Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 32:33 - ಪರಿಶುದ್ದ ಬೈಬಲ್‌

33 “ಆ ಜನರು ಸಹಾಯಕೋರಿ ನನ್ನಲ್ಲಿಗೆ ಬರಬೇಕಾಗಿತ್ತು. ಆದರೆ ಅವರು ನನಗೆ ವಿಮುಖರಾದರು. ನಾನು ಮತ್ತೆಮತ್ತೆ ಅವರಿಗೆ ಬುದ್ಧಿಕಲಿಸುವ ಪ್ರಯತ್ನ ಮಾಡಿದೆ. ಆದರೆ ಅವರು ನನ್ನ ಮಾತನ್ನು ಕೇಳಲಿಲ್ಲ. ನಾನು ಅವರನ್ನು ತಿದ್ದುವ ಪ್ರಯತ್ನ ಮಾಡಿದೆ, ಆದರೆ ಅವರು ನನ್ನ ಮಾತನ್ನು ಕೇಳಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

33 ಅವರು ನನಗೆ ಮುಖಕೊಡದೆ ಬೆನ್ನುಮಾಡಿದ್ದಾರೆ; ನಾನು ಎಡೆಬಿಡದೆ ಅವರಿಗೆ ಬೋಧಿಸುತ್ತಾ ಬಂದರೂ ಅವರು ಉಪದೇಶವನ್ನು ಹೊಂದಲಿಲ್ಲ ಮತ್ತು ನನಗೆ ಕಿವಿಗೊಡಲೇ ಇಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

33 ಅವರು ನನಗೆ ಅಭಿಮುಖರಾಗದೆ ಬೆನ್ನುಮಾಡಿದ್ದಾರೆ. ನಾನು ಅವರಿಗೆ ಎಡೆಬಿಡದೆ ಬೋಧಿಸುತ್ತಾ ಬಂದರೂ ನನ್ನ ಉಪದೇಶವನ್ನು ಅಂಗೀಕರಿಸಲಿಲ್ಲ, ನನಗೆ ಕಿವಿಗೊಡಲೂ ಇಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

33 ಅವರು ನನಗೆ ಮುಖಕೊಡದೆ ಬೆನ್ನುಮಾಡಿದ್ದಾರೆ; ನಾನು ಎಡೆಬಿಡದೆ ಅವರಿಗೆ ಬೋಧಿಸುತ್ತಾ ಬಂದರೂ ಅವರು ಉಪದೇಶವನ್ನು ಹೊಂದಲೊಲ್ಲದೆ ನನಗೆ ಕಿವಿಗೊಡಲೇ ಇಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

33 ಅವರು ನನಗೆ ಮುಖವನ್ನಲ್ಲ ಬೆನ್ನನ್ನು ತಿರುಗಿಸಿದ್ದಾರೆ. ಆದರೂ ನಾನು ಅವರಿಗೆ ಬೋಧಿಸಿದೆನು. ಪುನಃ ಬೋಧಿಸಿದೆನು. ಆದರೂ ಉಪದೇಶ ಹೊಂದುವುದಕ್ಕೆ ಅವರು ಕಿವಿಗೊಡಲಿಲ್ಲ ಅಥವಾ ಪ್ರತಿಕ್ರಿಯಿಸುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 32:33
17 ತಿಳಿವುಗಳ ಹೋಲಿಕೆ  

ಇಸ್ರೇಲಿನ ಜನರಾದ ನೀವು ಈ ದುಷ್ಕೃತ್ಯಗಳನ್ನು ಮಾಡುತ್ತಿದ್ದೀರಿ.” ಇದು ಯೆಹೋವನಾದ ನನ್ನ ಮಾತು: “ನಾನು ನಿಮಗೆ ಮತ್ತೆಮತ್ತೆ ಹೇಳಿದೆ, ಆದರೆ ನೀವು ನನ್ನ ಮಾತನ್ನು ಕೇಳಲಿಲ್ಲ. ನಾನು ನಿಮ್ಮನ್ನು ಕೂಗಿದೆ, ಆದರೆ ನೀವು ಉತ್ತರ ಕೊಡಲಿಲ್ಲ.


ದೇವರು ನನ್ನನ್ನು ಯೆಹೋವನಾಲಯದ ಒಳಗಿನ ಅಂಗಳಕ್ಕೆ ಕರಕೊಂಡು ಹೋದನು. ಯೆಹೋವನಾಲಯದ ಪ್ರವೇಶ ಸ್ಥಳದಲ್ಲಿ ಮಂಟಪಕ್ಕೂ ಯಜ್ಞವೇದಿಕೆಗೂ ನಡುವೆ ಪವಿತ್ರ ಸ್ಥಳದ ಕಡೆಗೆ ಬೆನ್ನು ಮಾಡಿಕೊಂಡಿದ್ದ ಇಪ್ಪತ್ತೈದು ಮಂದಿ ಇದ್ದರು. ಪೂರ್ವಕ್ಕೆ ಮುಖಮಾಡಿಕೊಂಡಿದ್ದ ಅವರು ಸೂರ್ಯನನ್ನು ಪೂಜಿಸುತ್ತಿದ್ದರು.


ಅವರು ಮರದ ತುಂಡುಗಳೊಡನೆ ಮಾತನಾಡಿ, ‘ನೀನು ನಮ್ಮ ತಂದೆ’ ಎಂದು ಹೇಳುವರು. ಆ ಜನರು ಕಲ್ಲುಬಂಡೆಯೊಂದಿಗೆ ಮಾತನಾಡಿ, ‘ನೀನು ನಮಗೆ ಜನ್ಮಕೊಟ್ಟ ತಾಯಿ’ ಎಂದು ಹೇಳುವರು. ಆ ಜನರೆಲ್ಲರು ನಾಚಿಕೆಪಡುವರು. ಅವರು ನನ್ನ ಕಡೆಗೆ ನೋಡುವದಿಲ್ಲ. ಅವರು ನನಗೆ ವಿಮುಖರಾಗಿದ್ದಾರೆ. ಆದರೆ ಯೆಹೂದದ ಜನರು ಕಷ್ಟದಲ್ಲಿ ಸಿಕ್ಕಿಹಾಕಿಕೊಂಡಾಗ, ‘ಬಾ ನಮ್ಮನ್ನು ರಕ್ಷಿಸು’ ಎಂದು ನನ್ನನ್ನು ಕೇಳುತ್ತಾರೆ.


ಮರುದಿನ ನಸುಕಿನಲ್ಲೇ ಯೇಸು ದೇವಾಲಯಕ್ಕೆ ಮರಳಿ ಹೋದನು. ಎಲ್ಲಾ ಜನರು ಯೇಸುವಿನ ಬಳಿಗೆ ನೆರೆದುಬಂದರು. ಯೇಸು ಕುಳಿತುಕೊಂಡು ಜನರಿಗೆ ಉಪದೇಶಿಸಿದನು.


ನಾನು ನನ್ನ ಸೇವಕರಾದ ಪ್ರವಾದಿಗಳನ್ನು ಇಸ್ರೇಲಿಗೆ ಮತ್ತು ಯೆಹೂದಕ್ಕೆ ಕಳುಹಿಸಿಕೊಟ್ಟೆ. ನಾನು ಅವರನ್ನು ನಿಮ್ಮಲ್ಲಿಗೆ ಪುನಃಪುನಃ ಕಳುಹಿಸಿಕೊಟ್ಟೆ. ಆ ಪ್ರವಾದಿಗಳು, “ಇಸ್ರೇಲಿನ ಮತ್ತು ಯೆಹೂದದ ಪ್ರತಿಯೊಬ್ಬರೂ ದುಷ್ಕೃತ್ಯಗಳನ್ನು ಮಾಡುವದನ್ನು ನಿಲ್ಲಿಸಬೇಕು. ನೀವು ಒಳ್ಳೆಯವರಾಗಿರಬೇಕು. ಬೇರೆ ದೇವರುಗಳನ್ನು ಅನುಸರಿಸಬಾರದು. ಅವುಗಳನ್ನು ಪೂಜಿಸಬಾರದು. ಅವುಗಳ ಸೇವೆಮಾಡಬಾರದು ಎಂದು ಹೇಳಿದರು. ನನ್ನ ಆಜ್ಞೆಯನ್ನು ಪಾಲಿಸಿದರೆ ನಾನು ನಿಮಗೂ ಮತ್ತು ನಿಮ್ಮ ಪೂರ್ವಿಕರಿಗೂ ಕೊಟ್ಟ ಪ್ರದೇಶದಲ್ಲಿ ನೀವು ವಾಸಿಸಬಹುದು” ಎಂದು ಹೇಳಿದ್ದೆ. ಆದರೆ ನೀವು ನನ್ನ ಸಂದೇಶದ ಕಡೆಗೆ ಗಮನ ಕೊಡಲಿಲ್ಲ.


ನನ್ನ ಸೇವಕರು ಹೇಳುವುದನ್ನು ನೀವು ಕೇಳಬೇಕು. ಪ್ರವಾದಿಗಳು ನನ್ನ ಸೇವಕರಾಗಿದ್ದಾರೆ. ನಾನು ಮತ್ತೆಮತ್ತೆ ನನ್ನ ಪ್ರವಾದಿಗಳನ್ನು ನಿಮ್ಮಲ್ಲಿಗೆ ಕಳುಹಿಸಿದೆನು. ಆದರೆ ನೀವು ಅವರ ಮಾತುಗಳಿಗೆ ಕಿವಿಗೊಡಲಿಲ್ಲ.


“ಆದರೆ ನಿಮ್ಮ ಪೂರ್ವಿಕರು ನನ್ನ ಮಾತನ್ನು ಕೇಳಲಿಲ್ಲ. ಅವರು ನನ್ನ ಕಡೆಗೆ ಗಮನ ಕೊಡಲಿಲ್ಲ. ಅವರು ಮೊಂಡರಾಗಿದ್ದು ತಮ್ಮ ಮನಸ್ಸಿಗೆ ಬಂದಂತೆ ನಡೆದುಕೊಂಡರು. ಅವರು ಒಳ್ಳೆಯವರಾಗಲಿಲ್ಲ. ಅವರು ಇನ್ನೂ ಕೆಟ್ಟವರಾದರು. ಅವರು ಹಿಂದಕ್ಕೆ ಸರಿದರು, ಮುಂದಕ್ಕೆ ಬರಲಿಲ್ಲ.


ಆದರೆ ಆ ಜನರು ಈ ಮಾತುಗಳನ್ನು ಕೇಳಲಿಲ್ಲ. ಆತನು ಹೇಳಿದ ಹಾಗೆ ನಡೆಯಲಿಲ್ಲ. ದೇವರು ಹೇಳುವುದು ತಮಗೆ ಕೇಳದಂತೆ ತಮ್ಮ ಕಿವಿಗಳನ್ನು ಮುಚ್ಚಿಕೊಂಡರು.


ಎಷ್ಟು ಹೆಚ್ಚಾಗಿ ನಾನು ಇಸ್ರೇಲರನ್ನು ಕರೆದೆನೋ ಅಷ್ಟೇ ಹೆಚ್ಚಾಗಿ ಅವರು ನನ್ನನ್ನು ತೊರೆದರು. ಇಸ್ರೇಲರು ಬಾಳನ ವಿಗ್ರಹಗಳಿಗೆ ಯಜ್ಞವನ್ನರ್ಪಿಸಿದರು. ವಿಗ್ರಹಗಳಿಗೆ ಧೂಪ ಹಾಕಿದರು.


ನಾನು ಮತ್ತೆಮತ್ತೆ ನನ್ನ ಪ್ರವಾದಿಗಳನ್ನು ಆ ಜನರಲ್ಲಿಗೆ ಕಳಿಸಿಕೊಟ್ಟೆ. ಆ ಪ್ರವಾದಿಗಳು ನನ್ನ ಸೇವಕರಾಗಿದ್ದರು. ಆ ಪ್ರವಾದಿಗಳು ನನ್ನ ಸಂದೇಶವನ್ನು ಜನರಿಗೆ ತಿಳಿಸಿ ‘ಈ ದುಷ್ಕೃತ್ಯವನ್ನು ಮಾಡಬೇಡಿರಿ, ನೀವು ಈ ವಿಗ್ರಹಗಳ ಪೂಜೆಮಾಡುವದನ್ನು ನಾನು ದ್ವೇಷಿಸುತ್ತೇನೆ’ ಎಂದು ಹೇಳಿದರು.


ಪೂರ್ವದಿಂದ ಬರುವ ಗಾಳಿಯಂತೆ ಯೆಹೂದದ ಜನರನ್ನು ಅವರ ವೈರಿಗಳ ಎದುರಿನಲ್ಲಿ ಚದರಿಸಿಬಿಡುವೆನು. ನಾನು ಅವರನ್ನು ನಾಶಮಾಡುವೆನು. ಆ ಸಮಯದಲ್ಲಿ ಅವರಿಗೆ ಸಹಾಯಮಾಡಲು ನಾನು ಬರುವದಿಲ್ಲ. ಇಲ್ಲ! ನಾನು ಬಿಟ್ಟುಹೋಗುವುದನ್ನು ಅವರು ನೋಡುವರು.”


‘ನಮ್ಮನ್ನು ಪಕ್ಷಿಗಳಿಗಿಂತಲೂ ಪ್ರಾಣಿಗಳಿಗಿಂತಲೂ ಜ್ಞಾನಿಗಳನ್ನಾಗಿ ಮಾಡುವ ದೇವರೆಲ್ಲಿ?’ ಎಂದು ಅವರು ಕೇಳುವುದಿಲ್ಲ.


“ಇಸ್ರೇಲಿನ ದೇವರೂ ಸರ್ವಶಕ್ತನೂ ಆಗಿರುವ ಯೆಹೋವನು ಹೀಗೆ ಹೇಳಿದನು: ಯೆರೆಮೀಯನೇ, ಹೋಗಿ ಈ ಸಂದೇಶವನ್ನು ಯೆಹೂದದ ಮತ್ತು ಜೆರುಸಲೇಮಿನ ಜನರಿಗೆ ತಿಳಿಸು. ನೀವು ಇದರಿಂದ ಒಂದು ಪಾಠವನ್ನು ಕಲಿಯಬೇಕು ಮತ್ತು ನನ್ನ ಸಂದೇಶವನ್ನು ಅನುಸರಿಸಬೇಕು.


“ನನ್ನ ಒಡೆಯನಾದ ಯೆಹೋವನು ಹೀಗೆ ಹೇಳಿದನು: ‘ಜೆರುಸಲೇಮೇ, ನೀನು ನನ್ನನ್ನು ಮರೆತುಬಿಟ್ಟೆ. ನೀನು ನನ್ನನ್ನು ತೊರೆದುಬಿಟ್ಟೆ; ಆದ್ದರಿಂದ ನೀನು ನನ್ನನ್ನು ತೊರೆದ ಸೂಳೆಯಂತೆ ಜೀವಿಸಿದ್ದಕ್ಕೆ ಶಿಕ್ಷೆ ಅನುಭವಿಸಬೇಕು. ನಿನ್ನ ನೀಚ ನಡತೆಗಾಗಿ ನೀನು ಕಷ್ಟ ಅನುಭವಿಸಬೇಕು.’”


ಆದ್ದರಿಂದ ನೀನು ಅವರಿಗೆ ಹೀಗೆ ಹೇಳಬೇಕು: ತಮ್ಮ ದೇವರಾದ ಯೆಹೋವನ ಆಜ್ಞೆಯನ್ನು ಪಾಲಿಸದ ಜನಾಂಗವಿದು. ಈ ಜನರು ದೇವರ ಧರ್ಮೋಪದೇಶವನ್ನು ಕೇಳಲಿಲ್ಲ. ಈ ಜನರಿಗೆ ನಿಜವಾದ ಧರ್ಮೋಪದೇಶ ಗೊತ್ತಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು