Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 38:7 - ಪರಿಶುದ್ದ ಬೈಬಲ್‌

7 ಆ ಅಧಿಕಾರಿಗಳು ಯೆರೆಮೀಯನನ್ನು ಬಾವಿಗೆ ಹಾಕಿದ ಸಂಗತಿಯು ಎಬೆದ್ಮೆಲೆಕನೆಂಬ ಮನುಷ್ಯನ ಕಿವಿಗೆ ಬಿತ್ತು. ಎಬೆದ್ಮೆಲೆಕನು ಇಥಿಯೋಪಿಯದವನಾಗಿದ್ದು ಅರಮನೆಯಲ್ಲಿ ಕಂಚುಕಿಯಾಗಿದ್ದನು. ರಾಜನಾದ ಚಿದ್ಕೀಯನು ಬೆನ್ಯಾಮೀನ್ ಊರ ಬಾಗಲಲ್ಲಿ ಕುಳಿತಿದ್ದನು. ಎಬೆದ್ಮೆಲೆಕನು ಅರಮನೆಯನ್ನು ಬಿಟ್ಟು ಬೆನ್ಯಾಮೀನ್ ಊರಹೆಬ್ಬಾಗಿಲಿನ ಹತ್ತಿರ ಕುಳಿತಿದ್ದ ರಾಜನಾದ ಚಿದ್ಕೀಯನ ಹತ್ತಿರ ಬಂದು ಹೀಗೆ ಹೇಳಿದನು:

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ಅರಮನೆಯ ಕಂಚುಕಿಯಾದ ಎಬೆದ್ಮೆಲೆಕನೆಂಬ ಕೂಷ್ಯನು ಯೆರೆಮೀಯನನ್ನು ಬಾವಿಯಲ್ಲಿ ಹಾಕಿದ್ದಾರೆಂದು ತಿಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

7 ಅರಮನೆಯ ಕಂಚುಕಿಯಾದ ಎಬೆದ್ಮೆಲೆಕನೆಂಬ ಸುಡಾನಿನವನು ಯೆರೆಮೀಯನನ್ನು ಬಾವಿಯಲ್ಲಿ ಹಾಕಿದ್ದಾರೆಂದು ತಿಳಿದುಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

7 ಅರಮನೆಯ ಕಂಚುಕಿಯಾದ ಎಬೆದ್ಮೆಲೆಕನೆಂಬ ಕೂಷ್ಯನು ಯೆರೆಮೀಯನನ್ನು ಬಾವಿಯಲ್ಲಿ ಹಾಕಿದ್ದಾರೆಂದು ಕೇಳಿದಾಗ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

7 ಆಗ ಅರಸನು ಮನೆಯಲ್ಲಿರುವ ಕಂಚುಕಿಯಾದ ಕೂಷ್ಯನಾದ ಎಬೆದ್ಮೆಲೆಕನು ಅವರು ಯೆರೆಮೀಯನನ್ನು ಬಾವಿಯಲ್ಲಿ ಹಾಕಿದರೆಂದು ಕೇಳಿದಾಗ, ಅರಸನು ಬೆನ್ಯಾಮೀನನ ಬಾಗಿಲಲ್ಲಿ ಕೂತಿರಲಾಗಿ,

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 38:7
22 ತಿಳಿವುಗಳ ಹೋಲಿಕೆ  

ಆದರೆ ಯೆರೆಮೀಯನು ಜೆರುಸಲೇಮಿನ ಬೆನ್ಯಾಮೀನ್ ಹೆಬ್ಬಾಗಿಲಿನ ಹತ್ತಿರ ಹೋದಾಗ ಪಹರೆದಾರರ ಮುಖ್ಯಸ್ಥನು ಅವನನ್ನು ಹಿಡಿದುಕೊಂಡನು. ಆ ಮುಖ್ಯಸ್ಥನ ಹೆಸರು ಇರೀಯ. ಇರೀಯನು ಶೆಲೆಮ್ಯನ ಮಗನು; ಶೆಲೆಮ್ಯನು ಹನನ್ಯನ ಮಗನು. ಮುಖ್ಯಸ್ಥನಾದ ಇರೀಯನು ಯೆರೆಮೀಯನನ್ನು ಹಿಡಿದುಕೊಂಡು, “ಯೆರೆಮೀಯನೇ, ನೀನು ಬಾಬಿಲೋನಿನ ಕಡೆ ಸೇರಿಕೊಳ್ಳುವದಕ್ಕಾಗಿ ನಮ್ಮನ್ನು ಬಿಟ್ಟುಹೋಗುತ್ತಿರುವೆ” ಎಂದನು.


(ರಾಜನಾದ ಯೆಹೋಯಾಕೀನನನ್ನು, ರಾಜಮಾತೆಯನ್ನು, ಯೆಹೂದದ ಮತ್ತು ಜೆರುಸಲೇಮಿನ ಅಧಿಕಾರಿಗಳನ್ನು, ಮುಂದಾಳುಗಳನ್ನು, ಬಡಗಿಗಳನ್ನು ಮತ್ತು ಕಮ್ಮಾರರನ್ನು ಜೆರುಸಲೇಮಿನಿಂದ ತೆಗೆದುಕೊಂಡು ಹೋದ ಮೇಲೆ ಈ ಪತ್ರವನ್ನು ಕಳಿಸಲಾಯಿತು.)


ಪ್ರವಾದಿಗಳು ಸಾರ್ವಜನಿಕ ಸ್ಥಳಗಳಿಗೆ ಹೋಗಿ ಜನರು ಮಾಡುವ ದುಷ್ಕೃತ್ಯಗಳನ್ನು ಖಂಡಿಸುವರು. ಜನರು ಪ್ರವಾದಿಗಳನ್ನು ಹಗೆಮಾಡುವರು. ಪ್ರವಾದಿಗಳು ಒಳ್ಳೆಯದನ್ನು ಸರಳವಾದ ಸತ್ಯಗಳನ್ನು ಉಪದೇಶಿಸುವರು. ಆದರೆ ಜನರು ಅವರನ್ನು ದ್ವೇಷಿಸುವರು.


ಆಗ ಅವನ ತಂದೆತಾಯಿಗಳು ಆ ಮಗನನ್ನು ಪಟ್ಟಣದ ಹಿರಿಯರು ಸೇರಿಬರುವ ಸ್ಥಳಕ್ಕೆ ಕರೆದುಕೊಂಡು ಹೋಗಿ


“ಇದೇಪ್ರಕಾರ ಕಡೆಯವರು ಮೊದಲಿನವರಾಗುವರು, ಮೊದಲಿನವರು ಕಡೆಯವರಾಗುವರು.”


ಯೆಹೂದದ ಮತ್ತು ಜೆರುಸಲೇಮಿನ ನಾಯಕರು, ಪ್ರಮುಖ ಅಧಿಕಾರಿಗಳು, ಯಾಜಕರು ಮತ್ತು ದೇಶದ ಸಕಲ ಜನರು ಇವರೆಲ್ಲ ನನ್ನ ಮುಂದೆ ಒಡಂಬಡಿಕೆಯನ್ನು ಮಾಡಿದಾಗ ಕರುವಿನ ಶರೀರದ ಎರಡು ತುಂಡುಗಳ ಮಧ್ಯದಿಂದ ಹಾದುಹೋದರು.


ಕಪ್ಪಗಿರುವವನು ತನ್ನ ಚರ್ಮದ ಬಣ್ಣವನ್ನು ಬದಲಿಸಲಾರನು. ಚಿರತೆಯು ತನ್ನ ಮೈಮೇಲಿನ ಚುಕ್ಕೆಗಳನ್ನು ಬದಲಾಯಿಸಲಾರದು. ಅದೇ ರೀತಿ, ಜೆರುಸಲೇಮ್ ನಗರವೇ, ನೀನು ಸಹ ಮಾರ್ಪಾಟು ಹೊಂದಿ ಒಳ್ಳೆಯದನ್ನು ಮಾಡಲಾರೆ. ನೀನು ಯಾವಾಗಲೂ ಕೆಟ್ಟದ್ದನ್ನೇ ಮಾಡುವೆ.


ಅವರು ಈಜಿಪ್ಟಿನಿಂದ ಐಶ್ವರ್ಯವನ್ನು ನಿನಗೆ ತಂದುಕೊಡುವಂತೆ ಮಾಡು. ದೇವರೇ, ಇಥಿಯೋಪಿಯದವರು ತಮ್ಮ ಐಶ್ವರ್ಯವನ್ನು ನಿನಗೆ ತಂದುಕೊಡುವಂತೆ ಮಾಡು.


ನೆಬೂಕದ್ನೆಚ್ಚರನು ಯೆಹೋಯಾಖೀನನನ್ನು ಸೆರೆಯಾಳಾಗಿ ಬಾಬಿಲೋನಿಗೆ ಕರೆದೊಯ್ದನು. ನೆಬೂಕದ್ನೆಚ್ಚರನು ರಾಜನ ತಾಯಿಯನ್ನು, ಅವನ ಪತ್ನಿಯರನ್ನು, ಅಧಿಕಾರಿಗಳನ್ನು ಮತ್ತು ದೇಶದ ಪ್ರತಿಷ್ಠಿತರನ್ನು ಕರೆದೊಯ್ದನು. ನೆಬೂಕದ್ನೆಚ್ಚರನು ಅವರನ್ನು ಜೆರುಸಲೇಮಿನಿಂದ ಬಾಬಿಲೋನಿಗೆ ಸೆರೆಯಾಳುಗಳನ್ನಾಗಿ ಒಯ್ದನು.


“ಆಶ್ರಯನಗರಕ್ಕೆ ಓಡಿಹೋದವನು ಆ ಪಟ್ಟಣದ ಪ್ರವೇಶದ್ವಾರದಲ್ಲಿ ನಿಂತು ಅಲ್ಲಿಯ ಜನನಾಯಕರಿಗೆ ನಡೆದ ಸಂಗತಿಯನ್ನು ತಿಳಿಸಲಿ. ಆಗ ನಾಯಕರು ಅವನಿಗೆ ನಗರವನ್ನು ಪ್ರವೇಶಿಸಲು ಅನುಮತಿ ಕೊಡಲಿ; ತಮ್ಮ ಜೊತೆಯಲ್ಲಿ ವಾಸಿಸಲು ಒಂದು ಸ್ಥಳವನ್ನು ಕೊಡಲಿ.


ಯೆಹೂದ್ಯರಲ್ಲದ ಜನರು ಯೆಹೋವನ ಬಳಿಗೆ ಬರುವರು. ಅವರು, “ಯೆಹೋವನು ನಮ್ಮನ್ನು ತನ್ನ ಜನರೊಂದಿಗೆ ಸ್ವೀಕರಿಸುವದಿಲ್ಲ” ಎಂದು ಹೇಳಬಾರದು. ಕಂಚುಕಿಯು, “ನಾನು ಕೆಲಸಕ್ಕೆ ಬಾರದ ಒಣಗಿದ ಮರ.” ಎಂದು ಹೇಳಬಾರದು.


ಅವನು ಪ್ರವಾದಿಯಾದ ಯೆರೆಮೀಯನನ್ನು ಹೊಡೆಯಿಸಿ ಯೆಹೋವನ ಆಲಯಕ್ಕೆ ಸೇರಿದ ಮೇಲಣ ಬೆನ್ಯಾಮೀನ್ ದ್ವಾರದಲ್ಲಿದ್ದ ಕೋಳಕ್ಕೆ ಹಾಕಿಸಿದನು.


ಆಗ ಸರದಾರರು ಮತ್ತು ಸಮಸ್ತ ಜನರು ಒಬ್ಬರಿಗೊಬ್ಬರು ಮಾತನಾಡಿ ಯಾಜಕರಿಗೂ ಪ್ರವಾದಿಗಳಿಗೂ, “ಯೆರೆಮೀಯನನ್ನು ಕೊಲ್ಲಕೂಡದು. ಯೆರೆಮೀಯನು ನಮಗೆ ಹೇಳಿದ ಸಂಗತಿಗಳು ನಮ್ಮ ದೇವರಾದ ಯೆಹೋವನಿಂದ ಬಂದವುಗಳಾಗಿವೆ” ಎಂದು ಹೇಳಿದರು.


“ನನ್ನ ಒಡೆಯನಾದ ರಾಜನೇ, ಆ ಅಧಿಕಾರಿಗಳು ದುಷ್ಟ ರೀತಿಯಲ್ಲಿ ವರ್ತಿಸಿದ್ದಾರೆ. ಅವರು ಪ್ರವಾದಿಯಾದ ಯೆರೆಮೀಯನೊಂದಿಗೆ ದುಷ್ಟತನದಿಂದ ವ್ಯವಹರಿಸಿದ್ದಾರೆ. ಅವರು ಅವನನ್ನು ಒಂದು ಬಾವಿಯಲ್ಲಿ ಎಸೆದಿದ್ದಾರೆ. ಅವನನ್ನು ಅಲ್ಲಿಯೇ ಸಾಯಲು ಬಿಟ್ಟಿದ್ದಾರೆ” ಎಂದು ಹೇಳಿದನು.


ಆ ಸಮಯದಲ್ಲಿ ಜೆರುಸಲೇಮಿನ ಸುತ್ತಮುತ್ತ ಇರುವ ಜಾಗವು ನಿರ್ಜನವಾಗಿದ್ದು ಅರಾಬಾ ಮರುಭೂಮಿಯಂತಿರುವದು. ದೇಶವು ಗೆಬದಿಂದ ಹಿಡಿದು ನೆಗೆವ್‌ನಲ್ಲಿರುವ ರಿಮ್ಮೋನ್ ತನಕ ಮರುಭೂಮಿಯಂತಿರುವದು. ಆದರೆ ಜೆರುಸಲೇಮ್ ನಗರವು ತಿರುಗಿ ಕಟ್ಟಲ್ಪಡುವದು. ಬೆನ್ಯಾಮೀನ್ ದ್ವಾರದಿಂದ ಮೂಲೇ ದ್ವಾರ ಅಥವಾ ಮೊದಲನೇ ದ್ವಾರದ ತನಕ ಮತ್ತು ಹನನೇಲ್ ಬುರುಜಿನಿಂದ ಹಿಡಿದು ಅರಸನ ದ್ರಾಕ್ಷಿತೊಟ್ಟಿಯ ತನಕ ಹೊಸದಾಗಿ ಕಟ್ಟಲ್ಪಡುವದು.


ಕೊಲೆಗಾರರು ಯಥಾರ್ಥವಂತರನ್ನು ಯಾವಾಗಲೂ ದ್ವೇಷಿಸುವರು. ಆ ಕೆಡುಕರು ಅವರನ್ನು ಕೊಲ್ಲಬಯಸುವರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು