Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 36:1 - ಪರಿಶುದ್ದ ಬೈಬಲ್‌

1 ಯೋಷೀಯನ ಮಗನಾದ ಯೆಹೋಯಾಕೀಮನ ಆಳ್ವಿಕೆಯ ನಾಲ್ಕನೇ ವರ್ಷದಲ್ಲಿ ಯೆರೆಮೀಯನಿಗೆ ಯೆಹೋವನಿಂದ ಒಂದು ಸಂದೇಶ ಬಂದಿತು. ಯೆಹೋವನ ಸಂದೇಶ ಹೀಗಿತ್ತು:

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ಯೋಷೀಯನ ಮಗನೂ ಯೆಹೂದದ ಅರಸನೂ ಆದ ಯೆಹೋಯಾಕೀಮನ ಆಳ್ವಿಕೆಯ ನಾಲ್ಕನೆಯ ವರ್ಷದಲ್ಲಿ ಯೆಹೋವನು ಯೆರೆಮೀಯನಿಗೆ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

1 ಯೋಷೀಯನ ಮಗನೂ ಜುದೇಯದ ಅರಸನೂ ಆದ ಯೆಹೋಯಾಕೀಮನ ಆಳ್ವಿಕೆಯ ನಾಲ್ಕನೆಯ ವರ್ಷದಲ್ಲಿ ಯೆರೆಮೀಯನಿಗೆ ಕೇಳಿ ಬಂದ ಸರ್ವೇಶ್ವರನ ವಾಣಿ:

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

1 ಯೋಷೀಯನ ಮಗನೂ ಯೆಹೂದದ ಅರಸನೂ ಆದ ಯೆಹೋಯಾಕೀಮನ ಆಳಿಕೆಯ ನಾಲ್ಕನೆಯ ವರುಷದಲ್ಲಿ ಯೆಹೋವನು ಯೆರೆಮೀಯನಿಗೆ ಈ ಮಾತನ್ನು ದಯಪಾಲಿಸಿದನು -

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

1 ಯೆಹೂದದ ಅರಸನಾದ ಯೋಷೀಯನ ಮಗನಾದ ಯೆಹೋಯಾಕೀಮನ ನಾಲ್ಕನೆಯ ವರ್ಷದಲ್ಲಿ ಯೆರೆಮೀಯನಿಗೆ ಯೆಹೋವ ದೇವರಿಂದ ಈ ವಾಕ್ಯವು ಬಂದಿತು:

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 36:1
9 ತಿಳಿವುಗಳ ಹೋಲಿಕೆ  

ಯೆಹೂದದ ಎಲ್ಲಾ ಜನರ ಬಗ್ಗೆ ಯೆರೆಮೀಯನಿಗೆ ಈ ಸಂದೇಶವು ಬಂದಿತು. ಈ ಸಂದೇಶವು ಯೆಹೂದದ ಅರಸನಾದ ಯೆಹೋಯಾಕೀಮನ ಆಳ್ವಿಕೆಯ ನಾಲ್ಕನೆಯ ವರ್ಷದಲ್ಲಿ ಬಂದಿತು. ಯೆಹೋಯಾಕೀಮನು ಯೋಷೀಯನ ಮಗ. ಅವನ ಆಳ್ವಿಕೆಯ ನಾಲ್ಕನೇ ವರ್ಷದಲ್ಲಿ ಅಂದರೆ ಬಾಬಿಲೋನಿನಲ್ಲಿ ನೆಬೂಕದ್ನೆಚ್ಚರನ ಆಳ್ವಿಕೆಯ ಮೊದಲನೇ ವರ್ಷದಲ್ಲಿ


ಯೆಹೋಯಾಕೀಮನು ಯೋಷೀಯನ ಮಗ. ಯೆಹೋಯಾಕೀಮನು ಯೆಹೂದದ ರಾಜನಾದ ನಾಲ್ಕನೇ ವರ್ಷದಲ್ಲಿ ಪ್ರವಾದಿಯಾದ ಯೆರೆಮೀಯನು ನೇರೀಯನ ಮಗನಾದ ಬಾರೂಕನಿಗೆ ಹೀಗೆ ಹೇಳಿದನು. ಬಾರೂಕನು ಅದನ್ನು ಒಂದು ಸುರುಳಿಯ ಮೇಲೆ ಬರೆದನು. ಯೆರೆಮೀಯನು ಬಾರೂಕನಿಗೆ ಹೇಳಿದ್ದು ಹೀಗೆ:


ಯೆಹೋಯಾಕೀಮನು ಯೆಹೂದವನ್ನು ಆಳುತ್ತಿದ್ದ ಕಾಲದಲ್ಲಿ ಯೆರೆಮೀಯನಿಗೆ ಯೆಹೋವನಿಂದ ಒಂದು ಸಂದೇಶ ಬಂದಿತು. ಯೆಹೋಯಾಕೀಮನು ರಾಜನಾದ ಯೋಷೀಯನ ಮಗನಾಗಿದ್ದನು. ಯೆಹೋವನ ಸಂದೇಶ ಹೀಗಿತ್ತು:


ಯೆಹೋಯಾಕೀಮನು ಯೆಹೂದ ದೇಶದ ಪಟ್ಟಕ್ಕೆ ಬಂದಾಗ ಇಪ್ಪತ್ತೈದು ವರ್ಷ ಪ್ರಾಯದವನಾಗಿದ್ದನು. ಅವನು ಜೆರುಸಲೇಮಿನಲ್ಲಿ ಹನ್ನೊಂದು ವರ್ಷ ಆಳಿದನು. ಯೆಹೋಯಾಕೀಮನು ಯೆಹೋವನ ಚಿತ್ತಕ್ಕೆ ಒಳಗಾಗಲಿಲ್ಲ. ಅವನು ತನ್ನ ದೇವರಾದ ಯೆಹೋವನ ವಿರುದ್ಧವಾಗಿ ಪಾಪಮಾಡಿದನು.


ಕಳೆದ ಇಪ್ಪತ್ಮೂರು ವರ್ಷಗಳಿಂದ ನಾನು ನಿಮಗೆ ಮತ್ತೆಮತ್ತೆ ಯೆಹೋವನ ಸಂದೇಶವನ್ನು ಕೊಡುತ್ತಿದ್ದೇನೆ. ಅಮೋನನ ಮಗನಾದ ಯೋಷೀಯನು ಯೆಹೂದದ ರಾಜನಾದ ಹದಿಮೂರನೆ ವರ್ಷದಿಂದ ನಾನು ಪ್ರವಾದಿಯಾಗಿದ್ದೇನೆ. ಅಂದಿನಿಂದ ಇಂದಿನವರೆಗೆ ನಾನು ಯೆಹೋವನ ಸಂದೇಶಗಳನ್ನು ನಿಮಗೆ ತಿಳಿಸುತ್ತಾ ಬಂದಿದ್ದೇನೆ. ಆದರೆ ನೀವು ಕಿವಿಗೆ ಹಾಕಿಕೊಂಡಿಲ್ಲ.


ಯೆಹೋಯಾಕೀಮನ ಆಳ್ವಿಕೆಯ ಐದನೇ ವರ್ಷದ ಒಂಭತ್ತನೇ ತಿಂಗಳಲ್ಲಿ ಒಂದು ಉಪವಾಸವನ್ನು ಪ್ರಕಟಿಸಲಾಯಿತು. ಜೆರುಸಲೇಮ್ ನಗರದ ನಿವಾಸಿಗಳೆಲ್ಲರೂ ಯೆಹೂದದ ಬೇರೆ ಊರುಗಳಿಂದ ಜೆರುಸಲೇಮಿಗೆ ಬಂದವರೆಲ್ಲರೂ ಯೆಹೋವನ ಆಲಯದಲ್ಲಿ ಉಪವಾಸ ಮಾಡುವರೆಂದು ಗೊತ್ತುಪಡಿಸಲಾಗಿತ್ತು.


ಈ ಸಂದೇಶವು ಈಜಿಪ್ಟ್ ಜನಾಂಗದ ಬಗ್ಗೆ ಇದೆ. ಈ ಸಂದೇಶವು ಫರೋಹನೆಕೋವಿನ ಸೈನ್ಯದ ಬಗ್ಗೆ ಇದೆ. ಫರೋಹನೆಕೋವು ಈಜಿಪ್ಟಿನ ರಾಜನಾಗಿದ್ದನು. ಅವನ ಸೈನ್ಯವನ್ನು ಕರ್ಕೆಮೀಷ್ ಪಟ್ಟಣದಲ್ಲಿ ಸೋಲಿಸಲಾಯಿತು. ಕರ್ಕೆಮೀಷ್ ಪಟ್ಟಣವು ಯೂಫ್ರೇಟೀಸ್ ನದಿಯ ದಂಡೆಯ ಮೇಲಿದೆ. ಬಾಬಿಲೋನಿನ ರಾಜನಾದ ನೆಬೂಕದ್ನೆಚ್ಚರನು ಯೆಹೂದದಲ್ಲಿ ಯೆಹೋಯಾಕೀಮನ ಆಳ್ವಿಕೆಯ ನಾಲ್ಕನೆಯ ವರ್ಷದಲ್ಲಿ ಫರೋಹನೆಕೋವಿನ ಸೈನ್ಯವನ್ನು ಕರ್ಕೆಮೀಷಿನಲ್ಲಿ ಸೋಲಿಸಿದನು. ಯೆಹೋಯಾಕೀಮನು ರಾಜನಾದ ಯೋಷೀಯನ ಮಗನಾಗಿದ್ದನು. ಈಜಿಪ್ಟಿಗೆ ಯೆಹೋವನ ಸಂದೇಶ ಹೀಗಿತ್ತು:


ನೆಬೂಕದ್ನೆಚ್ಚರನು ಬಾಬಿಲೋನಿನ ಅರಸನಾಗಿದ್ದನು. ನೆಬೂಕದ್ನೆಚ್ಚರನು ಜೆರುಸಲೇಮಿಗೆ ಬಂದನು. ನೆಬೂಕದ್ನೆಚ್ಚರನು ತನ್ನ ಸೈನ್ಯ ಸಮೇತ ಜೆರುಸಲೇಮಿಗೆ ಮುತ್ತಿಗೆ ಹಾಕಿದನು. ಯೆಹೂದದ ಅರಸನಾದ ಯೆಹೋಯಾಕೀಮನ ಆಳ್ವಿಕೆಯ ಮೂರನೆಯ ವರ್ಷದಲ್ಲಿ ಈ ಘಟನೆ ನಡೆಯಿತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು