Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 31:23 - ಪರಿಶುದ್ದ ಬೈಬಲ್‌

23 ಇಸ್ರೇಲಿನ ದೇವರೂ ಸರ್ವಶಕ್ತನಾದ ಯೆಹೋವನೂ ಹೀಗೆನ್ನುತ್ತಾನೆ: “ನಾನು ಯೆಹೂದದ ಜನರಿಗಾಗಿ ಮತ್ತೆ ಒಳ್ಳೆಯದನ್ನು ಮಾಡುವೆನು. ಸೆರೆಯಾಳುಗಳಾಗಿ ಒಯ್ಯಲ್ಪಟ್ಟಿದ್ದವರನ್ನು ನಾನು ಮತ್ತೆ ಕರೆದುತರುವೆನು. ಆಗ ಅವರು ಯೆಹೂದನಾಡಿನಲ್ಲಿಯೂ ಅದರ ನಗರಗಳಲ್ಲಿಯೂ ಹೀಗೆನ್ನುವರು: ‘ನ್ಯಾಯವಾದ ನಿವಾಸವೇ, ಪವಿತ್ರ ಪರ್ವತವೇ, ಯೆಹೋವನು ನಿನ್ನನ್ನು ಆಶೀರ್ವದಿಸಲಿ.’

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

23 ಇಸ್ರಾಯೇಲಿನ ದೇವರೂ ಸೇನಾಧೀಶ್ವರನೂ ಆದ ಯೆಹೋವನು ಇಂತೆನ್ನುತ್ತಾನೆ, “ನಾನು ನನ್ನ ಜನರ ದುರವಸ್ಥೆಯನ್ನು ತಪ್ಪಿಸುವಾಗ ಯೆಹೂದ ದೇಶದಲ್ಲಿಯೂ ಅದರ ಪಟ್ಟಣಗಳಲ್ಲಿಯೂ, ‘ನ್ಯಾಯದ ನಿವಾಸವೇ, ಪರಿಶುದ್ಧ ಪರ್ವತವೇ, ಯೆಹೋವನು ನಿನ್ನನ್ನು ಆಶೀರ್ವದಿಸಲಿ’ ಎಂದು ಮತ್ತೆ ಮಾತನಾಡುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

23 ಇಸ್ರಯೇಲಿನ ದೇವರೂ ಸೇನಾಧೀಶ್ವರರೂ ಆದ ಸರ್ವೇಶ್ವರನ ನುಡಿ ಹೀಗಿದೆ: “ನಾನು ನನ್ನ ಜನರ ಗುಲಾಮಗಿರಿಯನ್ನು ನೀಗಿಸುವೆನು. ಆಗ, ‘ನ್ಯಾಯದ ನಿವಾಸವೇ, ಪರಿಶುದ್ಧ ಪರ್ವತವೇ, ಸರ್ವೇಶ್ವರ ನಿನ್ನನ್ನು ಆಶೀರ್ವದಿಸಲಿ’ ಎಂಬ ಮಾತು ಜುದೇಯ ನಾಡಿನಲ್ಲೂ ಅದರ ನಗರಗಳಲ್ಲೂ ಮತ್ತೆ ಕೇಳಿಬರುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

23 ಇಸ್ರಾಯೇಲಿನ ದೇವರೂ ಸೇನಾಧೀಶ್ವರನೂ ಆದ ಯೆಹೋವನು ಇಂತೆನ್ನುತ್ತಾನೆ - ನಾನು ನನ್ನ ಜನರ ದುರವಸ್ಥೆಯನ್ನು ತಪ್ಪಿಸುವಾಗ ಯೆಹೂದ ದೇಶದಲ್ಲಿಯೂ ಅವರ ಪಟ್ಟಣಗಳಲ್ಲಿಯೂ - ನ್ಯಾಯದ ನಿವಾಸವೇ, ಪರಿಶುದ್ಧ ಪರ್ವತವೇ, ಯೆಹೋವನು ನಿನ್ನನ್ನು ಆಶೀರ್ವದಿಸಲಿ ಎಂದು ಮತ್ತೆ ಮಾತಾಡುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

23 ಇಸ್ರಾಯೇಲಿನ ದೇವರಾದ ಸೇನಾಧೀಶ್ವರ ಯೆಹೋವ ದೇವರು ಹೀಗೆ ಹೇಳುತ್ತಾರೆ: “ಯೆಹೂದ ದೇಶದಲ್ಲಿಯೂ ಅದರ ಪಟ್ಟಣಗಳಲ್ಲಿಯೂ ನಾನು ಅವರ ಸೆರೆಯನ್ನು ತಿರುಗಿ ತರುವಾಗ, ‘ನೀತಿಯ ನಿವಾಸವೇ, ಪರಿಶುದ್ಧ ಪರ್ವತವೇ, ಯೆಹೋವ ದೇವರು ನಿನ್ನನ್ನು ಆಶೀರ್ವದಿಸಲಿ,’ ಎಂದು ಇನ್ನೂ ಹೇಳುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 31:23
23 ತಿಳಿವುಗಳ ಹೋಲಿಕೆ  

ಯೆಹೋವನು ಹೇಳುವುದೇನೆಂದರೆ, “ನಾನು ಚೀಯೋನಿಗೆ ಹಿಂದಿರುಗಿ ಬಂದಿದ್ದೇನೆ. ನಾನು ಜೆರುಸಲೇಮಿನಲ್ಲಿ ವಾಸಿಸುತ್ತೇನೆ. ಜೆರುಸಲೇಮ್ ನಂಬಿಗಸ್ತನಗರವೆಂದು ಕರೆಯಲ್ಪಡುವುದು. ಸರ್ವಶಕ್ತನ ಪರ್ವತವು ಪವಿತ್ರ ಪರ್ವತವೆಂದು ಕರೆಯಲ್ಪಡುವುದು.”


ನನ್ನ ಜನರನ್ನು ಕಂಡವರೆಲ್ಲ ಅವರನ್ನು ನೋಯಿಸಿದ್ದಾರೆ. ಆ ಶತ್ರುಗಳು, ‘ನಾವು ಮಾಡಿದ್ದು ತಪ್ಪಲ್ಲ. ಅವರು ಯೆಹೋವನ ವಿರುದ್ಧ ಪಾಪ ಮಾಡಿದ್ದಾರೆ. ಯೆಹೋವನು ಅವರ ನಿಜವಾದ ನಿವಾಸವಾಗಿದ್ದನು. ಯೆಹೋವನು ಅವರ ಪೂರ್ವಿಕರು ನಂಬಿದ್ದ ದೇವರಾಗಿದ್ದನು’ ಎಂದರು.


ಆರಂಭದಲ್ಲಿ ನಿಮಗಿದ್ದಂತಹ ನ್ಯಾಯಾಧೀಶರನ್ನು ನಾನು ತಿರುಗಿ ಬರಮಾಡುವೆನು. ನಿಮ್ಮ ಸಲಹೆಗಾರರು ಹಿಂದಿನ ಕಾಲದ ಸಲಹೆಗಾರರಂತೆ ಇರುವರು. ಆಗ ನೀನು ‘ನ್ಯಾಯವಾದ ಮತ್ತು ನಂಬಿಗಸ್ತಿಕೆಯುಳ್ಳ ಪಟ್ಟಣ’ವೆಂದು ಕರೆಯಲ್ಪಡುವೆ.”


ಅಂತ್ಯದ ದಿವಸಗಳಲ್ಲಿ ಯೆಹೋವನ ಆಲಯದ ಪರ್ವತವು ಎಲ್ಲಾ ಪರ್ವತಗಳಿಗಿಂತಲೂ ಅತ್ಯುನ್ನತವಾಗಿರುವುದು. ಅದು ಬೆಟ್ಟಗಳಿಗಿಂತಲೂ ಉನ್ನತವಾಗಿರುವದು. ಅಲ್ಲಿಗೆ ಜನರು ಗುಂಪುಗುಂಪಾಗಿ ಹೋಗುವರು.


ಆದರೆ ಚೀಯೋನ್ ಬೆಟ್ಟದಲ್ಲಿ ಅಳಿದುಳಿದವರು ಇರುವರು. ಅವರು ನನ್ನ ವಿಶೇಷ ಜನರಾಗಿರುವರು. ಯಾಕೋಬನ ಜನರು ತಮಗೆ ಸೇರಿರುವದನ್ನು ಹಿಂದಕ್ಕೆ ಪಡೆದುಕೊಳ್ಳುವರು.


ಯೆಹೋವನು ಹೀಗೆನ್ನುತ್ತಾನೆ, “ಯಾಕೋಬಿನ ಜನರು ಈಗ ಬಂಧಿಗಳಾಗಿದ್ದಾರೆ. ಆದರೆ ಅವರು ಹಿಂತಿರುಗಿ ಬರುವರು. ಯಾಕೋಬಿನ ಮನೆಗಳ ಮೇಲೆ ನಾನು ಕನಿಕರ ತೋರುವೆನು. ನಗರವು ಈಗ ಕೇವಲ ಹಾಳುಬಿದ್ದ ಮನೆಗಳಿಂದ ಕೂಡಿದ ಒಂದು ದಿಬ್ಬವಾಗಿದೆ. ಆದರೆ ಆ ನಗರವು ಮತ್ತೆ ನಿರ್ಮಿಸಲ್ಪಡುವುದು. ಮುಂಚೆ ಇದ್ದ ಸ್ಥಳದಲ್ಲಿ ಅರಮನೆಯನ್ನು ಕಟ್ಟಲಾಗುವುದು.


“ನಿನ್ನ ಜನರೆಲ್ಲಾ ನೀತಿಯಲ್ಲಿ ಜೀವಿಸುವರು. ಅವರು ಭೂಮಿಗೆ ಶಾಶ್ವತವಾದ ಬಾಧ್ಯಸ್ತರಾಗುವರು. ಆ ಜನರನ್ನು ನಾನೇ ನಿರ್ಮಿಸಿದೆನು. ನಾನು ನನ್ನ ಸ್ವಂತ ಕೈಗಳಿಂದ ನಿರ್ಮಿಸಿದ ಆಶ್ಚರ್ಯಕರವಾದ ಸಸಿಗಳಂತೆ ಅವರಿರುವರು.


ದೇವರು ಹೇಳುವುದೇನೆಂದರೆ: “ಜೆರುಸಲೇಮಿನ ಕಡೆಗೆ ನೋಡಿರಿ. ಆಕೆ ನನ್ನ ಮೇಲೆ ನಂಬಿಕೆ ಇಟ್ಟು ಹಿಂಬಾಲಿಸಿದಂಥ ನಗರಿಯಾಗಿದ್ದಳು. ಆದರೆ ಈಗ ಆಕೆ ಸೂಳೆಯಾಗಲು ಕಾರಣವೇನು? ಈಗ ಆಕೆ ನನ್ನನ್ನು ಹಿಂಬಾಲಿಸುತ್ತಿಲ್ಲ. ಜೆರುಸಲೇಮು ನ್ಯಾಯನೀತಿಗಳಿಂದ ತುಂಬಿರಬೇಕಿತ್ತು. ಅಲ್ಲಿ ವಾಸಿಸುವ ಜನರು ದೇವರ ಇಚ್ಛೆಯಂತೆ ನಡೆಯಬೇಕಿತ್ತು. ಆದರೆ ಈಗ ಕೊಲೆಗಡುಕರು ಅಲ್ಲಿ ವಾಸಿಸುತ್ತಿದ್ದಾರೆ.


ಯೆಹೋವನು ನಿಮ್ಮನ್ನು ಚೀಯೋನಿನಿಂದ ಆಶೀರ್ವದಿಸಲಿ. ಆತನು ಆಕಾಶವನ್ನೂ ಭೂಮಿಯನ್ನೂ ಸೃಷ್ಟಿಮಾಡಿದನು.


ಅವರ ಸಮೀಪದಲ್ಲಿ ನಡೆದುಹೋಗುವವರು, “ಯೆಹೋವನು ನಿಮ್ಮನ್ನು ಆಶೀರ್ವದಿಸಲಿ” ಎಂದು ಹೇಳುವುದಿಲ್ಲ. “ಯೆಹೋವನ ಹೆಸರಿನಲ್ಲಿ ನಿಮಗೆ ಆಶೀರ್ವಾದವಾಗಲಿ” ಎಂದು ಜನರು ಅವರನ್ನು ಆಶೀರ್ವದಿಸುವುದಿಲ್ಲ.


ಯೆಹೋವನು ನಿನ್ನನ್ನು ಚೀಯೋನಿನಿಂದ ಆಶೀರ್ವದಿಸಲಿ. ನಿನ್ನ ಜೀವಮಾನವೆಲ್ಲಾ ನೀನು ಜೆರುಸಲೇಮಿನಲ್ಲಿ ಆಶೀರ್ವಾದಗಳನ್ನು ಅನುಭವಿಸುವಂತಾಗಲಿ.


ಯೆಹೋವನೇ, ನಿನ್ನ ಜನರನ್ನು ರಕ್ಷಿಸು, ನಿನ್ನ ಸ್ವಕೀಯ ಪ್ರಜೆಯನ್ನು ಆಶೀರ್ವದಿಸು! ಅವರಿಗೆ ಕುರುಬನಾಗಿದ್ದು ಸದಾಕಾಲ ಅವರನ್ನು ಪರಿಪಾಲಿಸು.


ತರುವಾಯ ಬೋವಜನು ಬೆತ್ಲೆಹೇಮಿನಿಂದ ಹೊಲಕ್ಕೆ ಬಂದನು. ಅವನು ಕೆಲಸಗಾರರಿಗೆ, “ಯೆಹೋವನು ನಿಮ್ಮ ಸಂಗಡ ಇರಲಿ” ಎಂದು ಹರಸಿದನು. ಆ ಕೆಲಸಗಾರರು, “ಯೆಹೋವನು ನಿನಗೆ ಕೃಪೆ ತೋರಲಿ” ಎಂದು ಉತ್ತರಿಸಿದರು.


ಜನರು ಹಣ ಕೊಟ್ಟು ಭೂಮಿಯನ್ನು ಕೊಂಡುಕೊಳ್ಳುವರು. ಅವರು ಕರಾರುಪತ್ರಗಳಿಗೆ ಸಹಿಹಾಕುವರು. ಜನರು ಕ್ರಯಪತ್ರಗಳಿಗೆ ಸಹಿ ಹಾಕುವದನ್ನು ಬೇರೆಯವರು ನೋಡುವರು. ಬೆನ್ಯಾಮೀನ್ ಕುಲದವರು ವಾಸಿಸುವ ಪ್ರದೇಶದಲ್ಲಿ ಜನರು ಪುನಃ ಹೊಲಗಳನ್ನು ಕೊಂಡುಕೊಳ್ಳುವರು. ಜೆರುಸಲೇಮಿನ ಸುತ್ತಲಿನ ಪ್ರದೇಶದಲ್ಲಿ ಅವರು ಹೊಲಗಳನ್ನು ಕೊಂಡುಕೊಳ್ಳುವರು. ಅವರು ಯೆಹೂದ ಪ್ರದೇಶದ ಊರುಗಳಲ್ಲಿಯೂ ಬೆಟ್ಟಪ್ರದೇಶದಲ್ಲಿಯೂ ಪಶ್ಚಿಮದ ಇಳಿಜಾರು ಪ್ರದೇಶದಲ್ಲಿಯೂ ದಕ್ಷಿಣದ ಮರಳುಗಾಡಿನಲ್ಲಿಯೂ ಹೊಲಗಳನ್ನು ಕೊಂಡುಕೊಳ್ಳುವರು. ನಾನು ನಿಮ್ಮ ಜನರನ್ನು ನಿಮ್ಮ ಪ್ರದೇಶಕ್ಕೆ ಪುನಃ ಕರೆದುಕೊಂಡು ಬರುವದರಿಂದ ಹೀಗಾಗುವುದು.” ಇದು ಯೆಹೋವನ ನುಡಿ.


ಯಾರೂ ಪರಸ್ಪರ ಹಾನಿಮಾಡುವದಿಲ್ಲ. ನನ್ನ ಪವಿತ್ರ ಪರ್ವತದಲ್ಲಿನ ಜನರು ವಸ್ತುಗಳನ್ನು ನಾಶಮಾಡಲು ಇಷ್ಟಪಡುವದಿಲ್ಲ. ಯಾಕೆಂದರೆ ಆಗ ಜನರು ನಿಜವಾಗಿಯೂ ಯೆಹೋವನನ್ನು ಅರಿತಿರುವರು. ಸಾಗರದಲ್ಲಿ ನೀರು ತುಂಬಿದಂತೆ ಲೋಕವೆಲ್ಲಾ ಆತನ ವಿಷಯವೆಂಬ ಜ್ಞಾನದಿಂದ ತುಂಬುವದು.


ಯೆಹೋವನೇ ಉನ್ನತೋನ್ನತನು. ಆತನು ಬಹು ಉನ್ನತವಾದ ಸ್ಥಳದಲ್ಲಿ ವಾಸಿಸುತ್ತಾನೆ. ಆತನು ಚೀಯೋನನ್ನು ನ್ಯಾಯನೀತಿಗಳಿಂದ ತುಂಬಿಸುವನು.


ನಾನು ನಿಮಗೆ ದೊರೆಯುವೆನು.” ಇದು ಯೆಹೋವನ ನುಡಿ. “ನಾನು ನಿಮ್ಮನ್ನು ನಿಮ್ಮ ಬಂಧನದಿಂದ ಬಿಡಿಸಿ ಕರೆದುತರುವೆನು. ನಾನು ಈ ಸ್ಥಳವನ್ನು ಬಿಡಲು ನಿಮಗೆ ಒತ್ತಾಯಿಸಿದೆ. ಆದರೆ ನಾನು ನಿಮ್ಮನ್ನು ಕಳುಹಿಸಿದ್ದ ಎಲ್ಲಾ ಜನಾಂಗಗಳಿಂದ ಮತ್ತು ಎಲ್ಲಾ ಸ್ಥಳಗಳಿಂದ ನಿಮ್ಮನ್ನು ಒಟ್ಟುಗೂಡಿಸಿ ಈ ಸ್ಥಳಕ್ಕೆ ಕರೆದು ತರುವೆನು.” ಇದು ಯೆಹೋವನ ನುಡಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು