ಯೆರೆಮೀಯ 32:18 - ಪರಿಶುದ್ದ ಬೈಬಲ್18 ಯೆಹೋವನೇ, ನೀನು ಸಾವಿರಾರು ಜನರಿಗೆ ನಂಬಿಗಸ್ತನಾಗಿಯೂ ಕರುಣಾಮಯಿಯಾಗಿಯೂ ಇರುವೆ. ಆದರೆ ತಂದೆಗಳು ಮಾಡಿದ ಪಾಪಕ್ಕಾಗಿ ಮಕ್ಕಳಿಗೆ ಶಿಕ್ಷೆಯನ್ನು ವಿಧಿಸುವಾತನೂ ನೀನೇ. ಮಹತ್ವವುಳ್ಳವನೇ, ಪರಾಕ್ರಮಿಯಾದ ದೇವರೇ, ಸರ್ವಶಕ್ತನಾದ ಯೆಹೋವನು ಎಂಬುದೇ ನಿನ್ನ ನಾಮಧೇಯ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201918 ನೀನು ಸಾವಿರಾರು ತಲೆಗಳವರೆಗೆ ದಯೆತೋರಿಸುವವನೂ, ತಂದೆಗಳ ದೋಷಫಲವನ್ನು ಅವರ ತರುವಾಯ ಮಕ್ಕಳ ಮಡಲಿಗೆ ಹಾಕುವವನೂ ಆಗಿದ್ದೀ. ನೀನು ಮಹಾ ಪರಾಕ್ರಮಿಯಾದ ದೇವರು; ಸೇನಾಧೀಶ್ವರನಾದ ಯೆಹೋವನೆಂಬುದು ನಿನ್ನ ಹೆಸರಾಗಿದೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)18 ನೀವು ಸಾವಿರಾರು ತಲಾಂತರಗಳವರೆಗೂ ದಯೆತೋರುವವರು. ಆದರೆ ಹೆತ್ತವರ ದೋಷಫಲವನ್ನು ಅವರ ತರುವಾಯ ಮಕ್ಕಳ ಮಡಲಿಗೆ ಹಾಕುವವರು. ನೀವು ಮಹಾಪರಾಕ್ರಮಿಯಾದ ದೇವರು, ‘ಸೇನಾಧೀಶ್ವರ ಸರ್ವೇಶ್ವರ’ ಎಂಬುದು ನಿಮ್ಮ ನಾಮಧೇಯ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)18 ನೀನು ಸಾವಿರಾರು ತಲೆಗಳವರೆಗೆ ದಯೆತೋರಿಸುವವನೂ ತಂದೆಗಳ ದೋಷಫಲವನ್ನು ಅವರ ತರುವಾಯ ಮಕ್ಕಳ ಮಡಲಿಗೆ ಹಾಕುವವನೂ ಆಗಿದ್ದೀ; ನೀನು ಮಹಾ ಪರಾಕ್ರವಿುಯಾದ ದೇವರು; ಸೇನಾಧೀಶ್ವರನಾದ ಯೆಹೋವನೆಂಬದು ನಿನ್ನ ನಾಮಧೇಯ; ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ18 ನೀವು ಸಾವಿರಾರು ತಲೆಗಳವರೆಗೆ ಪ್ರೀತಿ, ದಯೆತೋರಿಸಿ, ತಂದೆಗಳ ಅಕ್ರಮಗಳನ್ನು ಅವರ ತರುವಾಯ ಇರುವ ಅವರ ಮಕ್ಕಳ ಎದೆಯಲ್ಲಿ ಸುರಿಸುವವರಾಗಿದ್ದೀರಿ. ಮಹತ್ವವುಳ್ಳವರೂ, ಪರಾಕ್ರಮವುಳ್ಳ ದೇವರೂ, ಸೇನಾಧೀಶ್ವರ ಯೆಹೋವ ದೇವರೂ ಎಂಬುದು ನಿಮ್ಮ ಹೆಸರು. ಅಧ್ಯಾಯವನ್ನು ನೋಡಿ |
ದೇವರು ಉನ್ನತಸ್ಥಾನದಲ್ಲಿ ಎತ್ತಲ್ಪಟ್ಟಿದ್ದಾನೆ. ಆತನು ಸದಾಕಾಲ ಜೀವಿಸುತ್ತಾನೆ. ಆತನ ಹೆಸರು ಪರಿಶುದ್ಧವಾದದ್ದು. ದೇವರು ಹೇಳುವುದೇನೆಂದರೆ, “ನಾನು ಉನ್ನತಲೋಕವೆಂಬ ಪವಿತ್ರಸ್ಥಳದಲ್ಲಿ ವಾಸಿಸುತ್ತೇನೆ. ಅದೇ ಸಮಯದಲ್ಲಿ ದುಃಖಪಡುವವರೂ ದೀನರೂ ಆಗಿರುವ ಜನರೊಂದಿಗೆ ವಾಸಮಾಡುತ್ತೇನೆ. ಆತ್ಮದಲ್ಲಿ ದೀನರಾಗಿರುವವರಿಗೆ ನಾನು ಹೊಸಜನ್ಮ ಕೊಡುತ್ತೇನೆ. ಹೃದಯದಲ್ಲಿ ದುಃಖಿಸುವವರಿಗೆ ನಾನು ಹೊಸ ಜೀವ ಕೊಡುತ್ತೇನೆ.
“ಅರಸನಾದ ನೆಬೂಕದ್ನೆಚ್ಚರನೇ, ಬೆಟ್ಟದಿಂದ ಒಂದು ದೊಡ್ಡ ಬಂಡೆ ಒಡೆದು ಬಂದದ್ದನ್ನು ನೀನು ನೋಡಿದೆ. ಯಾರೂ ಅದನ್ನು ಒಡೆಯಲಿಲ್ಲ! ಆ ಬಂಡೆಯು ಕಬ್ಬಿಣವನ್ನು, ಕಂಚನ್ನು, ಜೇಡಿಮಣ್ಣನ್ನು, ಬೆಳ್ಳಿಯನ್ನು, ಚಿನ್ನವನ್ನು ಚೂರುಚೂರು ಮಾಡಿತು. ಭವಿಷ್ಯದಲ್ಲಿ ಏನಾಗುವದೆಂಬುದನ್ನು ದೇವರು ನಿನಗೆ ಈ ರೀತಿಯಲ್ಲಿ ತೋರಿಸಿದ್ದಾನೆ. ನಿನ್ನ ಕನಸು ನಿಜ. ಅದರ ಅರ್ಥವು ನಂಬಿಕೆಗೆ ಯೋಗ್ಯವಾಗಿದೆ” ಎಂದು ವಿವರಿಸಿದನು.