Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 36:21 - ಪರಿಶುದ್ದ ಬೈಬಲ್‌

21 ರಾಜನಾದ ಯೆಹೋಯಾಕೀಮನು ಆ ಸುರುಳಿಯನ್ನು ತರುವದಕ್ಕೆ ಯೆಹೂದಿಯನ್ನು ಕಳುಹಿಸಿದನು. ಯೆಹೂದಿಯು ಧರ್ಮಶಾಸ್ತ್ರಜ್ಞನಾದ ಎಲೀಷಾಮನ ಕೋಣೆಯಿಂದ ಆ ಸುರುಳಿಯನ್ನು ತಂದನು. ಬಳಿಕ ರಾಜನು ಮತ್ತು ಅವನ ಸುತ್ತಲು ನಿಂತ ಅಧಿಕಾರಿಗಳೆಲ್ಲ ಕೇಳುವಂತೆ ಯೆಹೂದಿಯು ಆ ಸುರಳಿಯನ್ನು ಓದಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

21 ಕೂಡಲೆ ಅರಸನು ಸುರುಳಿಯನ್ನು ತರುವುದಕ್ಕೆ ಯೆಹೂದಿಯನ್ನು ಕಳುಹಿಸಿದನು; ಅವನು ಲೇಖಕನಾದ ಎಲೀಷಾಮನ ಕೋಣೆಯೊಳಗಿಂದ ಅದನ್ನು ತೆಗೆದುಕೊಂಡು ಬಂದು ಅರಸನ ಮತ್ತು ಅವನ ಪಕ್ಕದಲ್ಲಿ ನಿಂತಿದ್ದ ಸಕಲ ಪ್ರಧಾನರ ಮುಂದೆ ಓದಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

21 ಅವನು ಲೇಖಕ ಎಲೀಷಾಮನ ಕೊಠಡಿಯಿಂದ ಅದನ್ನು ತೆಗೆದುಕೊಂಡು ಬಂದು ಅರಸನ ಮತ್ತು ಅವನ ಪಕ್ಕದಲ್ಲಿ ನಿಂತಿದ್ದ ಎಲ್ಲ ರಾಜ್ಯಾಧಿಕಾರಿಗಳ ಮುಂದೆ ಓದಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

21 ಕೂಡಲೇ ಅರಸನು ಸುರಳಿಯನ್ನು ತರುವದಕ್ಕೆ ಯೆಹೂದಿಯನ್ನು ಕಳುಹಿಸಿದನು; ಅವನು ಲೇಖಕನಾದ ಎಲೀಷಾಮನ ಕೋಣೆಯೊಳಗಿಂದ ಅದನ್ನು ತೆಗೆದುಕೊಂಡು ಬಂದು ಅರಸನ ಮತ್ತು ಅವನ ಪಕ್ಕದಲ್ಲಿ ನಿಂತಿದ್ದ ಸಕಲ ಪ್ರಧಾನರ ಮುಂದೆ ಓದಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

21 ಹೀಗೆ ಅರಸನು ಯೆಹೂದಿಯನ್ನು, ಆ ಸುರುಳಿಯನ್ನು ತೆಗೆದುಕೊಂಡು ಬರುವ ಹಾಗೆ ಕಳುಹಿಸಿದನು; ಅವನು ಅದನ್ನು ಲೇಖಕನಾದ ಎಲೀಷಾಮನ ಕೊಠಡಿಯೊಳಗಿಂದ ತೆಗೆದುಕೊಂಡನು. ಯೆಹೂದಿಯು ಅದನ್ನು ಅರಸನಿಗೂ, ಅರಸನ ಬಳಿಯಲ್ಲಿ ನಿಂತ ಎಲ್ಲಾ ಪ್ರಧಾನರಿಗೂ ಓದಿ ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 36:21
7 ತಿಳಿವುಗಳ ಹೋಲಿಕೆ  

ನಂತರ ಕಾರ್ಯದರ್ಶಿಯಾದ ಶಾಫಾನನು ರಾಜನಿಗೆ, “ಯಾಜಕನಾದ ಹಿಲ್ಕೀಯನು ನನಗೆ ಒಂದು ಗ್ರಂಥವನ್ನು ಕೊಟ್ಟನು” ಎಂದು ಹೇಳಿದನು. ಶಾಫಾನನು ರಾಜನಿಗೆ ಆ ಗ್ರಂಥವನ್ನು ಓದಿದನು.


ಎಂದು ಹೇಳಿ ಆ ಪುಸ್ತಕವನ್ನು ಓದತೊಡಗಿದನು. ಅವನು ಅರಸನ ಮುಂದೆ ನಿಂತುಕೊಂಡು ಓದುತ್ತಿರಲು


ಆಗ ಆ ಅಧಿಕಾರಿಗಳು ಬಾರೂಕನಿಗೆ, “ಕುಳಿತುಕೊ. ಆ ಸುರುಳಿಯನ್ನು ನಮ್ಮ ಮುಂದೆ ಓದು” ಎಂದರು. ಬಾರೂಕನು ಸುರುಳಿಯನ್ನು ಅವರ ಮುಂದೆ ಓದಿದನು.


ಯೆಹೋವನು ಹೀಗೆಂದನು, “ಯೆರೆಮೀಯನೇ, ಯೆಹೋವನ ಆಲಯದ ಅಂಗಳದಲ್ಲಿ ನಿಲ್ಲು, ಯೆಹೋವನ ಆಲಯದಲ್ಲಿ ಆರಾಧನೆಗೆಂದು ಬರುವ ಯೆಹೂದದ ಎಲ್ಲಾ ಜನರಿಗೆ ಈ ಸಂದೇಶವನ್ನು ತಿಳಿಸು. ನಾನು ನಿನಗೆ ತಿಳಿಸೆಂದು ಹೇಳುವ ಎಲ್ಲವನ್ನೂ ಅವರಿಗೆ ಹೇಳು. ನನ್ನ ಸಂದೇಶದ ಯಾವ ಭಾಗವನ್ನೂ ಬಿಡಬೇಡ.


ಹೊಟ್ಟು, ಗೋಧಿಯ ಕಾಳಲ್ಲ. ಅದೇ ರೀತಿ, ಆ ಪ್ರವಾದಿಗಳ ಕನಸುಗಳು ನನ್ನ ಸಂದೇಶಗಳಲ್ಲ. ಒಬ್ಬ ವ್ಯಕ್ತಿಗೆ ತನ್ನ ಕನಸಿನ ಬಗ್ಗೆ ಹೇಳಬೇಕೆನಿಸಿದರೆ, ಅವನು ಹೇಳಲಿ. ಆದರೆ ನನ್ನ ಸಂದೇಶವನ್ನು ಕೇಳಿದ ಮನುಷ್ಯನು ಆ ಸಂದೇಶವನ್ನು ಯಥಾರ್ಥವಾಗಿ ಹೇಳಲಿ.


ಆಗ ಆ ಅಧಿಕಾರಿಗಳೆಲ್ಲ ಯೆಹೂದಿ ಎಂಬುವನನ್ನು ಬಾರೂಕನಲ್ಲಿಗೆ ಕಳುಹಿಸಿಕೊಟ್ಟರು. ಯೆಹೂದಿಯು ಶೆಲೆಮ್ಯನ ಮಗನಾದ ನೆಥನ್ಯನ ಮಗ. ಶೆಲೆಮ್ಯನು ಕೂಷಿಯ ಮಗ. ಯೆಹೂದಿಯು ಬಾರೂಕನಿಗೆ, “ನೀನು ಓದಿದ ಸುರುಳಿಯನ್ನು ತೆಗೆದುಕೊಂಡು ನನ್ನ ಜೊತೆ ಬಾ” ಎಂದು ಕರೆದನು. ನೇರೀಯನ ಮಗನಾದ ಬಾರೂಕನು ಸುರುಳಿಯನ್ನು ತೆಗೆದುಕೊಂಡು ಯೆಹೂದಿಯ ಸಂಗಡ ಆ ಅಧಿಕಾರಿಗಳ ಹತ್ತಿರಕ್ಕೆ ಹೋದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು