ಯೆರೆಮೀಯ 31:7 - ಪರಿಶುದ್ದ ಬೈಬಲ್7 ಯೆಹೋವನು ಹೀಗೆಂದನು: “ಸಂತೋಷದಿಂದಿರಿ, ಯಾಕೋಬಿಗೋಸ್ಕರ ಹಾಡಿರಿ. ಮಹಾ ಜನಾಂಗವಾದ ಇಸ್ರೇಲಿಗೋಸ್ಕರ ಹರ್ಷಧ್ವನಿ ಮಾಡಿರಿ. ಸ್ತೋತ್ರಗೀತೆಗಳನ್ನು ಹಾಡಿರಿ. ‘ಯೆಹೋವನು ತನ್ನ ಜನರನ್ನು ರಕ್ಷಿಸಿದನು. ಇಸ್ರೇಲ್ ಜನಾಂಗದಲ್ಲಿ ಅಳಿದುಳಿದ ಜನರನ್ನು ಆತನು ರಕ್ಷಿಸಿದನು’ ಎಂದು ಕೂಗಿರಿ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20197 ಯೆಹೋವನು ಇಂತೆನ್ನುತ್ತಾನೆ, “ಯಾಕೋಬಿನ ನಿಮಿತ್ತ ಹರ್ಷಧ್ವನಿಗೈಯಿರಿ, ಜನಾಂಗಗಳ ಶಿರೋಮಣಿಯ ವಿಷಯದಲ್ಲಿ ಕೇಕೆಹಾಕಿರಿ. ಯೆಹೋವನೇ, ಇಸ್ರಾಯೇಲಿನಲ್ಲಿ ಉಳಿದ ನಿನ್ನ ಜನವನ್ನು ರಕ್ಷಿಸು ಎಂದು ಘೋಷಿಸಿ ಸ್ತುತಿಸಿರಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)7 ಸರ್ವೇಶ್ವರ ಹೀಗೆನ್ನುತ್ತಾರೆ: “ಯಕೋಬನನ್ನು ಕುರಿತು ಹರ್ಷಧ್ವನಿಗೈಯಿರಿ ಜನಾಂಗಗಳಾ ಶಿರೋಮಣಿಗೆ ಜೈಕಾರಮಾಡಿರಿ. ‘ಸರ್ವೇಶ್ವರ ಆಳಿದುಳಿದಾ ಇಸ್ರಯೇಲರನ್ನು ರಕ್ಷಿಸಿಹನು’ ಎಂದು ಘೋಷಿಸುತ್ತಾ ಸ್ತುತಿಸಿರಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)7 ಯೆಹೋವನು ಇಂತೆನ್ನುತ್ತಾನೆ - ಯಾಕೋಬಿನ ನಿವಿುತ್ತ ಹರ್ಷಧ್ವನಿಗೈಯಿರಿ, ಜನಾಂಗಗಳ ಶಿರೋಮಣಿಯ ವಿಷಯದಲ್ಲಿ ಕೇಕೆಹಾಕಿರಿ; ಯೆಹೋವನೇ, ಇಸ್ರಾಯೇಲಿನ ಶೇಷವಾದ ನಿನ್ನ ಜನವನ್ನು ರಕ್ಷಿಸು ಎಂದು ಘೋಷಿಸಿ ಸ್ತುತಿಸಿರಿ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ7 ಏಕೆಂದರೆ ಯೆಹೋವ ದೇವರು ಹೀಗೆ ಹೇಳುತ್ತಾರೆ, “ಯಾಕೋಬನ ವಿಷಯ ಸಂತೋಷದಿಂದ ಹಾಡಿ, ಮೂಖ್ಯವಾದ ಜನಾಂಗಗಳೊಳಗೆ ಆರ್ಭಟಿಸಿರಿ. ಸಾರಿರಿ. ಸ್ತುತಿಸಿರಿ. ‘ಯೆಹೋವ ದೇವರೇ, ನಿನ್ನ ಜನರನ್ನೂ, ಇಸ್ರಾಯೇಲಿನ ಉಳಿದವರನ್ನೂ ರಕ್ಷಿಸು,’ ಎಂದು ಹೇಳಿರಿ. ಅಧ್ಯಾಯವನ್ನು ನೋಡಿ |
ನನ್ನ ಜೀವದಾಣೆ, ಮೋವಾಬ್ಯರೂ ಅಮ್ಮೋನ್ಯರೂ ಸೊದೋಮ್ ಗೊಮೋರದವರಂತೆ ನಾಶವಾಗುವರು. ನಾನು ಸರ್ವಶಕ್ತನಾದ ಇಸ್ರೇಲರ ದೇವರಾಗಿರುವೆನು. ನಾನು ವಾಗ್ದಾನ ಮಾಡುವದೇನೆಂದರೆ, ಆ ರಾಜ್ಯಗಳು ಸಂಪೂರ್ಣವಾಗಿ ನಾಶವಾಗುವವು. ಅವರ ಭೂಮಿಯು ಕಳೆಗಳಿಂದ ತುಂಬಿಹೋಗುವದು. ಅದು ಮೃತ್ಯುಸಮುದ್ರದ ಉಪ್ಪಿನಿಂದ ತುಂಬಿಹೋದಂತಿರುವದು. ನನ್ನ ಜನರಲ್ಲಿ ಉಳಿದವರು ಅವರ ದೇಶವನ್ನೂ ಅಲ್ಲಿ ಉಳಿದಿರುವ ವಸ್ತುಗಳನ್ನೂ ತಮ್ಮ ವಶಮಾಡಿಕೊಳ್ಳುವರು.”
ಇಸ್ರೇಲಿನ ಜನರು ಚೀಯೋನ್ ಶಿಖರಕ್ಕೆ ಬರುವರು; ಸಂತೋಷದಿಂದ ನಲಿದಾಡುವರು. ದೇವರು ಅವರಿಗೆ ಅನುಗ್ರಹಿಸುವ ಎಲ್ಲಾ ಶ್ರೇಷ್ಠವಾದ ವಸ್ತುಗಳಿಂದ ಸಂತೋಷಚಿತ್ತರಾದ ಅವರ ಮುಖಗಳು ಪ್ರಕಾಶಮಾನವಾಗುವವು. ಯೆಹೋವನು ಅವರಿಗೆ ಧಾನ್ಯ, ಹೊಸ ದ್ರಾಕ್ಷಾರಸ, ಎಣ್ಣೆ, ಕುರಿಮರಿಗಳು ಮತ್ತು ಹಸುಗಳನ್ನು ದಯಪಾಲಿಸುವನು. ಅವರು ಸಾಕಷ್ಟು ನೀರಿರುವ ತೋಟದಂತೆ ಲವಲವಿಕೆಯಿಂದ ಇರುವರು. ಇಸ್ರೇಲರು ಇನ್ನು ಯಾವ ತೊಂದರೆಗೂ ಒಳಗಾಗುವುದಿಲ್ಲ.