Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 32:7 - ಪರಿಶುದ್ದ ಬೈಬಲ್‌

7 ಯೆರೆಮೀಯನೇ, ನಿನ್ನ ಚಿಕ್ಕಪ್ಪನಾದ ಶಲ್ಲೂಮನ ಮಗನಾಗಿರುವ ಹನಮೇಲನು ಶೀಘ್ರದಲ್ಲಿ ನಿನ್ನ ಬಳಿಗೆ ಬಂದು, ‘ಯೆರೆಮೀಯನೇ, ಅನಾತೋತ್ ಪಟ್ಟಣದ ಬಳಿಯಲ್ಲಿರುವ ನನ್ನ ಹೊಲವನ್ನು ಕೊಂಡುಕೊ. ನೀನು ನನ್ನ ಅತಿ ಸಮೀಪದ ಬಂಧುವಾದುದರಿಂದ ಅದನ್ನು ಕೊಂಡುಕೊ. ಆ ಹೊಲವನ್ನು ಕೊಂಡುಕೊಳ್ಳಲು ನಿನಗೆ ಅಧಿಕಾರವಿದೆ ಮತ್ತು ಅದು ನಿನ್ನ ಹೊಣೆಗಾರಿಕೆಯೂ ಹೌದು’ ಎಂದು ಹೇಳುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ಇಗೋ, ನಿನ್ನ ಚಿಕ್ಕಪ್ಪನಾದ ಶಲ್ಲೂಮನ ಮಗನಾಗಿರುವ ಹನಮೇಲನು ನಿನ್ನ ಬಳಿಗೆ ಬಂದು ‘ಅನಾತೋತಿನಲ್ಲಿರುವ ನನ್ನ ಹೊಲವನ್ನು ಕೊಂಡುಕೋ; ಪರಾಧೀನವಾಗದಂತೆ ಅದನ್ನು ಕೊಂಡುಕೊಳ್ಳುವ ಹಕ್ಕು ನಿನ್ನದೇ ಎಂದು ಹೇಳುವನು’” ಎಂದು ತಿಳಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

7 “ಇಗೋ, ನಿನ್ನ ಚಿಕ್ಕಪ್ಪನಾದ ಶಲ್ಲೂಮನು ನಿನ್ನ ಬಳಿಗೆ ಬಂದು - ‘ಅನಾತೋತಿನಲ್ಲಿರುವ ನನ್ನ ಹೊಲವನ್ನು ಕೊಂಡುಕೊ. ಪರರ ಪಾಲಾಗದಂತೆ ಅದನ್ನು ಕೊಂಡುಕೊಳ್ಳುವ ಹಕ್ಕು ನಿನಗಿದೆ,’ - ಎಂದು ಹೇಳುವನು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

7 ಇಗೋ, ನಿನ್ನ ಚಿಕ್ಕಪ್ಪನಾದ ಶಲ್ಲೂಮನ ಮಗನಾಗಿರುವ ಹನಮೇಲನು ನಿನ್ನ ಬಳಿಗೆ ಬಂದು - ಅನಾತೋತಿನಲ್ಲಿರುವ ನನ್ನ ಹೊಲವನ್ನು ಕೊಂಡುಕೋ; ಪರಾಧೀನವಾಗದಂತೆ ಅದನ್ನು ಕೊಂಡುಕೊಳ್ಳುವ ಹಕ್ಕು ನಿನ್ನದೇ ಎಂದು ಹೇಳುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

7 ಇಗೋ, ನಿನ್ನ ಚಿಕ್ಕಪ್ಪನಾದ ಶಲ್ಲೂಮನ ಮಗನಾದ ಹನಮೇಲನು ನಿನ್ನ ಬಳಿಗೆ ಬಂದು, ‘ಅನಾತೋತಿನಲ್ಲಿರುವ ನನ್ನ ಹೊಲವನ್ನು ನಿನಗೋಸ್ಕರ ಕೊಂಡುಕೋ. ಏಕೆಂದರೆ ಅದನ್ನು ಕೊಂಡುಕೊಳ್ಳುವ ಹಾಗೆ ವಿಮೋಚಿಸುವ ಅಧಿಕಾರ ನಿನಗುಂಟು,’ ಎಂದು ಹೇಳುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 32:7
15 ತಿಳಿವುಗಳ ಹೋಲಿಕೆ  

ಇವು ಯೆರೆಮೀಯನ ಸಂದೇಶಗಳು. ಯೆರೆಮೀಯನು ಹಿಲ್ಕೀಯನೆಂಬುವನ ಮಗನು. ಯೆರೆಮೀಯನು ಅನಾತೋತ್ ನಗರದ ಯಾಜಕ ಕುಟುಂಬಕ್ಕೆ ಸೇರಿದವನಾಗಿದ್ದನು. ಆ ನಗರವು ಬೆನ್ಯಾಮೀನ್ಯರ ಪ್ರದೇಶದಲ್ಲಿತ್ತು.


ಅನಾತೋತಿನ ಜನರು ಯೆರೆಮೀಯನನ್ನು ಕೊಲೆ ಮಾಡಬೇಕೆಂದು ಯೋಚಿಸುತ್ತಿದ್ದರು. ಆ ಜನರು ಯೆರೆಮೀಯನಿಗೆ, “ಯೆಹೋವನ ಹೆಸರಿನಿಂದ ನೀನು ಪ್ರವಾದಿಸಬೇಡ, ನೀನು ಹಾಗೆ ಮಾಡಿದರೆ ನಾವು ನಿನ್ನ ಕೊಲೆ ಮಾಡುವೆವು” ಎಂದರು. ಅನಾತೋತಿನ ಆ ಜನರ ಬಗ್ಗೆ ಯೆಹೋವನು ಒಂದು ನಿರ್ಣಯವನ್ನು ತೆಗೆದುಕೊಂಡನು.


ನಿಮ್ಮ ದೇಶದಲ್ಲಿ ಒಬ್ಬನು ತನ್ನ ಆಸ್ತಿಯನ್ನು ಮಾರುವಷ್ಟು ಬಡವನಾದರೆ ಅವನ ಹತ್ತಿರದ ಸಂಬಂಧಿಯು ತನ್ನ ಸಂಬಂಧಿಯ ಆಸ್ತಿಯನ್ನು ಮರಳಿ ಕೊಂಡುಕೊಳ್ಳಬೇಕು.


ಆದರೆ ಯೆಹೋವನು ಅವನಿಗೆ, “ಯಾರೊಬ್ಬಾಮನ ಪತ್ನಿಯು ಅಸ್ವಸ್ಥನಾಗಿರುವ ತನ್ನ ಮಗನ ಬಗ್ಗೆ ಕೇಳಲು ನಿನ್ನ ಬಳಿಗೆ ಬರುತ್ತಿದ್ದಾಳೆ” ಎಂದು ಹೇಳಿದ್ದನು. ಅಹೀಯನು ಏನು ಹೇಳಬೇಕೆಂಬುದನ್ನು ಯೆಹೋವನು ಅವನಿಗೆ ತಿಳಿಸಿದ್ದನು. ಯಾರೊಬ್ಬಾಮನ ಪತ್ನಿಯು ಅಹೀಯನ ಮನೆಗೆ ಬಂದಳು. ತಾನಾರೆಂಬುದು ಜನರಿಗೆ ತಿಳಿಯಬಾರದೆಂದು ಅವಳು ಪ್ರಯತ್ನಿಸುತ್ತಿದ್ದಳು.


“ಇಸ್ರೇಲರು ತಾವು ಹೊಂದುವ ಸ್ವಾಸ್ತ್ಯದಲ್ಲಿ ಕೆಲವು ಊರುಗಳನ್ನೂ ಆ ಊರುಗಳ ಸುತ್ತಲಿರುವ ಭೂಮಿಯನ್ನೂ ಲೇವಿಯರಿಗೆ ಕೊಡಬೇಕೆಂದು ಆಜ್ಞಾಪಿಸು.


ಅವನ ದೊಡ್ಡಪ್ಪನಾಗಲಿ ಚಿಕ್ಕಪ್ಪನಾಗಲಿ ಅವರ ಮಕ್ಕಳಾಗಲಿ ಅವನನ್ನು ಮರಳಿ ಕೊಂಡುಕೊಳ್ಳಬಹುದು. ಅವನ ಹತ್ತಿರದ ಸಂಬಂಧಿಯು ಅವನನ್ನು ಕೊಂಡುಕೊಳ್ಳಬಹುದು. ಅವನಿಗೆ ಸಾಕಷ್ಟು ಹಣ ದೊರಕಿದರೆ, ಅವನು ತಾನೇ ಹಣ ಕೊಟ್ಟು ಮತ್ತೆ ಸ್ವತಂತ್ರನಾಗಬಹುದು.


ಅಲ್ಲದೆ ಲೇವಿಯರ ಪಟ್ಟಣಗಳ ಸುತ್ತಲಿರುವ ಹೊಲಗಳನ್ನು ಮತ್ತು ಹುಲ್ಲುಗಾವಲುಗಳನ್ನು ಮಾರಬಾರದು. ಆ ಹೊಲಗಳು ಎಂದೆಂದಿಗೂ ಲೇವಿಯರಿಗೆ ಸೇರಿವೆ.


“ಭೂಮಿಯು ನನಗೆ ಸೇರಿದ್ದು. ಆದ್ದರಿಂದ ನೀವು ನಿಜವಾಗಿಯೂ ಅದನ್ನು ಶಾಶ್ವತವಾಗಿ ಮಾರುವುದಕ್ಕಾಗುವುದಿಲ್ಲ. ನೀವು ಕೇವಲ ನನ್ನ ಆಶ್ರಯದಲ್ಲಿ ವಾಸಿಸುತ್ತಿರುವ ಪರದೇಶಸ್ಥರೂ ಪ್ರವಾಸಿಗಳೂ ಆಗಿದ್ದೀರಿ.


ಸೆರೆಯಲ್ಲಿದ್ದಾಗ ಯೆರೆಮೀಯನು ಹೇಳಿದನು, “ನನಗೆ ಯೆಹೋವನಿಂದ ಒಂದು ಸಂದೇಶ ಬಂದಿದೆ. ಅದು ಹೀಗಿದೆ:


“ಆಮೇಲೆ ಯೆಹೋವನು ಹೇಳಿದಂತೆಯೇ ಆಯಿತು. ನನ್ನ ಚಿಕ್ಕಪ್ಪನ ಮಗನಾದ ಹನಮೇಲನು ಕಾರಾಗೃಹದ ಅಂಗಳದಲ್ಲಿದ್ದ ನನ್ನ ಬಳಿಗೆ ಬಂದು ಹೀಗೆ ಹೇಳಿದನು: ‘ಯೆರೆಮೀಯನೇ, ಬೆನ್ಯಾಮೀನ್ ಸೀಮೆಯ ಅನಾತೋತಿನಲ್ಲಿರುವ ನನ್ನ ಹೊಲವನ್ನು ಕೊಂಡುಕೊ. ಆ ಹೊಲವನ್ನು ನಿನಗಾಗಿ ಕೊಂಡುಕೊ. ಅದರ ಒಡೆಯನಾಗುವದಕ್ಕೆ ನಿನಗೆ ಹಕ್ಕಿದೆ.’” ಇದು ಯೆಹೋವನ ಸಂದೇಶವೆಂದು ನನಗೆ ತಿಳಿಯಿತು.


ಜನರು ತಮ್ಮ ಭೂಮಿಯನ್ನು ಮಾರಿದರೆ ಅದನ್ನು ಬಿಡಿಸಿಕೊಳ್ಳುವ ಹಕ್ಕು ಅವರ ಕುಟುಂಬಕ್ಕಿದೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು