Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 32:10 - ಪರಿಶುದ್ದ ಬೈಬಲ್‌

10 ನಾನು ಕ್ರಯಪತ್ರಕ್ಕೆ ಸಹಿ ಹಾಕಿದೆನು. ಕ್ರಯಪತ್ರದ ಒಂದು ಪ್ರತಿಗೆ ರುಜು ಮಾಡಿಸಿದೆನು. ಇದಕ್ಕೆ ಸಾಕ್ಷಿಯಾಗಿ ಕೆಲಜನರನ್ನು ಕರೆಸಿದೆನು. ನಾನು ಬೆಳ್ಳಿಯನ್ನು ತಕ್ಕಡಿಯಲ್ಲಿ ತೂಕಹಾಕಿ ಕೊಟ್ಟೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 ಪತ್ರಕ್ಕೆ ಸಹಿ ಹಾಕಿ ಮುಚ್ಚಿ ಆ ಮುಚ್ಚಳಕ್ಕೆ ಸಾಕ್ಷಿಗಳನ್ನು ಹಾಕಿಸಿ, ತಕ್ಕಡಿಯಲ್ಲಿ ಆ ಬೆಳ್ಳಿಯನ್ನು ತೂಗಿ ಅವನಿಗೆ ಕೊಟ್ಟೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

10 ಪತ್ರಕ್ಕೆ ರುಜುಹಾಕಿ, ಮುದ್ರೆ ಒತ್ತಿ, ಸಾಕ್ಷಿಗಳನ್ನು ಹಾಕಿಸಿ, ತಕ್ಕಡಿಯಲ್ಲಿ ಆ ಬೆಳ್ಳಿಯನ್ನು ತೂಗಿ ಅವನಿಗೆ ಕೊಟ್ಟೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

10 ಪತ್ರಕ್ಕೆ ರುಜು ಹಾಕಿ ಮುಚ್ಚಿ [ಮುಚ್ಚಳಕ್ಕೆ] ಸಾಕ್ಷಿಗಳನ್ನು ಹಾಕಿಸಿ ತ್ರಾಸಿನಲ್ಲಿ ಆ ಬೆಳ್ಳಿಯನ್ನು ತೂಗಿ ಅವನಿಗೆ ಕೊಟ್ಟೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

10 ನಾನು ಪತ್ರದಲ್ಲಿ ಬರೆದು, ಅದಕ್ಕೆ ಮುದ್ರೆಹಾಕಿ, ಸಾಕ್ಷಿಗಳನ್ನಿಟ್ಟು, ಬೆಳ್ಳಿಯನ್ನು ತ್ರಾಸಿನಲ್ಲಿ ತೂಕಮಾಡಿದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 32:10
23 ತಿಳಿವುಗಳ ಹೋಲಿಕೆ  

ಜನರು ಹಣ ಕೊಟ್ಟು ಭೂಮಿಯನ್ನು ಕೊಂಡುಕೊಳ್ಳುವರು. ಅವರು ಕರಾರುಪತ್ರಗಳಿಗೆ ಸಹಿಹಾಕುವರು. ಜನರು ಕ್ರಯಪತ್ರಗಳಿಗೆ ಸಹಿ ಹಾಕುವದನ್ನು ಬೇರೆಯವರು ನೋಡುವರು. ಬೆನ್ಯಾಮೀನ್ ಕುಲದವರು ವಾಸಿಸುವ ಪ್ರದೇಶದಲ್ಲಿ ಜನರು ಪುನಃ ಹೊಲಗಳನ್ನು ಕೊಂಡುಕೊಳ್ಳುವರು. ಜೆರುಸಲೇಮಿನ ಸುತ್ತಲಿನ ಪ್ರದೇಶದಲ್ಲಿ ಅವರು ಹೊಲಗಳನ್ನು ಕೊಂಡುಕೊಳ್ಳುವರು. ಅವರು ಯೆಹೂದ ಪ್ರದೇಶದ ಊರುಗಳಲ್ಲಿಯೂ ಬೆಟ್ಟಪ್ರದೇಶದಲ್ಲಿಯೂ ಪಶ್ಚಿಮದ ಇಳಿಜಾರು ಪ್ರದೇಶದಲ್ಲಿಯೂ ದಕ್ಷಿಣದ ಮರಳುಗಾಡಿನಲ್ಲಿಯೂ ಹೊಲಗಳನ್ನು ಕೊಂಡುಕೊಳ್ಳುವರು. ನಾನು ನಿಮ್ಮ ಜನರನ್ನು ನಿಮ್ಮ ಪ್ರದೇಶಕ್ಕೆ ಪುನಃ ಕರೆದುಕೊಂಡು ಬರುವದರಿಂದ ಹೀಗಾಗುವುದು.” ಇದು ಯೆಹೋವನ ನುಡಿ.


ನಾನು ಅವುಗಳನ್ನು ಬಾರೂಕನ ಕೈಗೆ ಕೊಟ್ಟೆನು. ಬಾರೂಕನು ನೇರೀಯನ ಮಗನಾಗಿದ್ದನು. ನೇರೀಯನು ಮಹ್ಸೇಮನ ಮಗನಾಗಿದ್ದನು. ಮೊಹರು ಮಾಡಿದ ಕ್ರಯಪತ್ರದಲ್ಲಿ ನಾನು ಹೊಲವನ್ನು ಕ್ರಯಕ್ಕೆ ಕೊಂಡ ಎಲ್ಲಾ ಷರತ್ತುಗಳಿದ್ದವು. ನನ್ನ ಚಿಕ್ಕಪ್ಪನ ಮಗನಾದ ಹನಮೇಲನು ಮತ್ತು ಉಳಿದ ಸಾಕ್ಷಿಗಳು ಅಲ್ಲಿದ್ದಾಗಲೇ ನಾನು ಈ ಕ್ರಯಪತ್ರವನ್ನು ಬಾರೂಕನ ಕೈಗೆ ಕೊಟ್ಟೆನು. ಆ ಸಾಕ್ಷಿಗಳು ಸಹ ಈ ಕ್ರಯಪತ್ರಕ್ಕೆ ಸಹಿಹಾಕಿದ್ದರು. ಆ ಅಂಗಳದಲ್ಲಿ ಕುಳಿತ ಹಲವಾರು ಜನ ಯೆಹೂದ್ಯರು ನಾನು ಬಾರೂಕನ ಕೈಗೆ ಆ ಕ್ರಯಪತ್ರ ಕೊಡುವದನ್ನು ನೋಡಿದರು.


“ನನ್ನ ಒಡೆಯನಾದ ಯೆಹೋವನೇ, ಆ ದುರ್ಬಟನೆಗಳೆಲ್ಲಾ ಸಂಭವಿಸುತ್ತಿವೆ. ಆದರೆ ಈಗ ನೀನು ‘ಯೆರೆಮೀಯನೇ, ಬೆಳ್ಳಿಯನ್ನು ಕೊಟ್ಟು ಹೊಲವನ್ನು ಕೊಂಡುಕೋ ಮತ್ತು ಈ ಖರೀದಿಗೆ ಸಾಕ್ಷಿಯಾಗಿ ಕೆಲವು ಜನರನ್ನು ಆರಿಸಿಕೋ’ ಎಂದು ಹೇಳುತ್ತಿರುವಿಯಲ್ಲ. ಬಾಬಿಲೋನಿನ ಸೈನ್ಯವು ನಗರವನ್ನು ಸ್ವಾಧೀನಪಡಿಸಿಕೊಳ್ಳಲು ಸಿದ್ಧವಾಗಿ ನಿಂತಿರುವಾಗ ನೀನು ಇದನ್ನು ಹೇಳುತ್ತಿರುವಿಯಲ್ಲ, ಏಕೆ? ಏಕೆ ನಾನು ಹಣವನ್ನು ಹೀಗೆ ವ್ಯರ್ಥವಾಗಿ ಕಳೆದುಕೊಳ್ಳಬೇಕು?”


“ಒಬ್ಬನು: ‘ನಾನು ಯೆಹೋವನಿಗೆ ಸೇರಿದವನು’ ಎಂದು ಹೇಳುತ್ತಾನೆ. ಇನ್ನೊಬ್ಬನು ಯಾಕೋಬನ ಹೆಸರನ್ನು ಬಳಸುವನು. ಮತ್ತೊಬ್ಬನು, ‘ನಾನು ಯೆಹೋವನವನು’ ಎಂದು ಸಹಿ ಹಾಕುವನು. ಮತ್ತೊಬ್ಬನು, ನಾನು ‘ಇಸ್ರೇಲನು’ ಎಂಬ ಹೆಸರನ್ನು ಬಳಸಿಕೊಳ್ಳುವನು.”


ನನ್ನ ಪಾಪಗಳನ್ನು ಚೀಲದಲ್ಲಿಟ್ಟು ಮುದ್ರಿಸಿ ದೂರಕ್ಕೆ ಎಸೆದುಬಿಡುವೆ.


“ಯೆಹೋವನು ಹೀಗೆನ್ನುತ್ತಾನೆ: ‘ಆ ಶಿಕ್ಷೆಯನ್ನು ನಾನು ಜೋಪಾನವಾಗಿಟ್ಟಿದ್ದೇನೆ. ಅದನ್ನು ನಾನು ನನ್ನ ಉಗ್ರಾಣದಲ್ಲಿ ಸುರಕ್ಷಿತವಾಗಿರಿಸಿದ್ದೇನೆ.


ಭೂಮಿಯ ಮೇಲಿನ ಹುಲ್ಲಿಗಾಗಲಿ ಸಸ್ಯಕ್ಕಾಗಲಿ ಮರಕ್ಕಾಗಲಿ ಹಾನಿ ಮಾಡದಂತೆ ಆ ಮಿಡತೆಗಳಿಗೆ ತಿಳಿಸಲಾಯಿತು. ತಮ್ಮ ಹಣೆಗಳ ಮೇಲೆ ದೇವರ ಮುದ್ರೆಯಿಲ್ಲದ ಜನರನ್ನು ಹಿಂಸಿಸಲು ಅವುಗಳಿಗೆ ತಿಳಿಸಲಾಯಿತು.


ನಂತರ ಬೇರೊಬ್ಬ ದೇವದೂತನು ಪೂರ್ವದಿಕ್ಕಿನ ಕಡೆಯಿಂದ ಬರುತ್ತಿರುವುದನ್ನು ನಾನು ನೋಡಿದೆನು. ಜೀವಸ್ವರೂಪನಾದ ದೇವರ ಮುದ್ರೆಯು ಈ ದೇವದೂತನ ಬಳಿಯಿತ್ತು. ಈ ದೇವದೂತನು ನಾಲ್ಕುಮಂದಿ ದೇವದೂತರನ್ನು ಗಟ್ಟಿಯಾದ ಧ್ವನಿಯಲ್ಲಿ ಕರೆದನು. ಭೂಮಿಗೆ ಮತ್ತು ಸಮುದ್ರಕ್ಕೆ ತೊಂದರೆ ಮಾಡುವುದಕ್ಕೆ ಅಧಿಕಾರವನ್ನು ದೇವರು ಈ ನಾಲ್ವರು ದೇವದೂತರಿಗೆ ನೀಡಿದ್ದನು. ಆ ದೇವದೂತನು ಈ ನಾಲ್ವರು ದೇವದೂತರಿಗೆ,


ಪವಿತ್ರಾತ್ಮನನ್ನು ದುಃಖಪಡಿಸಬೇಡಿ. ನೀವು ದೇವರಿಗೆ ಸೇರಿದವರೆಂಬುದಕ್ಕೆ ಆತನೇ ದೇವರ ಪ್ರಮಾಣವಾಗಿದ್ದಾನೆ. ಸೂಕ್ತ ಸಮಯದಲ್ಲಿ ನಿಮ್ಮನ್ನು ಬಿಡುಗಡೆ ಮಾಡುತ್ತೇನೆ ಎಂಬುದನ್ನು ತೋರಿಸುವುದಕ್ಕಾಗಿಯೇ ದೇವರು ನಿಮಗೆ ಆತನನ್ನು ಕೊಟ್ಟನು.


ಇದು ನಿಮಗೂ ಅನ್ವಯಿಸುತ್ತದೆ. ನೀವು ಸತ್ಯ ಬೋಧನೆಯ ಬಗ್ಗೆ ಅಂದರೆ ನಿಮ್ಮ ರಕ್ಷಣೆಯ ಕುರಿತಾದ ಸುವಾರ್ತೆಯ ಬಗ್ಗೆ ಕೇಳಿದಾಗ ಕ್ರಿಸ್ತನಲ್ಲಿ ನಂಬಿಕೆಯಿಟ್ಟಿರಿ. ದೇವರು ತನ್ನ ವಾಗ್ದಾನಕ್ಕನುಸಾರವಾಗಿ ನಿಮಗೆ ಪವಿತ್ರಾತ್ಮನನ್ನು ದಯಪಾಲಿಸುವುದರ ಮೂಲಕ ನಿಮ್ಮ ಮೇಲೆ ತನ್ನ ವಿಶೇಷವಾದ ಮುದ್ರೆಯನ್ನು ಹಾಕಿದನು.


ನಾವು ಆತನವರೆಂಬುದನ್ನು ತೋರಿಸುವುದಕ್ಕಾಗಿ ಆತನು ನಮ್ಮ ಮೇಲೆ ಮುದ್ರೆಯನ್ನು ಹಾಕಿದ್ದಾನೆ. ಆತನು ತನ್ನ ಪವಿತ್ರಾತ್ಮನನ್ನು ನಮ್ಮ ಹೃದಯಗಳಲ್ಲಿ ನೆಲೆಗೊಳಿಸಿದ್ದಾನೆ. ಆತನು ನಮಗೆ ಮಾಡಿದ ವಾಗ್ದಾನವನ್ನು ನೆರವೇರಿಸುತ್ತಾನೆ ಎಂಬುದಕ್ಕೆ ಪವಿತ್ರಾತ್ಮನೇ ನಮಗೆ ಆಧಾರವಾಗಿದ್ದಾನೆ.


ಈ ಲೋಕದ ಆಹಾರವು ಕೆಟ್ಟುಹೋಗುತ್ತದೆ ಮತ್ತು ಹಾಳಾಗುತ್ತದೆ. ಆದ್ದರಿಂದ ಅಂಥ ಆಹಾರವನ್ನು ಪಡೆದುಕೊಳ್ಳಲು ದುಡಿಯಬೇಡಿರಿ. ಆದರೆ ಎಂದಿಗೂ ಕೆಟ್ಟುಹೋಗದಂಥ ಮತ್ತು ನಿಮಗೆ ನಿತ್ಯಜೀವವನ್ನು ಕೊಡುವಂಥ ಆಹಾರವನ್ನು ಪಡೆದುಕೊಳ್ಳಲು ದುಡಿಯಿರಿ. ಮನುಷ್ಯಕುಮಾರನು ಆ ಆಹಾರವನ್ನು ನಿಮಗೆ ಕೊಡುವನು. ತಂದೆಯಾದ ದೇವರು ಆತನ ಮೇಲೆ ತನ್ನ ಅಧಿಕಾರದ ಮುದ್ರೆಯನ್ನು ಒತ್ತಿದ್ದಾನೆ” ಎಂದು ಹೇಳಿದನು.


ಆತನ ಸಾಕ್ಷಿಯನ್ನು ಸ್ವೀಕರಿಸಿಕೊಳ್ಳುವ ವ್ಯಕ್ತಿಯು ದೇವರೇ ಸತ್ಯವಂತನೆಂದು ನಿರೂಪಿಸುತ್ತಾನೆ.


“ಆಗಿನ ಕಾಲದ ಮತ್ತು ಪರಿಸ್ಥಿತಿಯ ಬಗ್ಗೆ ಕಂಡ ದರ್ಶನಗಳು ನಿಜವಾಗುವವು. ಈ ದರ್ಶನ ಗುಟ್ಟಾಗಿರಲಿ. ಅದೆಲ್ಲ ನಡೆಯಬೇಕಾದರೆ ಇನ್ನೂ ಬಹಳ ಕಾಲಬೇಕು” ಎಂದು ಹೇಳಿದನು.


ಎಲ್ಲಾ ಜನರಿಗೆ ಕಾಣುವಂತೆ ಇದನ್ನು ಹಲಗೆಯ ಮೇಲೆ ಬರೆ; ಪುಸ್ತಕದಲ್ಲೂ ಬರೆ. ಕೊನೆಯ ದಿವಸಗಳಿಗಾಗಿ ಇದನ್ನು ಬರೆ. ಬಹುಕಾಲದ ನಂತರ ಇದು ಸಂಭವಿಸುವದು.


ನನ್ನನ್ನು ನಿನ್ನ ಹೃದಯದ ಮೇಲೆ ಮುದ್ರೆಯನ್ನಾಗಿಯೂ, ನಿನ್ನ ಬೆರಳಿನಲ್ಲಿರುವ ಮುದ್ರೆಯೊತ್ತಿದ ಉಂಗುರದಂತೆಯೂ ಇಟ್ಟುಕೋ. ಪ್ರೀತಿಯು ಮರಣದಷ್ಟೇ ಬಲಿಷ್ಠ; ಕಾಮೋದ್ರೇಕವು ಸಮಾಧಿಯಷ್ಟೇ ಬಲಿಷ್ಠ. ಅದರ ಜ್ವಾಲೆಗಳು ಧಗಧಗಿಸುವ ಬೆಂಕಿ. ಅದು ಅತಿ ತೀಕ್ಷ್ಣವಾದ ಅಗ್ನಿಯೇ.


ಅಂತೆಯೇ ಅವರು ಹೋಗಿ ಭೂಮಿಯನ್ನು ಚೆನ್ನಾಗಿ ಪರಿಶೀಲಿಸಿದರು; ಯೆಹೋಶುವನಿಗಾಗಿ ನಕ್ಷೆಗಳನ್ನು ತೆಗೆದರು. ಅವರು ಪ್ರತಿಯೊಂದು ಹಳ್ಳಿಯನ್ನು ಪರಿಶೀಲಿಸಿದರು. ಭೂಮಿಯನ್ನು ಏಳು ಭಾಗಗಳಾಗಿ ವಿಂಗಡಿಸಿದರು. ಅವರು ನಕ್ಷೆಗಳನ್ನು ತೆಗೆದು ಯೆಹೋಶುವನ ಬಳಿಗೆ ಶೀಲೋವಿಗೆ ಹಿಂತಿರುಗಿ ಹೋದರು.


ಅವರು ಹೋಗಿ, ಸಮಾಧಿಗೆ ಮುದ್ರೆ ಹಾಕಿ, ಸೈನಿಕರನ್ನು ಕಾವಲಿರಿಸಿ, ಸಮಾಧಿಯನ್ನು ಸುಭದ್ರಪಡಿಸಿದರು.


ಅಬ್ರಹಾಮನು ಎಫ್ರೋನನ ಮಾತಿಗೆ ಒಪ್ಪಿದನು. ಅಬ್ರಹಾಮನು ಆ ಸ್ಥಳಕ್ಕಾಗಿ ನಾನೂರು ಬೆಳ್ಳಿ ರೂಪಾಯಿಗಳನ್ನು ಹಿತ್ತಿಯರ ಎದುರಿನಲ್ಲಿ ಹೇಳಿದ ಎಫ್ರೋನನಿಗೆ ಎಣಿಸಿಕೊಟ್ಟನು.


ಅಬ್ರಹಾಮನು ಆ ಜಮೀನನ್ನು ಮತ್ತು ಅದರಲ್ಲಿದ್ದ ಗವಿಯನ್ನು ಹಿತ್ತಿಯರಿಂದ ಕೊಂಡುಕೊಂಡನು. ಅದು ಅವನ ಆಸ್ತಿಯಾಯಿತು. ಅವನು ಅದನ್ನು ಸಮಾಧಿ ಸ್ಥಳವನ್ನಾಗಿ ಉಪಯೋಗಿಸಿದನು.


ಬೋವಜನು ನಗರದ್ವಾರದ ಬಳಿಯಲ್ಲಿ ಕುಳಿತುಕೊಂಡನು. ತಾನು ಹೇಳಿದ್ದ ಸಮೀಪಬಂಧುವು ಅಲ್ಲಿಂದ ಹಾದು ಹೋಗುವವರೆಗೂ ಅವನು ಅಲ್ಲಿಯೇ ಕುಳಿತಿದ್ದನು. ಅವನನ್ನು ಕಂಡ ಬೋವಜನು, “ಸ್ನೇಹಿತನೇ ಇಲ್ಲಿ ಬಾ, ಇಲ್ಲಿ ಕುಳಿತುಕೋ” ಎಂದು ಕರೆದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು