17 ಆಗ ರಾಜನಾದ ಚಿದ್ಕೀಯನು ಯೆರೆಮೀಯನನ್ನು ತನ್ನ ಅರಮನೆಗೆ ಕರೆತರಿಸಿದನು. ಚಿದ್ಕೀಯನು ಯೆರೆಮೀಯನೊಂದಿಗೆ ರಹಸ್ಯವಾಗಿ ಮಾತನಾಡಿ, “ಯೆಹೋವನಿಂದ ಏನಾದರೂ ಸಂದೇಶವಿದೆಯೊ?” ಎಂದು ಕೇಳಿದನು. “ಹೌದು, ಯೆಹೋವನಿಂದ ಒಂದು ಸಂದೇಶವಿದೆ. ಚಿದ್ಕೀಯನೇ, ನಿನ್ನನ್ನು ಬಾಬಿಲೋನಿನ ರಾಜನಿಗೆ ಒಪ್ಪಿಸಲಾಗುವುದು” ಎಂದು ಯೆರೆಮೀಯನು ಉತ್ತರಿಸಿದನು.
17 ಆಮೇಲೆ ಅರಸನಾದ ಚಿದ್ಕೀಯನು ಅವನನ್ನು ಕರೆಕಳುಹಿಸಿ, “ಯೆಹೋವನಿಂದ ದೈವೋಕ್ತಿಯು ದೊರೆಯಿತೋ?” ಎಂದು ತನ್ನ ಮನೆಯಲ್ಲಿ ರಹಸ್ಯವಾಗಿ ವಿಚಾರಿಸಲು ಯೆರೆಮೀಯನು, “ಹೌದು, ದೊರೆಯಿತು, ನೀನು ಬಾಬೆಲಿನ ಅರಸನ ಕೈಯಲ್ಲಿ ಸಿಕ್ಕಿಬೀಳುವಿ” ಅಂದನು.
17 ಬಳಿಕ ಅರಸ ಚಿದ್ಕೀಯನು ಅವನನ್ನು ಕರೆಯಿಸಿ, “ದೇವರಿಂದ ಯಾವುದಾದರು ಸಂದೇಶ ದೊರೆಯಿತೊ?” ಎಂದು ಮನೆಯಲ್ಲಿ ಗುಟ್ಟಾಗಿ ವಿಚಾರಿಸಿದನು. ಯೆರೆಮೀಯನು, “ಹೌದು, ದೊರೆಯಿತು. ತಾವು ಬಾಬಿಲೋನಿನ ಅರಸನ ಕೈಗೆ ಸಿಕ್ಕಿಬೀಳುವಿರಿ,” ಎಂದನು.
17 ಅರಸನಾದ ಚಿದ್ಕೀಯನು ಅವನನ್ನು ಕರತರಿಸಿ ಯೆಹೋವನಿಂದ ದೈವೋಕ್ತಿಯು ದೊರೆಯಿತೋ ಎಂದು ತನ್ನ ಮನೆಯಲ್ಲಿ ರಹಸ್ಯವಾಗಿ ವಿಚಾರಿಸಲು ಯೆರೆಮೀಯನು - ಹೌದು, ದೊರೆಯಿತು, ನೀನು ಬಾಬೆಲಿನ ಅರಸನ ಕೈಯಲ್ಲಿ ಸಿಕ್ಕಿ ಬೀಳುವಿ ಅಂದನು.
17 ಬಳಿಕ ಅರಸ ಚಿದ್ಕೀಯನು ಅವನನ್ನು ಕರೆಯಿಸಿ, ಅರಮನೆಗೆ ಕರೆತಂದನು, “ಯೆಹೋವ ದೇವರಿಂದ ಮಾತು ಉಂಟೋ,” ಎಂದು ಹೇಳಿದನು. ಯೆರೆಮೀಯನು, “ಹೌದು, ಉಂಟು. ನೀನು ಬಾಬಿಲೋನಿನ ಅರಸನ ಕೈಗೆಸಿಕ್ಕಿಬೀಳುವೆ,” ಎಂದನು.
“‘ಇದಾದ ಮೇಲೆ ನಾನು ಯೆಹೂದದ ರಾಜನಾದ ಚಿದ್ಕೀಯನನ್ನು ಮತ್ತು ಅಧಿಪತಿಗಳನ್ನು ಬಾಬಿಲೋನಿನ ರಾಜನಾದ ನೆಬೂಕದ್ನೆಚ್ಚರನಿಗೆ ಒಪ್ಪಿಸುತ್ತೇನೆ. ಜೆರುಸಲೇಮಿನ ಕೆಲವು ಜನರು ಭಯಂಕರವಾದ ರೋಗದಿಂದ ಸಾಯುವುದಿಲ್ಲ; ಕೆಲವು ಜನರು ಖಡ್ಗಗಳಿಗೆ ಆಹುತಿಯಾಗುವದಿಲ್ಲ; ಕೆಲವರು ಹಸಿವಿನಿಂದ ಸಾಯುವುದಿಲ್ಲ. ಅಂಥವರನ್ನು ನಾನು ನೆಬೂಕದ್ನೆಚ್ಚರನಿಗೆ ಕೊಡುತ್ತೇನೆ. ಯೆಹೂದದ ವೈರಿಯು ಗೆಲ್ಲುವಂತೆ ನಾನು ಮಾಡುತ್ತೇನೆ. ನೆಬೂಕದ್ನೆಚ್ಚರನ ಸೈನಿಕರು ಯೆಹೂದ್ಯರನ್ನು ಕೊಲ್ಲಬಯಸುತ್ತಾರೆ. ಆದ್ದರಿಂದ ಯೆಹೂದ ಮತ್ತು ಜೆರುಸಲೇಮಿನ ಜನರು ಖಡ್ಗಗಳಿಗೆ ಬಲಿಯಾಗುವರು. ನೆಬೂಕದ್ನೆಚ್ಚರನು ಸ್ವಲ್ಪವೂ ದಯೆ ತೋರುವದಿಲ್ಲ. ಆ ಜನರ ಸಲುವಾಗಿ ಅವನು ಮರುಗುವದಿಲ್ಲ.’
ರಾಜನಾದ ಚಿದ್ಕೀಯನು ಶೆಲೆಮ್ಯನ ಮಗನಾದ ಯೆಹೂಕಲನನ್ನು ಮತ್ತು ಮಾಸೇಯನ ಮಗನಾದ ಯಾಜಕ ಚೆಫನನನ್ನು ಒಂದು ಸಂದೇಶದೊಂದಿಗೆ ಯೆರೆಮೀಯನಲ್ಲಿಗೆ ಕಳುಹಿಸಿದನು. ಯೆರೆಮೀಯನಿಗೆ ಅವರು ತಂದ ಸಂದೇಶ ಹೀಗಿತ್ತು: “ಯೆರೆಮೀಯನೇ, ನಮ್ಮ ದೇವರಾದ ಯೆಹೋವನನ್ನು ನಮಗಾಗಿ ಪ್ರಾರ್ಥಿಸು.”
ಆದರೆ ಅಹಾಬನು, “ಯೆಹೋವನ ಶಕ್ತಿಯಿಂದ ನೀನು ಮಾತನಾಡುತ್ತಿಲ್ಲ. ನೀನು ನಿನ್ನ ಸ್ವಂತ ಮಾತುಗಳನ್ನು ಹೇಳುತ್ತಿರುವೆ. ನನಗೆ ನೀನು ನಿಜವನ್ನು ಹೇಳು! ನಾನು ನಿನಗೆ ಎಷ್ಟು ಸಲ ಹೇಳಬೇಕು? ಯೆಹೋವನು ತಿಳಿಸುವುದನ್ನೇ ನನಗೆ ಹೇಳು!” ಎಂದು ಕೇಳಿದನು.
ಆದರೆ ಆಕೆಗೆ ಸಾಧ್ಯವಾಗಲಿಲ್ಲ. ಹೆರೋದನು ಯೋಹಾನನನ್ನು ಕೊಲ್ಲಿಸಲು ಭಯಪಟ್ಟನು. ಯೋಹಾನನನ್ನು ಒಳ್ಳೆಯವನೆಂದೂ ಪವಿತ್ರನೆಂದೂ ಜನರೆಲ್ಲರು ನಂಬಿದ್ದಾರೆಂಬುದು ಹೆರೋದನಿಗೆ ತಿಳಿದಿತ್ತು. ಆದ್ದರಿಂದ ಹೆರೋದನು ಯೋಹಾನನನ್ನು ರಕ್ಷಿಸಿದನು. ಹೆರೋದನು ಯೋಹಾನನ ಉಪದೇಶವನ್ನು ಕೇಳಿದಾಗಲೆಲ್ಲಾ ಗಲಿಬಿಲಿಗೊಳ್ಳುತ್ತಿದ್ದನು. ಆದರೂ ಅವನ ಉಪದೇಶವನ್ನು ಸಂತೋಷದಿಂದ ಕೇಳುತ್ತಿದ್ದನು.
ನಂತರ ರಾಜನಾದ ಅಹಾಬನ ಎದುರಿನಲ್ಲಿ ಮೀಕಾಯೆಹು ನಿಂತುಕೊಂಡನು. ರಾಜನು ಅವನನ್ನು, “ಮೀಕಾಯೆಹುವೇ, ರಾಜನಾದ ಯೆಹೋಷಾಫಾಟನು ಮತ್ತು ನಾನು ನಮ್ಮ ಸೈನ್ಯಗಳನ್ನು ಒಟ್ಟುಗೂಡಿಸಬಹುದೇ? ಅರಾಮ್ಯರ ಸೇನೆಯ ವಿರುದ್ಧ ಹೋರಾಡಲು ರಾಮೋತಿಗೆ ನಾವೀಗ ಹೋಗಬೇಕೇ?” ಎಂದು ಕೇಳಿದನು. ಮೀಕಾಯೆಹು, “ಆಗಲಿ, ಈಗ ನೀವು ಹೋಗಿ, ಅವರ ವಿರುದ್ಧ ಯುದ್ಧಮಾಡಿ. ಯೆಹೋವನು ನಿಮಗೆ ಜಯವನ್ನು ಕೊಡುತ್ತಾನೆ” ಎಂದನು.
ಒಂದರ ಮೇಲೊಂದು ಆಪತ್ತು ಸಂಭವಿಸುವುದು. ಸುಳ್ಳುಸುದ್ದಿಗೊಂದು ಸುಳ್ಳುಸುದ್ದಿ ಸೇರಿಕೊಳ್ಳುವುದು. ಅವರು ಪ್ರವಾದಿಯಿಂದ ದರ್ಶನಕ್ಕಾಗಿ ಹುಡುಕುತ್ತಲೇ ಇರುವರು. ಆದರೆ ಯಾವ ದರ್ಶನಗಳೂ ಆಗುವದಿಲ್ಲ. ಜನರಿಗೆ ಉಪದೇಶಿಸಲು ಯಾಜಕರಲ್ಲಿ ಏನೂ ಇರುವುದಿಲ್ಲ. ಜನರಿಗೆ ಕೊಡಲು ಹಿರಿಯರಲ್ಲಿ ಯಾವ ಬುದ್ಧಿವಾದವೂ ಇರುವುದಿಲ್ಲ.
ಬಿಳಾಮನು ಬಾಲಾಕನ ಬಳಿಗೆ ಬಂದಾಗ ಅವನು ಇನ್ನೂ ಯಜ್ಞಪೀಠದ ಬಳಿಯಲ್ಲಿ ನಿಂತಿದ್ದನು. ಮೋವಾಬ್ಯರ ಪ್ರಧಾನರು ಅವನ ಸಂಗಡ ಇದ್ದರು. ಬಾಲಾಕನು, “ಯೆಹೋವನು ಏನು ಹೇಳಿದ್ದಾನೆ?” ಎಂದು ಕೇಳಿದನು.
ಅವರು ಚಿದ್ಕೀಯನ ಮಕ್ಕಳನ್ನು ಅವನ ಎದುರಿನಲ್ಲಿಯೇ ಕೊಂದುಹಾಕಿದರು. ನಂತರ ಅವರು ಚಿದ್ಕೀಯನ ಕಣ್ಣುಗಳನ್ನು ಕಿತ್ತುಹಾಕಿದರು. ಅವರು ಅವನನ್ನು ಸರಪಣಿಗಳಿಂದ ಬಂಧಿಸಿ, ಬಾಬಿಲೋನಿಗೆ ಕೊಂಡೊಯ್ದರು.