Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 38:27 - ಪರಿಶುದ್ದ ಬೈಬಲ್‌

27 ಆ ರಾಜ್ಯಾಧಿಕಾರಿಗಳು ಅವನನ್ನು ಪ್ರಶ್ನಿಸುವದಕ್ಕಾಗಿ ಯೆರೆಮೀಯನಲ್ಲಿಗೆ ಬಂದರು. ರಾಜನು ಆಜ್ಞಾಪಿಸಿದಂತೆ ಯೆರೆಮೀಯನು ಅವರಿಗೆ ಎಲ್ಲವನ್ನು ಹೇಳಿದನು. ಆಗ ಆ ಅಧಿಕಾರಿಗಳು ಯೆರೆಮೀಯನನ್ನು ಬಿಟ್ಟುಹೋದರು. ಯೆರೆಮೀಯನ ಮತ್ತು ರಾಜನ ಸಂಭಾಷಣೆಯನ್ನು ಯಾರೂ ಕೇಳಿರಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

27 ಕೆಲವು ಕಾಲದ ಮೇಲೆ ಸಕಲ ಪ್ರಧಾನರು ಯೆರೆಮೀಯನ ಬಳಿಗೆ ಬಂದು ಹಾಗೆಯೇ ಪ್ರಶ್ನೆ ಮಾಡಿದರು. ಅವನು ಅರಸನ ಅಪ್ಪಣೆಯಂತೆಯೇ ಉತ್ತರಕೊಡಲು ಅವರು ಮಾತನ್ನು ಮುಗಿಸಿದರು; ಏನೂ ತಿಳಿದುಕೊಳ್ಳಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

27 ಕೆಲವು ದಿನಗಳಾದ ಮೇಲೆ ಎಲ್ಲ ಪದಾಧಿಕಾರಿಗಳು ಯೆರೆಮೀಯನ ಬಳಿಗೆ ಬಂದು ಹಾಗೆಯೇ ಪ್ರಶ್ನೆಮಾಡಿದರು. ಅವನು ಅರಸನ ಅಪ್ಪಣೆಯಂತೆಯೇ ಉತ್ತರಕೊಟ್ಟನು. ಅಷ್ಟಕ್ಕೆ ಮಾತು ಮುಗಿದು ಅವನಿಂದ ಏನೂ ತಿಳಿದುಕೊಳ್ಳಲಾಗಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

27 ಕೆಲವು ಕಾಲದ ಮೇಲೆ ಸಕಲ ಪ್ರಧಾನರು ಯೆರೆಮೀಯನ ಬಳಿಗೆ ಬಂದು ಹಾಗೆಯೇ ಪ್ರಶ್ನೆಮಾಡಿದರು. ಅವನು ಅರಸನ ಅಪ್ಪಣೆಯಂತೆಯೇ ಉತ್ತರಕೊಡಲು ಅವರು ಮಾತನ್ನು ಮುಗಿಸಿದರು; ಏನೂ ತಿಳಿದುಕೊಳ್ಳಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

27 ಆಗ ಪ್ರಧಾನರೆಲ್ಲರೂ ಯೆರೆಮೀಯನ ಬಳಿಗೆ ಬಂದು ಅವನನ್ನು ಕೇಳಿದರು. ಅವನು ಅರಸನು ಆಜ್ಞಾಪಿಸಿದ ಈ ಮಾತುಗಳನ್ನೆಲ್ಲಾ ಅವರಿಗೆ ತಿಳಿಸಿದನು. ಆಗ ಅವರು ಸುಮ್ಮನಾದರು. ಏಕೆಂದರೆ ಆ ಕಾರ್ಯದ ವಿಷಯವನ್ನು ಅವರು ಗ್ರಹಿಸಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 38:27
7 ತಿಳಿವುಗಳ ಹೋಲಿಕೆ  

ಸಭೆಯಲ್ಲಿದ್ದ ಜನರಲ್ಲಿ ಕೆಲವರು ಸದ್ದುಕಾಯರಾಗಿದ್ದರು; ಮತ್ತೆ ಕೆಲವರು ಫರಿಸಾಯರಾಗಿದ್ದರು. ಆದ್ದರಿಂದ ಪೌಲನು, “ನನ್ನ ಸಹೋದರರೇ, ನಾನು ಫರಿಸಾಯನು! ನನ್ನ ತಂದೆಯೂ ಫರಿಸಾಯನಾಗಿದ್ದನು! ಸತ್ತವರು ಪುನರುತ್ಥಾನ ಹೊಂದುತ್ತಾರೆಂದು ನಾನು ನಂಬುವುದರಿಂದ ಇಲ್ಲಿ ನ್ಯಾಯವಿಚಾರಣೆಗೆ ಗುರಿಯಾಗಿದ್ದೇನೆ!” ಎಂದು ಕೂಗಿ ಹೇಳಿದನು.


ಎಲೀಷನು ಅರಾಮ್ಯರ ಸೇನೆಗೆ, “ಇದು ಸರಿಯಾದ ಮಾರ್ಗವಲ್ಲ, ಇದು ಸರಿಯಾದ ನಗರವೂ ಅಲ್ಲ. ನನ್ನನ್ನು ಹಿಂಬಾಲಿಸಿ. ನೀವು ಹುಡುಕುತ್ತಿರುವ ಮನುಷ್ಯನ ಬಳಿಗೆ ನಾನು ನಿಮ್ಮನ್ನು ಕರೆದೊಯ್ಯುತ್ತೇನೆ” ಎಂದು ಹೇಳಿದನು. ನಂತರ ಎಲೀಷನು ಅರಾಮ್ಯರ ಸೇನೆಯನ್ನು ಸಮಾರ್ಯಕ್ಕೆ ನಡೆಸಿಕೊಂಡು ಬಂದನು.


ನಾನು ನಿನ್ನೊಂದಿಗೆ ಮಾತನಾಡಿದ್ದನ್ನು ಆ ಅಧಿಕಾರಿಗಳು ಪತ್ತೆ ಹಚ್ಚಬಹುದು. ಅವರು ನಿನ್ನ ಹತ್ತಿರ ಬಂದು, ‘ಯೆರೆಮೀಯನೇ, ನೀನು ರಾಜನಾದ ಚಿದ್ಕೀಯನಿಗೆ ಏನು ಹೇಳಿದೆ? ಚಿದ್ಕೀಯನು ನಿನಗೆ ಏನು ಹೇಳಿದನು? ಪ್ರಾಮಾಣಿಕವಾಗಿ ಎಲ್ಲವನ್ನು ನಮಗೆ ಹೇಳು; ಇಲ್ಲವಾದರೆ ನಾವು ನಿನ್ನನ್ನು ಕೊಂದುಬಿಡುತ್ತೇವೆ’ ಎನ್ನಬಹುದು.


ಆಗ ನೀನು ಅವರಿಗೆ, ‘ಯೆಹೋನಾಥಾನನ ಮನೆಯ ನೆಲಮಾಳಿಗೆಯ ಕತ್ತಲು ಕೋಣೆಗೆ ನನ್ನನ್ನು ಮತ್ತೆ ಕಳುಹಿಸಬೇಡಿ, ಅಲ್ಲಿಗೆ ಹೋದರೆ ನಾನು ಸತ್ತುಹೋಗುವೆನೆಂದು ರಾಜನಿಗೆ ಪ್ರಾರ್ಥಿಸುತ್ತಿದ್ದೆ’” ಎಂದು ಹೇಳು.


ಜೆರುಸಲೇಮ್ ನಗರವು ಶತ್ರುಗಳ ವಶವಾಗುವವರೆಗೆ ಯೆರೆಮೀಯನು ಕಾರಾಗೃಹದ ಅಂಗಳದಲ್ಲಿ ವಾಸಮಾಡಿಕೊಂಡಿದ್ದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು