Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 35:13 - ಪರಿಶುದ್ದ ಬೈಬಲ್‌

13 “ಇಸ್ರೇಲಿನ ದೇವರೂ ಸರ್ವಶಕ್ತನೂ ಆಗಿರುವ ಯೆಹೋವನು ಹೀಗೆ ಹೇಳಿದನು: ಯೆರೆಮೀಯನೇ, ಹೋಗಿ ಈ ಸಂದೇಶವನ್ನು ಯೆಹೂದದ ಮತ್ತು ಜೆರುಸಲೇಮಿನ ಜನರಿಗೆ ತಿಳಿಸು. ನೀವು ಇದರಿಂದ ಒಂದು ಪಾಠವನ್ನು ಕಲಿಯಬೇಕು ಮತ್ತು ನನ್ನ ಸಂದೇಶವನ್ನು ಅನುಸರಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

13 “ಇಸ್ರಾಯೇಲರ ದೇವರೂ, ಸೇನಾಧೀಶ್ವರನೂ ಆದ ಯೆಹೋವನು ಇಂತೆನ್ನುತ್ತಾನೆ, ನೀನು ಹೋಗಿ ಯೆಹೂದ್ಯರಿಗೂ, ಯೆರೂಸಲೇಮಿನ ನಿವಾಸಿಗಳಿಗೂ ಹೀಗೆ ಹೇಳು, ‘ಇದರಿಂದ ನೀವು ಬುದ್ಧಿತಂದುಕೊಂಡು ನನ್ನ ಮಾತುಗಳನ್ನು ಕೇಳುವುದಿಲ್ಲವೋ?’ ಎಂದು ಯೆಹೋವನು ಅನ್ನುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

13 “ಇಸ್ರಯೇಲರ ದೇವರೂ ಸೇನಾಧೀಶ್ವರನೂ ಸರ್ವೇಶ್ವರನೂ ಆದ ನಾನು ಹೇಳುವುದು ಇದು: ನೀನು ಹೋಗಿ ಯೆಹೂದ್ಯರಿಗೂ ಜೆರುಸಲೇಮಿನ ನಿವಾಸಿಗಳಿಗೂ ಹೀಗೆಂದು ತಿಳಿಸು: ‘ನೀವು ಬುದ್ಧಿ ತಂದುಕೊಂಡು ನನ್ನ ಮಾತುಗಳನ್ನು ಕೇಳುವುದಿಲ್ಲವೆ?’ ಎನ್ನುತ್ತಾರೆ ಸರ್ವೇಶ್ವರ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

13 ಇಸ್ರಾಯೇಲ್ಯರ ದೇವರೂ ಸೇನಾಧೀಶ್ವರನೂ ಆದ ಯೆಹೋವನು ಇಂತೆನ್ನುತ್ತಾನೆ - ನೀನು ಹೋಗಿ ಯೆಹೂದ್ಯರಿಗೂ ಯೆರೂಸಲೇವಿುನ ನಿವಾಸಿಗಳಿಗೂ ಹೀಗೆ ಹೇಳು - [ಇದರಿಂದ] ನೀವು ಬುದ್ಧಿ ತಂದುಕೊಂಡು ನನ್ನ ಮಾತುಗಳನ್ನು ಕೇಳುವದಿಲ್ಲವೋ ಎಂದು ಯೆಹೋವನು ಅನ್ನುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

13 “ಇಸ್ರಾಯೇಲರ ದೇವರೂ, ಸೇನಾಧೀಶ್ವರ ಯೆಹೋವ ದೇವರೂ ಆದ ನಾನು ಹೇಳುವುದು ಇದು: ನೀನು ಹೋಗಿ ಯೆಹೂದ್ಯರಿಗೂ, ಯೆರೂಸಲೇಮಿನ ನಿವಾಸಿಗಳಿಗೂ ಹೀಗೆಂದು ತಿಳಿಸು: ‘ನೀವು ಬುದ್ಧಿ ತಂದುಕೊಂಡು ನನ್ನ ಮಾತುಗಳನ್ನು ಕೇಳುವುದಿಲ್ಲವೇ?’ ಎಂದು ಯೆಹೋವ ದೇವರು ಕೇಳುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 35:13
12 ತಿಳಿವುಗಳ ಹೋಲಿಕೆ  

“ಆ ಜನರು ಸಹಾಯಕೋರಿ ನನ್ನಲ್ಲಿಗೆ ಬರಬೇಕಾಗಿತ್ತು. ಆದರೆ ಅವರು ನನಗೆ ವಿಮುಖರಾದರು. ನಾನು ಮತ್ತೆಮತ್ತೆ ಅವರಿಗೆ ಬುದ್ಧಿಕಲಿಸುವ ಪ್ರಯತ್ನ ಮಾಡಿದೆ. ಆದರೆ ಅವರು ನನ್ನ ಮಾತನ್ನು ಕೇಳಲಿಲ್ಲ. ನಾನು ಅವರನ್ನು ತಿದ್ದುವ ಪ್ರಯತ್ನ ಮಾಡಿದೆ, ಆದರೆ ಅವರು ನನ್ನ ಮಾತನ್ನು ಕೇಳಲಿಲ್ಲ.


ಯೆಹೋವನೇ, ನೀನು ನಂಬಿಗಸ್ತರಾದ ಜನರನ್ನು ಹುಡುಕುವೆ. ನೀನು ಯೆಹೂದದ ಜನರಿಗೆ ಹೊಡೆದೆ, ಆದರೆ ಅವರಿಗೆ ಅದರಿಂದ ನೋವಾಗಲಿಲ್ಲ. ನೀನು ಅವರನ್ನು ಹಾಳುಮಾಡಿದೆ, ಆದರೆ ಅದರಿಂದ ಅವರು ಪಾಠವನ್ನೂ ಕಲಿಯಲಿಲ್ಲ. ಅವರು ತಮ್ಮ ದುಷ್ಕೃತ್ಯಗಳಿಗಾಗಿ ಪಶ್ಚಾತ್ತಾಪಪಡಲಿಲ್ಲ. ಅವರು ಬಹಳ ಹಟಮಾರಿಗಳಾದರು.


ದೇವರು ಮಾತನಾಡುವಾಗ ಆಲಿಸದೆ ಇರಬೇಡಿ. ಆತನು ಇಸ್ರೇಲರಿಗೆ ಈ ಲೋಕದಲ್ಲಿ ಎಚ್ಚರಿಕೆ ನೀಡಿದಾಗ, ಅವರು ಆತನ ಮಾತನ್ನು ಕೇಳಲಿಲ್ಲ. ಆದರೆ ಅವರು ತಪ್ಪಿಸಿಕೊಳ್ಳಲಾಗಲಿಲ್ಲ. ಈಗ ದೇವರು ಪರಲೋಕದಿಂದ ಮಾತಾಡುತ್ತಿದ್ದಾನೆ. ಆತನ ಮಾತನ್ನು ಆಲಿಸದ ಜನರು ಹೇಗೆ ತಪ್ಪಿಸಿಕೊಳ್ಳಲಾದೀತು?


ಈ ಭೂಮಿಯನ್ನು ಏಕೆ ಹಾಳು ಮಾಡಲಾಯಿತು? ಇದನ್ನು ಯಾರೂ ಹೋಗದ ಬರಿದಾದ ಮರಳುಗಾಡನ್ನಾಗಿ ಏಕೆ ಮಾಡಲಾಯಿತು? ಇದನ್ನರಿತ ಜ್ಞಾನಿಯೊಬ್ಬನಿದ್ದಾನೆಯೇ? ಯೆಹೋವನಿಂದ ತಿಳಿದುಕೊಂಡ ಜ್ಞಾನಿಯೊಬ್ಬನಿದ್ದಾನೆಯೇ? ಯೆಹೋವನ ಸಂದೇಶವನ್ನು ವಿವರಿಸಬಲ್ಲವನೊಬ್ಬನಿದ್ದಾನೆಯೇ?


ನನ್ನ ಜನರಲ್ಲಿ ಯಾರಾದರೂ ದೇವರ ಮಾತನ್ನು ಕೇಳಿದ್ದಾರೋ? ಇಲ್ಲ! ಆದರೆ ನೀವು ಆತನ ಮಾತುಗಳಿಗೆ ಲಕ್ಷ್ಯಗೊಟ್ಟು ಕೇಳಿ ಸಂಭವಿಸಿರುವದನ್ನು ಗಮನಿಸಬೇಕು.


ಉಪದೇಶಕ್ಕೆ ಕಿವಿಗೊಟ್ಟು ಸರಿಪಡಿಸಿಕೊ. ಆಗ ನೀನು ಜ್ಞಾನಿಯಾಗುವೆ.


ನನ್ನ ಉಪದೇಶವನ್ನು ಬೆಳ್ಳಿಗಿಂತಲೂ ನನ್ನ ಜ್ಞಾನೋಪದೇಶವನ್ನು ಶುದ್ಧ ಬಂಗಾರಕ್ಕಿಂತಲೂ ಉತ್ತಮವೆಂದು ಸ್ವೀಕರಿಸಿಕೊಳ್ಳಿ.


ಆಗ ಯೆರೆಮೀಯನಿಗೆ ಯೆಹೋವನಿಂದ ಸಂದೇಶ ಬಂದಿತು:


ಯೆರೆಮೀಯನು ಈ ಸಂದೇಶವನ್ನು ಯೆಹೂದದ ಜನರೆಲ್ಲರಿಗೂ ಜೆರುಸಲೇಮಿನ ಜನರೆಲ್ಲರಿಗೂ ಸಾರಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು