Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 39:1 - ಪರಿಶುದ್ದ ಬೈಬಲ್‌

1 ಜೆರುಸಲೇಮನ್ನು ಹೀಗೆ ವಶಪಡಿಸಿಕೊಳ್ಳಲಾಯಿತು: ಚಿದ್ಕೀಯನು ಯೆಹೂದದ ರಾಜನಾಗಿ ಆಳುತ್ತಿದ್ದ ಒಂಭತ್ತನೇ ವರ್ಷದ ಹತ್ತನೆಯ ತಿಂಗಳಿನಲ್ಲಿ ಬಾಬಿಲೋನಿನ ರಾಜನಾದ ನೆಬೂಕದ್ನೆಚ್ಚರನು ತನ್ನ ಇಡೀ ಸೈನ್ಯದೊಂದಿಗೆ ಜೆರುಸಲೇಮಿನ ಮೇಲೆ ಧಾಳಿ ಮಾಡಿದನು. ಅದನ್ನು ವಶಪಡಿಸಿಕೊಳ್ಳುವದಕ್ಕಾಗಿ ಅವನು ಆ ನಗರವನ್ನು ಮುತ್ತಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ಯೆಹೂದದ ಅರಸನಾದ ಚಿದ್ಕೀಯನ ಆಳ್ವಿಕೆಯ ಒಂಭತ್ತನೆಯ ವರ್ಷದ ಹತ್ತನೆಯ ತಿಂಗಳಿನಲ್ಲಿ ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನು ಸಕಲ ಸೈನ್ಯಸಹಿತ ಬಂದು ಯೆರೂಸಲೇಮನ್ನು ಮುತ್ತಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

1 ಜುದೇಯದ ಅರಸ ಚಿದ್ಕೀಯನ ಆಳ್ವಿಕೆಯ ಒಂಬತ್ತನೆಯ ವರ್ಷದ ಹತ್ತನೆಯ ತಿಂಗಳಲ್ಲಿ ಬಾಬಿಲೋನಿಯದ ಅರಸ ನೆಬೂಕದ್ನೆಚ್ಚರನು ಸಕಲ ಸೈನ್ಯಸಮೇತ ಬಂದು ಜೆರುಸಲೇಮನ್ನು ಮುತ್ತಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

1 ಯೆಹೂದದ ಅರಸನಾದ ಚಿದ್ಕೀಯನ ಆಳಿಕೆಯ ಒಂಭತ್ತನೆಯ ವರುಷದ ಹತ್ತನೆಯ ತಿಂಗಳಿನಲ್ಲಿ ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನು ಸಕಲ ಸೈನ್ಯಸಹಿತ ಬಂದು ಯೆರೂಸಲೇಮನ್ನು ಮುತ್ತಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

1 ಯೆಹೂದದ ಅರಸನಾದ ಚಿದ್ಕೀಯನ ಒಂಬತ್ತನೆಯ ವರ್ಷದ ಹತ್ತನೆಯ ತಿಂಗಳಿನ ಬಾಬಿಲೋನಿನ ಅರಸನಾದ ನೆಬೂಕದ್ನೆಚ್ಚರನು ತನ್ನ ಸಮಸ್ತ ಸೈನ್ಯದೊಂದಿಗೆ ಯೆರೂಸಲೇಮಿಗೆ ವಿರೋಧವಾಗಿ ಬಂದು, ಅದನ್ನು ಮುತ್ತಿಗೆ ಹಾಕಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 39:1
16 ತಿಳಿವುಗಳ ಹೋಲಿಕೆ  

ಆತನು ಹೇಳುವುದೇನೆಂದರೆ, “ನಾಲ್ಕನೇ, ಐದನೇ, ಏಳನೇ ಮತ್ತು ಹತ್ತನೇ ತಿಂಗಳಿನಲ್ಲಿ ನೀವು ದುಃಖದಿಂದ ಉಪವಾಸ ಮಾಡುವ ವಿಶೇಷ ದಿವಸಗಳಿವೆ. ಆ ದುಃಖದ ದಿವಸಗಳು ನಿಮ್ಮ ಸಂತಸದ ದಿವಸಗಳಾಗಿ ಪರಿಗಣಿಸಬೇಕು. ನೀವು ಸತ್ಯವನ್ನೂ ಸಮಾಧಾನವನ್ನೂ ಪ್ರೀತಿಸುವವರಾಗಬೇಕು.”


“ಯೆಹೋವನು ನಿಮ್ಮನ್ನೂ ನಿಮ್ಮ ಅರಸನನ್ನೂ ನೀವು ಅರಿಯದ ದೇಶಕ್ಕೆ ಅಟ್ಟಿಬಿಡುವನು. ನೀವಾಗಲಿ ನಿಮ್ಮ ಪೂರ್ವಿಕರಾಗಲಿ ಆ ದೇಶವನ್ನು ಎಂದೂ ನೋಡಲಿಲ್ಲ. ಅಲ್ಲಿ ಮರ, ಕಲ್ಲುಗಳಿಂದ ಮಾಡಿದ ಸುಳ್ಳುದೇವರನ್ನು ಆರಾಧಿಸುವಿರಿ.


ಯೆಹೂದದ ರಾಜನಾದ ಚಿದ್ಕೀಯನ ಆಳ್ವಿಕೆಯ ಹತ್ತನೆಯ ವರ್ಷದಲ್ಲಿ ಯೆರೆಮೀಯನಿಗೆ ಯೆಹೋವನಿಂದ ಬಂದ ಸಂದೇಶವಿದು. ಚಿದ್ಕೀಯನ ಆಳ್ವಿಕೆಯ ಹತ್ತನೆಯ ವರ್ಷ ನೆಬೂಕದ್ನೆಚ್ಚರನ ಆಳ್ವಿಕೆಯ ಹದಿನೆಂಟನೇ ವರ್ಷವಾಗಿತ್ತು.


ಯೆಹೋವನಿಂದ ಯೆರಮೀಯನಿಗೆ ಒಂದು ಸಂದೇಶ ಬಂದಿತು. ಬಾಬಿಲೋನಿನ ರಾಜನಾದ ನೆಬೂಕದ್ನೆಚ್ಚರನು ಜೆರುಸಲೇಮ್ ಮತ್ತು ಅದರ ಸುತ್ತಮುತ್ತಲಿನ ಊರುಗಳ ವಿರುದ್ಧ ಯುದ್ಧ ಮಾಡುತ್ತಿದ್ದಾಗ ಈ ಸಂದೇಶ ಬಂದಿತು. ಆಗ ನೆಬೂಕದ್ನೆಚ್ಚರನ ಸಂಗಡ ಅವನ ಸಮಸ್ತ ಸೈನ್ಯವು ಮತ್ತು ಅವನ ಸಾಮ್ರಾಜ್ಯದಲ್ಲಿದ್ದ ಎಲ್ಲಾ ರಾಜ್ಯಗಳ ಮತ್ತು ಜನರ ಸೈನ್ಯವು ಇತ್ತು.


ಬಾಬಿಲೋನಿನ ಸೈನ್ಯವು ಜೆರುಸಲೇಮಿಗೆ ಬರಬೇಕೆಂದು ನಾನು ಆಜ್ಞಾಪಿಸುತ್ತೇನೆ.’ ಇದು ಯೆಹೋವನ ನುಡಿ. ‘ಆ ಸೈನ್ಯವು ಜೆರುಸಲೇಮಿನ ವಿರುದ್ಧ ಹೋರಾಡುವುದು. ಅವರು ಅದನ್ನು ಸ್ವಾಧೀನಪಡಿಸಿಕೊಳ್ಳುವರು ಮತ್ತು ಅದಕ್ಕೆ ಬೆಂಕಿಯಿಟ್ಟು ಸುಟ್ಟುಬಿಡುವರು. ನಾನು ಯೆಹೂದ ಪ್ರದೇಶದ ನಗರಗಳನ್ನು ನಾಶಮಾಡುವೆನು. ಆ ನಗರಗಳು ಬರಿದಾದ ಮರುಭೂಮಿಗಳಾಗುವವು. ಅಲ್ಲಿ ಯಾರೂ ವಾಸಮಾಡಲಾರರು.’”


“ಸರ್ವಶಕ್ತನೂ ಇಸ್ರೇಲರ ದೇವರೂ ಆಗಿರುವ ಯೆಹೋವನು ಹೀಗೆಂದನು: ‘ನಾನು ಜೆರುಸಲೇಮಿನ ಮೇಲೆ ನನ್ನ ಕೋಪವನ್ನು ತೋರಿಸಿದೆ. ಜೆರುಸಲೇಮಿನಲ್ಲಿ ವಾಸಿಸುವ ಜನರನ್ನು ನಾನು ದಂಡಿಸಿದೆ. ಅದೇ ರೀತಿ, ಈಜಿಪ್ಟಿಗೆ ಹೋಗುವವರೆಲ್ಲರ ಮೇಲೂ ನಾನು ನನ್ನ ಕೋಪವನ್ನು ತೋರಿಸುವೆನು. ಬೇರೆಯವರಿಗೆ ಕೆಟ್ಟದಾಗಲಿ ಎಂದು ಹೇಳಬೇಕಾದಾಗ ಜನರು ನಿಮ್ಮಂತೆ ಆಗಲಿ ಎಂದು ನಿಮ್ಮ ಉದಾಹರಣೆಯನ್ನು ಕೊಡುವರು. ನೀವು ಒಂದು ಶಾಪದ ಶಬ್ದವಾಗುವಿರಿ. ಜನರು ನಿಮ್ಮಿಂದ ನಾಚಿಕೆಪಟ್ಟುಕೊಳ್ಳುವರು. ಜನರು ನಿಮ್ಮನ್ನು ಅಪಮಾನ ಮಾಡುವರು. ಯೆಹೂದವನ್ನು ಪುನಃ ನೀವು ಎಂದೂ ನೋಡುವದಿಲ್ಲ.’


ಆ ಬಳಿಕ ಒಂದು ಕಬ್ಬಿಣದ ರೊಟ್ಟಿ ಕಲ್ಲನ್ನು ನಿನಗೂ ನಗರಕ್ಕೂ ಮಧ್ಯೆ ಇಡು. ಅದು ನಿನಗೂ ನಗರಕ್ಕೂ ನಡುವೆ ಇರುವ ಕಬ್ಬಿಣದ ಗೋಡೆಯಂತಿರುವುದು. ಈ ರೀತಿಯಾಗಿ ನೀನು ಆ ನಗರಕ್ಕೆ ವಿರುದ್ಧವಾಗಿರುವಂತೆ ಕಂಡುಬರುವೆ. ನೀನು ಆ ನಗರಕ್ಕೆ ಮುತ್ತಿಗೆ ಹಾಕಿ ಅದರ ಮೇಲೆ ಯುದ್ಧ ಮಾಡುವಿ. ಯಾಕೆಂದರೆ, ಶೀಬ್ರದಲ್ಲೇ ಏನು ಸಂಭವಿಸುತ್ತದೆ ಎಂಬುದಕ್ಕೆ ಇಸ್ರೇಲ್ ಜನರಿಗೆ ಇದು ಸೂಚನೆಯಾಗಿದೆ.


ಸೆರೆಯ ಹನ್ನೆರಡನೆಯ ವರ್ಷದ ಹತ್ತನೆಯ ತಿಂಗಳಿನ ಐದನೇ ದಿವಸದಲ್ಲಿ ಜೆರುಸಲೇಮಿನಿಂದ ಒಬ್ಬನು ನನ್ನ ಬಳಿಗೆ ಬಂದನು. ಅವನು ರಣರಂಗದಿಂದ ತಪ್ಪಿಸಿಕೊಂಡು ಬಂದಾತನು. ಅವನು, “ನಗರವು ಪರಾಧೀನವಾಯಿತು” ಎಂದು ಹೇಳಿದನು.


ನಾವು ಸೆರೆಹಿಡಿಯಲ್ಪಟ್ಟ ಇಪ್ಪತ್ತೈದನೆ ವರ್ಷದ ಪ್ರಾರಂಭದ ತಿಂಗಳಿನ (ಅಕ್ಟೋಬರ್) ಹತ್ತನೇ ದಿವಸದಲ್ಲಿ ಯೆಹೋವನ ಆತ್ಮನಿಂದ ಪರವಶನಾದೆನು. ಬಾಬಿಲೋನಿಯರು ಜೆರುಸಲೇಮನ್ನು ವಶಪಡಿಸಿಕೊಂಡ ಹದಿನಾಲ್ಕನೇ ವರ್ಷದಲ್ಲಿ ಇದು ಸಂಭವಿಸಿತು. ಆ ದಿವಸದಲ್ಲಿ ಯೆಹೋವನ ಆತ್ಮನಿಂದ ನಾನು ಪರವಶನಾದೆನು. ಆತನು ನನ್ನನ್ನು ಅಲ್ಲಿಗೆ ದರ್ಶನದಲ್ಲಿ ಕೊಂಡೊಯ್ದನು.


ಯೆಹೂದದ ಮತ್ತು ಜೆರುಸಲೇಮಿನ ಜನರನ್ನು ನಾಶಮಾಡಲು ಬಾಬಿಲೋನಿನ ಅರಸನನ್ನು ಕಳುಹಿಸಿದನು. ಬಾಬಿಲೋನಿನ ಅರಸನು ದೇವಾಲಯದೊಳಗಿದ್ದ ಯುವಜನರನ್ನು ಕೊಂದುಹಾಕಿದನು. ಅವನಿಗೆ ಯೆಹೂದದ ಮತ್ತು ಜೆರುಸಲೇಮಿನ ಜನರ ಮೇಲೆ ಕರುಣೆಯೇ ಇರಲಿಲ್ಲ. ಅವನು ಚಿಕ್ಕವರನ್ನೂ ದೊಡ್ಡವರನ್ನೂ ಗಂಡಸರನ್ನೂ ಹೆಂಗಸರನ್ನೂ ಬಿಡದೆ ಸಂಹರಿಸಿದನು. ರೋಗಿಗಳನ್ನೂ ಆರೋಗ್ಯವಂತರನ್ನೂ ಸಂಹರಿಸಿದನು; ಯೆಹೂದದ ಮತ್ತು ಜೆರುಸಲೇಮಿನ ಜನರನ್ನು ಶಿಕ್ಷಿಸಲು ದೇವರು ನೆಬೂಕದ್ನೆಚ್ಚರನನ್ನು ಉಪಯೋಗಿಸಿದನು.


ಸರ್ವಶಕ್ತನಾದ ಯೆಹೋವನು ಹೀಗೆ ಹೇಳಿದನು: “ಜೆರುಸಲೇಮಿನ ಸುತ್ತಮುತ್ತಲಿನ ಮರಗಳನ್ನು ಕಡಿದುಹಾಕಿರಿ; ಜೆರುಸಲೇಮಿನ ಎದುರಿಗೆ ಒಂದು ದಿಬ್ಬ ನಿರ್ಮಿಸಿರಿ. ನಗರವನ್ನು ದಂಡಿಸಬೇಕು. ನಗರದ ಒಳಗಡೆ ದಬ್ಬಾಳಿಕೆಯ ಹೊರತು ಮತ್ತೇನಿಲ್ಲ.


ಚಿದ್ಕೀಯನು ಯೆಹೂದದ ರಾಜನಾದಾಗ ಇಪ್ಪತ್ತೊಂದು ವರ್ಷದವನಾಗಿದ್ದನು. ಚಿದ್ಕೀಯನು ಜೆರುಸಲೇಮಿನಲ್ಲಿ ಹನ್ನೊಂದು ವರ್ಷ ಆಳಿದನು. ಅವನ ತಾಯಿಯ ಹೆಸರು ಹಮೂಟಲ್. ಈಕೆ ಯೆರೆಮೀಯನ ಮಗಳು. ಹಮೂಟಲಳ ಮನೆತನದವರು ಲಿಬ್ನ ಪಟ್ಟಣದ ನಿವಾಸಿಗಳಾಗಿದ್ದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು