Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 32:32 - ಪರಿಶುದ್ದ ಬೈಬಲ್‌

32 ಇಸ್ರೇಲಿನ ಮತ್ತು ಯೆಹೂದದ ಜನರು ಮಾಡಿದ ಎಲ್ಲಾ ದುಷ್ಕೃತ್ಯಗಳಿಗಾಗಿ ನಾನು ಜೆರುಸಲೇಮ್ ನಗರವನ್ನು ನಾಶಮಾಡುತ್ತೇನೆ. ಜನರು, ರಾಜರು, ಮುಂದಾಳುಗಳು, ಯಾಜಕರು, ಪ್ರವಾದಿಗಳು, ಯೆಹೂದದ ಪ್ರಜೆಗಳು, ಜೆರುಸಲೇಮಿನ ನಿವಾಸಿಗಳು ಇವರೆಲ್ಲರೂ ನನಗೆ ಕೋಪ ಬರುವಂತೆ ಮಾಡಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

32 ಅರಸರು, ಪ್ರಧಾನರು, ಯಾಜಕರು, ಪ್ರವಾದಿಗಳು, ಯೆಹೂದದ ಪ್ರಜೆಗಳು, ಯೆರೂಸಲೇಮಿನ ನಿವಾಸಿಗಳು, ಅಂತು ಎಲ್ಲಾ ಇಸ್ರಾಯೇಲರೂ ಮತ್ತು ಯೆಹೂದ್ಯರೂ ನನ್ನನ್ನು ರೇಗಿಸತಕ್ಕ ಅಧರ್ಮವನ್ನು ತುಂಬಾ ಮಾಡಿದ್ದರಿಂದ ನಾನು ಈ ಪಟ್ಟಣವನ್ನು ನನ್ನ ಸನ್ನಿಧಿಯಿಂದ ತೊಲಗಿಸಬೇಕಾಗಿ ಬಂತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

32 ಅದರ ಅರಸರು, ಮಂತ್ರಿಗಳು, ಯಾಜಕರು, ಪ್ರವಾದಿಗಳು, ಜುದೇಯದ ಪ್ರಜೆಗಳು, ಜೆರುಸಲೇಮಿನ ನಿವಾಸಿಗಳು, ಹೀಗೆ ಎಲ್ಲ ಇಸ್ರಯೇಲರೂ ಯೆಹೂದ್ಯರೂ ಅಧರ್ಮವನ್ನು ಹೇರಳವಾಗಿಮಾಡಿ ನನ್ನನ್ನು ರೇಗಿಸಿದ್ದಾರೆ. ಆದ್ದರಿಂದ ಈ ನಗರವನ್ನು ನನ್ನ ಸನ್ನಿಧಿಯಿಂದ ತೊಲಗಿಸಬೇಕಾಗಿ ಬಂದಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

32 ಅರಸರು, ಪ್ರಧಾನರು, ಯಾಜಕರು, ಪ್ರವಾದಿಗಳು, ಯೆಹೂದದ ಪ್ರಜೆಗಳು, ಯೆರೂಸಲೇವಿುನ ನಿವಾಸಿಗಳು, ಅಂತು ಎಲ್ಲಾ ಇಸ್ರಾಯೇಲ್ಯರೂ ಯೆಹೂದ್ಯರೂ ನನ್ನನ್ನು ರೇಗಿಸತಕ್ಕ ಅಧರ್ಮವನ್ನು ತುಂಬಾ ಮಾಡಿದ್ದರಿಂದ ನಾನು ಈ ಪಟ್ಟಣವನ್ನು ನನ್ನ ಸನ್ನಿಧಿಯಿಂದ ತೊಲಗಿಸಬೇಕಾಗಿ ಬಂತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

32 ಇಸ್ರಾಯೇಲರೂ, ಯೆಹೂದದ ಮಕ್ಕಳೂ, ಅವರೂ, ಅವರ ಅರಸರೂ, ಅವರ ಪ್ರಧಾನರೂ, ಅವರ ಯಾಜಕರೂ, ಅವರ ಪ್ರವಾದಿಗಳೂ, ಯೆಹೂದದ ಜನರೂ, ಯೆರೂಸಲೇಮಿನ ನಿವಾಸಿಗಳೂ ಸಹಿತವಾಗಿ ನನಗೆ ಕೋಪೋದ್ರೇಕ ಎಬ್ಬಿಸುವ ಹಾಗೆ ಮಾಡಿದರು

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 32:32
19 ತಿಳಿವುಗಳ ಹೋಲಿಕೆ  

“ಯೆಹೋವನೇ, ನಾವೆಲ್ಲರೂ ನಾಚಿಕೆಪಡಬೇಕು. ನಮ್ಮ ಎಲ್ಲ ರಾಜರು, ನಾಯಕರು ನಾಚಿಕೆಪಟ್ಟುಕೊಳ್ಳಬೇಕು. ನಮ್ಮ ಹಿರಿಯರು ನಾಚಿಕೆಪಡಬೇಕು. ಏಕೆಂದರೆ ನಾವು ನಿನ್ನ ವಿಷಯದಲ್ಲಿ ಪಾಪ ಮಾಡಿದ್ದೇವೆ.


“ಜನರ ಕೈಗೆ ಸಿಕ್ಕಿಬಿದ್ದಾಗ ಕಳ್ಳನಿಗೆ ನಾಚಿಕೆಯಾಗುತ್ತದೆ. ಅದೇ ರೀತಿಯಲ್ಲಿ ಇಸ್ರೇಲ್ ವಂಶವು ನಾಚಿಕೆಪಡುತ್ತದೆ. ರಾಜರು ಮತ್ತು ನಾಯಕರು ನಾಚಿಕೆಪಡುವರು. ಯಾಜಕರು ಮತ್ತು ಪ್ರವಾದಿಗಳು ನಾಚಿಕೆಪಡುವರು.


ನಿಮ್ಮನ್ನಾಳುವವರು ದಂಗೆಕೋರರಾಗಿದ್ದಾರೆ; ಕಳ್ಳರ ಮಿತ್ರರಾಗಿದ್ದಾರೆ; ಲಂಚಕೋರರಾಗಿದ್ದಾರೆ; ಹಣಕ್ಕಾಗಿ ಕೆಟ್ಟದ್ದನ್ನು ಮಾಡುತ್ತಾರೆ; ಹಣಕ್ಕಾಗಿ ಮೋಸ ಮಾಡುತ್ತಾರೆ. ಅನಾಥರಿಗೆ ಸಹಾಯ ಮಾಡದವರಾಗಿದ್ದಾರೆ; ವಿಧವೆಯರ ಅಗತ್ಯತೆಗಳಿಗೆ ಲಕ್ಷ್ಯ ಕೊಡದವರಾಗಿದ್ದಾರೆ.”


ನಮ್ಮ ಪೂರ್ವಿಕರ ಕಾಲದಿಂದ ಈ ತನಕ ನಾವು ಮಹಾಪರಾಧಗಳನ್ನು ಮಾಡಿದ್ದೇವೆ. ನಮ್ಮ ಪಾಪಗಳಿಗಾಗಿ ನಮಗೂ ನಮ್ಮ ರಾಜರುಗಳಿಗೂ ನಮ್ಮ ಯಾಜಕರುಗಳಿಗೂ ಶಿಕ್ಷೆಯಾಯಿತು. ಅನ್ಯದೇಶದ ರಾಜರುಗಳು ನಮ್ಮ ದೇಶವನ್ನು ಆಕ್ರಮಿಸಿ ನಮ್ಮ ಜನರನ್ನು ಸೆರೆಯಾಳುಗಳಾಗಿ ಒಯ್ದರು; ನಮ್ಮ ಐಶ್ವರ್ಯವನ್ನು ಸೂರೆಗೈದು ನಮ್ಮನ್ನು ನಾಚಿಕೆಗೆ ಒಳಪಡಿಸಿದರು. ಈಗಲೂ ಅದೇ ಅನುಭವ ನಮಗಾಗಿದೆ!


ಪ್ರವಾದಿಗಳು ಹೇಳಿದ್ದನ್ನು ನಾವು ಕೇಳಲಿಲ್ಲ. ಅವರು ನಿನ್ನ ಸೇವಕರಾಗಿದ್ದರು. ಆ ಪ್ರವಾದಿಗಳು ನಿನ್ನ ಪರವಾಗಿ ಹೇಳಿದರು. ಅವರು ನಮ್ಮ ರಾಜರುಗಳಿಗೆ, ನಮ್ಮ ನಾಯಕರುಗಳಿಗೆ ಮತ್ತು ನಮ್ಮ ಹಿರಿಯರಿಗೆ ಹೇಳಿದರು. ಅವರು ಇಸ್ರೇಲಿನ ಎಲ್ಲ ಜನರಿಗೆ ಹೇಳಿದರು. ಆದರೆ ನಾವು ಆ ಪ್ರವಾದಿಗಳ ಮಾತಿಗೆ ಕಿವಿಗೊಡಲಿಲ್ಲ.


“‘ಇಗೋ, ಜೆರುಸಲೇಮಿನಲ್ಲಿ ಇತರರನ್ನು ಕೊಲ್ಲುವದಕ್ಕಾಗಿಯೇ ತಮ್ಮನ್ನು ಬಲಿಷ್ಠರನ್ನಾಗಿ ಮಾಡಿಕೊಂಡಿರುವ ಇಸ್ರೇಲಿನ ಅಧಿಪತಿಗಳು ಇದ್ದಾರೆ.


ನಾವು ಸ್ವರ್ಗದ ರಾಣಿಗೆ ನೈವೇದ್ಯವನ್ನು ಅರ್ಪಿಸುವದಾಗಿ ಹರಕೆ ಮಾಡಿದ್ದೇವೆ ಮತ್ತು ನಮ್ಮ ಹರಕೆಗಳನ್ನೆಲ್ಲ ಪೂರೈಸುತ್ತೇವೆ. ನಾವು ನೈವೇದ್ಯವನ್ನು ಕೊಡುತ್ತೇವೆ ಮತ್ತು ಅವಳ ಪೂಜೆಗಾಗಿ ಪಾನನೈವೇದ್ಯವನ್ನು ಅರ್ಪಿಸುತ್ತೇವೆ. ನಾವು ಮೊದಲು ಹಾಗೆಯೇ ಮಾಡಿದ್ದೇವೆ. ನಮ್ಮ ಪೂರ್ವಿಕರು, ನಮ್ಮ ರಾಜರು, ನಮ್ಮ ಅಧಿಕಾರಿಗಳು ಮೊದಲು ಮಾಡಿದಂತೆಯೇ ನಾವೆಲ್ಲರೂ ಜೆರುಸಲೇಮಿನ ಬೀದಿಗಳಲ್ಲಿ ಮತ್ತು ಯೆಹೂದದ ಪಟ್ಟಣಗಳಲ್ಲಿ ಮಾಡಿದ್ದೆವು. ನಾವು ಸ್ವರ್ಗದ ರಾಣಿಯನ್ನು ಪೂಜಿಸುವ ಕಾಲದಲ್ಲಿ ನಮ್ಮಲ್ಲಿ ಸಾಕಷ್ಟು ಆಹಾರವಿತ್ತು. ನಾವು ಜಯಶೀಲರಾಗಿದ್ದೆವು. ನಮಗೆ ಕೆಟ್ಟದ್ದೇನೂ ಆಗಿರಲಿಲ್ಲ.


“ನೀವು ಯೆಹೂದದ ಪಟ್ಟಣಗಳಲ್ಲಿ ಮತ್ತು ಜೆರುಸಲೇಮಿನ ಬೀದಿಗಳಲ್ಲಿ ನೈವೇದ್ಯಗಳನ್ನು ಅರ್ಪಿಸಿದ ಸಂಗತಿ ಯೆಹೋವನ ಜ್ಞಾಪಕದಲ್ಲಿದೆ. ಅದನ್ನು ಮಾಡಿದ್ದೇ ನೀವು ಮತ್ತು ನಿಮ್ಮ ಪೂರ್ವಿಕರು, ನಿಮ್ಮ ರಾಜರು, ನಿಮ್ಮ ಅಧಿಕಾರಿಗಳು ಮತ್ತು ನಿಮ್ಮ ಪ್ರದೇಶದ ಜನರು. ನೀವು ಮಾಡಿದ್ದನ್ನೆಲ್ಲಾ ಆತನು ಜ್ಞಾಪಿಸಿಕೊಂಡನು; ತನ್ನ ನೆನಪಿಗೆ ತಂದುಕೊಂಡನು.


ಯೆಹೋವನೇ, ನಾವು ಮತ್ತು ನಮ್ಮ ಪೂರ್ವಿಕರು ನಿನಗೆ ಪಾಪಮಾಡಿದ್ದರಿಂದ ಇದೆಲ್ಲಾ ಆಗುತ್ತಿದೆ. ಜೆರುಸಲೇಮಿನ ಮೇಲೆ ಕೋಪ ಮಾಡುವದನ್ನು ದಯವಿಟ್ಟು ನಿಲ್ಲಿಸು. ಜೆರುಸಲೇಮ್ ನಗರವು ನಿನ್ನ ಪವಿತ್ರವಾದ ಬೆಟ್ಟದ ಮೇಲೆ ಇದೆ. ನೀನು ಸರಿಯಾದದ್ದನ್ನು ಮಾಡುವೆ. ಆದ್ದರಿಂದ ಜೆರುಸಲೇಮಿನ ಮೇಲೆ ಕೋಪಗೊಳ್ಳುವದನ್ನು ದಯವಿಟ್ಟು ನಿಲ್ಲಿಸಿಬಿಡು. ನಮ್ಮ ಸುತ್ತಮುತ್ತಲಿನ ಜನರೆಲ್ಲ ನಮ್ಮನ್ನು ನಿಂದಿಸುವರು ಮತ್ತು ನಮ್ಮ ಜನರನ್ನು ಗೇಲಿ ಮಾಡುವರು.


ದಿವ್ಯದರ್ಶನದ ಕಣಿವೆಯ ವಿಷಯವಾಗಿ ದುಃಖದ ಸಂದೇಶ: ಜನಗಳೇ, ನಿಮಗೆ ಏನಾಯಿತು? ನಿಮ್ಮ ಮನೆ ಮಾಳಿಗೆಯ ಮೇಲೆ ಯಾಕೆ ಅಡಗಿರುತ್ತೀರಿ?


ಆ ಜನರು ಯೆಹೂದದ ಪಟ್ಟಣಗಳಲ್ಲಿಯೂ ಜೆರುಸಲೇಮಿನ ಬೀದಿಗಳಲ್ಲಿಯೂ ಏನು ಮಾಡುತ್ತಿದ್ದಾರೆಂಬುದು ನಿನಗೆ ಗೊತ್ತು.


“ಯೆಹೋವನೇ, ನೀನು ಒಳ್ಳೆಯವನು, ಒಳ್ಳೆಯತನ ನಿನ್ನ ಪಾಲಾಗಿದೆ. ಆದರೆ ಈಗ ನಮ್ಮದು ನಾಚಿಕೆಪಡುವ ಸ್ಥಿತಿಯಾಗಿದೆ. ಯೆಹೂದ ಮತ್ತು ಜೆರುಸಲೇಮಿನ ಜನರು ನಾಚಿಕೆಪಡುವಂತಾಗಿದೆ. ಹತ್ತಿರದಲ್ಲಿದ್ದವರು ಹಾಗೂ ದೂರದಲ್ಲಿದ್ದವರು, ಒಟ್ಟಿನಲ್ಲಿ ಇಸ್ರೇಲಿನ ಎಲ್ಲ ಜನರು ನಾಚಿಕೆಪಡುವಂತಾಗಿದೆ. ಯೆಹೋವನೇ, ನೀನು ಆ ಜನರನ್ನು ಎಲ್ಲಾ ದೇಶಗಳಲ್ಲಿ ಚದರಿಸಿಬಿಟ್ಟಿರುವೆ. ಆ ಎಲ್ಲಾ ದೇಶಗಳಲ್ಲಿರುವ ಇಸ್ರೇಲರು ನಾಚಿಕೆಪಡಬೇಕಾಗಿದೆ. ಯೆಹೋವನೇ, ನಿನ್ನ ವಿರುದ್ಧ ಮಾಡಿದ ಎಲ್ಲಾ ಹೀನಕೃತ್ಯಗಳಿಗಾಗಿ ಅವರು ನಾಚಿಕೆಪಡಬೇಕಾಗಿದೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು