Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 31:34 - ಪರಿಶುದ್ದ ಬೈಬಲ್‌

34 ತಮ್ಮ ನೆರೆಮನೆಯವರಿಗೂ ತಮ್ಮ ಬಂಧುಬಳಗದವರಿಗೂ ಯಾರೂ ಯೆಹೋವನ ಬಗ್ಗೆ ಹೇಳಿಕೊಡಬೇಕಾಗಿಲ್ಲ. ಯಾಕೆಂದರೆ ಅತಿ ಕನಿಷ್ಠರಿಂದ ಅತಿ ಪ್ರಮುಖರವರೆಗೆ ಎಲ್ಲರೂ ನನ್ನನ್ನು ತಿಳಿದುಕೊಂಡಿರುವರು. ಅವರು ಮಾಡಿದ ದುಷ್ಕೃತ್ಯಗಳಿಗಾಗಿ ನಾನು ಅವರನ್ನು ಕ್ಷಮಿಸುವೆನು. ನಾನು ಅವರ ಪಾಪಗಳನ್ನು ಮರೆತುಬಿಡುವೆನು.” ಇದು ಯೆಹೋವನ ನುಡಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

34 ನೆರೆಹೊರೆಯವರೂ, ಅಣ್ಣತಮ್ಮಂದಿರೂ ಒಬ್ಬರಿಗೊಬ್ಬರು, ‘ಯೆಹೋವನ ಜ್ಞಾನವನ್ನು ಪಡೆಯಿರಿ’ ಎಂದು ಇನ್ನು ಮೇಲೆ ಬೋಧಿಸಬೇಕಾಗಿರುವುದಿಲ್ಲ; ಚಿಕ್ಕವರು ಮೊದಲುಗೊಂಡು ದೊಡ್ಡವರ ತನಕ ಎಲ್ಲರೂ ನನ್ನ ಜ್ಞಾನವನ್ನು ಪಡೆದಿರುವರು. ನಾನು ಅವರ ಅಪರಾಧವನ್ನು ಕ್ಷಮಿಸಿ ಅವರ ಪಾಪವನ್ನು ನನ್ನ ನೆನಪಿಗೆ ಎಂದಿಗೂ ತರುವುದಿಲ್ಲ. ಇದು ಯೆಹೋವನ ನುಡಿ” ಎಂಬುದೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

34 ಒಬ್ಬನು ತನ್ನ ನೆರೆಹೊರೆಯವರನ್ನು ಕುರಿತು ಅಥವಾ ಅಣ್ಣತಮ್ಮಂದಿರನ್ನು ಕುರಿತು, ‘ಸರ್ವೇಶ್ವರನನ್ನು ಅರಿತುಕೊ’ ಎಂದು ಬೋಧಿಸಬೇಕಾಗಿರುವುದಿಲ್ಲ. ಚಿಕ್ಕವರಿಂದ ಮೊದಲ್ಗೊಂಡು ದೊಡ್ಡವರ ತನಕ ಎಲ್ಲರು ನನ್ನನ್ನು ಅರಿತುಕೊಳ್ಳುವರು. ನಾನು ಅವರ ಅಪರಾಧವನ್ನು ಕ್ಷಮಿಸಿ, ಅವರ ಪಾಪವನ್ನು ಎಂದಿಗೂ ನೆನಪಿಗೆ ತಂದುಕೊಳ್ಳುವುದಿಲ್ಲ. ಇದು ಸರ್ವೇಶ್ವರನಾದ ನನ್ನ ನುಡಿ.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

34 ನೆರೆಹೊರೆಯವರೂ ಅಣ್ಣತಮ್ಮಂದಿರೂ ಒಬ್ಬರಿಗೊಬ್ಬರು - ಯೆಹೋವನ ಜ್ಞಾನವನ್ನು ಪಡೆಯಿರಿ ಎಂದು ಇನ್ನು ಮೇಲೆ ಬೋಧಿಸಬೇಕಾಗಿರುವದಿಲ್ಲ; ಚಿಕ್ಕವರು ಮೊದಲುಗೊಂಡು ದೊಡ್ಡವರ ತನಕ ಎಲ್ಲರೂ ನನ್ನ ಜ್ಞಾನವನ್ನು ಪಡೆದಿರುವರು; ನಾನು ಅವರ ಅಪರಾಧವನ್ನು ಕ್ಷವಿುಸಿ ಅವರ ಪಾಪವನ್ನು ನನ್ನ ನೆನಪಿಗೆ ಎಂದಿಗೂ ತರುವದಿಲ್ಲ. ಇದು ಯೆಹೋವನ ನುಡಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

34 ಇದಲ್ಲದೆ ಪ್ರತಿಯೊಬ್ಬನು ತನ್ನ ನೆರೆಯವನಿಗೂ ತನ್ನ ಸಹೋದರನಿಗೂ, ‘ಯೆಹೋವ ದೇವರನ್ನು ಅರಿತುಕೊಳ್ಳಿರಿ,’ ಎಂದು ಬೋಧಿಸಬೇಕಾಗಿಲ್ಲ. ಏಕೆಂದರೆ ಚಿಕ್ಕವರಿಂದ ದೊಡ್ಡವರವರೆಗೂ ಎಲ್ಲರೂ ನನ್ನನ್ನು ಅರಿತುಕೊಳ್ಳುವರು. ನಾನು ಅವರ ದುಷ್ಕೃತ್ಯಗಳನ್ನು ಕ್ಷಮಿಸುವೆನು,” ಎಂದು ಯೆಹೋವ ದೇವರು ಹೇಳುತ್ತಾರೆ. “ಅವರ ಪಾಪಗಳನ್ನು ಇನ್ನೆಂದಿಗೂ ನನ್ನ ನೆನಪಿಗೆ ತಂದುಕೊಳ್ಳುವುದಿಲ್ಲ.”

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 31:34
42 ತಿಳಿವುಗಳ ಹೋಲಿಕೆ  

“ನಿಮ್ಮ ಪಾಪಗಳನ್ನೆಲ್ಲಾ ಅಳಿಸಿ ಹಾಕುವಾತನು ನಾನೇ. ನಾನು ಇದನ್ನು ನನಗೋಸ್ಕರವಾಗಿ ಮಾಡುತ್ತೇನೆ. ನಾನು ನಿಮ್ಮ ಪಾಪಗಳನ್ನು ಜ್ಞಾಪಿಸಿಕೊಳ್ಳುವುದಿಲ್ಲ.


ಅವರು ನನ್ನ ವಿರುದ್ಧವಾಗಿ ಮಾಡುವ ಎಲ್ಲಾ ಕೆಟ್ಟಕಾರ್ಯಗಳನ್ನು ಕ್ಷಮಿಸುವೆನು; ಅವರ ಪಾಪಗಳನ್ನು ನೆನಪಿಗೆ ತಂದುಕೊಳ್ಳುವುದಿಲ್ಲ.”


ಕ್ರಿಸ್ತನು ನಿಮಗೆ ವಿಶೇಷವಾದ ವರವನ್ನು ದಯಪಾಲಿಸಿರುವನು. ಅದು ನಿಮ್ಮಲ್ಲಿ ಇನ್ನೂ ಇದೆ. ಆದ್ದರಿಂದ ನಿಮಗೆ ಯಾವ ಉಪದೇಶಕರ ಅಗತ್ಯವೂ ಇಲ್ಲ. ಆತನು ನಿಮಗೆ ಕೊಟ್ಟಿರುವ ವರವು ನಿಮಗೆ ಎಲ್ಲವನ್ನೂ ಉಪದೇಶಿಸುತ್ತದೆ. ಅದು ನಿಜವಾದುದು, ಸುಳ್ಳಲ್ಲ. ಆದ್ದರಿಂದ ಅದರ ಉಪದೇಶಕ್ಕನುಸಾರವಾಗಿ ನೀವು ಆತನಲ್ಲಿ ನೆಲೆಗೊಂಡಿರಿ.


ನಿನ್ನ ಮಕ್ಕಳು ದೇವರನ್ನು ಅನುಸರಿಸುವರು. ಆತನು ಅವರಿಗೆ ಬೋಧಿಸುವನು. ನಿನ್ನ ಮಕ್ಕಳಿಗೆ ನಿಜವಾದ ಶಾಂತಿ ಇರುವದು.


ಅವರು ನನ್ನ ವಿರುದ್ಧ ಪಾಪಗಳನ್ನು ಮಾಡಿದರೂ ಅವರ ಪಾಪಗಳನ್ನು ತೊಳೆದುಬಿಡುವೆನು. ಅವರು ನನ್ನ ವಿರುದ್ಧ ಕಾದಾಡಿದರೂ ಅವರನ್ನು ಕ್ಷಮಿಸುವೆನು.


ಇದು ಯೆಹೋವನ ನುಡಿ. “ಆ ಸಮಯದಲ್ಲಿ ಜನರು ಇಸ್ರೇಲಿನ ದೋಷವನ್ನು ಕಂಡುಹಿಡಿಯಲು ಪ್ರಯತ್ನಿಸುವರು. ಆದರೆ ಯಾವ ದೋಷಗಳೂ ಇರುವದಿಲ್ಲ. ಜನರು ಯೆಹೂದದ ಪಾಪಗಳನ್ನು ಹುಡುಕುವ ಪ್ರಯತ್ನ ಮಾಡುವರು. ಆದರೆ ಯಾವ ಪಾಪಗಳೂ ಸಿಕ್ಕುವದಿಲ್ಲ. ಏಕೆಂದರೆ ಇಸ್ರೇಲಿನ ಮತ್ತು ಯೆಹೂದದ ಜನರಲ್ಲಿ ಅಳಿದುಳಿದ ಕೆಲವು ಜನರನ್ನು ನಾನು ರಕ್ಷಿಸುತ್ತೇನೆ. ಅವರ ಪಾಪಗಳನ್ನೆಲ್ಲ ಕ್ಷಮಿಸಿದ್ದೇನೆ.”


‘ದೇವರು ಎಲ್ಲಾ ಜನರಿಗೆ ಉಪದೇಶಿಸುವನು’ ಎಂದು ಪವಿತ್ರ ಗ್ರಂಥದಲ್ಲಿ ಬರೆದಿದೆ. ಜನರು ತಂದೆಗೆ ಕಿವಿಗೊಟ್ಟು ಆತನಿಂದ ಕಲಿತುಕೊಳ್ಳುವರು. ಆ ಜನರು ನನ್ನ ಬಳಿಗೆ ಬರುವರು.


ಪರಿಶುದ್ಧವಾಗಿರುವಾತನು (ದೇವರು ಅಥವಾ ಕ್ರಿಸ್ತನು) ಕೊಟ್ಟಿರುವ ವರವನ್ನು ನೀವು ಹೊಂದಿದ್ದೀರಿ. ಆದ್ದರಿಂದ ನೀವೆಲ್ಲರೂ ಸತ್ಯವನ್ನು ತಿಳಿದಿದ್ದೀರಿ.


ಒಬ್ಬನೇ ಸತ್ಯದೇವರಾಗಿರುವ ನಿನ್ನನ್ನು ಮತ್ತು ನೀನು ಕಳುಹಿಸಿದ ಯೇಸು ಕ್ರಿಸ್ತನನ್ನು ತಿಳಿದುಕೊಳ್ಳುವುದೇ ನಿತ್ಯಜೀವ.


ನಿನ್ನ ಹಾಗೆ ಬೇರೆ ಯಾವ ದೇವರೂ ಇಲ್ಲ. ಪಾಪದಲ್ಲಿ ಬಿದ್ದವರನ್ನು ನೀನು ಕ್ಷಮಿಸುವೆ. ನಿನ್ನ ಜನಶೇಷವನ್ನು ಮನ್ನಿಸುವೆ. ನೀನು ನಿತ್ಯಕ್ಕೂ ಕೋಪಿಸುವದಿಲ್ಲ. ಯಾಕೆಂದರೆ ದಯೆತೋರಿಸುವದರಲ್ಲಿ ನೀನು ಸಂತೋಷಿಸುವೆ.


ಅವರಲ್ಲಿ ನನ್ನನ್ನು ಅರಿತುಕೊಳ್ಳುವ ಬಯಕೆ ಉಂಟಾಗುವಂತೆ ಮಾಡುತ್ತೇನೆ. ನಾನೇ ಯೆಹೋವನು ಎಂಬುದನ್ನು ಅವರು ತಿಳಿದುಕೊಳ್ಳುವರು. ಅವರು ನನ್ನ ಜನರಾಗುವರು ಮತ್ತು ನಾನು ಅವರ ದೇವರಾಗುವೆನು. ನಾನು ಹೀಗೇಕೆ ಮಾಡುತ್ತೇನೆಂದರೆ ಬಾಬಿಲೋನಿನಲ್ಲಿ ಸೆರೆಯಾಳುಗಳಾಗಿದ್ದ ಜನರು ಮನಃಪೂರ್ವಕವಾಗಿ ನನ್ನ ಕಡೆಗೆ ತಿರುಗುತ್ತಾರೆ.


ದೇವರ ಮಗನು ಬಂದಿದ್ದಾನೆಂಬುದು ನಮಗೆ ತಿಳಿದಿದೆ. ದೇವರ ಮಗನು ನಮಗೆ ತಿಳುವಳಿಕೆಯನ್ನು ದಯಪಾಲಿಸಿರುವನು. ಈಗ ನಾವು ದೇವರನ್ನು ತಿಳಿದುಕೊಳ್ಳಬಲ್ಲೆವು. ಸತ್ಯವಾಗಿರುವಾತನು ದೇವರೇ. ಸತ್ಯ ದೇವರಲ್ಲಿಯೂ ಮತ್ತು ಆತನ ಮಗನಾದ ಯೇಸು ಕ್ರಿಸ್ತನಲ್ಲಿಯೂ ನಾವು ನೆಲೆಸಿದ್ದೇವೆ. ಆತನು ಸತ್ಯದೇವರೂ ನಿತ್ಯಜೀವವೂ ಆಗಿದ್ದಾನೆ.


ಯೇಸುವಿನಲ್ಲಿ ನಂಬಿಕೆ ಇಡುವ ಪ್ರತಿಯೊಬ್ಬನ ಪಾಪಗಳನ್ನು ದೇವರು ಯೇಸುವಿನ ಮೂಲಕ ಕ್ಷಮಿಸುವನು. ಇದು ಸತ್ಯವೆಂದು ಪ್ರವಾದಿಗಳು ಹೇಳಿದ್ದಾರೆ” ಅಂದನು.


ಆಗ ಎಲ್ಲಾ ಕಡೆಗಳಲ್ಲಿರುವ ಜನರು ಯೆಹೋವನ ಮಹಿಮೆಯನ್ನು ತಿಳಿದುಕೊಳ್ಳುವರು. ಹೇಗೆ ನೀರು ಸಮುದ್ರಕ್ಕೆ ಹರಿಯುತ್ತದೋ ಹಾಗೆ ಈ ವರ್ತಮಾನವು ಎಲ್ಲಾ ಕಡೆಗೆ ಹಬ್ಬುವದು.


ನಿನ್ನ ಪಾಪಗಳು ದೊಡ್ಡ ಮೋಡದಂತಿವೆ. ಆದರೆ ನಾನು ಅವುಗಳನ್ನು ಅಳಿಸಿಬಿಟ್ಟಿದ್ದೇನೆ. ನಿನ್ನ ಪಾಪಗಳನ್ನು ಗಾಳಿಯಲ್ಲಿ ಹಾರಿಹೋದ ಮೋಡದಂತೆ ಹಾರಿಸಿಬಿಟ್ಟಿದ್ದೇನೆ. ನಾನು ನಿನ್ನನ್ನು ರಕ್ಷಿಸಿದೆನು. ಆದ್ದರಿಂದ ನನ್ನ ಬಳಿಗೆ ಹಿಂತಿರುಗಿ ಬಾ.”


ನಿಮಗೆ ಕಾಲವು ಬೇಕಾದಷ್ಟಿದ್ದುದರಿಂದ ಈಗಾಗಲೇ ನೀವು ಉಪದೇಶಕರಾಗಿರಬೇಕಿತ್ತು. (ಆದರೆ ನೀವಿನ್ನೂ ಆಗಿಲ್ಲ.) ಹೀಗಿರಲು ದೇವರ ಉಪದೇಶಗಳನ್ನು ಮೊದಲ ಪಾಠದಿಂದ ಮತ್ತೆ ಉಪದೇಶಿಸಲು ನಿಮಗೆ ಮತ್ತೊಬ್ಬ ವ್ಯಕ್ತಿಯ ಅಗತ್ಯವಿದೆ. ಹಾಲಿನಂತಿರುವ ಉಪದೇಶವನ್ನು ನಾವು ನಿಮಗೆ ಮಾಡಬೇಕಾಗಿದೆ. ನೀವು ಗಟ್ಟಿ ಆಹಾರವನ್ನು ತಿನ್ನುವವರಾಗಿಲ್ಲ.


ಕ್ರಿಸ್ತನಲ್ಲಿ ಸಹೋದರ ಸಹೋದರಿಯರನ್ನು ಹೇಗೆ ಪ್ರೀತಿಸಬೇಕೆಂಬುದರ ಬಗ್ಗೆ ನಾವು ನಿಮಗೆ ಬರೆಯುವ ಅವಶ್ಯಕತೆಯಿಲ್ಲ. ಒಬ್ಬರನ್ನೊಬ್ಬರು ಹೇಗೆ ಪ್ರೀತಿಸಬೇಕೆಂಬುದನ್ನು ಈಗಾಗಲೇ ದೇವರು ನಿಮಗೆ ಕಲಿಸಿದ್ದಾನೆ.


ಕ್ರಿಸ್ತನ ರಕ್ತದ ಮೂಲಕವಾಗಿ ನಮಗೆ ಬಿಡುಗಡೆಯಾಯಿತು. ದೇವರ ಮಹಾ ಕೃಪೆಯಿಂದ ನಮ್ಮ ಪಾಪಗಳು ಕ್ಷಮಿಸಲ್ಪಟ್ಟವು.


“ಬೆಳಕು ಕತ್ತಲೆಯೊಳಗಿಂದ ಪ್ರಕಾಶಿಸಲಿ!” ಎಂದು ದೇವರು ಒಮ್ಮೆ ಹೇಳಿದ್ದಾನೆ. ಈ ದೇವರೇ ನಮ್ಮ ಹೃದಯಗಳಲ್ಲಿ ತನ್ನ ಬೆಳಕನ್ನು ಬೆಳಗಿಸಿದ್ದಾನೆ. ಕ್ರಿಸ್ತನ ಮುಖದಲ್ಲಿರುವ ದೇವರ ಮಹಿಮೆಯನ್ನು ನಮಗೆ ತಿಳಿಯಪಡಿಸುವುದರ ಮೂಲಕ ಆತನು ನಮಗೆ ಬೆಳಕನ್ನು ಕೊಟ್ಟಿದ್ದಾನೆ.


ಯಾರೂ ಪರಸ್ಪರ ಹಾನಿಮಾಡುವದಿಲ್ಲ. ನನ್ನ ಪವಿತ್ರ ಪರ್ವತದಲ್ಲಿನ ಜನರು ವಸ್ತುಗಳನ್ನು ನಾಶಮಾಡಲು ಇಷ್ಟಪಡುವದಿಲ್ಲ. ಯಾಕೆಂದರೆ ಆಗ ಜನರು ನಿಜವಾಗಿಯೂ ಯೆಹೋವನನ್ನು ಅರಿತಿರುವರು. ಸಾಗರದಲ್ಲಿ ನೀರು ತುಂಬಿದಂತೆ ಲೋಕವೆಲ್ಲಾ ಆತನ ವಿಷಯವೆಂಬ ಜ್ಞಾನದಿಂದ ತುಂಬುವದು.


ನೀವು ಒಬ್ಬ ವ್ಯಕ್ತಿಯನ್ನು ಕ್ಷಮಿಸಿದರೆ, ನಾನೂ ಆ ವ್ಯಕ್ತಿಯನ್ನು ಕ್ಷಮಿಸುತ್ತೇನೆ. ನಾನು ಕ್ಷಮಿಸಿದ್ದನ್ನು ನಿಮಗೋಸ್ಕರವಾಗಿಯೇ ಕ್ಷಮಿಸಿದ್ದೇನೆ. ನಾನು ಕ್ಷಮಿಸಬೇಕಾದದ್ದನ್ನೆಲ್ಲ ಕ್ಷಮಿಸಿದ್ದೇನೆ ಮತ್ತು ಕ್ರಿಸ್ತನೇ ನನ್ನೊಂದಿಗೆ ಇದ್ದನು.


“ನನ್ನ ತಂದೆ ನನಗೆ ಎಲ್ಲವನ್ನು ಕೊಟ್ಟಿದ್ದಾನೆ. ಯಾವನೂ ಮಗನನ್ನು ಅರಿತಿಲ್ಲ. ತಂದೆ ಮಾತ್ರ ಮಗನನ್ನು ಅರಿತಿದ್ದಾನೆ. ಯಾವನೂ ತಂದೆಯನ್ನು ಅರಿತಿಲ್ಲ. ಮಗನು ಮಾತ್ರ ತಂದೆಯನ್ನು ಅರಿತಿದ್ದಾನೆ. ಮಗನು ತಂದೆಯನ್ನು ಯಾರಿಗೆ ಪ್ರಕಟಿಸಬೇಕೆಂದು ಇಷ್ಟಪಡುತ್ತಾನೋ ಅವರು ತಂದೆಯನ್ನು ತಿಳಿದುಕೊಳ್ಳುತ್ತಾರೆ.


ಅಲ್ಲಿ ವಾಸಿಸುವವರಲ್ಲಿ ಯಾರೂ “ನನಗೆ ಸೌಖ್ಯವಿಲ್ಲ” ಎಂದು ಹೇಳುವುದಿಲ್ಲ. ಅಲ್ಲಿ ವಾಸಿಸುವವರೆಲ್ಲಾ ತಮ್ಮ ಪಾಪಗಳಿಗೆ ಕ್ಷಮೆಹೊಂದಿದವರಾಗಿದ್ದಾರೆ.


ಆ ಸಮಯದಲ್ಲಿ ಚಂದ್ರನ ಪ್ರಕಾಶವು ಸೂರ್ಯನಂತಿರುವದು. ಸೂರ್ಯನ ಪ್ರಕಾಶವು ಈಗ ಇರುವದಕ್ಕಿಂತ ಏಳರಷ್ಟು ಹೆಚ್ಚಾಗಿರುವದು. ಸೂರ್ಯನ ಒಂದು ದಿವಸದ ಬೆಳಕು ಒಂದು ವಾರದ ಬೆಳಕಿನಷ್ಟಿರುವದು. ಯೆಹೋವನು ತನ್ನ ಮುರಿದುಹೋದ ಜನರಿಗೆ ಆದ ಗಾಯದ ಪೆಟ್ಟುಗಳನ್ನು ಗುಣಪಡಿಸುವಾಗ ಇವೆಲ್ಲಾ ಸಂಭವಿಸುತ್ತವೆ.


“ನನ್ನ ಮಗನಾದ ಸೊಲೊಮೋನನೇ, ನಿನ್ನ ತಂದೆಯ ದೇವರನ್ನು ನೀನು ಚೆನ್ನಾಗಿ ಅರಿತುಕೋ. ನೀನು ಪೂರ್ಣಹೃದಯದಿಂದಲೂ ಪೂರ್ಣಮನಸ್ಸಿನಿಂದಲೂ ನಿನ್ನ ದೇವರನ್ನು ಸೇವಿಸು. ದೇವರು ಪ್ರತಿಯೊಬ್ಬನ ಹೃದಯ ಮನಸ್ಸುಗಳನ್ನು ನೋಡುತ್ತಾನೆ. ನೀನು ದೇವರ ಸಹಾಯವನ್ನು ಕೇಳಿದರೆ ಆತನು ನಿನ್ನ ಪ್ರಾರ್ಥನೆಯನ್ನು ಲಾಲಿಸುವನು. ಆದರೆ ನೀನು ದೇವರನ್ನು ಬಿಟ್ಟರೆ ಆತನು ನಿನ್ನನ್ನು ಬಿಟ್ಟುಹೋಗುವನು.


ಏಲಿಯ ಮಕ್ಕಳು ದುಷ್ಟರಾಗಿದ್ದರು. ಅವರು ಯೆಹೋವನನ್ನು ಲಕ್ಷಿಸುತ್ತಿರಲಿಲ್ಲ.


“ನೀನು ಈ ಲೋಕದೊಳಗಿಂದ ಕೆಲವು ಜನರನ್ನು ನನಗೆ ಕೊಟ್ಟೆ. ನಿನ್ನ ಸ್ವರೂಪವನ್ನು ನಾನು ಇವರಿಗೆ ತೋರಿಸಿದೆನು. ಇವರು ನಿನ್ನವರಾಗಿದ್ದಾರೆ ಮತ್ತು ನೀನೇ ಇವರನ್ನು ನನಗೆ ಕೊಟ್ಟೆ. ಇವರು ನಿನ್ನ ಆಜ್ಞೆಗಳಿಗೆ ವಿಧೇಯರಾದರು.


ಪಾಪಕ್ಷಮೆಯ ಮೂಲಕವಾಗಿ ರಕ್ಷಣೆಯಾಗುವುದೆಂಬ ತಿಳುವಳಿಕೆಯನ್ನು ನೀನು ಜನರಿಗೆ ಕೊಡುವೆ.


ಒಬ್ಬನು ಸಹೋದರನಿಗಾಗಲಿ, ಬೇರೆಯವರಿಗಾಗಲಿ ಬೋಧಿಸಬೇಕಾಗಿರುವುದಿಲ್ಲ; ದೇವರನ್ನು ತಿಳಿದುಕೊಳ್ಳಿ ಎಂದು ಹೇಳಬೇಕಾಗಿರುವುದಿಲ್ಲ. ಏಕೆಂದರೆ ಅತ್ಯಂತ ಪ್ರಮುಖರನ್ನು ಮೊದಲುಗೊಂಡು ಅತ್ಯಂತ ಅಲ್ಪರಾದವರೆಲ್ಲರೂ ನನ್ನನ್ನು ತಿಳಿದುಕೊಂಡಿರುವರು.


ಇಗೋ, ನನ್ನ ಸಂಕಟವೆಲ್ಲಾ ಹೊರಟುಹೋಯಿತು. ನನಗೀಗ ಸಮಾಧಾನವಿದೆ. ನೀನು ನನ್ನನ್ನು ಬಹಳವಾಗಿ ಪ್ರೀತಿಸುವದರಿಂದ ನನ್ನ ಶರೀರವು ಸಮಾಧಿಯಲ್ಲಿ ಕೊಳೆಯುವಂತೆ ಮಾಡಲಿಲ್ಲ. ನೀನು ನನ್ನ ಪಾಪಗಳನ್ನು ಕ್ಷಮಿಸಿದೆ. ನನ್ನ ಪಾಪಗಳನ್ನು ಬಹುದೂರ ಬಿಸಾಡಿದೆ.


“‘ನಾನು ಇಸ್ರೇಲರ ಮತ್ತು ಯೆಹೂದ್ಯರ ಸಂಗಡ ಶಾಶ್ವತವಾದ ಒಂದು ಒಡಂಬಡಿಕೆಯನ್ನು ಮಾಡಿಕೊಳ್ಳುವೆನು. ಈ ಒಡಂಬಡಿಕೆಗನುಸಾರವಾಗಿ ನಾನು ಅವರಿಗೆ ವಿಮುಖನಾಗುವುದೇ ಇಲ್ಲ. ನಾನು ಯಾವಾಗಲೂ ಅವರಿಗೆ ಒಳ್ಳೆಯವನಾಗಿರುತ್ತೇನೆ. ನನ್ನನ್ನು ಗೌರವಿಸಬೇಕೆಂಬ ಇಚ್ಛೆಯನ್ನು ಅವರಲ್ಲಿ ಬರಮಾಡುತ್ತೇನೆ. ಆಗ ಅವರೆಂದಿಗೂ ನನಗೆ ವಿಮುಖರಾಗುವದಿಲ್ಲ.


ನಿನ್ನನ್ನು ನಾನು ನನ್ನ ನಂಬಿಗಸ್ತಳಾದ ವಧುವನ್ನಾಗಿ ಮಾಡುವೆನು. ಆಗ ನೀನು ನನ್ನನ್ನು ನಿಜವಾಗಿಯೂ ಅರಿತುಕೊಳ್ಳುವೆ.


ನಾನು ಯೌವನಸ್ಥನಾಗಿದ್ದಾಗ ಮಾಡಿದ ಪಾಪಗಳನ್ನಾಗಲಿ ಕೆಟ್ಟಕಾರ್ಯಗಳನ್ನಾಗಲಿ ಜ್ಞಾಪಿಸಿಕೊಳ್ಳಬೇಡ. ಯೆಹೋವನೇ, ನಿನ್ನ ಒಳ್ಳೆಯ ಹೆಸರಿನ ನಿಮಿತ್ತ ನನ್ನನ್ನು ಪ್ರೀತಿಯಿಂದ ಜ್ಞಾಪಿಸಿಕೊ.


ಅವರಲ್ಲಿ ಅನೇಕರು ಸರಿಯಾಗಿ ತಿಳಿದುಕೊಳ್ಳಲಿಲ್ಲ. ಆದ್ದರಿಂದ ಅವರು ತಪ್ಪಿಹೋದರು. ಆದರೆ ಅವರು ಪಾಠಗಳನ್ನು ಕಲಿತುಕೊಳ್ಳುವರು.”


ಜೆರುಸಲೇಮೇ, ನೀನು ಐಶ್ವರ್ಯವಂತಳಾಗಿರುವೆ. ನೀನು ದೇವರ ವಿಷಯವಾದ ಜ್ಞಾನ, ತಿಳುವಳಿಕೆ ಮತ್ತು ರಕ್ಷಣೆಗಳಿಂದ ಐಶ್ವರ್ಯವಂತಳಾಗಿರುವೆ. ಯೆಹೋವನ ಮೇಲೆ ನಿನಗಿರುವ ಗೌರವವೇ ನಿನ್ನ ಭಂಡಾರವಾಗಿದೆ. ನೀನು ಹೀಗೆಯೇ ಮುಂದುವರಿಯುವೆ.


ಯೆಹೋವನು ಹೇಳುವುದೇನೆಂದರೆ, “ಜನರು ನನ್ನನ್ನು ತಿಳಿದುಕೊಳ್ಳಲೆಂದು ಹೀಗಾಯಿತು. ನಾನು ಯಾರೆಂದು ನನ್ನ ಜನರಿಗೆ ಗೊತ್ತಾಗುವದು. ನನ್ನ ಜನರಿಗೆ ನನ್ನ ಹೆಸರಿನ ಪರಿಚಯವಾಗುವದು. ‘ನಾನೇ’ ಎಂಬಾತನಾದ ನಾನೇ ಅವರ ಸಂಗಡ ಮಾತನಾಡುತ್ತಿದ್ದೇನೆ ಎಂದು ಅವರಿಗೆ ಗೊತ್ತಾಗುವದು.”


ಯೆಹೋವನು ಹೇಳುತ್ತಾನೆ, “ಜ್ಞಾನಿಗಳು ತಮ್ಮ ಜ್ಞಾನದ ಬಗ್ಗೆ ಜಂಬಕೊಚ್ಚಿಕೊಳ್ಳಬಾರದು. ಬಲಶಾಲಿಗಳು ತಮ್ಮ ಬಲದ ಬಗ್ಗೆ ಬಡಾಯಿಕೊಚ್ಚಿಕೊಳ್ಳಬಾರದು. ಶ್ರೀಮಂತರು ತಮ್ಮ ಸಂಪತ್ತಿನ ಬಗ್ಗೆ ಜಂಬಕೊಚ್ಚಿಕೊಳ್ಳಬಾರದು.


ಯೆಹೋವನೇ, ನಮ್ಮನ್ನು ತಿರುಗಿ ಸಂತೈಸು. ನಮ್ಮ ಪಾಪಗಳನ್ನು ನಮ್ಮಿಂದ ನಿವಾರಿಸು. ನಮ್ಮೆಲ್ಲಾ ಪಾಪಗಳನ್ನು ಆಳವಾದ ಸಮುದ್ರದ ತಳದಲ್ಲಿ ಹಾಕು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು