಟರೂ ಅದರ ಬುಡವು ಹಾಗೆಯೇ ಉಳಿಯುವದು. ಈ ಕಾಂಡದ ಬುಡವು ಬಹು ವಿಶೇಷವಾದ ಬೀಜವಾಗಿರುವದು ಮತ್ತು ಅದು ಪುನಃ ಬೆಳೆಯುವುದು.


ನಾನು ಅವರ ಒಡೆಯನಾದ ಯೆಹೋವನೆಂದು ತಿಳಿಯುವರು. ಯಾಕೆಂದರೆ ನಾನು, ಅವರನ್ನು ಅವರ ಸ್ವದೇಶವನ್ನು ಬಿಟ್ಟು ಸೆರೆಹಿಡಿಯಲ್ಪಟ್ಟವರಾಗಿ ಬೇರೆ ದೇಶಗಳಿಗೆ ಹೋಗುವಂತೆ ಮಾಡಿದೆನು. ಆಮೇಲೆ ತಿರುಗಿ ಅವರನ್ನು ಒಟ್ಟುಗೂಡಿಸಿ ಅವರ ದೇಶಕ್ಕೆ ಹಿಂದಕ್ಕೆ ಕರೆಸಿದೆನು.


ಅವನು ದೀನತೆಯಿಂದ ತನ್ನ ಮುಖವನ್ನು ಧೂಳಿನಲ್ಲಿ ಹಾಕಬೇಕು. ಆಗ ಅವನ ಜೀವಕ್ಕೆ ನಿರೀಕ್ಷೆ ಇದ್ದರೂ ಇರಬಹುದು.


ಯೆಹೋವನು ಹೀಗೆ ಹೇಳುತ್ತಾನೆ ಎಂದು ಆ ಜನರಿಗೆ ಹೇಳು: ‘ನಾನು ಇಸ್ರೇಲ್ ಜನರನ್ನು ಅವರು ಚದರಿದ ದೇಶಗಳಿಂದಲೂ ಸುತ್ತಲಿರುವ ದೇಶಗಳಿಂದಲೂ ಅವರನ್ನು ಒಟ್ಟುಗೂಡಿಸಿ ಅವರ ಸ್ವದೇಶಕ್ಕೆ ತರುವೆನು.


ಸೆರೆಹಿಡಿಯಲ್ಪಟ್ಟವರೇ, ಮನೆಗೆ ಹೋಗಿ. ಈಗ ನಿಮಗೊಂದು ನಿರೀಕ್ಷೆಯಿದೆ. ನಾನು ನಿಮಗೆ ಖಂಡಿತವಾಗಿ ಹೇಳುವುದೇನೆಂದರೆ, ನಾನು ತಿರುಗಿ ಬರುತ್ತೇನೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು