Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 31:25 - ಪರಿಶುದ್ದ ಬೈಬಲ್‌

25 ದುಬರ್ಲಗೊಂಡ ಮತ್ತು ದಣಿದ ಜನರಿಗೆ ನಾನು ಶಕ್ತಿಯನ್ನೂ ವಿಶ್ರಾಂತಿಯನ್ನೂ ಕೊಡುವೆನು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

25 ನಾನು ಬಳಲಿದವರನ್ನು ತಂಪುಗೊಳಿಸಿ, ಕುಂದಿದವರೆಲ್ಲರನ್ನೂ ತೃಪ್ತಿಪಡಿಸುವೆನಷ್ಟೆ” ಎಂಬುದೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

25 ಬಳಲಿ ಬೆಂಡಾದವರೆಲ್ಲರನ್ನು ತಣಿಸುವೆನು ಹಾಗೂ ತೃಪ್ತಿಪಡಿಸುವೆನು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

25 ನಾನು ಬಳಲಿದವರನ್ನು ತಂಪುಗೊಳಿಸಿ ಕುಂದಿದವರೆಲ್ಲರನ್ನೂ ತೃಪ್ತಿಪಡಿಸುವೆನಷ್ಟೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

25 ದಣಿದ ಪ್ರಾಣವನ್ನು ತೃಪ್ತಿಪಡಿಸಿದ್ದೇನೆ. ಕುಂದಿದ ಪ್ರಾಣಗಳನ್ನೆಲ್ಲಾ ತುಂಬಿಸಿದ್ದೇನೆ.”

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 31:25
14 ತಿಳಿವುಗಳ ಹೋಲಿಕೆ  

ನೀತಿಗಾಗಿ ತವಕಪಡುವವರು ಧನ್ಯರು. ದೇವರು ಅವರನ್ನು ಸಂತೃಪ್ತಿಪಡಿಸುವನು.


ಆದರೆ ನಾನು ಕೊಡುವ ನೀರನ್ನು ಕುಡಿಯುವವನಿಗೆ ದಾಹವಾಗುವುದೇ ಇಲ್ಲ. ನಾನು ಅವನಿಗೆ ಕೊಡುವ ನೀರು ಅವನೊಳಗೆ ಉಕ್ಕಿಹರಿಯುವ ನೀರಿನ ಬುಗ್ಗೆಯಾಗುವುದು. ಆ ನೀರು ಅವನಿಗೆ ನಿತ್ಯಜೀವವನ್ನು ತರುತ್ತದೆ” ಎಂದು ಉತ್ತರಕೊಟ್ಟನು.


“ಕಷ್ಟಪಡುವವರೇ, ಹೊರೆಹೊತ್ತವರೇ, ನೀವೆಲ್ಲರೂ ನನ್ನ ಬಳಿಗೆ ಬನ್ನಿರಿ. ನಾನು ನಿಮಗೆ ವಿಶ್ರಾಂತಿಯನ್ನು ಕೊಡುತ್ತೇನೆ.


ಆತನು ಬಾಯರಿದವರನ್ನು ನೀರಿನಿಂದಲೂ ಹಸಿದವರನ್ನು ಮೃಷ್ಟಾನ್ನದಿಂದಲೂ ತೃಪ್ತಿಗೊಳಿಸುವನು.


ಯಾಜಕರು ತಮಗೆ ಬೇಕಾಗುವದಕ್ಕಿಂತ ಹೆಚ್ಚಿನ ಪ್ರಮಾಣದಲ್ಲಿ ನೈವೇದ್ಯಗಳನ್ನು ಪಡೆಯುವರು. ನಾನು ಅವರಿಗೆ ಕೊಡುವ ಉತ್ತಮ ವಸ್ತುಗಳನ್ನು ಮನದಣಿಯುವ ಹಾಗೆ ಅನುಭವಿಸಿ ನನ್ನ ಜನರು ತೃಪ್ತಿಪಡುವರು.” ಇದು ಯೆಹೋವನ ನುಡಿ.


ಆದರೆ ದೇವರು ಇಕ್ಕಟ್ಟುಗಳಲ್ಲಿರುವ ಜನರನ್ನು ಸಂತೈಸುತ್ತಾನೆ. ತೀತನು ಬಂದಾಗ ದೇವರು ನಮ್ಮನ್ನು ಸಂತೈಸಿದನು.


ನನ್ನ ಒಡೆಯನಾದ ಯೆಹೋವನು ನನಗೆ ಬೋಧಿಸುವ ಸಾಮರ್ಥ್ಯವನ್ನು ಅನುಗ್ರಹಿಸಿದ್ದಾನೆ. ಈಗ ನಾನು ದುಃಖದಲ್ಲಿರುವ ಈ ಜನರಿಗೆ ಬೋಧಿಸುತ್ತಿದ್ದೇನೆ. ಪ್ರತೀ ಮುಂಜಾನೆ ವಿದ್ಯಾರ್ಥಿಯೋ ಎಂಬಂತೆ ಆತನು ನನ್ನನ್ನು ಎಬ್ಬಿಸಿ ನನಗೆ ಬೋಧಿಸುತ್ತಾನೆ.


ಆತನು ಹಸಿದವರನ್ನು ಮೃಷ್ಟಾನ್ನದಿಂದ ತೃಪ್ತಿಗೊಳಿಸಿ ಐಶ್ವರ್ಯವಂತರನ್ನು ಬರಿಗೈಯಲ್ಲಿ ಕಳುಹಿಸಿಬಿಡುತ್ತಾನೆ.


ಹೀಗಿದ್ದಲ್ಲಿ ರಾಜನು ಮಳೆಯಲ್ಲಿ ಆಶ್ರಯ ಸ್ಥಳವಾಗಿಯೂ ಗಾಳಿಯಲ್ಲಿ ಮರೆಯಂತೆಯೂ ಮರುಭೂಮಿಯಲ್ಲಿ ಒರತೆಯಂತೆಯೂ ಬೆಂಗಾಡಿನಲ್ಲಿ ಬಂಡೆಯ ನೆರಳಿನಂತೆಯೂ ಇರುವನು.


ಬಳಲಿಹೋದವರನ್ನು ಆತನು ಬಲಶಾಲಿಗಳನ್ನಾಗಿ ಮಾಡುತ್ತಾನೆ. ಬಲಹೀನರನ್ನು ಶಕ್ತಿವಂತರನ್ನಾಗಿ ಮಾಡುತ್ತಾನೆ.


ಇಸ್ರೇಲಿನ ಜನರು ಚೀಯೋನ್ ಶಿಖರಕ್ಕೆ ಬರುವರು; ಸಂತೋಷದಿಂದ ನಲಿದಾಡುವರು. ದೇವರು ಅವರಿಗೆ ಅನುಗ್ರಹಿಸುವ ಎಲ್ಲಾ ಶ್ರೇಷ್ಠವಾದ ವಸ್ತುಗಳಿಂದ ಸಂತೋಷಚಿತ್ತರಾದ ಅವರ ಮುಖಗಳು ಪ್ರಕಾಶಮಾನವಾಗುವವು. ಯೆಹೋವನು ಅವರಿಗೆ ಧಾನ್ಯ, ಹೊಸ ದ್ರಾಕ್ಷಾರಸ, ಎಣ್ಣೆ, ಕುರಿಮರಿಗಳು ಮತ್ತು ಹಸುಗಳನ್ನು ದಯಪಾಲಿಸುವನು. ಅವರು ಸಾಕಷ್ಟು ನೀರಿರುವ ತೋಟದಂತೆ ಲವಲವಿಕೆಯಿಂದ ಇರುವರು. ಇಸ್ರೇಲರು ಇನ್ನು ಯಾವ ತೊಂದರೆಗೂ ಒಳಗಾಗುವುದಿಲ್ಲ.


ಹುಲ್ಲುಗಾವಲಿಗೆ ನಾನು ಅವುಗಳನ್ನು ನಡೆಸುವೆನು. ಇಸ್ರೇಲಿನ ಎತ್ತರವಾದ ಬೆಟ್ಟಗಳಲ್ಲಿ ಅವು ಮೇಯುವವು. ಅಲ್ಲಿ ಒಳ್ಳೆಯ ಸ್ಥಳದಲ್ಲಿ ಅವುಗಳು ಮಲಗಿ ಹುಲ್ಲನ್ನು ಮೇಯುವವು.


ಆತನು ತನ್ನ ಹೆಸರಿಗೆ ತಕ್ಕಂತೆ ನನ್ನ ಪ್ರಾಣಕ್ಕೆ ಚೈತನ್ಯ ನೀಡಿ ನೀತಿಮಾರ್ಗದಲ್ಲಿ ನನ್ನನ್ನು ನಡೆಸುವನು.


“ಬಡಜನರು ನೀರಿಗಾಗಿ ಹುಡುಕಾಡುವರು. ಆದರೆ ನೀರು ಅವರಿಗೆ ದೊರಕುವದಿಲ್ಲ. ಅವರು ದಾಹಗೊಂಡಿದ್ದಾರೆ, ಅವರ ನಾಲಿಗೆ ಒಣಗಿಹೋಗಿದೆ. ನಾನು ಅವರ ಮೊರೆಯನ್ನು ಕೇಳುವೆನು. ನಾನು ಅವರನ್ನು ತೊರೆಯುವುದಿಲ್ಲ, ಅವರನ್ನು ಸಾಯಲು ಬಿಡುವುದಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು