Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 32:12 - ಪರಿಶುದ್ದ ಬೈಬಲ್‌

12 ನಾನು ಅವುಗಳನ್ನು ಬಾರೂಕನ ಕೈಗೆ ಕೊಟ್ಟೆನು. ಬಾರೂಕನು ನೇರೀಯನ ಮಗನಾಗಿದ್ದನು. ನೇರೀಯನು ಮಹ್ಸೇಮನ ಮಗನಾಗಿದ್ದನು. ಮೊಹರು ಮಾಡಿದ ಕ್ರಯಪತ್ರದಲ್ಲಿ ನಾನು ಹೊಲವನ್ನು ಕ್ರಯಕ್ಕೆ ಕೊಂಡ ಎಲ್ಲಾ ಷರತ್ತುಗಳಿದ್ದವು. ನನ್ನ ಚಿಕ್ಕಪ್ಪನ ಮಗನಾದ ಹನಮೇಲನು ಮತ್ತು ಉಳಿದ ಸಾಕ್ಷಿಗಳು ಅಲ್ಲಿದ್ದಾಗಲೇ ನಾನು ಈ ಕ್ರಯಪತ್ರವನ್ನು ಬಾರೂಕನ ಕೈಗೆ ಕೊಟ್ಟೆನು. ಆ ಸಾಕ್ಷಿಗಳು ಸಹ ಈ ಕ್ರಯಪತ್ರಕ್ಕೆ ಸಹಿಹಾಕಿದ್ದರು. ಆ ಅಂಗಳದಲ್ಲಿ ಕುಳಿತ ಹಲವಾರು ಜನ ಯೆಹೂದ್ಯರು ನಾನು ಬಾರೂಕನ ಕೈಗೆ ಆ ಕ್ರಯಪತ್ರ ಕೊಡುವದನ್ನು ನೋಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

12 ಅದನ್ನು ನನ್ನ ಚಿಕ್ಕಪ್ಪನ ಮಗನಾದ ಹನಮೇಲನ ಮುಂದೆ ಕ್ರಯಪತ್ರಕ್ಕೆ ಸಹಿಮಾಡಿದ ಸಾಕ್ಷಿಗಳ ಸಮಕ್ಷಮದಲ್ಲಿ, ಕಾರಾಗೃಹದ ಅಂಗಳದಲ್ಲಿ ಕುಳಿತಿದ್ದ ಎಲ್ಲಾ ಯೆಹೂದ್ಯರ ಎದುರಿನಲ್ಲಿ ಆ ಕ್ರಯಪತ್ರವನ್ನು ಮಹ್ಸೇಮನ ಮೊಮ್ಮಗನೂ ನೇರೀಯನ ಮಗನೂ ಆದ ಬಾರೂಕನ ಕೈಗೆ ಕೊಟ್ಟೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

12 ಮಹ್ಸೇಮನ ಮೊಮ್ಮಗನೂ ನೇರೀಯನ ಮಗನೂ ಆದ ಬಾರೂಕನ ಕೈಗೆ ಕೊಟ್ಟೆ. ನನ್ನ ಚಿಕ್ಕಪ್ಪನ ಮಗ ಹನಮೇಲನ ಮುಂದೆ ಕ್ರಯಪತ್ರಕ್ಕೆ ರುಜುಮಾಡಿದ ಸಾಕ್ಷಿಗಳ ಸಮಕ್ಷಮದಲ್ಲಿ, ಕಾರಾಗೃಹದ ಅಂಗಳದಲ್ಲಿ ಕುಳಿತಿದ್ದ ಎಲ್ಲ ಯೆಹೂದ್ಯರ ಎದುರಿನಲ್ಲಿ, ಆ ಕ್ರಯಪತ್ರವನ್ನು ಕೊಟ್ಟೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

12 ನನ್ನ ಚಿಕ್ಕಪ್ಪನ ಮಗನಾದ ಹನಮೇಲನ ಮುಂದೆ ಕ್ರಯಪತ್ರಕ್ಕೆ ರುಜುಮಾಡಿದ ಸಾಕ್ಷಿಗಳ ಸಮಕ್ಷಮ ಕಾರಾಗೃಹದ ಅಂಗಳದಲ್ಲಿ ಕೂತಿದ್ದ ಎಲ್ಲಾ ಯೆಹೂದ್ಯರ ಎದುರಿನಲ್ಲಿ ಆ ಕ್ರಯಪತ್ರವನ್ನು ಮಹ್ಸೇಮನ ಮೊಮ್ಮಗನೂ ನೇರೀಯನ ಮಗನೂ ಆದ ಬಾರೂಕನ ಕೈಗೆ ಕೊಟ್ಟೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

12 ಮಹ್ಸೇಯನ ಮೊಮ್ಮಗನೂ, ನೇರೀಯನ ಮಗನೂ ಆದ ಬಾರೂಕನ ಕೈಗೆ ಕೊಟ್ಟೆ. ನನ್ನ ಚಿಕ್ಕಪ್ಪನ ಮಗ ಹನಮೇಲನ ಮುಂದೆ ಕ್ರಯಪತ್ರಕ್ಕೆ ರುಜುಮಾಡಿದ ಸಾಕ್ಷಿಗಳ ಸಮಕ್ಷಮದಲ್ಲಿ ಕಾರಾಗೃಹದ ಅಂಗಳದಲ್ಲಿ ಕುಳಿತಿದ್ದ ಎಲ್ಲ ಯೆಹೂದ್ಯರ ಎದುರಿನಲ್ಲಿ ಈ ಕ್ರಯಪತ್ರವನ್ನು ಕೊಟ್ಟೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 32:12
10 ತಿಳಿವುಗಳ ಹೋಲಿಕೆ  

ಯೆರೆಮೀಯನು ಸೆರಾಯ ಎಂಬ ಅಧಿಕಾರಿಯ ಕೈಗೆ ಕೊಟ್ಟ ಸಂದೇಶವಿದು. ಸೆರಾಯನು ಯೆಹೂದದ ನೇರೀಯನ ಮಗ. ನೇರೀಯನು ಮಹ್ಸೇಯನ ಮಗನು. ಸೆರಾಯನು ಯೆಹೂದದ ರಾಜನಾದ ಚಿದ್ಕೀಯನ ಜೊತೆಗೆ ಬಾಬಿಲೋನಿಗೆ ಹೋದನು. ಈ ಸಂಗತಿ ಯೆಹೂದದಲ್ಲಿ ಚಿದ್ಕೀಯನ ಆಳ್ವಿಕೆಯ ನಾಲ್ಕನೇ ವರ್ಷದಲ್ಲಿ ನಡೆದದ್ದು. ಆ ಸಮಯದಲ್ಲಿ ಯೆರೆಮೀಯನು ಸೆರಾಯನೆಂಬ ಅಧಿಕಾರಿಯ ಕೈಗೆ ಈ ಸಂದೇಶವನ್ನು ಕೊಟ್ಟನು.


ನೇರೀಯನ ಮಗನಾದ ಬಾರೂಕನಿಗೆ ಕ್ರಯಪತ್ರವನ್ನು ಕೊಟ್ಟ ಮೇಲೆ ನಾನು ಯೆಹೋವನಿಗೆ ಪ್ರಾರ್ಥಿಸಿ ಹೀಗೆಂದೆನು:


ರಾಜನಾದ ಯೆಹೋಯಾಕೀಮನು ಲಿಪಿಕಾರನಾದ ಬಾರೂಕನನ್ನು ಮತ್ತು ಪ್ರವಾದಿಯಾದ ಯೆರೆಮೀಯನನ್ನು ಬಂಧಿಸಬೇಕೆಂದು ರಾಜವಂಶೀಯನಾದ ಎರಖ್ಮೆಯೇಲ, ಅಜ್ರಿಯೇಲನ ಮಗನಾದ ಸೆರಾಯ, ಅಬ್ದೆಯೇಲನ ಮಗನಾದ ಶೆಲೆಮ್ಯ ಇವರಿಗೆ ಆಜ್ಞೆಯನ್ನು ಕೊಟ್ಟನು. ಆದರೆ ಅವರಿಂದ ಬಾರೂಕನನ್ನು ಮತ್ತು ಯೆರೆಮೀಯನನ್ನು ಹುಡುಕಲಾಗಲಿಲ್ಲ. ಯಾಕೆಂದರೆ ಯೆಹೋವನು ಅವರನ್ನು ಬಚ್ಚಿಟ್ಟಿದ್ದನು.


ಪ್ರಭುವು ಯಾವುದನ್ನು ಸರಿಯಾದದ್ದೆಂದು ಸ್ವೀಕರಿಸಿಕೊಳ್ಳುವನೋ ಮತ್ತು ಜನರು ಯಾವುದನ್ನು ಸರಿಯಾದದ್ದೆಂದು ಯೋಚಿಸುವರೋ ಅದನ್ನೇ ಮಾಡಲು ನಾವು ಪ್ರಯತ್ನಿಸುತ್ತಿದ್ದೇವೆ.


ಅನಂತರ ಯೆರೆಮೀಯನು ಇನ್ನೊಂದು ಸುರುಳಿಯನ್ನು ತೆಗೆದುಕೊಂಡು ನೇರೀಯನ ಮಗನಾದ ಲಿಪಿಕಾರ ಬಾರೂಕನಿಗೆ ಕೊಟ್ಟನು. ರಾಜ ಯೆಹೋಯಾಕೀಮನು ಸುಟ್ಟುಹಾಕಿದ ಸುರುಳಿಯಲ್ಲಿದ್ದ ಸಂದೇಶವನ್ನೇ ಯೆರೆಮೀಯನು ಹೇಳಿದಂತೆಲ್ಲ ಬಾರೂಕನು ಸುರುಳಿಯ ಮೇಲೆ ಬರೆದನು. ಬೇರೆ ಹಲವು ಸಂದೇಶಗಳನ್ನು ಎರಡನೇ ಸುರುಳಿಯಲ್ಲಿ ಸೇರಿಸಲಾಯಿತು.


ಎಲ್ಲಾ ಜನರು ನೋಡುತ್ತಿದ್ದಂತೆಯೆ ನಾನು ಬಾರೂಕನಿಗೆ,


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು