Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 34:7 - ಪರಿಶುದ್ದ ಬೈಬಲ್‌

7 ಆಗ ಬಾಬಿಲೋನಿನ ರಾಜನ ಸೈನ್ಯವು ಜೆರುಸಲೇಮಿನ ವಿರುದ್ಧ ಹೋರಾಡುತ್ತಿತ್ತು. ಬಾಬಿಲೋನಿನ ಸೈನ್ಯವು ತಾನು ಇನ್ನೂ ಸ್ವಾಧೀನಪಡಿಸಿಕೊಳ್ಳದ ಯೆಹೂದದ ನಗರಗಳ ವಿರುದ್ಧ ಕೂಡ ಹೋರಾಡುತ್ತಿತ್ತು. ಆ ಪಟ್ಟಣಗಳೆಂದರೆ ಲಾಕೀಷ್ ಮತ್ತು ಅಜೇಕ. ಯೆಹೂದದಲ್ಲಿ ಕೋಟೆಗಳನ್ನು ಹೊಂದಿದ್ದ ನಗರಗಳೆಂದರೆ ಇವೆರಡೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ಬಾಬೆಲಿನ ಅರಸನ ಸೈನ್ಯವು ಯೆರೂಸಲೇಮಿಗೂ, ಯೆಹೂದದೊಳಗೆ ಕೋಟೆಕೊತ್ತಲದ ಪಟ್ಟಣಗಳಾಗಿ ಉಳಿದಿದ್ದ ಲಾಕೀಷಿಗೂ ಮತ್ತು ಅಜೇಕಕ್ಕೂ ವಿರುದ್ಧವಾಗಿ ಯುದ್ಧಮಾಡುತ್ತಿದ್ದಾಗ ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

7 ಆಗ ಬಾಬಿಲೋನಿನ ಅರಸನ ಸೈನ್ಯವು ಜೆರುಸಲೇಮಿಗೂ ಮತ್ತು ಜುದೇಯದೊಳಗೆ ಕೋಟೆಕೊತ್ತಲದ ನಗರಗಳಾಗಿದ್ದ ಲಾಕೀಷಿಗೂ ಅಜೇಕಕ್ಕೂ ವಿರುದ್ಧ ಯುದ್ಧಮಾಡುತ್ತಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

7 ಬಾಬೆಲಿನ ಅರಸನ ಸೈನ್ಯವು ಯೆರೂಸಲೇವಿುಗೂ ಯೆಹೂದದೊಳಗೆ ಕೋಟೆಕೊತ್ತಲದ ಪಟ್ಟಣಗಳಿಗಾಗಿ ಉಳಿದಿದ್ದ ಲಾಕೀಷಿಗೂ ಅಜೇಕಕ್ಕೂ ವಿರುದ್ಧವಾಗಿ ಯುದ್ಧಮಾಡುತ್ತಿದ್ದಾಗ ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

7 ಬಾಬಿಲೋನಿನ ಅರಸನ ಸೈನ್ಯವು ಯೆರೂಸಲೇಮಿಗೂ ಯೆಹೂದದಲ್ಲಿ ಮಿಕ್ಕ ಸಮಸ್ತ ಪಟ್ಟಣಗಳಿಗೂ ಎಂದರೆ, ಲಾಕೀಷಿಗೂ ಅಜೇಕಕ್ಕೂ ವಿರೋಧವಾಗಿ ಯುದ್ಧ ಮಾಡಿದಾಗಲೇ ಹೇಳಿದನು. ಏಕೆಂದರೆ ಯೆಹೂದದ ಪಟ್ಟಣಗಳಲ್ಲಿ ಈ ಕೋಟೆಯುಳ್ಳ ಪಟ್ಟಣಗಳು ಮಾತ್ರ ನಿಂತಿದ್ದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 34:7
18 ತಿಳಿವುಗಳ ಹೋಲಿಕೆ  

ಜೆರುಸಲೇಮಿನ ಅರಸನಾದ ಅದೋನೀಚೆದೆಕನು ಹೆಬ್ರೋನಿನ ಅರಸನಾದ ಹೋಹಾಮನೊಂದಿಗೆ ಮಾತನಾಡಿದನು. ಅವನು ಯರ್ಮೂತಿನ ಅರಸನಾದ ಪಿರಾಮ್, ಲಾಕೀಷಿನ ಅರಸನಾದ ಯಾಫೀಯ ಮತ್ತು ಎಗ್ಲೋನಿನ ಅರಸನಾದ ದೆಬೀರ್ ಇವರೊಂದಿಗೂ ಮಾತನಾಡಿದನು. ಜೆರುಸಲೇಮಿನ ಅರಸನು ಅವರಿಗೆ,


“ಈ ಸಂದೇಶವನ್ನು ಯೆಹೂದ ಜನರಲ್ಲಿ ಸಾರಿರಿ: ಜೆರುಸಲೇಮ್ ನಗರದ ಪ್ರತಿಯೊಬ್ಬನಿಗೂ ದೇಶದಲ್ಲೆಲ್ಲಾ ತುತ್ತೂರಿಗಳನ್ನು ಊದಿರಿ ಎಂದು ಹೇಳಿರಿ. ದೊಡ್ಡ ಧ್ವನಿಯಲ್ಲಿ ‘ಒಂದು ಕಡೆ ಸೇರೋಣ ಬನ್ನಿ, ರಕ್ಷಣೆಗಾಗಿ ಭದ್ರವಾದ ನಗರಗಳಿಗೆ ಓಡಿಹೋಗೋಣ ಬನ್ನಿ’ ಎಂದು ಕೂಗಿ ಹೇಳಿರಿ.


ಯರ್ಮೂತ್, ಅದುಲ್ಲಾಮ್, ಸೋಕೋ, ಅಜೇಕಾ,


ಲಾಕೀಷಿನ ಸ್ತ್ರೀಯೇ, ವೇಗವಾಗಿ ಓಡುವ ಕುದುರೆಯನ್ನು ನಿನ್ನ ಬಂಡಿಗೆ ಬಿಗಿ. ಚೀಯೋನಿನ ಪಾಪವು ಲಾಕೀಷಿನಲ್ಲಿ ಪ್ರಾರಂಭವಾಯಿತು. ಯಾಕೆಂದರೆ ನೀನು ಇಸ್ರೇಲಿನ ಪಾಪವನ್ನು ಅನುಸರಿಸಿದಿ.


ಯೆಹೋವನಿಂದ ಯೆರಮೀಯನಿಗೆ ಒಂದು ಸಂದೇಶ ಬಂದಿತು. ಬಾಬಿಲೋನಿನ ರಾಜನಾದ ನೆಬೂಕದ್ನೆಚ್ಚರನು ಜೆರುಸಲೇಮ್ ಮತ್ತು ಅದರ ಸುತ್ತಮುತ್ತಲಿನ ಊರುಗಳ ವಿರುದ್ಧ ಯುದ್ಧ ಮಾಡುತ್ತಿದ್ದಾಗ ಈ ಸಂದೇಶ ಬಂದಿತು. ಆಗ ನೆಬೂಕದ್ನೆಚ್ಚರನ ಸಂಗಡ ಅವನ ಸಮಸ್ತ ಸೈನ್ಯವು ಮತ್ತು ಅವನ ಸಾಮ್ರಾಜ್ಯದಲ್ಲಿದ್ದ ಎಲ್ಲಾ ರಾಜ್ಯಗಳ ಮತ್ತು ಜನರ ಸೈನ್ಯವು ಇತ್ತು.


ಯೆಹೂದದ ಪಟ್ಟಣಗಳ ಜನರು ಮತ್ತು ಜೆರುಸಲೇಮ್ ನಗರದ ಜನರು ತಮ್ಮ ವಿಗ್ರಹಗಳ ಹತ್ತಿರ ಹೋಗಿ ಸಹಾಯಕ್ಕಾಗಿ ಪ್ರಾರ್ಥಿಸುವರು. ಆ ವಿಗ್ರಹಗಳ ಮುಂದೆ ಅವರು ಧೂಪ ಹಾಕುವರು. ಆದರೆ ಕೇಡು ಬಂದಾಗ ಯೆಹೂದದ ಜನರಿಗೆ ಸಹಾಯಮಾಡಲು ಆ ವಿಗ್ರಹಗಳಿಗೆ ಸಾಧ್ಯವಾಗುವದಿಲ್ಲ.


“ನಾವು ಇಲ್ಲಿ ಸುಮ್ಮನೆ ಕುಳಿತುಕೊಂಡಿರುವುದೇಕೆ? ಬನ್ನಿ, ನಾವು ಭದ್ರವಾದ ಪಟ್ಟಣಗಳಿಗೆ ಓಡಿಹೋಗೋಣ. ನಮ್ಮ ದೇವರಾದ ಯೆಹೋವನು ನಮ್ಮನ್ನು ಸಾಯುವಂತೆ ಮಾಡಿದರೆ ಅಲ್ಲಿಯೇ ಸತ್ತುಹೋಗೋಣ. ನಾವು ಯೆಹೋವನಿಗೆ ವಿರುದ್ಧವಾಗಿ ಪಾಪಮಾಡಿದ್ದೇವೆ. ಆದ್ದರಿಂದ ಆತನು ನಮಗೆ ಕುಡಿಯಲು ವಿಷಮಿಶ್ರಿತ ನೀರನ್ನು ಕೊಟ್ಟಿದ್ದಾನೆ.


ಯೋತಾಮನು ಯೆಹೂದದ ಬೆಟ್ಟಪ್ರದೇಶಗಳಲ್ಲಿ ಪಟ್ಟಣಗಳನ್ನು ಮತ್ತು ಕಾಡಿನೊಳಗೆ ಗೋಪುರಗಳನ್ನು ಕಟ್ಟಿಸಿದನು.


ಅಶ್ಶೂರದ ರಾಜನು ಲಾಕೀಷನ್ನು ಬಿಟ್ಟುಹೋದನೆಂಬ ಸುದ್ದಿಯನ್ನು ಸೇನಾಧಿಪತಿಯು ಕೇಳಿ ಲಿಬ್ನಕ್ಕೆ ಹೋದಾಗ ರಾಜನು ಲಿಬ್ನದ ವಿರುದ್ಧ ಯುದ್ಧ ಮಾಡುತ್ತಿದ್ದನು.


ಲಾಕೀಷ್, ಬೊಚ್ಕತ್, ಎಗ್ಲೋನ್,


ಯರ್ಮೂತಿನ ಅರಸ ಲಾಕೀಷಿನ ಅರಸ


“ಆ ವೈರಿಗಳು ನಿಮ್ಮ ಪಟ್ಟಣಗಳನ್ನೆಲ್ಲಾ ಮುತ್ತಿ ವಶಪಡಿಸಿಕೊಳ್ಳುವರು. ಆ ಪಟ್ಟಣಗಳಿಗೆ ಎತ್ತರದ ಪೌಳಿಗೋಡೆಗಳಿವೆ. ಆದ್ದರಿಂದ ನಮಗೆ ಭಯವಿಲ್ಲವೆಂದು ನೀವು ಭರವಸೆಯಿಂದಿರುವಿರಿ. ಆದರೆ ಅವರು ಪೌಳಿಗೋಡೆಗಳನ್ನು ಕೆಡವಿ ನೆಲಸಮ ಮಾಡುವರು. ದೇವರಾದ ಯೆಹೋವನು ನಿಮಗೆ ಕೊಟ್ಟಿರುವ ಪಟ್ಟಣಗಳಲ್ಲೆಲ್ಲಾ ತೊಂದರೆ ಮಾಡುವರು.


ಆಗ ಆ ಐದು ಮಂದಿ ಅಮೋರಿಯರ ಅರಸರು ಸೈನ್ಯವನ್ನು ಸೇರಿಸಿದರು. (ಜೆರುಸಲೇಮಿನ ಅರಸ, ಹೆಬ್ರೋನಿನ ಅರಸ, ಯರ್ಮೂತಿನ ಅರಸ, ಲಾಕೀಷಿನ ಅರಸ ಮತ್ತು ಎಗ್ಲೋನಿನ ಅರಸ; ಇವರೇ ಆ ಐದು ಮಂದಿ ಅರಸರು.) ಆ ಸೈನ್ಯಗಳು ಗಿಬ್ಯೋನಿಗೆ ಹೋಗಿ ಪಟ್ಟಣವನ್ನು ಸುತ್ತುವರಿದು ಅದರ ವಿರುದ್ಧ ಹೋರಾಟ ಪ್ರಾರಂಭಿಸಿದವು.


ಜನರು ಜೆರುಸಲೇಮಿನಲ್ಲಿ ಅಮಚ್ಯನ ವಿರುದ್ಧವಾಗಿ ಒಳಸಂಚು ಮಾಡಿದರು. ಅಮಚ್ಯನು ಲಾಕೀಷಿಗೆ ಓಡಿಹೋದನು. ಆದರೆ ಜನರು ಅಮಚ್ಯನ ಹಿಂದೆ ಲಾಕೀಷಿಗೆ ಆಳುಗಳನ್ನು ಕಳುಹಿಸಿದರು. ಅವರು ಲಾಕೀಷಿನಲ್ಲಿ ಅಮಚ್ಯನನ್ನು ಕೊಂದುಹಾಕಿದರು.


ಅಶ್ಶೂರದ ರಾಜನಾದ ಸನ್ಹೇರೀಬನು ತನ್ನ ಸೇನಾದಂಡನಾಯಕನನ್ನು ಒಂದು ದೊಡ್ಡ ಸೈನ್ಯದೊಡನೆ ಜೆರುಸಲೇಮಿನಲ್ಲಿದ್ದ ಅರಸನಾದ ಹಿಜ್ಕೀಯನ ಬಳಿಗೆ ಕಳುಹಿಸಿದನು. ಸೇನಾದಂಡನಾಯಕ ತನ್ನ ಸೈನ್ಯದೊಡನೆ ಲಾಕೀಷಿನಿಂದ ಜೆರುಸಲೇಮಿಗೆ ಹೊರಟನು. ಅವರು ಮೇಲಿನ ಕೊಳದ ಬಳಿಯಲ್ಲಿರುವ ನೀರುಕಾಲುವೆಯ ಬಳಿ ನಿಂತರು. ಮೇಲಿನ ಕೊಳವು ಅಗಸರ ಬಯಲಿಗೆ ಹೋಗುವ ಮಾರ್ಗದಲ್ಲಿದೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು