Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 38:11 - ಪರಿಶುದ್ದ ಬೈಬಲ್‌

11 ಎಬೆದ್ಮೆಲೆಕನು ಆ ಜನರನ್ನು ಕರೆದುಕೊಂಡು ಹೊರಟನು. ಅವನು ಮೊದಲು ಅರಮನೆಯ ಉಗ್ರಾಣದ ಕೆಳಗಿರುವ ಕೋಣೆಗೆ ಹೋದನು. ಆ ಕೋಣೆಯಿಂದ ಅವನು ಕೆಲವು ಹಳೆಯದಾದ ಮತ್ತು ಹರಿದುಹೋದ ಬಟ್ಟೆಗಳನ್ನು ತೆಗೆದುಕೊಂಡನು. ಆ ಚಿಂದಿಬಟ್ಟೆಗಳನ್ನು ಒಂದು ಹಗ್ಗಕ್ಕೆ ಕಟ್ಟಿ ಆಳವಾದ ಬಾವಿಯಲ್ಲಿ ಯೆರೆಮೀಯನಿಗೆ ತಲುಪುವಂತೆ ಇಳಿಬಿಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 ಕೂಡಲೇ ಕೂಷ್ಯನಾದ ಎಬೆದ್ಮೆಲೆಕನು ಅವರನ್ನು ಕರೆದುಕೊಂಡು ಹೋಗಿ ಅರಮನೆಯನ್ನು ಹೊಕ್ಕು ಖಜಾನೆಯ ಕೆಳಗಿನ ಕೋಣೆಯಿಂದ ಜೀರ್ಣವಾದ ಹರಕು ಚಿಂದಿಬಟ್ಟೆಗಳನ್ನು ತೆಗೆದುಕೊಂಡು ಹಗ್ಗಗಳಂತೆ ಬಾವಿಯೊಳಗೆ ಯೆರೆಮೀಯನಿಗೆ ಮುಟ್ಟಿಸಿ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

11 ಕೂಡಲೇ ಸುಡಾನಿನ ಎಬೆದ್ಮೆಲೆಕನು ಆಳುಗಳನ್ನು ಕರೆದುಕೊಂಡು ಹೋಗಿ, ಅರಮನೆಯನ್ನು ಹೊಕ್ಕು, ಖಜಾನೆಯ ಕೆಳಗಣ ಕೋಣೆಯಿಂದ ಹಳೆಯ ಹರಕು ಚಿಂದಿಪಂದಿಗಳನ್ನು ತೆಗೆದುಕೊಂಡು, ಹಗ್ಗಕ್ಕೆ ಕಟ್ಟಿ ಬಾವಿಯೊಳಗಿದ್ದ ಯೆರೆಮೀಯನಿಗೆ ಮುಟ್ಟಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

11 ಕೂಡಲೇ ಕೂಷ್ಯನಾದ ಎಬೆದ್ಮೆಲೆಕನು ಅವರನ್ನು ಕರೆದುಕೊಂಡುಹೋಗಿ ಅರಮನೆಯನ್ನು ಹೊಕ್ಕು ಖಜಾನೆಯ ಕೆಳಗಣ ಕೋಣೆಯಿಂದ ಜೀರ್ಣವಾದ ಹರಕು ಚಿಂದಿಪಂದಿಗಳನ್ನು ತೆಗೆದುಕೊಂಡು ಬಾವಿಯೊಳಗೆ ಹಗ್ಗಗಳಿಂದ ಯೆರೆಮೀಯನಿಗೆ ಮುಟ್ಟಿಸಿ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

11 ಆಗ ಎಬೆದ್ಮೆಲೆಕನು ಆ ಮನುಷ್ಯರನ್ನು ಕರೆದುಕೊಂಡು, ಖಜಾನೆ ಕೆಳಗಿರುವ ಅರಮನೆಗೆ ಹೋಗಿ, ಅಲ್ಲಿಂದ ಹರಿದುಹೋದ ಹಳೆಯ ಬಟ್ಟೆಗಳನ್ನೂ, ಸವೆದು ಹೋದ ಹಳೆಯ ವಸ್ತ್ರಗಳನ್ನೂ ತೆಗೆದುಕೊಂಡು, ಅವುಗಳನ್ನು ಹಗ್ಗಗಳಂತೆ ಯೆರೆಮೀಯನ ಬಳಿಗೆ ಬಾವಿಯೊಳಗೆ ಇಳಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 38:11
5 ತಿಳಿವುಗಳ ಹೋಲಿಕೆ  

ಆ ಅಧಿಕಾರಿಗಳು ಯೆರೆಮೀಯನನ್ನು ಬಾವಿಗೆ ಹಾಕಿದ ಸಂಗತಿಯು ಎಬೆದ್ಮೆಲೆಕನೆಂಬ ಮನುಷ್ಯನ ಕಿವಿಗೆ ಬಿತ್ತು. ಎಬೆದ್ಮೆಲೆಕನು ಇಥಿಯೋಪಿಯದವನಾಗಿದ್ದು ಅರಮನೆಯಲ್ಲಿ ಕಂಚುಕಿಯಾಗಿದ್ದನು. ರಾಜನಾದ ಚಿದ್ಕೀಯನು ಬೆನ್ಯಾಮೀನ್ ಊರ ಬಾಗಲಲ್ಲಿ ಕುಳಿತಿದ್ದನು. ಎಬೆದ್ಮೆಲೆಕನು ಅರಮನೆಯನ್ನು ಬಿಟ್ಟು ಬೆನ್ಯಾಮೀನ್ ಊರಹೆಬ್ಬಾಗಿಲಿನ ಹತ್ತಿರ ಕುಳಿತಿದ್ದ ರಾಜನಾದ ಚಿದ್ಕೀಯನ ಹತ್ತಿರ ಬಂದು ಹೀಗೆ ಹೇಳಿದನು:


ಆಗ ರಾಜನಾದ ಚಿದ್ಕೀಯನು ಇಥಿಯೋಪಿಯದವನಾದ ಎಬೆದ್ಮೆಲೆಕನಿಗೆ, “ಅರಮನೆಯಿಂದ ಮೂರು ಜನರನ್ನು ನಿನ್ನ ಸಂಗಡ ಕರೆದುಕೊಂಡು ಹೋಗು. ಯೆರೆಮೀಯನನ್ನು ಅವನು ಸಾಯುವ ಮುಂಚೆ ಬಾವಿಯಿಂದ ಮೇಲೆತ್ತು” ಎಂದು ಅಪ್ಪಣೆಕೊಟ್ಟನು.


ಆಗ ಇಥಿಯೋಪಿಯದವನಾದ ಎಬೆದ್ಮೆಲೆಕನು, “ಆ ಹರಿದುಹೋದ ಮತ್ತು ಹಳೆಯದಾದ ಬಟ್ಟೆಗಳನ್ನು ನಿನ್ನ ಕಂಕುಳಲ್ಲಿ ಇಟ್ಟುಕೋ. ನಾವು ನಿನ್ನನ್ನು ಮೇಲಕ್ಕೆಳೆಯುವಾಗ ನಿನ್ನ ಕಂಕುಳಿಗೆ ಹಗ್ಗಗಳಿಂದ ಗಾಯಗಳಾಗುವದಿಲ್ಲ” ಎಂದನು. ಯೆರೆಮೀಯನು ಎಬೆದ್ಮೆಲೆಕನು ಹೇಳಿದಂತೆ ಮಾಡಿದನು.


ಬೆಳ್ಳಿ, ಬಂಗಾರ, ಕಂಚು ಮತ್ತು ಕಬ್ಬಿಣಗಳಿಂದ ಮಾಡಿದ ಎಲ್ಲಾ ವಸ್ತುಗಳು ಯೆಹೋವನ ಸ್ವತ್ತಾಗಿವೆ. ಆದ್ದರಿಂದ ಅವುಗಳನ್ನು ಆತನ ಭಂಡಾರಕ್ಕೆ ಸೇರಿಸಬೇಕು” ಎಂದು ಆಜ್ಞಾಪಿಸಿದನು.


ಆಗ ಆ ಅಧಿಕಾರಿಗಳು ಯೆರೆಮೀಯನನ್ನು ಹಿಡಿದು ಮಲ್ಕೀಯನ ಬಾವಿಯೊಳಗೆ ಹಾಕಿದರು. (ಮಲ್ಕೀಯನು ರಾಜವಂಶದವನಾಗಿದ್ದನು.) ಆ ಬಾವಿಯು ಕಾರಾಗೃಹದ ಅಂಗಳದಲ್ಲಿತ್ತು. ಆ ಅಧಿಕಾರಿಗಳು ಹಗ್ಗಗಳನ್ನು ಕಟ್ಟಿ ಯೆರೆಮೀಯನನ್ನು ಬಾವಿಯಲ್ಲಿ ಇಳಿಬಿಟ್ಟರು. ಆ ಬಾವಿಯಲ್ಲಿ ಸ್ವಲ್ಪವೂ ನೀರಿರಲಿಲ್ಲ. ಕೇವಲ ಕೇಸರಿತ್ತು. ಯೆರೆಮೀಯನು ಕೆಸರಿನಲ್ಲಿ ಮುಳುಗಿಹೋದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು