Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 34:21 - ಪರಿಶುದ್ದ ಬೈಬಲ್‌

21 ಯೆಹೂದದ ರಾಜನಾದ ಚಿದ್ಕೀಯನನ್ನೂ ಅವನ ನಾಯಕರುಗಳನ್ನೂ ನಾನು ಅವರ ಶತ್ರುಗಳಿಗೂ ಅವರನ್ನು ಕೊಲ್ಲಬಯಸುವ ಜನರಿಗೂ ಕೊಡುವೆನು. ಬಾಬಿಲೋನಿನ ಸೈನ್ಯವು ಜೆರುಸಲೇಮನ್ನು ಬಿಟ್ಟುಹೋಗಿದ್ದರೂ ನಾನು ಚಿದ್ಕೀಯ ಮತ್ತು ಅವನ ಜನರನ್ನು ಬಾಬಿಲೋನಿನ ಸೈನಿಕರ ಕೈಗೆ ಒಪ್ಪಿಸುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

21 ಯೆಹೂದದ ಅರಸನಾದ ಚಿದ್ಕೀಯನನ್ನೂ ಮತ್ತು ಅವನ ಪ್ರಧಾನರನ್ನೂ ಅವರ ಪ್ರಾಣ ಹುಡುಕುವ ಶತ್ರುಗಳ ಕೈಗೆ ಅಂದರೆ ನಿಮ್ಮನ್ನು ಬಿಟ್ಟುಹೋಗಿರುವ ಬಾಬೆಲಿನ ಅರಸನ ಕೈಗೆ ಕೊಡುವೆನು” ಎನ್ನುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

21 ಜುದೇಯದ ಅರಸ ಚಿದ್ಕೀಯನನ್ನೂ ಅವನ ಮಂತ್ರಿಗಳನ್ನೂ ಅವರ ಶತ್ರುಗಳಿಗೆ ಅಂದರೆ, ಅವರ ಪ್ರಾಣಹತ್ಯಕ್ಕಾಗಿ ಕಾದಿರುವ, ತಕ್ಷಣಕ್ಕೆ ಹಿಂದಿರುಗಿಹೋಗಿರುವ, ಬಾಬಿಲೋನಿಯದ ಅರಸನ ಕೈಗೆ ಕೊಡುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

21 ಯೆಹೂದದ ಅರಸನಾದ ಚಿದ್ಕೀಯನನ್ನೂ ಅವನ ಪ್ರಧಾನರನ್ನೂ ಅವರ ಪ್ರಾಣ ಹುಡುಕುವ ಶತ್ರುಗಳ ಕೈಗೆ, ಅಂದರೆ ನಿಮ್ಮನ್ನು ಬಿಟ್ಟುಹೋಗಿರುವ ಬಾಬೆಲಿನ ಅರಸನ ಕೈಗೆ ಕೊಡುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

21 “ಯೆಹೂದದ ಅರಸನಾದ ಚಿದ್ಕೀಯನನ್ನೂ, ಅವನ ಪ್ರಧಾನರನ್ನೂ ಅವರ ಶತ್ರುಗಳ ಕೈಯಲ್ಲಿಯೂ, ಅವರ ಪ್ರಾಣವನ್ನು ಹುಡುಕುವವರ ಕೈಯಲ್ಲಿಯೂ, ನಿಮ್ಮನ್ನು ಬಿಟ್ಟುಹೋಗಿರುವ ಬಾಬಿಲೋನಿನ ಅರಸನ ಸೈನ್ಯದ ಕೈಯಲ್ಲಿಯೂ ಒಪ್ಪಿಸುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 34:21
16 ತಿಳಿವುಗಳ ಹೋಲಿಕೆ  

ರಿಬ್ಲದಲ್ಲಿ ಬಾಬಿಲೋನಿನ ರಾಜನು ಚಿದ್ಕೀಯನ ಕಣ್ಣೆದುರಿನಲ್ಲಿಯೇ ಅವನ ಗಂಡುಮಕ್ಕಳನ್ನು ಕೊಲ್ಲಿಸಿದನು. ಚಿದ್ಕೀಯನು ನೋಡುತ್ತಿದ್ದಂತೆಯೇ ನೆಬೂಕದ್ನೆಚ್ಚರನು ಯೆಹೂದದ ಎಲ್ಲಾ ರಾಜಾಧಿಕಾರಿಗಳನ್ನು ಕೊಲ್ಲಿಸಿದನು.


ನನ್ನ ಒಡೆಯನಾದ ಯೆಹೋವನು ಹೇಳುವುದೇನೆಂದರೆ, “ನನ್ನ ಜೀವದಾಣೆ, ಈ ಹೊಸ ರಾಜನು ಬಾಬಿಲೋನಿನಲ್ಲಿ ಸಾಯುವನು. ಈ ಮನುಷ್ಯನನ್ನು ಯೆಹೂದದ ರಾಜನನ್ನಾಗಿ ಮಾಡಿದ ರಾಜ ನೆಬೂಕದ್ನೆಚ್ಚರನ ನಾಡಿನಲ್ಲಿ ಇವನು ಸಾಯುವನು. ಈ ಮನುಷ್ಯನು ಆ ರಾಜನೊಡನೆ ಮಾಡಿದ ಪ್ರಮಾಣವನ್ನು ತಿರಸ್ಕರಿಸಿ ಆ ರಾಜನೊಡನೆ ಮಾಡಿಕೊಂಡಿದ್ದ ಒಪ್ಪಂದವನ್ನು ಮುರಿದು ಹಾಕಿದನು.


ರಿಬ್ಲ ನಗರದಲ್ಲಿ ಬಾಬೆಲಿನ ರಾಜನು ಚಿದ್ಕೀಯನ ಮಕ್ಕಳನ್ನು ಸಂಹರಿಸಿದನು. ಚಿದ್ಕೀಯನು ತನ್ನ ಮಕ್ಕಳ ಕೊಲೆಯನ್ನು ಕಣ್ಣಾರೆ ನೋಡುವಂತೆ ಮಾಡಲಾಯಿತು. ಬಾಬಿಲೋನಿನ ರಾಜನು ಯೆಹೂದದ ರಾಜನ ಎಲ್ಲಾ ಅಧಿಕಾರಿಗಳನ್ನು ಸಹ ಕೊಲ್ಲಿಸಿದನು.


ನಮಗೆ ರಾಜನು ಬಹಳ ಮುಖ್ಯವಾಗಿದ್ದನು. ಅವನು ನಮಗೆ ಉಸಿರಿನಷ್ಟೇ ಅಮೂಲ್ಯವಾಗಿದ್ದನು. ಆದರೆ ಅವರು ರಾಜನನ್ನೇ ಸೆರೆಹಿಡಿದರು. ಯೆಹೋವನೇ, ಆ ರಾಜನನ್ನು ಆರಿಸಿಕೊಂಡಿದ್ದನು. “ನಾವು ಅವನ ನೆರಳಿನಲ್ಲಿ ಬದುಕುತ್ತೇವೆ. ಅವನು ನಮ್ಮನ್ನು ಜನಾಂಗಗಳವರಿಂದ ಸಂರಕ್ಷಿಸುವನು” ಎಂದು ನಾವು ರಾಜನ ಬಗ್ಗೆ ಹೇಳಿಕೊಂಡಿದ್ದೆವು.


ಯೆಹೂದದ ರಾಜನಾದ ಚಿದ್ಕೀಯನು ಬಾಬಿಲೋನಿನ ಸೈನಿಕರಿಂದ ತಪ್ಪಿಸಿಕೊಳ್ಳಲಾರ. ಖಂಡಿತವಾಗಿಯೂ ಅವನನ್ನು ಬಾಬಿಲೋನಿನ ರಾಜನಿಗೆ ಒಪ್ಪಿಸಲಾಗುವುದು. ಚಿದ್ಕೀಯನು ಮುಖಾಮುಖಿಯಾಗಿ ಬಾಬಿಲೋನಿನ ರಾಜನೊಂದಿಗೆ ಮಾತನಾಡುವನು. ಚಿದ್ಕೀಯನು ತನ್ನ ಕಣ್ಣುಗಳಿಂದ ಅವನನ್ನು ನೋಡುವನು.


ಬಾಬಿಲೋನಿನವರು ರಾಜನಾದ ಚಿದ್ಕೀಯನನ್ನು ರಿಬ್ಲದಲ್ಲಿ ಬಾಬಿಲೋನ್ ರಾಜನಿಗೆ ಒಪ್ಪಿಸಿದರು. ಬಾಬಿಲೋನ್ ರಾಜನು ಚಿದ್ಕೀಯನನ್ನು ದಂಡಿಸಲು ತೀರ್ಮಾನಿಸಿದನು.


ಯೆಹೋಯಾಚೀನನೇ, ನಾನು ನಿನಗೆ ಬಾಬಿಲೋನಿನ ರಾಜನಾದ ನೆಬೂಕದ್ನೆಚ್ಚರನ ಮತ್ತು ಕಸ್ದೀಯರ ಕೈಗೆ ಕೊಟ್ಟುಬಿಡುವೆನು. ನೀನು ಹೆದರಿಕೊಂಡಿರುವುದು ಆ ಜನರಿಗೇ. ಆ ಜನರು ನಿನ್ನನ್ನು ಕೊಲ್ಲಬಯಸುತ್ತಾರೆ.


ಯೆಹೂದದ ರಾಜನಾದ ಚಿದ್ಕೀಯನು ಯೆರೆಮೀಯನನ್ನು ಆ ಕಾರಾಗೃಹದಲ್ಲಿಟ್ಟಿದ್ದನು. ಯೆರೆಮೀಯನು ಪ್ರವಾದಿಸಿದ ವಿಷಯಗಳನ್ನು ಚಿದ್ಕೀಯನು ಮೆಚ್ಚಿಕೊಂಡಿರಲಿಲ್ಲ. ಯೆರೆಮೀಯನು ಹೇಳಿದ್ದೇನೆಂದರೆ: “ಯೆಹೋವನು ಹೀಗೆನ್ನುತ್ತಾನೆ: ‘ನಾನು ತಕ್ಷಣವೇ ಜೆರುಸಲೇಮ್ ನಗರವನ್ನು ಬಾಬಿಲೋನಿನ ರಾಜನಿಗೆ ಒಪ್ಪಿಸುತ್ತೇನೆ. ನೆಬೂಕದ್ನೆಚ್ಚರನು ಈ ನಗರವನ್ನು ಸ್ವಾಧೀನಪಡಿಸಿಕೊಳ್ಳುವನು.


ನಾನು ಹೇಳಿದಂತೆ ಮಾಡುವೆನೆಂಬುದಕ್ಕೆ ಪ್ರಮಾಣ ಇದು. ಯೆಹೋವನು ಹೀಗೆ ಹೇಳಿದನು: ‘ಫರೋಹ ಹೊಫ್ರನೆಂಬುವನು ಈಜಿಪ್ಟಿನ ರಾಜನಾಗಿದ್ದಾನೆ. ಅವನ ಶತ್ರುಗಳು ಅವನನ್ನು ಕೊಲ್ಲಬಯಸುತ್ತಾರೆ. ನಾನು ಫರೋಹ ಹೊಫ್ರನನ್ನು ಅವನ ಶತ್ರುಗಳಿಗೆ ಒಪ್ಪಿಸುತ್ತೇನೆ. ಚಿದ್ಕೀಯನು ಯೆಹೂದದ ರಾಜನಾಗಿದ್ದನು. ನೆಬೂಕದ್ನೆಚ್ಚರನು ಚಿದ್ಕೀಯನ ವೈರಿಯಾಗಿದ್ದನು. ನಾನು ಚಿದ್ಕೀಯನನ್ನು ಅವನ ಶತ್ರುವಿನ ಕೈಗೆ ಒಪ್ಪಿಸಿದೆ. ಅದೇ ರೀತಿ ನಾನು ಫರೋಹ ಹೊಫ್ರನನ್ನು ಅವನ ವೈರಿಯ ಕೈಗೆ ಒಪ್ಪಿಸುತ್ತೇನೆ.’”


ಬಾಬಿಲೋನಿನ ಸೈನಿಕರು ರಾಜನಾದ ಚಿದ್ಕೀಯನನ್ನು ಬೆನ್ನಟ್ಟಿದರು. ಅವರು ಅವನನ್ನು ಜೆರಿಕೊವಿನ ಬಯಲಿನಲ್ಲಿ ಹಿಡಿದರು. ಚಿದ್ಕೀಯನ ಎಲ್ಲಾ ಸೈನಿಕರು ಓಡಿಹೋದರು.


“ದಂಗೆಕೋರರಿಗೆ ಇದನ್ನು ಹೇಳು: ಈ ಸಂಗತಿಗಳ ಅರ್ಥವು ನಿಮಗೆ ಗೊತ್ತಿಲ್ಲವೇ? ಅವರಿಗೆ ಹೇಳು: ಮೊದಲಿನ ಗರುಡ ಪಕ್ಷಿ ಬಾಬಿಲೋನ್ ರಾಜನಾದ ನೆಬೂಕದ್ನೆಚ್ಚರನು. ಅವನು ಜೆರುಸಲೇಮಿಗೆ ಬಂದು ಅದರ ರಾಜನನ್ನೂ ಅದರ ಹಿರಿಯರನ್ನೂ ಬಂಧಿಸಿ, ಅವರನ್ನು ತನ್ನ ರಾಜ್ಯವಾದ ಬಾಬಿಲೋನಿಗೆ ಕೊಂಡೊಯ್ದನು.


ನಾನು ಅವನಿಗೆ ಉರುಲನ್ನೊಡ್ಡುವೆನು; ಅವನು ಅದರೊಳಗೆ ಸಿಕ್ಕಿಕೊಳ್ಳುವನು. ನಾನು ಅವನನ್ನು ಬಾಬಿಲೋನಿಗೆ ತಂದು ಅಲ್ಲಿ ಶಿಕ್ಷಿಸುವೆನು. ಯಾಕೆಂದರೆ ಅವನು ನನಗೆ ಅಪನಂಬಿಗಸ್ತನಾದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು