Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 31:40 - ಪರಿಶುದ್ದ ಬೈಬಲ್‌

40 ಹೆಣಗಳನ್ನು ಮತ್ತು ಬೂದಿಯನ್ನು ಚೆಲ್ಲುವ ಇಡೀ ಕಣಿವೆ ಪ್ರದೇಶ ಯೆಹೋವನಿಗೆ ಪವಿತ್ರಸ್ಥಳವಾಗುವುದು. ಕಿದ್ರೋನ್ ಹಳ್ಳ, ಪೂರ್ವದಿಕ್ಕಿನ ಕುದುರೆಬಾಗಿಲಿನ ಮೂಲೆ, ಇವುಗಳವರೆಗಿರುವ ಬೆಟ್ಟಪ್ರದೇಶ ಅದರಲ್ಲಿ ಸೇರುವುದು. ಆ ಪ್ರದೇಶವೆಲ್ಲ ಯೆಹೋವನಿಗೆ ಪವಿತ್ರಸ್ಥಳವಾಗುವುದು. ಜೆರುಸಲೇಮ್ ನಗರವು ಇನ್ನುಮೇಲೆ ಎಂದಿಗೂ ಕೆಡವಲ್ಪಡದು; ಹಾಳಾಗದು!”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

40 ಆಗ ಬೂದಿ, ಹೆಣ ಇವುಗಳಿಂದ ಹೊಲಸಾದ ತಗ್ಗೂ ಅಲ್ಲಿಂದ ಕಿದ್ರೋನ್ ಹಳ್ಳ, ಪೂರ್ವದಿಕ್ಕಿನ ಕುದುರೆ ಬಾಗಿಲ ಮೂಲೆ ಇವುಗಳ ವರೆಗಿರುವ ಪ್ರದೇಶವೆಲ್ಲವೂ ಯೆಹೋವನಿಗೆ ಪರಿಶುದ್ಧ ಸ್ಥಾನವಾಗುವವು; ಪಟ್ಟಣವು ಇನ್ನು ಮೇಲೆ ಎಂದಿಗೂ ಕೀಳಲ್ಪಡುವುದಿಲ್ಲ, ಕೆಡವಲ್ಪಡುವುದಿಲ್ಲ” ಎನ್ನುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

40 ಹೆಣ ಹೂಣುವ, ಬೂದಿ ತುಂಬುವ ಕಣಿವೆಯಿಂದ, ಕಿದ್ರೋನ್ ಹಳ್ಳ, ಪೂರ್ವದಿಕ್ಕಿನ ಕುದುರೆ ಬಾಗಿಲಮೂಲೆ, ಇವುಗಳವರೆಗಿರುವ ಪ್ರದೇಶವೆಲ್ಲ ಸರ್ವೇಶ್ವರನಿಗೆ ಪರಿಶುದ್ಧ ಸ್ಥಾನವಾಗುವುದು. ಈ ನಗರ ಇನ್ನೆಂದಿಗೂ ನಿರ್ಮೂಲವಾಗದು, ನಾಶವಾಗದು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

40 ಆಗ ಬೂದಿ ಹೆಣ ಇವುಗಳಿಂದ ಹೊಲಸಾದ ತಗ್ಗೂ ಅಲ್ಲಿಂದ ಕಿದ್ರೋನ್ ಹಳ್ಳ, ಪೂರ್ವದಿಕ್ಕಿನ ಕುದುರೆ ಬಾಗಿಲಮೂಲೆ ಇವುಗಳವರೆಗಿರುವ ಪ್ರದೇಶವೆಲ್ಲವೂ ಯೆಹೋವನಿಗೆ ಪರಿಶುದ್ಧ ಸ್ಥಾನವಾಗುವವು; ಪಟ್ಟಣವು ಇನ್ನು ಮೇಲೆ ಎಂದಿಗೂ ಕೀಳಲ್ಪಡದು, ಕೆಡವಲ್ಪಡದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

40 ಹೆಣ ಹೂಣುವ ಮತ್ತು ಬೂದಿ ತುಂಬುವ ಕಣಿವೆಯಿಂದ, ಕಿದ್ರೋನ್ ಹಳ್ಳ, ಪೂರ್ವದಿಕ್ಕಿನ ಕುದುರೆ ಬಾಗಿಲಮೂಲೆ, ಇವುಗಳವರೆಗಿರುವ ಪ್ರದೇಶವೆಲ್ಲವೂ ಯೆಹೋವ ದೇವರಿಗೆ ಪರಿಶುದ್ಧವಾಗಿರುವುವು. ಈ ಪಟ್ಟಣವು ಇನ್ನೆಂದಿಗೂ ನಿರ್ಮೂಲವಾಗದು, ನಾಶವಾಗದು.”

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 31:40
23 ತಿಳಿವುಗಳ ಹೋಲಿಕೆ  

“ಆಗ ನಾನು ನಿಮ್ಮ ದೇವರಾದ ಯೆಹೋವನು ಎಂದು ಅರಿತುಕೊಳ್ಳುವಿರಿ. ನಾನು ನನ್ನ ಪವಿತ್ರ ಪರ್ವತವಾದ ಚೀಯೋನಿನಲ್ಲಿ ವಾಸಿಸುವೆನು. ಜೆರುಸಲೇಮ್ ಪರಿಶುದ್ಧವಾಗುವದು. ಪರದೇಶಿಗಳು ಇನ್ನು ಮುಂದೆ ಅದನ್ನು ದಾಟಿಹೋಗುವುದಿಲ್ಲ.


ಜನರೆಲ್ಲರೂ ಜೋರಾಗಿ ಅಳುತ್ತಿದ್ದರು. ರಾಜನಾದ ದಾವೀದನು ಕಿದ್ರೋನ್ ಹಳ್ಳವನ್ನು ದಾಟಿಹೋದನು. ನಂತರ ಜನರೆಲ್ಲರೂ ಅರಣ್ಯಕ್ಕೆ ಹೋದರು.


ಯೇಸು ಪ್ರಾರ್ಥಿಸಿದ ಮೇಲೆ ತನ್ನ ಶಿಷ್ಯರೊಂದಿಗೆ ಹೊರಟನು. ಅವರು ಕಿದ್ರೋನ್ ಕಣಿವೆಯನ್ನು ದಾಟಿಹೋದರು. ಅದರ ಮತ್ತೊಂದು ಕಡೆಯಲ್ಲಿ ಆಲಿವ್ ಮರಗಳ ತೋಟವಿತ್ತು. ಯೇಸು ಮತ್ತು ಆತನ ಶಿಷ್ಯರು ಅಲ್ಲಿಗೆ ಹೋದರು.


ಅರಮನೆಗೆ ಹೋಗುವ ದಾರಿಯಲ್ಲಿ ಕುದುರೆ ಬಾಗಿಲಿನ ಹತ್ತಿರ ಸಿಪಾಯಿಗಳು ಆಕೆಯನ್ನು ಸಂಹರಿಸಿದರು.


ಆದ್ದರಿಂದ ಸೈನಿಕರು ಅವಳನ್ನು ಹಿಡಿದುಕೊಂಡು ಹೊರಗೆ ಕರೆದೊಯ್ದರು, ಆಕೆಯು ಕುದುರೆಗಳ ಪ್ರವೇಶದ್ವಾರದ ಮೂಲಕ ಅರಮನೆಗೆ ಹೋದಳು. ಸೈನಿಕರು ಅತಲ್ಯಳನ್ನು ಅಲ್ಲಿ ಕೊಂದುಹಾಕಿದರು.


ಆ ಸಮಯದಲ್ಲಿ ಸಮಸ್ತವೂ ಯೆಹೋವನಿಗೆ ಸೇರಿದ್ದಾಗಿರುವದು. ಕುದುರೆಗಳ ಮೇಲಿರುವ ಜೀನಿನ ಮೇಲೂ ಸರ್ವಶಕ್ತನಾದ “ಯೆಹೋವನಿಗೆ ಇದು ಮೀಸಲಾಗಿರುವದು” ಎಂದು ಬರೆಯಲ್ಪಡುವದು. ಯೆಹೋವನ ಆಲಯದಲ್ಲಿ ಉಪಯೋಗಿಸುವ ಎಲ್ಲಾ ಮಡಕೆಗಳು ಯಜ್ಞವೇದಿಕೆಯ ಮೇಲೆ ಉಪಯೋಗಿಸುವ ಬೋಗುಣಿಗಳಷ್ಟೇ ಮುಖ್ಯವಾಗಿವೆ.


ಯಾಜಕರು ಕುದುರೆಬಾಗಿಲಿನ ಮೇಲಿನ ಭಾಗವನ್ನು ಕಟ್ಟಿದರು. ಪ್ರತಿಯೊಬ್ಬ ಯಾಜಕನು ತನ್ನ ಮನೆ ಮುಂದಿದ್ದ ಭಾಗವನ್ನು ರಿಪೇರಿಮಾಡಿದನು.


ಪೂರ್ವಕಾಲದಲ್ಲಿ, ಯೆಹೂದದ ರಾಜರುಗಳು ಅಹಾಬನ ಕಟ್ಟಡದ ಮಾಳಿಗೆಯ ಮೇಲೆ ಯಜ್ಞವೇದಿಕೆಗಳನ್ನು ನಿರ್ಮಿಸಿದ್ದರು. ರಾಜನಾದ ಮನಸ್ಸೆಯು ದೇವಾಲಯದ ಎರಡು ಪ್ರಾಕಾರಗಳಲ್ಲಿ ಯಜ್ಞವೇದಿಕೆಗಳನ್ನು ನಿರ್ಮಿಸಿದ್ದನು. ಯೋಷೀಯನು ಆ ಯಜ್ಞವೇದಿಕೆಗಳನ್ನೆಲ್ಲ ನಾಶಗೊಳಿಸಿ, ಅವುಗಳ ಚೂರುಗಳನ್ನು ಕಿದ್ರೋನ್ ಕಣಿವೆಗೆ ಎಸೆದನು.


ಯೋಷೀಯನು ಅಶೇರಸ್ತಂಭವನ್ನು ದೇವಾಲಯದಿಂದ ತೆಗೆದುಹಾಕಿದನು. ಅವನು ಅಶೇರಸ್ತಂಭವನ್ನು ನಗರದ ಹೊರವಲಯದ ಕಿದ್ರೋನ್ ಕಣಿವೆಗೆ ತೆಗೆದುಕೊಂಡು ಹೋಗಿ ಅದನ್ನು ಅಲ್ಲಿ ಸುಟ್ಟುಹಾಕಿದನು. ನಂತರ ಅವನು ಅದನ್ನು ಪುಡಿಪುಡಿ ಮಾಡಿಸಿ ಧೂಳಿನಲ್ಲಿ ಬೆರಸಿ ಸಾಮಾನ್ಯ ಜನರ ಸ್ಮಶಾನದಲ್ಲಿ ಆ ಧೂಳನ್ನು ಚೆಲ್ಲಿದನು.


“ನಗರದ ಸುತ್ತಳತೆಯು ಹದಿನೆಂಟು ಸಾವಿರ ಮೊಳ. ಇಂದಿನಿಂದ ಈ ನಗರದ ಹೆಸರು ‘ಯೆಹೋವನು ಅಲ್ಲಿದ್ದಾನೆ.’”


ನಾನು ಇಸ್ರೇಲ್ ಜನಾಂಗದವರ ಮೇಲೆ ನನ್ನ ಆತ್ಮವನ್ನು ಸುರಿಸುವೆನು. ಅನಂತರ ನಾನು ಎಂದಿಗೂ ಅವರಿಗೆ ವಿಮುಖನಾಗಿರುವದಿಲ್ಲ.” ಇದು ನನ್ನ ಒಡೆಯನಾದ ಯೆಹೋವನ ನುಡಿ.


ನಾನು ನನ್ನ ಸೇವಕನಾದ ಯಾಕೋಬನಿಗೆ ಕೊಟ್ಟಿರುವ ದೇಶದಲ್ಲಿ ಅವರು ವಾಸಿಸುವರು. ನಿಮ್ಮ ಪೂರ್ವಿಕರು ಆ ಪ್ರಾಂತ್ಯದಲ್ಲಿ ವಾಸವಾಗಿದ್ದರು. ನನ್ನ ಜನರು ಅಲ್ಲಿಯೇ ವಾಸಮಾಡುವರು. ಅವರೂ ಅವರ ಮಕ್ಕಳೂ ಮೊಮ್ಮಕ್ಕಳೂ ಅಲ್ಲಿ ನಿತ್ಯಕಾಲಕ್ಕೂ ಜೀವಿಸುವರು. ನನ್ನ ಸೇವಕನಾದ ದಾವೀದನು ಅವರ ನಿತ್ಯಕಾಲದ ರಾಜನು.


ಆ ಬಯಲಿನ ನೆಲದ ಮೇಲೆ ಅನೇಕಾನೇಕ ಒಣ ಎಲುಬುಗಳು ಬಿದ್ದುಕೊಂಡಿದ್ದವು. ಯೆಹೋವನು ನನ್ನನ್ನು ಆ ಎಲುಬುಗಳ ನಡುವೆ ನಡೆಯುವಂತೆ ಮಾಡಿದನು. ಆ ಎಲುಬುಗಳು ತೀರಾ ಒಣಗಿಹೋಗಿರುವುದನ್ನು ನಾನು ನೋಡಿದೆನು.


“‘ಬಾಬಿಲೋನಿನ ರಾಜನು ಜೆರುಸಲೇಮ್ ನಗರವನ್ನು ಸ್ವಾಧೀನಪಡಿಸಿಕೊಳ್ಳುವನು. ಈ ಪಟ್ಟಣವನ್ನು ವಶಪಡಿಸಿಕೊಳ್ಳಲು ಅವನು ಖಡ್ಗ, ಕ್ಷಾಮ, ಭಯಂಕರವಾದ ವ್ಯಾಧಿಗಳನ್ನು ಬಳಸಿಕೊಳ್ಳುವನು’ ಎಂದು ನೀವು ಹೇಳುತ್ತಿದ್ದೀರಿ. ಆದರೆ ಇಸ್ರೇಲರ ದೇವರಾದ ಯೆಹೋವನು ಹೀಗೆ ಹೇಳುತ್ತಾನೆ:


ಒಮ್ಮೆ ನಾನು ಒಂದು ಜನಾಂಗವನ್ನಾಗಲಿ ಅಥವಾ ರಾಜ್ಯವನ್ನಾಗಲಿ ಕುರಿತು ಮಾತನಾಡುವಾಗ ಆ ಜನಾಂಗವನ್ನು ನಾನು ಖಂಡಿಸುವೆನೆಂದು ಮತ್ತು ಆ ಜನಾಂಗವನ್ನು ನಾನು ನಾಶಪಡಿಸುವೆನೆಂದು ಹೇಳಬಹುದು.


ಜೆರುಸಲೇಮಿನ ಜನರು ಸೂರ್ಯನನ್ನು, ಚಂದ್ರನನ್ನು, ನಕ್ಷತ್ರಗಣಗಳನ್ನು ಪ್ರೀತಿಸಿ, ಅನುಸರಿಸಿ, ವಿಚಾರಿಸಿ, ಪೂಜಿಸಿದ್ದರಿಂದ ಅವರ ಎಲುಬುಗಳನ್ನು ಅವುಗಳ ಕೆಳಗೆ ಭೂಮಿಯ ಮೇಲೆ ಹರಡುವರು. ಯಾರೊಬ್ಬರೂ ಆ ಎಲುಬುಗಳನ್ನು ಪುನಃ ಒಂದೆಡೆ ಸೇರಿಸಿ ಹೂಳುವುದಿಲ್ಲ. ಆ ಎಲುಬುಗಳು ಭೂಮಿಯ ಮೇಲೆ ಎಸೆದ ಸಗಣಿಯಂತಾಗುವವು.


ನಿನ್ನ ದೇವರೂ ಒಡೆಯನೂ ಆಗಿರುವ ಯೆಹೋವನು ತನ್ನ ಜನರಿಗಾಗಿ ಯುದ್ಧ ಮಾಡುವನು. ಅವನು ನಿನಗೆ ಹೇಳುವುದೇನೆಂದರೆ, “ಇಗೋ, ನಾನು ನಿನ್ನಿಂದ ವಿಷದ ಪಾತ್ರೆಯನ್ನು (ಶಿಕ್ಷೆ) ತೆಗೆದುಬಿಡುತ್ತೇನೆ. ಇನ್ನು ಮುಂದೆ ನನ್ನ ಸಿಟ್ಟಿನಿಂದ ನೀನು ಶಿಕ್ಷಿಸಲ್ಪಡುವದಿಲ್ಲ.


ಕಿತ್ತುಹಾಕಲು, ಕೆಡವಲು, ನಾಶಪಡಿಸಲು, ಹಾಳುಮಾಡಲು, ಕಟ್ಟಲು, ನೆಡಲು, ಜನಾಂಗಗಳ ಮೇಲೂ ರಾಜ್ಯಗಳ ಮೇಲೂ ನಿನ್ನನ್ನು ಈ ದಿನ ನೇಮಿಸಿದ್ದೇನೆ” ಅಂದನು.


ದೇವರೇ, ನಿನ್ನ ಆಲಯದಲ್ಲಿ ನಿನ್ನ ಶಾಶ್ವತ ಪ್ರೀತಿಯ ಕುರಿತು ಧ್ಯಾನಿಸುವೆವು.


ಜನರು ಅಲ್ಲಿಗೆ ವಾಸಿಸಲು ಹೋಗುವರು. ಇನ್ನು ಮುಂದೆ ಯಾವ ಶತ್ರುವೂ ಅವರನ್ನು ನಾಶಮಾಡಲು ಬರುವುದಿಲ್ಲ. ಜೆರುಸಲೇಮ್ ಸುರಕ್ಷಿತವಾಗಿರುವದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು