Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 35:15 - ಪರಿಶುದ್ದ ಬೈಬಲ್‌

15 ನಾನು ನನ್ನ ಸೇವಕರಾದ ಪ್ರವಾದಿಗಳನ್ನು ಇಸ್ರೇಲಿಗೆ ಮತ್ತು ಯೆಹೂದಕ್ಕೆ ಕಳುಹಿಸಿಕೊಟ್ಟೆ. ನಾನು ಅವರನ್ನು ನಿಮ್ಮಲ್ಲಿಗೆ ಪುನಃಪುನಃ ಕಳುಹಿಸಿಕೊಟ್ಟೆ. ಆ ಪ್ರವಾದಿಗಳು, “ಇಸ್ರೇಲಿನ ಮತ್ತು ಯೆಹೂದದ ಪ್ರತಿಯೊಬ್ಬರೂ ದುಷ್ಕೃತ್ಯಗಳನ್ನು ಮಾಡುವದನ್ನು ನಿಲ್ಲಿಸಬೇಕು. ನೀವು ಒಳ್ಳೆಯವರಾಗಿರಬೇಕು. ಬೇರೆ ದೇವರುಗಳನ್ನು ಅನುಸರಿಸಬಾರದು. ಅವುಗಳನ್ನು ಪೂಜಿಸಬಾರದು. ಅವುಗಳ ಸೇವೆಮಾಡಬಾರದು ಎಂದು ಹೇಳಿದರು. ನನ್ನ ಆಜ್ಞೆಯನ್ನು ಪಾಲಿಸಿದರೆ ನಾನು ನಿಮಗೂ ಮತ್ತು ನಿಮ್ಮ ಪೂರ್ವಿಕರಿಗೂ ಕೊಟ್ಟ ಪ್ರದೇಶದಲ್ಲಿ ನೀವು ವಾಸಿಸಬಹುದು” ಎಂದು ಹೇಳಿದ್ದೆ. ಆದರೆ ನೀವು ನನ್ನ ಸಂದೇಶದ ಕಡೆಗೆ ಗಮನ ಕೊಡಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

15 ಇದಲ್ಲದೆ ನಾನು ನನ್ನ ಸೇವಕರಾದ ಪ್ರವಾದಿಗಳನ್ನೆಲ್ಲಾ ನಿಮ್ಮ ಬಳಿಗೆ ನಿತ್ಯವೂ ಕಳುಹಿಸುತ್ತಾ, ನೀವೆಲ್ಲರೂ ನಿಮ್ಮ ನಿಮ್ಮ ದುರ್ಮಾರ್ಗಗಳಿಂದ ಹಿಂದಿರುಗಿ ನಿಮ್ಮ ನಡತೆಗಳನ್ನು ಸರಿಪಡಿಸಿಕೊಳ್ಳಿರಿ, ಅನ್ಯದೇವತೆಗಳನ್ನು ಹಿಂಬಾಲಿಸಿ ಸೇವಿಸದಿರಿ; ಹೀಗೆ ಮಾಡಿದರೆ ನಾನು ನಿಮಗೂ, ನಿಮ್ಮ ಪೂರ್ವಿಕರಿಗೂ ದಯಪಾಲಿಸಿದ ದೇಶದಲ್ಲಿ ನೀವು ಸುಖವಾಸಿಗಳಾಗಿರುವಿರಿ ಎಂದು ಹೇಳಿಸಿದರೂ ನೀವು ನನ್ನ ಮಾತನ್ನು ಕೇಳಲಿಲ್ಲ, ಕಿವಿಗೊಡಲೂ ಇಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

15 ಇದಲ್ಲದೆ, ನಾನು ನನ್ನ ದಾಸರಾದ ಪ್ರವಾದಿಗಳನ್ನೆಲ್ಲ ನಿಮ್ಮ ಬಳಿಗೆ ನಿರಂತರವಾಗಿ ಕಳಿಸುತ್ತಾ ಬಂದೆ. ನೀವೆಲ್ಲರು ನಿಮ್ಮ ನಿಮ್ಮ ದುರ್ಮಾರ್ಗಗಳಿಂದ ಹಿಂದಿರುಗಿ ನಿಮ್ಮ ನಡತೆಗಳನ್ನು ಸರಿಪಡಿಸಿಕೊಳ್ಳಿರಿ. ಅನ್ಯದೇವತೆಗಳನ್ನು ಹಿಂಬಾಲಿಸಿ ಪೂಜಿಸದಿರಿ. ಹಾಗೆ ಮಾಡಿದರೆ ನಾನು ನಿಮಗೂ ನಿಮ್ಮ ಪೂರ್ವಜರಿಗೂ ಅನುಗ್ರಹಿಸಿದ ನಾಡಿನಲ್ಲಿ ಸುಖವಾಸಿಗಳಾಗಿರುವಿರಿ ಎಂದು ಅವರ ಮುಖಾಂತರ ಎಚ್ಚರಿಸಿದೆ. ಆದರೆ ನೀವು ಕೇಳಲಿಲ್ಲ, ಕಿವಿಗೊಡಲೂ ಇಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

15 ಇದಲ್ಲದೆ ನಾನು ನನ್ನ ಸೇವಕರಾದ ಪ್ರವಾದಿಗಳನ್ನೆಲ್ಲಾ ನಿಮ್ಮ ಬಳಿಗೆ ನಿತ್ಯವೂ ಕಳುಹಿಸುತ್ತಾ - ನೀವೆಲ್ಲರೂ ನಿಮ್ಮ ನಿಮ್ಮ ದುರ್ಮಾರ್ಗಗಳಿಂದ ಹಿಂದಿರುಗಿ ನಿಮ್ಮ ನಡತೆಗಳನ್ನು ಸರಿಪಡಿಸಿಕೊಳ್ಳಿರಿ, ಅನ್ಯದೇವತೆಗಳನ್ನು ಹಿಂಬಾಲಿಸಿ ಸೇವಿಸದಿರಿ; ಹೀಗೆ ಮಾಡಿದರೆ ನಾನು ನಿಮಗೂ ನಿಮ್ಮ ಪಿತೃಗಳಿಗೂ ದಯಪಾಲಿಸಿದ ದೇಶದಲ್ಲಿ ನೀವು ಸುಖವಾಸಿಗಳಾಗಿರುವಿರಿ ಎಂದು ಹೇಳಿಸಿದರೂ ನೀವು ನನ್ನ ಮಾತನ್ನು ಕೇಳಲಿಲ್ಲ, ಕಿವಿಗೊಡಲೂ ಇಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

15 ಇದಲ್ಲದೆ, ನಾನು ನನ್ನ ದಾಸರಾದ ಪ್ರವಾದಿಗಳನ್ನೆಲ್ಲಾ ನಿಮ್ಮ ಬಳಿಗೆ ನಿರಂತರವಾಗಿ ಕಳುಹಿಸುತ್ತಾ ಬಂದೆ. “ನೀವೆಲ್ಲರೂ ನಿಮ್ಮ ನಿಮ್ಮ ದುರ್ಮಾರ್ಗಗಳಿಂದ ಹಿಂದಿರುಗಿ, ನಿಮ್ಮ ನಡತೆಗಳನ್ನು ಸರಿಪಡಿಸಿಕೊಳ್ಳಿರಿ. ಅನ್ಯದೇವತೆಗಳನ್ನು ಹಿಂಬಾಲಿಸಿ ಪೂಜಿಸದಿರಿ. ಹಾಗೆ ಮಾಡಿದರೆ ನಾನು ನಿಮಗೂ, ನಿಮ್ಮ ಪೂರ್ವಜರಿಗೂ ಅನುಗ್ರಹಿಸಿದ ನಾಡಿನಲ್ಲಿ ವಾಸಿಸುವಿರಿ ಎಂದು ಅವರ ಮುಖಾಂತರ ಎಚ್ಚರಿಸಿದೆ.” ಆದರೆ ನೀವು ಕೇಳಲಿಲ್ಲ. ಕಿವಿಗೊಡಲೂ ಇಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 35:15
31 ತಿಳಿವುಗಳ ಹೋಲಿಕೆ  

“ಯೆರೆಮೀಯನೇ, ಯೆಹೂದದ ಜನರಿಗೆ ಮತ್ತು ಜೆರುಸಲೇಮಿನಲ್ಲಿ ವಾಸಿಸುವ ಜನರಿಗೆ ಯೆಹೋವನು ಹೀಗೆನ್ನುವನು: ‘ಈಗಲೇ ನಾನು ನಿಮಗೋಸ್ಕರ ತೊಂದರೆಗಳನ್ನು ಎಬ್ಬಿಸುತ್ತೇನೆ. ನಿಮ್ಮ ವಿರುದ್ಧ ಯೋಜನೆಗಳನ್ನು ಹಾಕುತ್ತಿದ್ದೇನೆ. ಆದ್ದರಿಂದ ನೀವು ಮಾಡುತ್ತಿರುವ ದುಷ್ಕೃತ್ಯಗಳನ್ನು ನಿಲ್ಲಿಸಬೇಕು. ಪ್ರತಿಯೊಬ್ಬನು ಪರಿವರ್ತನೆ ಹೊಂದಿ ಒಳ್ಳೆಯ ಕೆಲಸಗಳನ್ನು ಮಾಡಲು ಪ್ರಾರಂಭಿಸಬೇಕು’ ಎಂದು ಹೇಳು.


ನಾನು ಜನರಿಗೆ, ‘ನಿಮ್ಮ ಪಾಪಗಳಿಗಾಗಿ ಪಶ್ಚಾತ್ತಾಪಪಟ್ಟು ದೇವರ ಕಡೆಗೆ ತಿರುಗಿಕೊಳ್ಳಿರಿ’ ಎಂತಲೂ ಅವರಿಗಾಗಿರುವ ಮಾನಸಾಂತರವನ್ನು ಯೋಗ್ಯವಾದ ಕಾರ್ಯಗಳ ಮೂಲಕ ತೋರ್ಪಡಿಸಬೇಕೆಂತಲೂ ಹೇಳಿದೆನು. ಮೊದಲನೆಯದಾಗಿ ದಮಸ್ಕಕ್ಕೂ ಬಳಿಕ ಜೆರುಸಲೇಮಿಗೂ ಜುದೇಯದ ಪ್ರತಿಯೊಂದು ಭಾಗಕ್ಕೂ ಹೋಗಿ ಅಲ್ಲಿರುವ ಜನರಿಗೆ ಈ ಸಂಗತಿಗಳನ್ನು ತಿಳಿಸಿದೆನು. ಅಲ್ಲದೆ ಯೆಹೂದ್ಯರಲ್ಲದ ಜನರ ಬಳಿಗೂ ಹೋದೆನು.


ನೀವು ಈ ಆಜ್ಞೆಗಳನ್ನು ಪಾಲಿಸಿದರೆ ದಾವೀದನ ಸಿಂಹಾಸನಾರೂಢರಾದ ರಾಜರು ಈ ದ್ವಾರಗಳಿಂದ ಜೆರುಸಲೇಮ್ ನಗರವನ್ನು ಪ್ರವೇಶಿಸುವುದು ಮುಂದುವರೆಯುತ್ತದೆ. ಆ ರಾಜರು ತಮ್ಮ ಅಧಿಕಾರಿಗಳೊಂದಿಗೆ ಈ ದ್ವಾರಗಳಿಂದ ಬರುತ್ತಾರೆ. ಆ ಅರಸರು, ಅವರ ಅಧಿಕಾರಿಗಳು, ಅವರ ಜನರು, ರಥಗಳಲ್ಲಿ ಮತ್ತು ಕುದುರೆಗಳ ಮೇಲೆ ಕುಳಿತುಕೊಂಡು ಬರುವರು.


ಆದುದರಿಂದ ಈ ಉಪದೇಶವನ್ನು ಅನುಸರಿಸದವನು ಅವಿಧೇಯನಾಗಿರುವುದು ದೇವರಿಗೇ ಹೊರತು ಮಾನವನಿಗಲ್ಲ. ನಮಗೆ ತನ್ನ ಪವಿತ್ರಾತ್ಮನನ್ನು ನೀಡಿದಾತನು ದೇವರೇ.


“ನಿಮ್ಮ ಮಾತನ್ನು ಕೇಳುವವನು ನನ್ನ ಮಾತನ್ನೇ ಕೇಳುವವನಾಗಿದ್ದಾನೆ. ನಿಮ್ಮನ್ನು ಅಂಗೀಕರಿಸದವನು ನನ್ನನ್ನೇ ಅಂಗಿಕರಿಸದವನಾಗಿದ್ದಾನೆ. ನನ್ನನ್ನು ನಿರಾಕರಿಸುವವನು ನನ್ನನ್ನು ಕಳುಹಿಸಿದಾತನನ್ನೇ (ದೇವರು) ನಿರಾಕರಿಸುವವನಾಗಿದ್ದಾನೆ” ಎಂದು ಹೇಳಿದನು.


ನಾನು ನಿಮ್ಮ ಪೂರ್ವಿಕರಿಗೆ ‘ಪ್ರತಿ ಏಳು ವರ್ಷದ ಕೊನೆಯಲ್ಲಿ ಪ್ರತಿಯೊಬ್ಬ ವ್ಯಕ್ತಿಯು ತನ್ನ ಇಬ್ರಿಯ ಗುಲಾಮರನ್ನು ಬಿಡುಗಡೆ ಮಾಡಬೇಕು. ತನ್ನನ್ನು ನಿಮಗೆ ಮಾರಿಕೊಂಡ ಇಬ್ರಿಯ ಸಹೋದರ ನಿಮ್ಮಲ್ಲಿದ್ದರೆ ಅವನು ಆರು ವರ್ಷ ಸೇವೆಮಾಡಿದ ನಂತರ ಅವನನ್ನು ಬಿಡುಗಡೆ ಮಾಡಬೇಕು’ ಎಂದು ಹೇಳಿದ್ದೆ. ಆದರೆ ನಿಮ್ಮ ಪೂರ್ವಿಕರು ನನ್ನ ಮಾತುಗಳನ್ನು ಕಿವಿಗೆ ಹಾಕಿಕೊಳ್ಳಲಿಲ್ಲ; ನನ್ನ ಕಡೆಗೆ ಗಮನ ಕೊಡಲಿಲ್ಲ.


ನೀವು ನಿಮ್ಮ ನಡತೆಯನ್ನು ಬದಲಾಯಿಸಿಕೊಂಡು, ಸತ್ಕಾರ್ಯಗಳನ್ನು ಮಾಡಲಾರಂಭಿಸಬೇಕು. ನೀವು ನಿಮ್ಮ ದೇವರಾದ ಯೆಹೋವನ ಆಜ್ಞಾಪಾಲನೆ ಮಾಡಬೇಕು. ಆಗ ಯೆಹೋವನು ತನ್ನ ಮನಸ್ಸನ್ನು ಬದಲಾಯಿಸಿ ನಿಮಗೆ ಕೇಡುಮಾಡುವುದಿಲ್ಲ.


ಜೆರುಸಲೇಮಿನ ಜನರೇ, ನಿಮ್ಮ ಹೃದಯದ ಕೆಟ್ಟತನವನ್ನು ತೊಳೆದುಕೊಳ್ಳಿರಿ. ರಕ್ಷಣೆಹೊಂದಲು ನಿಮ್ಮ ಹೃದಯಗಳನ್ನು ಪವಿತ್ರಗೊಳಿಸಿರಿ. ದುರಾಲೋಚನೆಗಳನ್ನು ಮುಂದುವರಿಸಬೇಡಿರಿ.


ಇದು ಯೆಹೋವನ ಸಂದೇಶ: “ಇಸ್ರೇಲೇ, ನೀನು ಹಿಂತಿರುಗಿ ಬರಲು ಇಚ್ಛಿಸಿದರೆ ನನ್ನಲ್ಲಿಗೆ ಹಿಂತಿರುಗಿ ಬಾ. ನಿನ್ನ ವಿಗ್ರಹಗಳನ್ನು ಎಸೆದುಬಿಡು. ನನ್ನಿಂದ ದೂರಸರಿದು ಅಲೆದಾಡಬೇಡ.


“ವಿಶ್ವಾಸದ್ರೋಹಿಗಳಾದ ಜನರೇ, ನನ್ನಲ್ಲಿಗೆ ಹಿಂತಿರುಗಿ ಬನ್ನಿ” ಇದು ಯೆಹೋವನ ನುಡಿಯಾಗಿತ್ತು. “ನಾನೇ ನಿಮ್ಮ ಒಡೆಯನು. ನಾನು ಪ್ರತಿಯೊಂದು ನಗರದಿಂದ ಒಬ್ಬ ವ್ಯಕ್ತಿಯನ್ನು ಮತ್ತು ಪ್ರತಿಯೊಂದು ಕುಲದಿಂದ ಇಬ್ಬರನ್ನು ಆರಿಸಿ ಚೀಯೋನಿಗೆ ಕರೆದು ತರುವೆನು.


ನೀವು ನಿಮ್ಮ ದೇವರಾದ ಯೆಹೋವನನ್ನು ಪ್ರೀತಿಸಿ ಆತನಿಗೆ ವಿಧೇಯರಾಗಬೇಕು. ಯೆಹೋವನು ನಿಮ್ಮ ಜೀವವಾಗಿದ್ದಾನೆ. ನಿಮ್ಮ ಪೂರ್ವಿಕರಾದ ಅಬ್ರಹಾಮನಿಗೆ, ಇಸಾಕನಿಗೆ, ಯಾಕೋಬನಿಗೆ ಕೊಡುವುದಾಗಿ ವಾಗ್ದಾನ ಮಾಡಿದ್ದ ದೇಶದಲ್ಲಿ ನಿಮಗೆ ದೀರ್ಘವಾದ ಆಯುಷ್ಯನ್ನು ಅನುಗ್ರಹಿಸುತ್ತಾನೆ.”


“ನನ್ನನ್ನಲ್ಲದೆ ಬೇರೆ ಯಾವ ದೇವರುಗಳನ್ನೂ ನೀವು ಆರಾಧಿಸಬಾರದು.


ಇತರ ದೇವರುಗಳನ್ನು ಅವಲಂಭಿಸಬಾರದು. ನಿಮ್ಮ ಸುತ್ತಲೂ ಇರುವವರ ದೇವರುಗಳನ್ನು ಪೂಜಿಸಬಾರದು.


ಆದರೆ ನಿಮ್ಮ ಪೂರ್ವಿಕರು ನನ್ನ ಮಾತನ್ನು ಕೇಳಲಿಲ್ಲ. ಅವರು ಮೊಂಡರಾಗಿದ್ದು ತಮ್ಮ ದುಷ್ಟಹೃದಯ ಹೇಳಿದಂತೆ ಮಾಡಿದರು. ಆಜ್ಞಾಪಾಲನೆ ಮಾಡದಿದ್ದರೆ ಅವರಿಗೆ ಕೆಡುಕಾಗುವದೆಂದು ಒಡಂಬಡಿಕೆಯಲ್ಲಿ ಹೇಳಲಾಗಿದೆ. ಅದಕ್ಕಾಗಿ ನಾನು ಅವರಿಗೆ ಕೇಡುಂಟಾಗುವಂತೆ ಮಾಡಿದೆ, ಒಡಂಬಡಿಕೆಯನ್ನು ಪಾಲಿಸಬೇಕೆಂದು ನಾನು ಅವರಿಗೆ ಆಜ್ಞಾಪಿಸಿದೆ ಆದರೆ ಅವರು ಪಾಲಿಸಲಿಲ್ಲ.”


ಯೆಹೂದದಲ್ಲಿ ದುಷ್ಟರೂ ಗರ್ವಿಷ್ಠರೂ ಆಗಿರುವ ಜನರನ್ನು ಹಾಳುಮಾಡುವೆನು. ಅವರು ನನ್ನ ಸಂದೇಶವನ್ನು ಕೇಳುವುದಿಲ್ಲ. ಅವರು ಹಟಮಾರಿಗಳೂ ತಮ್ಮ ಮನಸ್ಸಿಗೆ ಬಂದಂತೆ ಮಾಡುವವರೂ ಆಗಿದ್ದಾರೆ. ಅವರು ಬೇರೆ ದೇವರುಗಳನ್ನು ಅನುಸರಿಸುತ್ತಾರೆ ಮತ್ತು ಪೂಜಿಸುತ್ತಾರೆ. ಯೆಹೂದದ ಜನರು ಈ ನಾರಿನ ನಡುಪಟ್ಟಿಯಂತೆ ಆಗುವರು. ಅವರು ಹಾಳಾಗಿ ನಿಷ್ಪ್ರಯೋಜಕರಾಗುವರು.


ಅವರು ನನ್ನ ಪರಲೋಕದ ಸಭೆಯಲ್ಲಿ ಭಾಗವಹಿಸಿದ್ದ ಪಕ್ಷದಲ್ಲಿ ಅವರು ನನ್ನ ಸಂದೇಶಗಳನ್ನು ಯೆಹೂದದ ಜನರಿಗೆ ಹೇಳಬಹುದಾಗಿತ್ತು. ಅವರ ಕೆಟ್ಟತನವನ್ನೂ ದುಷ್ಟತನವನ್ನೂ ತಡೆಯಬಹುದಾಗಿತ್ತು.”


ಯೆಹೋವನು ತನ್ನ ಸೇವಕರಾದ ಪ್ರವಾದಿಗಳನ್ನು ಮತ್ತೆಮತ್ತೆ ನಿಮ್ಮಲ್ಲಿಗೆ ಕಳುಹಿಸಿದ್ದಾನೆ. ಆದರೆ ನೀವು ಅವರ ಮಾತುಗಳನ್ನು ಕಿವಿಗೆ ಹಾಕಿಕೊಂಡಿಲ್ಲ. ನೀವು ಅವರ ಕಡೆಗೆ ಸ್ವಲ್ಪವೂ ಗಮನಕೊಟ್ಟಿಲ್ಲ.


ನನ್ನ ಸೇವಕರು ಹೇಳುವುದನ್ನು ನೀವು ಕೇಳಬೇಕು. ಪ್ರವಾದಿಗಳು ನನ್ನ ಸೇವಕರಾಗಿದ್ದಾರೆ. ನಾನು ಮತ್ತೆಮತ್ತೆ ನನ್ನ ಪ್ರವಾದಿಗಳನ್ನು ನಿಮ್ಮಲ್ಲಿಗೆ ಕಳುಹಿಸಿದೆನು. ಆದರೆ ನೀವು ಅವರ ಮಾತುಗಳಿಗೆ ಕಿವಿಗೊಡಲಿಲ್ಲ.


ಜೆರುಸಲೇಮಿನವರು ನನ್ನ ಸಂದೇಶಕ್ಕೆ ಕಿವಿಗೊಟ್ಟಿಲ್ಲವಾದ ಕಾರಣ ನಾನು ಹಾಗೆಲ್ಲ ನಡೆಯುವಂತೆ ಮಾಡುವೆನು” ಇದು ಯೆಹೋವನ ನುಡಿ. “ನಾನು ಮತ್ತೆಮತ್ತೆ ನನ್ನ ಸಂದೇಶವನ್ನು ಅವರಿಗೆ ಕೊಟ್ಟೆ. ಆ ಜನರಿಗೆ ಸಂದೇಶಗಳನ್ನು ಕೊಡುವದಕ್ಕಾಗಿ ನನ್ನ ಸೇವಕರಾದ ಪ್ರವಾದಿಗಳನ್ನು ಉಪಯೋಗಿಸಿಕೊಂಡೆ. ಆದರೆ ಆ ಜನರು ಕೇಳಲಿಲ್ಲ.” ಇದು ಯೆಹೋವನ ನುಡಿ.


“ಆ ಜನರು ಸಹಾಯಕೋರಿ ನನ್ನಲ್ಲಿಗೆ ಬರಬೇಕಾಗಿತ್ತು. ಆದರೆ ಅವರು ನನಗೆ ವಿಮುಖರಾದರು. ನಾನು ಮತ್ತೆಮತ್ತೆ ಅವರಿಗೆ ಬುದ್ಧಿಕಲಿಸುವ ಪ್ರಯತ್ನ ಮಾಡಿದೆ. ಆದರೆ ಅವರು ನನ್ನ ಮಾತನ್ನು ಕೇಳಲಿಲ್ಲ. ನಾನು ಅವರನ್ನು ತಿದ್ದುವ ಪ್ರಯತ್ನ ಮಾಡಿದೆ, ಆದರೆ ಅವರು ನನ್ನ ಮಾತನ್ನು ಕೇಳಲಿಲ್ಲ.


ನಾನು ಮಾಡಬೇಕೆಂದು ಯೋಚಿಸಿರುವುದನ್ನು ಯೆಹೂದ ಕುಲದವರು ಕೇಳಿಸಿಕೊಳ್ಳಬಹುದು. ಅವರು ಮಾಡುತ್ತಿರುವ ದುಷ್ಕೃತ್ಯಗಳನ್ನು ನಿಲ್ಲಿಸಬಹುದು. ಅವರು ಹಾಗೆ ಮಾಡಿದರೆ ಅವರು ಮಾಡಿದ ಪಾಪಗಳನ್ನು ನಾನು ಕ್ಷಮಿಸುವೆನು.”


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು