Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 32:35 - ಪರಿಶುದ್ದ ಬೈಬಲ್‌

35 “ಬೆನ್‌ಹಿನ್ನೊಮ್ ಕಣಿವೆಯಲ್ಲಿ ಅವರು ಸುಳ್ಳುದೇವರಾದ ಬಾಳನಿಗಾಗಿ ಎತ್ತರವಾದ ಸ್ಥಳಗಳನ್ನು ಕಟ್ಟಿದ್ದಾರೆ. ತಮ್ಮ ಮಕ್ಕಳನ್ನು ಆಹುತಿಕೊಡುವದಕ್ಕಾಗಿ ಈ ಪೂಜಾಸ್ಥಳಗಳನ್ನು ಕಟ್ಟಿಸಿದ್ದಾರೆ. ಇಂಥಾ ಭಯಂಕರವಾದ ಕೆಲಸವನ್ನು ಮಾಡಲು ನಾನು ಅವರಿಗೆ ಆಜ್ಞಾಪಿಸಿಲ್ಲ. ಯೆಹೂದದ ಜನರು ಇಂಥಾ ಭಯಂಕರವಾದ ಕಾರ್ಯವನ್ನು ಮಾಡುವರೆಂದು ನಾನೆಂದೂ ಊಹಿಸಿರಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

35 ತಮ್ಮ ಗಂಡು ಹೆಣ್ಣು ಮಕ್ಕಳನ್ನು ಮೋಲೆಕ್ ದೇವತೆಗಾಗಿ ಆಹುತಿ ಕೊಡುವುದಕ್ಕೆ ಬೆನ್ ಹಿನ್ನೋಮ್ ತಗ್ಗಿನಲ್ಲಿನ ಬಾಳನ ಪೂಜಾಸ್ಥಳಗಳನ್ನು ಕಟ್ಟಿ, ಯೆಹೂದವನ್ನು ಪಾಪಕ್ಕೆ ಸಿಕ್ಕಿಸಿದ್ದಾರೆ; ನಾನು ಇಂಥ ಅಸಹ್ಯಕಾರ್ಯವನ್ನು ವಿಧಿಸಲಿಲ್ಲ, ಅದರ ಸಂಕಲ್ಪವೂ ನನ್ನ ಮನಸ್ಸಿನಲ್ಲಿ ಹುಟ್ಟಲಿಲ್ಲ” ಎಂಬುದೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

35 ತಮ್ಮ ಗಂಡುಹೆಣ್ಣು ಮಕ್ಕಳನ್ನು ಮೋಲೆಕ್ ದೇವತೆಗೆ ಆಹುತಿಕೊಡುವುದಕ್ಕಾಗಿ ಬೆನ್‍ಹಿನ್ನೋಮ್ ಕಣಿವೆಯಲ್ಲಿ ಬಾಳ್‍ದೇವತೆಗೆ ಪೂಜಾಸ್ಥಳಗಳನ್ನು ಕಟ್ಟಿಸಿದ್ದಾರೆ. ಹೀಗೆ ಯೆಹೂದ ಕುಲವನ್ನೆ ಪಾಪಕ್ಕೆ ಸಿಕ್ಕಿಸಿದ್ದಾರೆ. ನಾನು ಇಂಥ ಅಸಹ್ಯ ಕಾರ್ಯವನ್ನು ವಿಧಿಸಲಿಲ್ಲ. ಅದರ ಯೋಚನೆಕೂಡ ನನ್ನ ಮನಸ್ಸಿನಲ್ಲಿ ಸುಳಿಯಲಿಲ್ಲ.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

35 ತಮ್ಮ ಗಂಡು ಹೆಣ್ಣುಮಕ್ಕಳನ್ನು ಮೋಲೆಕ್ ದೇವತೆಗಾಗಿ ಆಹುತಿಕೊಡುವದಕ್ಕೆ ಬೆನ್‍ಹಿನ್ನೋಮ್ ತಗ್ಗಿನಲ್ಲಿನ ಬಾಳನ ಪೂಜಾಸ್ಥಳಗಳನ್ನು ಕಟ್ಟಿ ಯೆಹೂದವನ್ನು ಪಾಪಕ್ಕೆ ಸಿಕ್ಕಿಸಿದ್ದಾರೆ; ನಾನು ಇಂಥ ಅಸಹ್ಯ ಕಾರ್ಯವನ್ನು ವಿಧಿಸಲಿಲ್ಲ, ಅದರ ಸಂಕಲ್ಪವೂ ನನ್ನ ಮನಸ್ಸಿನಲ್ಲಿ ಹುಟ್ಟಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

35 ತಮ್ಮ ಗಂಡು ಹೆಣ್ಣು ಮಕ್ಕಳನ್ನು ಮೋಲೆಕ್ ದೇವತೆಗೆ ಆಹುತಿ ಕೊಡುವುದಕ್ಕಾಗಿ ಬೆನ್ ಹಿನ್ನೋಮ್ ತಗ್ಗಿನಲ್ಲಿ ಬಾಳ್ ದೇವತೆಗೆ ಪೂಜಾಸ್ಥಳಗಳನ್ನು ಕಟ್ಟಿಸಿದ್ದಾರೆ. ಹೀಗೆ ಯೆಹೂದ ಕುಲವನ್ನೇ ಪಾಪಕ್ಕೆ ಸಿಕ್ಕಿಸಿದ್ದಾರೆ. ನಾನು ಇಂಥ ಅಸಹ್ಯ ಕಾರ್ಯವನ್ನು ವಿಧಿಸಲಿಲ್ಲ. ಅದರ ಯೋಚನೆ ಕೂಡ ನನ್ನ ಮನಸ್ಸಿನಲ್ಲಿ ಸುಳಿಯಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 32:35
33 ತಿಳಿವುಗಳ ಹೋಲಿಕೆ  

ಯೆಹೂದದ ಜನರು ಬೆನ್‌ಹಿನ್ನೊಮ್ ತಗ್ಗಿನಲ್ಲಿ ತೋಫೆತೆಂಬ ಪೂಜಾಸ್ಥಳವನ್ನು ಕಟ್ಟಿದ್ದಾರೆ. ಆ ಸ್ಥಳಗಳಲ್ಲಿ ಜನರು ತಮ್ಮ ಗಂಡು ಮತ್ತು ಹೆಣ್ಣುಮಕ್ಕಳನ್ನು ಕೊಂದು ಯಜ್ಞದ ಆಹುತಿಯೆಂದು ಅವರನ್ನು ಸುಡುತ್ತಾರೆ. ನೀವು ಹೀಗೆ ಮಾಡಬೇಕೆಂದು ನಾನೆಂದೂ ಹೇಳಿಲ್ಲ. ಇಂಥ ವಿಚಾರಗಳು ನನ್ನ ಮನಸ್ಸಿನಲ್ಲಿಯೂ ಬಂದಿಲ್ಲ.


“ನೀವು ನಿಮ್ಮ ಯಾವ ಮಕ್ಕಳನ್ನೂ ಅಗ್ನಿಯ ಮೂಲಕ ಮೊಲೆಕನಿಗೆ ಕೊಡಬಾರದು. ಇಲ್ಲವಾದರೆ ನೀವು ನಿಮ್ಮ ದೇವರ ಹೆಸರನ್ನು ಅಪಕೀರ್ತಿಗೆ ಗುರಿಮಾಡುವಿರಿ. ನಾನೇ ಯೆಹೋವನು!


ಬೆನ್‌ಹಿನ್ನೋಮ್ ಕಣಿವೆಯಲ್ಲಿ ಮನಸ್ಸೆಯು ತನ್ನ ಸ್ವಂತ ಮಕ್ಕಳನ್ನು ಅನ್ಯದೇವತೆಗಳಿಗೆ ಯಜ್ಞವಾಗಿ ಅರ್ಪಿಸಿದನು; ಮಾಟಮಂತ್ರಗಳನ್ನು ಮಾಡಿದನು; ಪಿಶಾಚಿಗಳೊಂದಿಗೂ ದುರಾತ್ಮಗಳೊಂದಿಗೂ ಸಂಪರ್ಕವನ್ನಿಟ್ಟುಕೊಂಡಿದ್ದನು. ಯೆಹೋವನು ಕೆಟ್ಟದ್ದು ಎಂದು ಹೇಳಿದ್ದನ್ನೆಲ್ಲಾ ಅವನು ಮಾಡಿದ್ದರಿಂದ ಆತನು ಅವನ ಮೇಲೆ ಬಹಳವಾಗಿ ಕೋಪಗೊಂಡನು.


ತೋಫೆತ್ ಎನ್ನುವುದು ಬೆನ್‌ಹಿನ್ನೋಮ್‌ನ ಮಗನಿಗೆ ಸೇರಿದ ಒಂದು ಕಣಿವೆ. ಅಲ್ಲಿ ಸುಳ್ಳುದೇವರಾದ ಮೋಲೆಕನ ಗೌರವಾರ್ಥವಾಗಿ ಜನರು ತಮ್ಮ ಮಕ್ಕಳನ್ನು ಆಹುತಿ ಕೊಡುತ್ತಿದ್ದರು ಮತ್ತು ಯಜ್ಞವೇದಿಕೆಯ ಮೇಲೆ ಸುಡುತ್ತಿದ್ದರು. ಯೋಷೀಯನು, ಜನರು ಮತ್ತೆ ಆ ಸ್ಥಳವನ್ನು ಉಪಯೋಗಿಸದಂತೆ ನಾಶಗೊಳಿಸಿದನು.


ಜಿಮ್ರಿಯು ತಾನು ಮಾಡಿದ ಪಾಪದ ಕಾರಣದಿಂದಲೇ ಸತ್ತುಹೋದನು. ಯೆಹೋವನು ತಪ್ಪೆಂದು ಹೇಳಿದ ಕಾರ್ಯಗಳನ್ನು ಜಿಮ್ರಿಯು ಮಾಡಿದನು. ಯಾರೊಬ್ಬಾಮನು ಪಾಪಮಾಡಿದಂತೆ ಅವನೂ ಪಾಪವನ್ನು ಮಾಡಿದನು. ಇಸ್ರೇಲಿನ ಜನರು ಪಾಪಮಾಡುವಂತೆ ಯಾರೊಬ್ಬಾಮನು ಪ್ರೇರೇಪಿಸಿದ್ದನು.


ಅವರು ವ್ಯಭಿಚಾರ ಮಾಡಿದ್ದಾರೆ. ಅವರು ಕೊಲೆ ಮಾಡಿರುತ್ತಾರೆ. ಅವರು ಸೂಳೆಯಂತೆ ವರ್ತಿಸಿದ್ದಾರೆ. ಅವರು ತಮ್ಮ ಹೊಲಸು ವಿಗ್ರಹಗಳೊಂದಿಗೆ ಇರಲು ನನ್ನನ್ನು ತೊರೆದುಬಿಟ್ಟಿದ್ದಾರೆ. ಅವರಲ್ಲಿ ನನ್ನ ಮಕ್ಕಳು ಇದ್ದಾರೆ. ಆದರೆ ಅವರನ್ನು ಬಲವಂತದಿಂದ ಬೆಂಕಿಯ ಮೇಲೆ ದಾಟಿಸಿದರು. ತಮ್ಮ ಹೊಲಸು ವಿಗ್ರಹಗಳಿಗೆ ಆಹಾರ ಕೊಡುವಂತೆ ಅವರು ಹಾಗೆ ಮಾಡಿದರು.


ನೀವು ಮಾಡಬೇಕೆನ್ನುವುದು, ಪ್ರತಿಯೊಂದು ಹಸಿರು ಮರದಡಿಯಲ್ಲಿ ಸುಳ್ಳುದೇವರ ಪೂಜೆ ಮಾಡುವದೊಂದನ್ನೇ, ಪ್ರತಿಯೊಂದು ನೀರಿನ ಬುಗ್ಗೆಗಳ ಬಳಿಯಲ್ಲಿ ನಿಮ್ಮ ಮಕ್ಕಳನ್ನು ಕೊಂದು ಬಂಡೆಕಲ್ಲಿನ ಮೇಲೆ ಅವರ ಯಜ್ಞಮಾಡುವಿರಿ.


ಮನಸ್ಸೆಯು ಯೆಹೂದದ ಜನರನ್ನೂ ಜೆರುಸಲೇಮಿನಲ್ಲಿದ್ದ ಜನರನ್ನೂ ಕೆಟ್ಟಕಾರ್ಯಗಳನ್ನು ಮಾಡಲು ಪ್ರೋತ್ಸಾಹಿಸಿದನು. ಇಸ್ರೇಲರು ಬರುವದಕ್ಕಿಂತ ಮೊದಲು ಆ ದೇಶದಲ್ಲಿದ್ದ ಜನರಿಗಿಂತಲೂ ಅತ್ಯಂತ ಕೆಟ್ಟವನಾಗಿ ವರ್ತಿಸಿದನು. ಆ ದೇಶದಲ್ಲಿದ್ದ ಜನರನ್ನು ಯೆಹೋವನು ನಾಶಮಾಡಿದ್ದನು.


ಯೋಷೀಯನು ಬೇತೇಲಿನ ಉನ್ನತಸ್ಥಳವನ್ನು ಮತ್ತು ಯಜ್ಞವೇದಿಕೆಯನ್ನು ಕೆಡವಿಬಿಟ್ಟನು. ನೆಬಾಟನ ಮಗನಾದ ಯಾರೊಬ್ಬಾಮನು ಈ ಯಜ್ಞವೇದಿಕೆಯನ್ನು ನಿರ್ಮಿಸಿದ್ದನು. ಇಸ್ರೇಲರು ಪಾಪಮಾಡುವಂತೆ ಯಾರೊಬ್ಬಾಮನು ಪ್ರೇರೇಪಿಸಿದ್ದನು. ಯೋಷೀಯನು ಯಜ್ಞವೇದಿಕೆಯನ್ನು ಮತ್ತು ಉನ್ನತಸ್ಥಳವನ್ನು ಕೆಡವಿಬಿಟ್ಟನು. ಯೋಷೀಯನು ಯಜ್ಞವೇದಿಕೆಯ ಕಲ್ಲುಗಳನ್ನು ಪುಡಿಪುಡಿಮಾಡಿ ಧೂಳಿನಲ್ಲಿ ಬೆರಸಿದನು. ಅವನು ಅಶೇರಸ್ತಂಭವನ್ನು ಸುಟ್ಟುಹಾಕಿದನು.


“ಯೆಹೂದದ ರಾಜನಾದ ಮನಸ್ಸೆಯು ತನಗಿಂತಲೂ ಮುಂಚೆ ಇದ್ದ ಅಮೋರಿಯರಿಗಿಂತ ಹೆಚ್ಚು ಅಸಹ್ಯವಾದ ಕೃತ್ಯಗಳನ್ನು ಮಾಡಿದನು. ಮನಸ್ಸೆಯು ತನ್ನ ವಿಗ್ರಹಗಳಿಂದ ಯೆಹೂದವನ್ನು ಪಾಪಕ್ಕೆ ಪ್ರೇರೇಪಿಸಿದನು.


ಆದರೆ ನೆಬಾಟನ ಮಗನಾದ ಯಾರೊಬ್ಬಾಮನು ಮಾಡಿದ ಪಾಪಗಳನ್ನೇ ಅವನು ಮುಂದುವರಿಸಿದನು. ಇಸ್ರೇಲರು ಪಾಪಗಳನ್ನು ಮಾಡುವಂತೆ ಯಾರೊಬ್ಬಾಮನು ಪ್ರೇರೇಪಿಸಿದ್ದನು. ಯೋರಾಮನು ಯಾರೊಬ್ಬಾಮನ ಪಾಪಗಳನ್ನು ನಿಲ್ಲಿಸಲಿಲ್ಲ.


ನೆಬಾಟನ ಮಗನಾದ, ರಾಜನಾದ ಯಾರೊಬ್ಬಾಮನ ಕುಟುಂಬಕ್ಕೆ ಆದ ಗತಿಯೇ ನಿನ್ನ ಕುಟುಂಬಕ್ಕೂ ಆಗುವುದು. ರಾಜನಾದ ಬಾಷನ ಕುಟುಂಬಕ್ಕೆ ಆದ ಗತಿಯೇ ನಿನ್ನ ಕುಟುಂಬಕ್ಕೂ ಆಗುವುದು. ಈ ಎರಡು ಕುಟುಂಬಗಳೂ ಸಂಪೂರ್ಣವಾಗಿ ನಾಶಗೊಂಡವು. ನೀನು ನನ್ನನ್ನು ಕೋಪಗೊಳಿಸಿದ್ದಕ್ಕಾಗಿ ನಾನು ನಿನಗೆ ಹೀಗೆ ಮಾಡುತ್ತೇನೆ. ಇಸ್ರೇಲಿನ ಜನರು ಪಾಪಮಾಡುವುದಕ್ಕೆ ನೀನು ಕಾರಣನಾದೆ’ ಎನ್ನುತ್ತಾನೆ.


ರಾಜನಾದ ಯಾರೊಬ್ಬಾಮನು ಅನೇಕ ಪಾಪಗಳನ್ನು ಮಾಡಿದ್ದರಿಂದ ಇದು ಸಂಭವಿಸಿತು. ಇಸ್ರೇಲಿನ ಜನರು ಅನೇಕ ಪಾಪಗಳನ್ನು ಮಾಡುವಂತೆ ಯಾರೊಬ್ಬಾಮನು ಪ್ರೇರೇಪಿಸಿದ್ದನು. ಇಸ್ರೇಲಿನ ದೇವರಾದ ಯೆಹೋವನು ಹೆಚ್ಚು ಕೋಪಗೊಳ್ಳುವಂತೆ ಯಾರೊಬ್ಬಾಮನು ಮಾಡಿದ್ದನು.


ನಾದಾಬನು ಯೆಹೋವನ ವಿರುದ್ಧ ಕೆಟ್ಟಕಾರ್ಯಗಳನ್ನು ಮಾಡಿದನು. ತನ್ನ ತಂದೆಯಾದ ಯಾರೊಬ್ಬಾಮನು ಮಾಡಿದ ಪಾಪಗಳನ್ನೇ ಅವನೂ ಮಾಡಿದನು. ಇಸ್ರೇಲಿನ ಜನರು ಪಾಪಮಾಡುವಂತೆ ಯಾರೊಬ್ಬಾಮನು ಪ್ರೇರೇಪಿಸಿದ್ದನು.


ಯಾರೊಬ್ಬಾಮನು ಪಾಪವನ್ನು ಮಾಡಿದನು. ನಂತರ ಇಸ್ರೇಲಿನ ಜನರೂ ಪಾಪ ಮಾಡುವಂತೆ ಯಾರೊಬ್ಬಾಮನು ಪ್ರೇರೇಪಿಸಿದನು. ಆದ್ದರಿಂದ ಇಸ್ರೇಲಿನ ಜನರು ಸೋಲಿಸಲ್ಪಡುವಂತೆ ಯೆಹೋವನು ಅವಕಾಶ ಮಾಡುತ್ತಾನೆ” ಎಂದು ಹೇಳಿದನು.


ಸೊಲೊಮೋನನು ನನ್ನನ್ನು ಅನುಸರಿಸುವುದನ್ನು ನಿಲ್ಲಿಸಿದ ಕಾರಣ ನಾನು ಅವನ ರಾಜ್ಯವನ್ನು ಅವನಿಂದ ತೆಗೆದುಕೊಳ್ಳುವೆನು. ಅವನು ಚೀದೋನ್ಯರ ದೇವತೆಯಾದ ಅಷ್ಟೋರೆತಳನ್ನೂ ಮೋವಾಬ್ಯರ ದೇವರಾದ ಕೆಮೋಷನನ್ನೂ ಅಮ್ಮೋನಿಯರ ದೇವರಾದ ಮಿಲ್ಕೋಮನನ್ನೂ ಪೂಜಿಸಿದನು. ಸೊಲೊಮೋನನು ತಾನು ಮಾಡುತ್ತಿದ್ದ ಸರಿಯಾದ ಮತ್ತು ಉತ್ತಮವಾದ ಕಾರ್ಯಗಳನ್ನು ನಿಲ್ಲಿಸಿದನು. ಅವನು ನನ್ನ ಕಟ್ಟಳೆಗಳನ್ನು ಮತ್ತು ಆಜ್ಞೆಗಳನ್ನು ಅನುಸರಿಸಲಿಲ್ಲ. ತನ್ನ ತಂದೆಯಾದ ದಾವೀದನು ಜೀವಿಸಿದಂತೆ ಅವನು ಜೀವಿಸುತ್ತಿಲ್ಲ.


ನಿಮ್ಮ ಗಂಡುಮಕ್ಕಳನ್ನಾಗಲಿ ಹೆಣ್ಣುಮಕ್ಕಳನ್ನಾಗಲಿ ನಿಮ್ಮ ಯಜ್ಞವೇದಿಕೆಯ ಬೆಂಕಿಯ ಮೇಲೆ ಬಲಿಯನ್ನಾಗಿ ಅರ್ಪಿಸಬೇಡಿ. ನಿಮ್ಮ ಭವಿಷ್ಯವನ್ನು ತಿಳಿದುಕೊಳ್ಳುವುದಕ್ಕಾಗಿ ಕಣಿಹೇಳುವವರ ಬಳಿಗಾಗಲಿ, ಮಂತ್ರಗಾರರ ಬಳಿಗಾಗಲಿ ಬೇತಾಳಿಕರ ಬಳಿಗಾಗಲಿ, ಮಾಟಗಾರರ ಬಳಿಗಾಗಲಿ ಹೋಗಬೇಡಿ.


ಮೋಶೆಯು ಆರೋನನಿಗೆ, “ಈ ಜನರು ನಿನಗೇನು ಮಾಡಿದರು? ಇಂಥಾ ಕೆಟ್ಟ ಪಾಪವನ್ನು ಮಾಡುವಂತೆ ಯಾಕೆ ಅವರನ್ನು ನಡಿಸಿದೆ?” ಎಂದು ಹೇಳಿದನು.


ನೀವು ನಿಮ್ಮೊಂದಿಗೆ ಮೊಲೋಖನ (ಸುಳ್ಳುದೇವರ) ಗುಡಾರವನ್ನು ಮತ್ತು ನಿಮ್ಮ ರೇಫಾ ದೇವತೆಯ ನಕ್ಷತ್ರರೂಪವನ್ನು ಹೊತ್ತುಕೊಂಡು ಹೋದಿರಿ. ಆರಾಧಿಸುವುದಕ್ಕಾಗಿ ನೀವು ಮಾಡಿಕೊಂಡ ವಿಗ್ರಹಗಳೇ ಇವು. ಆದ್ದರಿಂದ ನಾನು ನಿಮ್ಮನ್ನು ಬಾಬಿಲೋನಿನ ಆಚೆಗೆ ಕಳುಹಿಸಿಬಿಡುವೆನು.’


ನಿಮ್ಮ ದೇವರಾದ ಯೆಹೋವನಿಗೆ ನೀವು ಆ ರೀತಿ ಮಾಡಬಾರದು. ಆ ರೀತಿಯಾಗಿ ಆತನನ್ನು ಆರಾಧಿಸಬಾರದು. ಯಾಕೆಂದರೆ ಅವರು ತಮ್ಮ ದೇವರೆದುರಿನಲ್ಲಿ ಅಸಹ್ಯವಾದ ಕಾರ್ಯಗಳನ್ನು ಮಾಡುತ್ತಾರೆ. ಅದನ್ನು ನಮ್ಮ ದೇವರಾದ ಯೆಹೋವನು ದ್ವೇಷಿಸುತ್ತಾನೆ. ಅವರು ತಮ್ಮ ಮಕ್ಕಳನ್ನೇ ದೇವರಿಗೆ ಬಲಿ ಅರ್ಪಿಸುತ್ತಾರೆ.


ಸೊಲೊಮೋನನು ಕೆಮೋಷನನ್ನು ಆರಾಧಿಸಲು ಒಂದು ಸ್ಥಳವನ್ನು ನಿರ್ಮಿಸಿದನು. ಮೋವಾಬ್ಯರ ಭಯಂಕರ ವಿಗ್ರಹವೇ ಕೆಮೋಷ್. ಜೆರುಸಲೇಮಿನ ಪಕ್ಕದಲ್ಲಿದ್ದ ಬೆಟ್ಟದ ಮೇಲೆ ಸೊಲೊಮೋನನು ಆರಾಧನೆಯ ಸ್ಥಳವನ್ನು ನಿರ್ಮಿಸಿದನು. ಆ ಬೆಟ್ಟದ ಮೇಲೆಯೇ ಸೊಲೊಮೋನನು ಮೋಲೆಕ್ ದೇವತೆಯ ಪೂಜಾಸ್ಥಳವನ್ನು ನಿರ್ಮಿಸಿದನು. ಅಮ್ಮೋನಿಯರ ಭಯಂಕರ ವಿಗ್ರಹವೇ ಮೋಲೆಕ್.


ನೀನು ಹಾಗೆ ಮಾಡಲೇಬೇಕು ಯಾಕೆಂದರೆ, ಯೆಹೂದದ ಜನರು ಮಾಡುವ ದುಷ್ಕೃತ್ಯಗಳನ್ನು ನಾನು ನೋಡಿದ್ದೇನೆ.” ಯೆಹೋವನು ಹೀಗೆನ್ನುತ್ತಾನೆ: “ಅವರು ತಮ್ಮ ವಿಗ್ರಹಗಳನ್ನು ಸ್ಥಾಪಿಸಿದ್ದಾರೆ. ನಾನು ಆ ವಿಗ್ರಹಗಳನ್ನು ದ್ವೇಷಿಸುತ್ತೇನೆ. ನನ್ನ ಹೆಸರಿನಿಂದ ಖ್ಯಾತಿಪಡೆದ ಆಲಯದಲ್ಲಿ ಅವರು ವಿಗ್ರಹಗಳನ್ನು ಸ್ಥಾಪಿಸಿದ್ದಾರೆ. ಅವರು ನನ್ನ ಆಲಯವನ್ನು ‘ಮಲಿನ’ಗೊಳಿಸಿದ್ದಾರೆ.


ಬೋಕಿಯ ದ್ವಾರದ ಸಮೀಪದಲ್ಲಿರುವ ಬೆನ್‌ಹಿನ್ನೊಮ್ ತಗ್ಗಿಗೆ ಹೋಗು. ನಿನ್ನ ಸಂಗಡ ಜನರ ಹಿರಿಯರಲ್ಲಿ ಕೆಲವರನ್ನೂ ಯಾಜಕರ ಹಿರಿಯರಲ್ಲಿ ಕೆಲವರನ್ನೂ ಕರೆದುಕೊಂಡು ಹೋಗು. ನಾನು ನಿನಗೆ ಹೇಳುವುದನ್ನು ನೀನು ಅಲ್ಲಿ ಅವರಿಗೆ ಹೇಳು.


ನಾನು ಮತ್ತೆಮತ್ತೆ ನನ್ನ ಪ್ರವಾದಿಗಳನ್ನು ಆ ಜನರಲ್ಲಿಗೆ ಕಳಿಸಿಕೊಟ್ಟೆ. ಆ ಪ್ರವಾದಿಗಳು ನನ್ನ ಸೇವಕರಾಗಿದ್ದರು. ಆ ಪ್ರವಾದಿಗಳು ನನ್ನ ಸಂದೇಶವನ್ನು ಜನರಿಗೆ ತಿಳಿಸಿ ‘ಈ ದುಷ್ಕೃತ್ಯವನ್ನು ಮಾಡಬೇಡಿರಿ, ನೀವು ಈ ವಿಗ್ರಹಗಳ ಪೂಜೆಮಾಡುವದನ್ನು ನಾನು ದ್ವೇಷಿಸುತ್ತೇನೆ’ ಎಂದು ಹೇಳಿದರು.


ಮನಸ್ಸೆಯು ಸುಳ್ಳುದೇವತೆಗಳನ್ನು ಗೌರವಿಸಲು ದೇವಾಲಯದಲ್ಲಿ ಯಜ್ಞವೇದಿಕೆಗಳನ್ನು ನಿರ್ಮಿಸಿದನು. (“ನಾನು ನನ್ನ ಹೆಸರನ್ನು ಜೆರುಸಲೇಮಿನಲ್ಲಿ ಸ್ಥಾಪಿಸುತ್ತೇನೆ” ಎಂದು ಯೆಹೋವನು ಮಾತನಾಡುವಾಗ ಹೇಳುತ್ತಿದ್ದ ಸ್ಥಳವು ಇದೇ ಆಗಿತ್ತು.)


ಅವನು ಮಾತ್ರವಲ್ಲದೆ ಎಲ್ಲಾ ಯಾಜಕರು, ಯೆಹೂದದ ಜನನಾಯಕರು ಬಹಳ ಪಾಪಗಳನ್ನು ಮಾಡಿ ಯೆಹೋವನ ದೃಷ್ಟಿಯಲ್ಲಿ ಕೆಟ್ಟುಹೋಗಿದ್ದರು. ಅವರು ಬೇರೆ ದೇಶಗಳ ನಡವಳಿಕೆಯನ್ನು ಅನುಸರಿಸಿದರು. ಆ ನಾಯಕರುಗಳು ದೇವಾಲಯವನ್ನು ಹಾಳುಮಾಡಿದರು. ಜೆರುಸಲೇಮಿನಲ್ಲಿದ್ದ ಆ ಆಲಯವನ್ನು ಯೆಹೋವನು ತನಗಾಗಿ ಪ್ರತಿಷ್ಠಿಸಿಕೊಂಡಿದ್ದನು.


ನೀವು ಅನೇಕ ಜನಾಂಗಗಳೊಡನೆ ಸ್ನೇಹ ಮಾಡಿದಿರಿ. ಆದರೆ ಆ ಜನಾಂಗಗಳು ನಿಮ್ಮ ಕಡೆಗೆ ಗಮನಕೊಡುವದಿಲ್ಲ. ನಿಮ್ಮ ‘ಸ್ನೇಹಿತರು’ ನಿಮ್ಮನ್ನು ಮರೆತಿದ್ದಾರೆ. ನಾನು ಶತ್ರುವಿನಂತೆ ನಿಮ್ಮನ್ನು ನೋಯಿಸಿದೆ. ನಾನು ನಿಮಗೆ ಬಹಳ ಕಠಿಣವಾದ ಶಿಕ್ಷೆಯನ್ನು ಕೊಟ್ಟೆ. ನಿಮ್ಮ ಮಹಾಪರಾಧಗಳಿಗಾಗಿ ನಾನು ಹೀಗೆ ಮಾಡಿದೆ. ನಿಮ್ಮ ಅನೇಕ ಪಾಪಗಳಿಗಾಗಿ ನಾನು ಹೀಗೆ ಮಾಡಿದೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು