Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 33:5 - ಪರಿಶುದ್ದ ಬೈಬಲ್‌

5 “‘ಜೆರುಸಲೇಮಿನ ಜನರು ಅನೇಕ ದುಷ್ಕೃತ್ಯಗಳನ್ನು ಮಾಡಿದ್ದಾರೆ. ನಾನು ಅವರ ಮೇಲೆ ಕೋಪಗೊಂಡಿದ್ದೇನೆ; ಅವರಿಗೆ ವಿರುದ್ಧವಾಗಿದ್ದೇನೆ. ನಾನು ಅಲ್ಲಿ ಬಹಳ ಜನರನ್ನು ಕೊಂದುಹಾಕುವೆನು. ಬಾಬಿಲೋನಿನ ಸೈನ್ಯವು ಜೆರುಸಲೇಮಿನ ವಿರುದ್ಧ ಹೋರಾಡಲು ಬರುವುದು. ಜೆರುಸಲೇಮಿನ ಮನೆಗಳಲ್ಲಿ ಅನೇಕಾನೇಕ ಮೃತದೇಹಗಳು ಕಣ್ಣಿಗೆ ಬೀಳುವವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ಈ ಊರಿನವರು ಕಸ್ದೀಯರನ್ನು ಪ್ರತಿಭಟಿಸುವುದಕ್ಕೆ ಹೊರಟರೆ ಏನು? ತಮ್ಮ ಹೆಣಗಳಿಂದ ಅವರನ್ನು ತೃಪ್ತಿಪಡಿಸುವರು; ಇವರ ಅಧರ್ಮವನ್ನು ಕಂಡು ಈ ಪಟ್ಟಣಕ್ಕೆ ವಿಮುಖನಾಗಿ ಕೋಪ ರೋಷಭರಿತನಾದ ನಾನೇ ಇವರನ್ನು ಹತಿಸುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

5 ಈ ಊರಿನವರು ಬಾಬಿಲೋನಿಯರ ವಿರುದ್ಧ ಕದನಕ್ಕೆ ಹೊರಟರೆ ಏನು ಪ್ರಯೋಜನ? ತಮ್ಮ ಹೆಣಗಳಿಂದ ಅವರನ್ನು ತೃಪ್ತಿಪಡಿಸುವರಷ್ಟೆ. ಇವರ ಅಧರ್ಮದ ನಿಮಿತ್ತ ಈ ನಗರಕ್ಕೆ ವಿಮುಖವಾಗಿ, ಕಡುಕೋಪಾವೇಶನಾಗಿ ನಾನೇ ಇವರನ್ನು ಸದೆಬಡಿಯುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

5 ಈ ಊರಿನವರು ಕಸ್ದೀಯರನ್ನು ಪ್ರತಿಭಟಿಸುವದಕ್ಕೆ ಹೊರಟರೆ ಏನು? ತಮ್ಮ ಹೆಣಗಳಿಂದ ಅವರನ್ನು ತೃಪ್ತಿಪಡಿಸುವರು; ಇವರ ಅಧರ್ಮವನ್ನು ಕಂಡು ಈ ಪಟ್ಟಣಕ್ಕೆ ವಿಮುಖನಾಗಿ ಕೋಪರೋಷಭರಿತನಾದ ನಾನೇ ಇವರನ್ನು ಹತಿಸುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

5 ಅವರು ಕಸ್ದೀಯರ ಸಂಗಡ ಯುದ್ಧ ಮಾಡುವುದಕ್ಕೂ ನಾನು ನನ್ನ ಕೋಪದಲ್ಲಿಯೂ, ‘ನನ್ನ ಉರಿಯಲ್ಲಿಯೂ ಕೊಂದುಹಾಕಿದ ಮನುಷ್ಯರ ಹೆಣಗಳಿಂದ ಅವುಗಳನ್ನು ತುಂಬಿಸುವುದಕ್ಕೂ ಬರುತ್ತಾರೆ. ಏಕೆಂದರೆ ನಾನು ಈ ಪಟ್ಟಣಕ್ಕೆ ವಿರೋಧವಾಗಿ ಅವರ ಸಮಸ್ತ ದುಷ್ಟತನದ ನಿಮಿತ್ತ ನನ್ನ ಮುಖವನ್ನು ಮರೆಮಾಡಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 33:5
16 ತಿಳಿವುಗಳ ಹೋಲಿಕೆ  

ಆ ಒಡಂಬಡಿಕೆಯು ಹೀಗಿತ್ತು: ನನ್ನ ದೇವರಾದ ಯೆಹೋವನ ಸಹಾಯಕ್ಕಾಗಿ ನಾನು ಕಾಯುತ್ತಿರುವೆನು. ಯಾಕೋಬನ ಕುಟುಂಬದ ಬಗ್ಗೆ ಯೆಹೋವನು ನಾಚಿಕೊಂಡಿದ್ದಾನೆ. ಅವರ ಕಡೆ ನೋಡಲು ಆತನು ನಿರಾಕರಿಸುತ್ತಾನೆ. ಆದರೆ ನಾನು ಯೆಹೋವನನ್ನು ನಿರೀಕ್ಷಿಸುವೆನು. ಆತನು ನನ್ನನ್ನು ರಕ್ಷಿಸುವನು.


ಬಾಬಿಲೋನಿನ ರಾಜನು ಚಿದ್ಕೀಯನನ್ನು ಬಾಬಿಲೋನಿಗೆ ತೆಗೆದುಕೊಂಡು ಹೋಗುವನು. ನಾನು ಅವನನ್ನು ದಂಡಿಸುವವರೆಗೆ ಚಿದ್ಕೀಯನು ಅಲ್ಲಿರುವನು. ನೀವು ಕಸ್ದೀಯರೊಡನೆ ಯುದ್ಧ ಮಾಡಿದರೂ ನಿಮಗೆ ಜಯವಾಗದು.’” ಇದು ಯೆಹೋವನ ನುಡಿ.


ಜೆರುಸಲೇಮ್ ನಗರಕ್ಕೆ ತೊಂದರೆಯನ್ನು ಉಂಟುಮಾಡಬೇಕೆಂದು ನಾನು ನಿಶ್ಚಯಿಸಿದ್ದೇನೆ. ನಾನು ಈ ನಗರಕ್ಕೆ ಸಹಾಯಮಾಡುವದಿಲ್ಲ.’” ಇದು ಯೆಹೋವನಿಂದ ಬಂದ ಸಂದೇಶ. “‘ಜೆರುಸಲೇಮ್ ನಗರವನ್ನು ನಾನು ಬಾಬಿಲೋನಿನ ರಾಜನಿಗೆ ಒಪ್ಪಿಸುತ್ತೇನೆ. ಅವನು ಅದನ್ನು ಬೆಂಕಿಯಿಂದ ಸುಟ್ಟುಹಾಕುತ್ತಾನೆ.’”


ನೀವು ಯೆಹೋವನಿಗೆ ಪ್ರಾರ್ಥಿಸಬಹುದು. ಆದರೆ ಆತನು ನಿಮಗೆ ಉತ್ತರಕೊಡುವದಿಲ್ಲ. ನಿಮ್ಮ ಕೆಟ್ಟ ಪಾಪಗಳ ನಿಮಿತ್ತ ತನ್ನ ಮುಖವನ್ನು ಮರೆಮಾಡಿಕೊಳ್ಳುತ್ತಾನೆ.”


ನಿನ್ನ ಹೆಸರನ್ನು ಯಾರೂ ಕರೆಯುವದಿಲ್ಲ. ನಿನ್ನನ್ನು ಹಿಂಬಾಲಿಸಲು ಯಾರಿಗೂ ಇಷ್ಟವಿಲ್ಲ; ಯಾಕೆಂದರೆ ನೀನು ನಮಗೆ ವಿಮುಖನಾಗಿರುವೆ ಮತ್ತು ನಮ್ಮನ್ನು ನಮ್ಮ ಪಾಪಗಳ ದೋಷಕ್ಕೆ ಒಪ್ಪಿಸಿಕೊಟ್ಟಿರುವಿ.


ಆಗ ನಾನು ಅವರ ಮೇಲೆ ತುಂಬಾ ಕೋಪವುಳ್ಳವನಾಗಿರುವೆನು. ಅವರಿಗೆ ಸಹಾಯ ಮಾಡದೆ ಅವರನ್ನು ಬಿಟ್ಟುಬಿಡುವೆನು; ಅವರು ನಾಶವಾಗುವರು; ಅವರಿಗೆ ಭಯಂಕರ ಸಂಗತಿಗಳು ಸಂಭವಿಸುವವು; ಅನೇಕ ಕೇಡುಗಳಾಗುವುವು; ಆಗ, ‘ನಮ್ಮ ದೇವರು ನಮ್ಮ ಮಧ್ಯದಲ್ಲಿ ಇಲ್ಲದಿರುವ ಕಾರಣ ಇವೆಲ್ಲಾ ನಮಗೆ ಸಂಭವಿಸುತ್ತವೆ’ ಎಂದು ಅವರು ಹೇಳುವರು.


ನಾನು ಇಸ್ರೇಲ್ ಜನಾಂಗದವರ ಮೇಲೆ ನನ್ನ ಆತ್ಮವನ್ನು ಸುರಿಸುವೆನು. ಅನಂತರ ನಾನು ಎಂದಿಗೂ ಅವರಿಗೆ ವಿಮುಖನಾಗಿರುವದಿಲ್ಲ.” ಇದು ನನ್ನ ಒಡೆಯನಾದ ಯೆಹೋವನ ನುಡಿ.


ಪೂರ್ವದಿಂದ ಬರುವ ಗಾಳಿಯಂತೆ ಯೆಹೂದದ ಜನರನ್ನು ಅವರ ವೈರಿಗಳ ಎದುರಿನಲ್ಲಿ ಚದರಿಸಿಬಿಡುವೆನು. ನಾನು ಅವರನ್ನು ನಾಶಮಾಡುವೆನು. ಆ ಸಮಯದಲ್ಲಿ ಅವರಿಗೆ ಸಹಾಯಮಾಡಲು ನಾನು ಬರುವದಿಲ್ಲ. ಇಲ್ಲ! ನಾನು ಬಿಟ್ಟುಹೋಗುವುದನ್ನು ಅವರು ನೋಡುವರು.”


ಆಗ ಯೆಹೋವನು, ‘ನಾನು ಅವರಿಗೆ ವಿಮುಖನಾಗುವೆನು. ಆಗ ಅವರಿಗೇನು ಸಂಭವಿಸುವುದೋ ನೋಡೋಣ. ಅವರು ಎದುರುಬೀಳುವ ಜನರಾಗಿದ್ದಾರೆ. ಅವರು ತಮ್ಮ ಪಾಠಗಳನ್ನು ಕಲಿಯದ ಮಕ್ಕಳಂತಿದ್ದಾರೆ.


“ಸರ್ವಶಕ್ತನೂ ಇಸ್ರೇಲರ ದೇವರೂ ಆಗಿರುವ ಯೆಹೋವನು ಹೀಗೆಂದನು: ‘ನಾನು ಜೆರುಸಲೇಮಿನ ಮೇಲೆ ನನ್ನ ಕೋಪವನ್ನು ತೋರಿಸಿದೆ. ಜೆರುಸಲೇಮಿನಲ್ಲಿ ವಾಸಿಸುವ ಜನರನ್ನು ನಾನು ದಂಡಿಸಿದೆ. ಅದೇ ರೀತಿ, ಈಜಿಪ್ಟಿಗೆ ಹೋಗುವವರೆಲ್ಲರ ಮೇಲೂ ನಾನು ನನ್ನ ಕೋಪವನ್ನು ತೋರಿಸುವೆನು. ಬೇರೆಯವರಿಗೆ ಕೆಟ್ಟದಾಗಲಿ ಎಂದು ಹೇಳಬೇಕಾದಾಗ ಜನರು ನಿಮ್ಮಂತೆ ಆಗಲಿ ಎಂದು ನಿಮ್ಮ ಉದಾಹರಣೆಯನ್ನು ಕೊಡುವರು. ನೀವು ಒಂದು ಶಾಪದ ಶಬ್ದವಾಗುವಿರಿ. ಜನರು ನಿಮ್ಮಿಂದ ನಾಚಿಕೆಪಟ್ಟುಕೊಳ್ಳುವರು. ಜನರು ನಿಮ್ಮನ್ನು ಅಪಮಾನ ಮಾಡುವರು. ಯೆಹೂದವನ್ನು ಪುನಃ ನೀವು ಎಂದೂ ನೋಡುವದಿಲ್ಲ.’


ಯೆಹೋವನು ತನ್ನ ಯಜ್ಞವೇದಿಕೆಯನ್ನು ತಿರಸ್ಕರಿಸಿದ್ದಾನೆ. ಆತನು ತನ್ನ ಪವಿತ್ರಾಲಯವನ್ನು ತಿರಸ್ಕರಿಸಿದ್ದಾನೆ. ಆತನು ಜೆರುಸಲೇಮಿನ ಅರಮನೆಗಳ ಗೋಡೆಗಳನ್ನು ಶತ್ರುಗಳ ವಶಮಾಡಿದ್ದಾನೆ. ವೈರಿಗಳು ಯೆಹೋವನ ಪವಿತ್ರ ಆಲಯದಲ್ಲಿ ಗದ್ದಲವನ್ನು ಮಾಡಿದರು. ಅವರು ಉತ್ಸವದ ದಿನದಂತೆ ಗದ್ದಲವನ್ನು ಮಾಡಿದರು.


ಆಗಲೂ ನಾನು ಅವರಿಗೆ ಸಹಾಯ ಮಾಡುವುದಿಲ್ಲ. ಅವರು ಕೆಟ್ಟಕಾರ್ಯಗಳನ್ನು ಮಾಡಿ ಅನ್ಯದೇವರುಗಳನ್ನು ಅವಲಂಭಿಸಿದ್ದಾರಲ್ಲಾ!


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು