Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 34:4 - ಪರಿಶುದ್ದ ಬೈಬಲ್‌

4 ಯೆಹೂದದ ರಾಜನಾದ ಚಿದ್ಕೀಯನೇ, ಯೆಹೋವನ ವಾಗ್ದಾನವನ್ನು ಕೇಳು. ಯೆಹೋವನು ನಿನ್ನ ಬಗ್ಗೆ ಹೀಗೆ ಹೇಳುತ್ತಾನೆ. ನಿನ್ನನ್ನು ಖಡ್ಗದಿಂದ ಕೊಲ್ಲಲಾಗುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ಆದರೂ ಯೆಹೂದದ ಅರಸನಾದ ಚಿದ್ಕೀಯನೇ, ಯೆಹೋವನ ಮಾತನ್ನು ಕೈಗೊಳ್ಳು; ಯೆಹೋವನು ನಿನ್ನ ವಿಷಯವಾಗಿ ಇಂತೆನ್ನುತ್ತಾನೆ, ನೀನು ಕೇಳಿ ಕೈಕೊಂಡರೆ ಖಡ್ಗದಿಂದ ಹತನಾಗುವುದಿಲ್ಲ; ಸುಖವಾಗಿ ಸಾಯುವಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

4 ಆದರೂ ಜುದೇಯದ ಅರಸನಾದ ಚಿದ್ಕೀಯನೇ, ಸರ್ವೇಶ್ವರನ ಮಾತನ್ನು ಕೈಗೊಳ್ಳು; ಸರ್ವೇಶ್ವರ ನಿನ್ನ ವಿಷಯವಾಗಿ ಹೀಗೆನ್ನುತ್ತಾರೆ - ನೀನು ಕತ್ತಿಯಿಂದ ಹತನಾಗುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

4 ಆದರೂ ಯೆಹೂದದ ಅರಸನಾದ ಚಿದ್ಕೀಯನೇ, ಯೆಹೋವನ ಮಾತನ್ನು ಕೈಕೊಳ್ಳು; ಯೆಹೋವನು ನಿನ್ನ ವಿಷಯವಾಗಿ ಇಂತೆನ್ನುತ್ತಾನೆ - [ನೀನು ಕೇಳಿ ಕೈಕೊಂಡರೆ] ಖಡ್ಗದಿಂದ ಹತನಾಗುವದಿಲ್ಲ; ಸುಖವಾಗಿ ಸಾಯುವಿ;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

4 “ ‘ಆದರೂ ಯೆಹೂದದ ಅರಸನಾದ ಚಿದ್ಕೀಯನೇ, ಯೆಹೋವ ದೇವರ ವಾಗ್ದಾನವನ್ನು ಕೇಳು. ನಿನ್ನನ್ನು ಕುರಿತು ಯೆಹೋವ ದೇವರು ಹೀಗೆ ಹೇಳುತ್ತಾರೆ: ನೀನು ಖಡ್ಗದಿಂದ ಸಾಯುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 34:4
7 ತಿಳಿವುಗಳ ಹೋಲಿಕೆ  

ಚಿದ್ಕೀಯನೇ, ನೀನು ಬಾಬಿಲೋನಿನ ರಾಜನಿಂದ ತಪ್ಪಿಸಿಕೊಳ್ಳಲಾರೆ. ನಿಶ್ಚಿತವಾಗಿ ನಿನ್ನನ್ನು ಹಿಡಿದು ಅವನಿಗೆ ಒಪ್ಪಿಸಲಾಗುವುದು. ಬಾಬಿಲೋನಿನ ರಾಜನನ್ನು ನೀನು ಪ್ರತ್ಯಕ್ಷವಾಗಿ ನೋಡುವೆ. ಅವನು ನಿನ್ನೊಂದಿಗೆ ಮುಖಾಮುಖಿಯಾಗಿ ಮಾತನಾಡುವನು; ನೀನು ಬಾಬಿಲೋನಿಗೆ ಹೋಗುವೆ.


ನೀನು ಸಮಾಧಾನದಿಂದ ಸಾಯುವೆ. ನೀನು ರಾಜನಾಗುವ ಮುನ್ನ ಆಳಿದ ನಿನ್ನ ಪೂರ್ವಿಕರಿಗೆ ಗೌರವ ತೋರುವದಕ್ಕಾಗಿ ಜನರು ಶವಸಂಸ್ಕಾರದ ಧೂಪವನ್ನು ಹಾಕಿದ್ದರು. ಹಾಗೆಯೇ ನಿನ್ನನ್ನು ಗೌರವಿಸಲು ಜನರು ಶವಸಂಸ್ಕಾರದ ಧೂಪವನ್ನು ಹಾಕುವರು. ಅವರು ನಿನಗೋಸ್ಕರ ಅಳುವರು. ಅವರು ದುಃಖದಿಂದ, “ಅಯ್ಯೋ, ಯೆಹೋವನೇ” ಎಂದು ಗೋಳಾಡುವರು. ಸ್ವತಃ ನಾನೇ ನಿನಗೆ ಈ ವಾಗ್ದಾನವನ್ನು ಮಾಡುತ್ತಿದ್ದೇನೆ.’” ಇದು ಯೆಹೋವನ ನುಡಿ.


ಮೀಕಾಯೆಹುವು, “ಯೆಹೋವನಿಂದ ಬಂದ ಸಂದೇಶವನ್ನು ಕೇಳು. ಯೆಹೋವನು ಸಿಂಹಾಸನದಲ್ಲಿ ಕುಳಿತಿರುವದನ್ನು ನಾನು ಕಂಡೆನು. ಅವನ ಎಡಬಲಗಳಲ್ಲಿ ಪರಲೋಕದ ಸೈನ್ಯವು ನಿಂತಿತ್ತು.


ಯಾಕೋಬನ ಮನೆತನದವರೇ, ಯೆಹೋವನ ಸಂದೇಶವನ್ನು ಕೇಳಿರಿ. ಇಸ್ರೇಲಿನ ಎಲ್ಲಾ ಕುಲದವರೇ, ಯೆಹೋವನ ಸಂದೇಶವನ್ನು ಕೇಳಿರಿ.


“ಯೆರೆಮೀಯನೇ, ಯೆಹೋವನ ಆಲಯದ ಹೆಬ್ಬಾಗಿಲಿನ ಹತ್ತಿರ ನಿಂತುಕೊಂಡು ಈ ಸಂದೇಶವನ್ನು ಸಾರು: “‘ಇದು ಯೆಹೋವನ ಸಂದೇಶ. ಯೆಹೂದದ ಜನರೆಲ್ಲರೇ, ಯೆಹೋವನನ್ನು ಆರಾಧಿಸಲು ಈ ದ್ವಾರದಿಂದ ಪ್ರವೇಶ ಮಾಡುವ ಜನರೇ, ಈ ಸಂದೇಶವನ್ನು ಕೇಳಿರಿ.


ಬಾಬಿಲೋನಿನ ರಾಜನು ಚಿದ್ಕೀಯನನ್ನು ಬಾಬಿಲೋನಿಗೆ ತೆಗೆದುಕೊಂಡು ಹೋಗುವನು. ನಾನು ಅವನನ್ನು ದಂಡಿಸುವವರೆಗೆ ಚಿದ್ಕೀಯನು ಅಲ್ಲಿರುವನು. ನೀವು ಕಸ್ದೀಯರೊಡನೆ ಯುದ್ಧ ಮಾಡಿದರೂ ನಿಮಗೆ ಜಯವಾಗದು.’” ಇದು ಯೆಹೋವನ ನುಡಿ.


ಇಸ್ರೇಲ್ ಜನರೇ, ಯೆಹೋವನ ಮಾತಿಗೆ ಕಿವಿಗೊಡಿರಿ! ಈ ದೇಶದಲ್ಲಿ ವಾಸಿಸುವ ಜನರ ವಿರುದ್ಧವಾಗಿ ಯೆಹೋವನು ತನ್ನ ವಾದವನ್ನು ಅವರ ಮುಂದಿಡುತ್ತಾನೆ. “ಈ ದೇಶದಲ್ಲಿರುವ ಜನರು ಯೆಹೋವನನ್ನು ನಿಜವಾಗಿಯೂ ತಿಳಿದಿಲ್ಲ. ಅವರು ಯೆಹೋವನಿಗೆ ಸತ್ಯವಂತರೂ ಅಲ್ಲ. ನಿಷ್ಠಾವಂತರೂ ಅಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು