ಯೆರೆಮೀಯ 34:19 - ಪರಿಶುದ್ದ ಬೈಬಲ್19 ಯೆಹೂದದ ಮತ್ತು ಜೆರುಸಲೇಮಿನ ನಾಯಕರು, ಪ್ರಮುಖ ಅಧಿಕಾರಿಗಳು, ಯಾಜಕರು ಮತ್ತು ದೇಶದ ಸಕಲ ಜನರು ಇವರೆಲ್ಲ ನನ್ನ ಮುಂದೆ ಒಡಂಬಡಿಕೆಯನ್ನು ಮಾಡಿದಾಗ ಕರುವಿನ ಶರೀರದ ಎರಡು ತುಂಡುಗಳ ಮಧ್ಯದಿಂದ ಹಾದುಹೋದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201919 ನನ್ನ ಒಡಂಬಡಿಕೆಯನ್ನು ಮೀರಿದ ಯೆಹೂದದ ಪ್ರಧಾನರು, ಯೆರೂಸಲೇಮಿನ ಪ್ರಧಾನರು, ಕಂಚುಕಿಗಳು, ಯಾಜಕರು, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)19 ಜುದೇಯದ ಹಾಗು ಜೆರುಸಲೇಮಿನ ರಾಜ್ಯಾಧಿಕಾರಿಗಳು, ಕಂಚುಕಿಗಳು, ಯಾಜಕರು, ಸೀಳಿದ ಕರುವಿನ ಹೋಳುಗ಼ಳ ನಡುವೆ ಹಾದು ನನ್ನ ಮುಂದೆ ಒಪ್ಪಂದಮಾಡಿದರು. ಆದರೆ ಆ ಒಪ್ಪಂದಕ್ಕೆ ತದ್ವಿರುದ್ಧವಾಗಿ ನಡೆದಿದ್ದಾರೆ ನಾಡಿನ ಎಲ್ಲ ಜನರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)19 ನನ್ನ ಒಡಂಬಡಿಕೆಯನ್ನು ಮೀರಿದ ಯೆಹೂದದ ಪ್ರಧಾನರು, ಯೆರೂಸಲೇವಿುನ ಪ್ರಧಾನರು, ಕಂಚುಕಿಗಳು, ಯಾಜಕರು, ಕರುವಿನ ಹೋಳುಗಳ ನಡುವೆ ಹಾದುಹೋದ ದೇಶದ ಸಕಲ ಜನರು, ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ19 ಯೆಹೂದದ ಪ್ರಧಾನರನ್ನೂ, ಯೆರೂಸಲೇಮಿನ ಪ್ರಧಾನರನ್ನೂ, ಕಂಚುಕಿಯರನ್ನೂ, ಯಾಜಕರನ್ನೂ, ಕರುವಿನ ತುಂಡುಗಳ ನಡುವೆ ದಾಟಿಹೋದ ದೇಶದ ಜನರೆಲ್ಲರನ್ನೂ, ಅಧ್ಯಾಯವನ್ನು ನೋಡಿ |
ಆ ಅಧಿಕಾರಿಗಳು ಯೆರೆಮೀಯನನ್ನು ಬಾವಿಗೆ ಹಾಕಿದ ಸಂಗತಿಯು ಎಬೆದ್ಮೆಲೆಕನೆಂಬ ಮನುಷ್ಯನ ಕಿವಿಗೆ ಬಿತ್ತು. ಎಬೆದ್ಮೆಲೆಕನು ಇಥಿಯೋಪಿಯದವನಾಗಿದ್ದು ಅರಮನೆಯಲ್ಲಿ ಕಂಚುಕಿಯಾಗಿದ್ದನು. ರಾಜನಾದ ಚಿದ್ಕೀಯನು ಬೆನ್ಯಾಮೀನ್ ಊರ ಬಾಗಲಲ್ಲಿ ಕುಳಿತಿದ್ದನು. ಎಬೆದ್ಮೆಲೆಕನು ಅರಮನೆಯನ್ನು ಬಿಟ್ಟು ಬೆನ್ಯಾಮೀನ್ ಊರಹೆಬ್ಬಾಗಿಲಿನ ಹತ್ತಿರ ಕುಳಿತಿದ್ದ ರಾಜನಾದ ಚಿದ್ಕೀಯನ ಹತ್ತಿರ ಬಂದು ಹೀಗೆ ಹೇಳಿದನು: