Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 36:19 - ಪರಿಶುದ್ದ ಬೈಬಲ್‌

19 ಆಗ ರಾಜಾಧಿಕಾರಿಗಳು ಬಾರೂಕನಿಗೆ, “ನೀನು ಮತ್ತು ಯೆರೆಮೀಯನು ಹೋಗಿ ಎಲ್ಲಿಯಾದರೂ ಅಡಗಿಕೊಳ್ಳಿರಿ. ಎಲ್ಲಿ ಅಡಗಿಕೊಂಡಿದ್ದೀರೆಂಬುದನ್ನು ಯಾರಿಗೂ ತಿಳಿಸಬೇಡಿ” ಎಂದು ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

19 ಆಗ ಪ್ರಧಾನರು ಬಾರೂಕನಿಗೆ, “ಹೊರಡು, ನೀನೂ ಮತ್ತು ಯೆರೆಮೀಯನೂ ಅಡಗಿಕೊಳ್ಳಿರಿ, ನೀವೆಲ್ಲಿದ್ದೀರೆಂಬುದು ಯಾರಿಗೂ ಗೊತ್ತಾಗಬಾರದು” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

19 ಆಗ ರಾಜ್ಯಾಧಿಕಾರಿಗಳು ಬಾರೂಕನಿಗೆ, ನೀನೂ ಯೆರೆಮೀಯನೂ ಹೊರಟುಹೋಗಿ ಅವಿತುಕೊಳ್ಳಬೇಕು. ನೀವು ಇಲ್ಲಿದ್ದೀರೆಂದು ಯಾರಿಗೂ ಗೊತ್ತಾಗಬಾರದು,” ಎಂದು ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

19 ಆಗ ಪ್ರಧಾನರು ಬಾರೂಕನಿಗೆ - ಹೊರಡು, ನೀನೂ ಯೆರೆಮೀಯನೂ ಅಡಗಿಕೊಳ್ಳಿರಿ, ನೀವೆಲ್ಲಿದ್ದೀರೆಂಬದು ಯಾರಿಗೂ ಗೊತ್ತಾಗಬಾರದು ಎಂದು ಹೇಳಿ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

19 ಆಗ ಪ್ರಧಾನರು ಬಾರೂಕನಿಗೆ, “ನೀನೂ, ಯೆರೆಮೀಯನೂ ಹೋಗಿ ಅಡಗಿಕೊಳ್ಳಿರಿ; ನೀವು ಎಲ್ಲಿದ್ದೀರೆಂಬುದು ಯಾರಿಗೂ ಗೊತ್ತಾಗಬಾರದು,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 36:19
12 ತಿಳಿವುಗಳ ಹೋಲಿಕೆ  

“ಈ ಸ್ಥಳವನ್ನು ತ್ಯಜಿಸಿ, ಪೂರ್ವದಿಕ್ಕಿಗೆ ಹೋಗು. ಕೆರೀತ್ ಹಳ್ಳದ ಹತ್ತಿರ ಅಡಗಿಕೊ. ಆ ಹಳ್ಳವು ಜೋರ್ಡನ್ ನದಿಯ ಪೂರ್ವದಲ್ಲಿದೆ.


ರಾಜನಾದ ಯೆಹೋಯಾಕೀಮನು ಲಿಪಿಕಾರನಾದ ಬಾರೂಕನನ್ನು ಮತ್ತು ಪ್ರವಾದಿಯಾದ ಯೆರೆಮೀಯನನ್ನು ಬಂಧಿಸಬೇಕೆಂದು ರಾಜವಂಶೀಯನಾದ ಎರಖ್ಮೆಯೇಲ, ಅಜ್ರಿಯೇಲನ ಮಗನಾದ ಸೆರಾಯ, ಅಬ್ದೆಯೇಲನ ಮಗನಾದ ಶೆಲೆಮ್ಯ ಇವರಿಗೆ ಆಜ್ಞೆಯನ್ನು ಕೊಟ್ಟನು. ಆದರೆ ಅವರಿಂದ ಬಾರೂಕನನ್ನು ಮತ್ತು ಯೆರೆಮೀಯನನ್ನು ಹುಡುಕಲಾಗಲಿಲ್ಲ. ಯಾಕೆಂದರೆ ಯೆಹೋವನು ಅವರನ್ನು ಬಚ್ಚಿಟ್ಟಿದ್ದನು.


ನಿನ್ನ ದೇವರಾದ ಯೆಹೋವನಾಣೆ, ರಾಜನು ನಿನಗಾಗಿ ಎಲ್ಲಾ ಕಡೆಯೂ ಹುಡುಕುತ್ತಿದ್ದಾನೆ! ಅವನು ನಿನ್ನನ್ನು ಕಂಡುಹಿಡಿಯಲು ಎಲ್ಲಾ ದೇಶಗಳಿಗೂ ಜನರನ್ನು ಕಳುಹಿಸಿದ್ದಾನೆ. ಒಂದು ದೇಶದ ಅಧಿಪತಿಯು ನಮ್ಮ ದೇಶದಲ್ಲಿ ಎಲೀಯನು ಇಲ್ಲವೆಂದು ಹೇಳಿದರೆ ಆ ಮಾತು ಸತ್ಯವೊ ಎಂಬುದನ್ನು ತಿಳಿದುಕೊಳ್ಳುವುದಕ್ಕಾಗಿ ಅಹಾಬನು ಆ ಅಧಿಪತಿಯಿಂದ ಪ್ರಮಾಣ ಮಾಡಿಸುತ್ತಾನೆ.


ಒಂದು ಕಾಲದಲ್ಲಿ ಈಜೆಬೆಲಳು ಯೆಹೋವನ ಪ್ರವಾದಿಗಳನ್ನೆಲ್ಲ ಕೊಲ್ಲುತ್ತಿದ್ದಳು. ಓಬದ್ಯನು ನೂರು ಮಂದಿ ಪ್ರವಾದಿಗಳನ್ನು ಕರೆದೊಯ್ದು, ಅವರನ್ನು ಗುಹೆಗಳಲ್ಲಿ ಅಡಗಿಸಿಟ್ಟನು. ಓಬದ್ಯನು ಐವತ್ತು ಮಂದಿ ಪ್ರವಾದಿಗಳನ್ನು ಒಂದು ಗುಹೆಯಲ್ಲಿಯೂ ಉಳಿದ ಐವತ್ತು ಮಂದಿ ಪ್ರವಾದಿಗಳನ್ನು ಮತ್ತೊಂದು ಗುಹೆಯಲ್ಲಿಯೂ ಇಟ್ಟನು. ಓಬದ್ಯನು ಅವರಿಗೆ ಆಹಾರವನ್ನೂ ನೀರನ್ನೂ ಒದಗಿಸುತ್ತಿದ್ದನು.)


ಅವರು ಅಪೊಸ್ತಲರನ್ನು ಒಳಗೆ ಕರೆಸಿ, ಹೊಡೆಸಿ, ಯೇಸುವಿನ ಬಗ್ಗೆ ಜನರಿಗೆ ಹೇಳಕೂಡದೆಂದು ಎಚ್ಚರಿಸಿ ಕಳುಹಿಸಿ ಬಿಟ್ಟರು.


ಆ ಸಮಯದಲ್ಲಿ ಕೆಲವು ಫರಿಸಾಯರು ಯೇಸುವಿನ ಬಳಿಗೆ ಬಂದು, “ಇಲ್ಲಿಂದ ಹೋಗಿ ಅಡಗಿಕೊ! ಹೆರೋದನು ನಿನ್ನನ್ನು ಕೊಲ್ಲಬೇಕೆಂದಿದ್ದಾನೆ!” ಎಂದು ಹೇಳಿದರು.


ಅಮಚ್ಯನು ಆಮೋಸನಿಗೆ ಹೇಳಿದ್ದೇನೆಂದರೆ, “ಭವಿಷ್ಯವಾದಿಯೇ, ನೀನು ಯೆಹೂದಕ್ಕೆ ಹೋಗಿ ಅಲ್ಲಿ ನಿನ್ನ ಹೊಟ್ಟೆ ತುಂಬಿಸಿಕೊ. ನಿನ್ನ ಪ್ರಸಂಗವನ್ನು ಅಲ್ಲಿಯೇ ಮಾಡು.


ಒಳ್ಳೆಯವರು ನಾಯಕರಾದಾಗ ಎಲ್ಲರಿಗೂ ಸಂತೋಷ. ಆದರೆ ಕೆಡುಕನು ಅಧಿಪತಿಯಾದಾಗ ಎಲ್ಲರೂ ಅಡಗಿಕೊಳ್ಳುವರು.


ಯೆಹೋವನು ಅಮಚ್ಯನ ಮೇಲೆ ಸಿಟ್ಟುಗೊಂಡನು. ಅವನ ಬಳಿಗೆ ಒಬ್ಬ ಪ್ರವಾದಿಯನ್ನು ಕಳುಹಿಸಿ ಅವನಿಗೆ, “ಅಮಚ್ಯನೇ, ಆ ಜನರು ಪೂಜಿಸುವ ವಿಗ್ರಹಗಳಿಗೇಕೆ ನೀನು ಪೂಜೆ ಮಾಡುವೆ? ತಮ್ಮನ್ನು ಪೂಜಿಸುವವರನ್ನು ಆ ದೇವರುಗಳು ನಿನ್ನಿಂದ ಕಾಪಾಡಲಾರದೆ ಹೋದವು” ಎಂದು ಹೇಳಿದನು.


ಆಗ ಸರದಾರರು ಮತ್ತು ಸಮಸ್ತ ಜನರು ಒಬ್ಬರಿಗೊಬ್ಬರು ಮಾತನಾಡಿ ಯಾಜಕರಿಗೂ ಪ್ರವಾದಿಗಳಿಗೂ, “ಯೆರೆಮೀಯನನ್ನು ಕೊಲ್ಲಕೂಡದು. ಯೆರೆಮೀಯನು ನಮಗೆ ಹೇಳಿದ ಸಂಗತಿಗಳು ನಮ್ಮ ದೇವರಾದ ಯೆಹೋವನಿಂದ ಬಂದವುಗಳಾಗಿವೆ” ಎಂದು ಹೇಳಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು