Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 38:10 - ಪರಿಶುದ್ದ ಬೈಬಲ್‌

10 ಆಗ ರಾಜನಾದ ಚಿದ್ಕೀಯನು ಇಥಿಯೋಪಿಯದವನಾದ ಎಬೆದ್ಮೆಲೆಕನಿಗೆ, “ಅರಮನೆಯಿಂದ ಮೂರು ಜನರನ್ನು ನಿನ್ನ ಸಂಗಡ ಕರೆದುಕೊಂಡು ಹೋಗು. ಯೆರೆಮೀಯನನ್ನು ಅವನು ಸಾಯುವ ಮುಂಚೆ ಬಾವಿಯಿಂದ ಮೇಲೆತ್ತು” ಎಂದು ಅಪ್ಪಣೆಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 ಅರಸನು ಇದನ್ನು ಕೇಳಿ ಕೂಷ್ಯನಾದ ಎಬೆದ್ಮೆಲೆಕನಿಗೆ, “ನೀನು ಇಲ್ಲಿಂದ ಮೂವತ್ತು ಮಂದಿಯನ್ನು ಕರೆದುಕೊಂಡುಹೋಗಿ ಪ್ರವಾದಿಯಾದ ಯೆರೆಮೀಯನು ಸಾಯುವುದರೊಳಗಾಗಿ ಅವನನ್ನು ಬಾವಿಯಿಂದ ಎತ್ತಿ ರಕ್ಷಿಸು” ಎಂದು ಅಪ್ಪಣೆಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

10 ಇದನ್ನು ಕೇಳಿದ ಅರಸನು ಸುಡಾನಿನ ಎಬೆದ್ಮೆಲೆಕನಿಗೆ, “ನೀನು ಇಲ್ಲಿಂದ ಮೂವತ್ತು ಮಂದಿ ಆಳುಗಳನ್ನು ಕರೆದುಕೊಂಡು ಹೋಗಿ ಪ್ರವಾದಿ ಯೆರೆಮೀಯನು ಸಾಯುವ ಮೊದಲೇ, ಅವನನ್ನು ಬಾವಿಯಿಂದ ಎತ್ತಿಸು,” ಎಂದು ಅಪ್ಪಣೆಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

10 ಅರಸನು ಇದನ್ನು ಕೇಳಿ ಕೂಷ್ಯನಾದ ಎಬೆದ್ಮೆಲೆಕನಿಗೆ - ನೀನು ಇಲ್ಲಿಂದ ಮೂವತ್ತು ಮಂದಿಯನ್ನು ಕರೆದುಕೊಂಡುಹೋಗಿ ಪ್ರವಾದಿಯಾದ ಯೆರೆಮೀಯನು ಸಾಯವದರೊಳಗಾಗಿ ಅವನನ್ನು ಬಾವಿಯಿಂದ ಎತ್ತಿಸು ಎಂದು ಅಪ್ಪಣೆಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

10 ಆಗ ಅರಸನು ಕೂಷ್ಯನಾದ ಎಬೆದ್ಮೆಲೆಕನಿಗೆ, “ನೀನು ಇಲ್ಲಿಂದ ಮೂವತ್ತು ಮಂದಿಯನ್ನು ಕರೆದುಕೊಂಡು ಹೋಗಿ, ಪ್ರವಾದಿಯಾದ ಯೆರೆಮೀಯನನ್ನು ಅವನು ಸಾಯುವುದಕ್ಕಿಂತ ಮುಂಚೆ ಬಾವಿಯೊಳಗಿಂದ ಮೇಲಕ್ಕೆತ್ತು,” ಎಂದು ಆಜ್ಞಾಪಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 38:10
7 ತಿಳಿವುಗಳ ಹೋಲಿಕೆ  

ಯೆಹೋವನು ರಾಜನ ಮನಸ್ಸನ್ನು ನೀರಿನ ಕಾಲುವೆಯಂತೆ ಹತೋಟಿಯಲ್ಲಿಡುವನು. ಆತನು ತನ್ನ ಇಷ್ಟಾನುಸಾರ ಅದಕ್ಕೆ ಮಾರ್ಗದರ್ಶನ ನೀಡುವನು.


ದುಷ್ಟರಿಂದ ಅಧಿಕಾರವನ್ನು ಕಿತ್ತುಕೊಂಡು ಒಳ್ಳೆಯವರಿಗೆ ಅದನ್ನು ಒಪ್ಪಿಸಿಕೊಡುವೆನು.


ಅಹಷ್ವೇರೋಷನು ಎಸ್ತೇರ್ ರಾಣಿಗೆ ಮತ್ತು ಮೊರ್ದೆಕೈಗೆ, “ಹಾಮಾನನು ಯೆಹೂದ್ಯರನ್ನು ದ್ವೇಷಿಸಿದ ಕಾರಣ ಅವನನ್ನು ಗಲ್ಲಿಗೇರಿಸುವಂತೆ ನನ್ನ ಸಿಪಾಯಿಗಳಿಗೆ ಆಜ್ಞಾಪಿಸಿದೆನು; ಅವನ ಆಸ್ತಿಪಾಸ್ತಿಗಳನ್ನೆಲ್ಲಾ ಎಸ್ತೇರಳ ವಶಕ್ಕೆ ಕೊಟ್ಟೆನು.


ಅರಸನು ಒಳಾಂಗಣದಲ್ಲಿ ನಿಂತಿದ್ದ ಎಸ್ತೇರಳನ್ನು ಕಂಡ ಕೂಡಲೇ ಆಕೆಯನ್ನು ಮೆಚ್ಚಿಕೊಂಡು ತನ್ನ ಕೈಯಲ್ಲಿದ್ದ ರಾಜದಂಡವನ್ನು ಆಕೆಯ ಕಡೆಗೆ ಚಾಚಿದನು. ಆಗ ಎಸ್ತೇರಳು ಒಳಾಂಗಣವನ್ನು ಪ್ರವೇಶಿಸಿ ರಾಜನ ಬಳಿ ಹೋದಳು ಮತ್ತು ರಾಜದಂಡದ ತುದಿಯನ್ನು ತನ್ನ ಬೆರಳಿನಿಂದ ಮುಟ್ಟಿದಳು.


ಆ ಅಧಿಕಾರಿಗಳು ಯೆರೆಮೀಯನನ್ನು ಬಾವಿಗೆ ಹಾಕಿದ ಸಂಗತಿಯು ಎಬೆದ್ಮೆಲೆಕನೆಂಬ ಮನುಷ್ಯನ ಕಿವಿಗೆ ಬಿತ್ತು. ಎಬೆದ್ಮೆಲೆಕನು ಇಥಿಯೋಪಿಯದವನಾಗಿದ್ದು ಅರಮನೆಯಲ್ಲಿ ಕಂಚುಕಿಯಾಗಿದ್ದನು. ರಾಜನಾದ ಚಿದ್ಕೀಯನು ಬೆನ್ಯಾಮೀನ್ ಊರ ಬಾಗಲಲ್ಲಿ ಕುಳಿತಿದ್ದನು. ಎಬೆದ್ಮೆಲೆಕನು ಅರಮನೆಯನ್ನು ಬಿಟ್ಟು ಬೆನ್ಯಾಮೀನ್ ಊರಹೆಬ್ಬಾಗಿಲಿನ ಹತ್ತಿರ ಕುಳಿತಿದ್ದ ರಾಜನಾದ ಚಿದ್ಕೀಯನ ಹತ್ತಿರ ಬಂದು ಹೀಗೆ ಹೇಳಿದನು:


ಎಬೆದ್ಮೆಲೆಕನು ಆ ಜನರನ್ನು ಕರೆದುಕೊಂಡು ಹೊರಟನು. ಅವನು ಮೊದಲು ಅರಮನೆಯ ಉಗ್ರಾಣದ ಕೆಳಗಿರುವ ಕೋಣೆಗೆ ಹೋದನು. ಆ ಕೋಣೆಯಿಂದ ಅವನು ಕೆಲವು ಹಳೆಯದಾದ ಮತ್ತು ಹರಿದುಹೋದ ಬಟ್ಟೆಗಳನ್ನು ತೆಗೆದುಕೊಂಡನು. ಆ ಚಿಂದಿಬಟ್ಟೆಗಳನ್ನು ಒಂದು ಹಗ್ಗಕ್ಕೆ ಕಟ್ಟಿ ಆಳವಾದ ಬಾವಿಯಲ್ಲಿ ಯೆರೆಮೀಯನಿಗೆ ತಲುಪುವಂತೆ ಇಳಿಬಿಟ್ಟನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು