Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 39:11 - ಪರಿಶುದ್ದ ಬೈಬಲ್‌

11 ನೆಬೂಕದ್ನೆಚ್ಚರನು ನೆಬೂಜರದಾನನಿಗೆ ಯೆರೆಮೀಯನ ಬಗ್ಗೆ ಕೆಲವು ಆಜ್ಞೆಗಳನ್ನು ಕೊಟ್ಟನು. ನೆಬೂಜರದಾನನು ನೆಬೂಕದ್ನೆಚ್ಚರನ ವಿಶೇಷ ರಕ್ಷಕದಳದ ಅಧಿಪತಿಯಾಗಿದ್ದನು. ಆ ಆಜ್ಞೆ ಹೀಗಿತ್ತು:

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನು ಯೆರೆಮೀಯನ ವಿಷಯವಾಗಿ ಕಾವಲುದಂಡಿನ ಅಧಿಪತಿಯಾದ ನೆಬೂಜರದಾನನಿಗೆ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

11 ಬಾಬಿಲೋನಿನ ಅರಸ ನೆಬೂಕದ್ನೆಚ್ಚರನು ಯೆರೆಮೀಯನ ವಿಷಯವಾಗಿ ರಕ್ಷಾದಳದ ನಾಯಕ ನೆಬೂಜರದಾನನಿಗೆ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

11 ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನು ಯೆರೆಮೀಯನ ವಿಷಯವಾಗಿ ಕಾವಲು ದಂಡಿನ ಅಧಿಪತಿಯಾದ ನೆಬೂಜರದಾನನಿಗೆ -

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

11 ಇದಲ್ಲದೆ ಯೆರೆಮೀಯನ ವಿಷಯವಾಗಿ ಬಾಬಿಲೋನಿನ ಅರಸನಾದ ನೆಬೂಕದ್ನೆಚ್ಚರನು ಕಾವಲು ದಂಡಿನ ಅಧಿಪತಿಯಾದ ನೆಬೂಜರದಾನನಿಗೆ ಆಜ್ಞಾಪಿಸಿದ್ದೇನೆಂದರೆ:

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 39:11
12 ತಿಳಿವುಗಳ ಹೋಲಿಕೆ  

ಪೌಲನನ್ನು ಕಾವಲಿನಲ್ಲಿರಿಸಬೇಕೆಂದು ಫೇಲಿಕ್ಸನು ಸೇನಾಧಿಕಾರಿಗೆ ತಿಳಿಸಿದನು. ಆದರೆ ಪೌಲನಿಗೆ ಸ್ವಲ್ಪ ಸ್ವತಂತ್ರವನ್ನು ಕೊಡುವಂತೆಯೂ ಪೌಲನ ಮಿತ್ರರು ಅವನಿಗೆ ಅಗತ್ಯವಾದ ವಸ್ತುಗಳನ್ನು ತಂದುಕೊಡುವುದಕ್ಕೆ ಅವಕಾಶ ಕೊಡಬೇಕೆಂತಲೂ ಅವನು ಅಧಿಕಾರಿಗೆ ಹೇಳಿದನು.


“ನಾನು ನಿನ್ನನ್ನು ಆ ದುಷ್ಟ ಜನರಿಂದ ರಕ್ಷಿಸುತ್ತೇನೆ. ಆ ಜನರು ನಿನ್ನನ್ನು ಬೆದರಿಸುತ್ತಾರೆ. ಆದರೆ ನಾನು ನಿನ್ನನ್ನು ಆ ಜನರಿಂದ ರಕ್ಷಿಸುತ್ತೇನೆ.”


ಆದರೆ ಯೆಹೋವನು ಯೆರೆಮೀಯನಿಗೆ ಪ್ರವಾದನೆ ಮಾಡಲು ಹೇಳಿದ ಸಂದೇಶಗಳ ಕಡೆಗೆ ಗಮನ ಕೊಡಲಿಲ್ಲ. ಚಿದ್ಕೀಯನ ಸೇವಕರು ಮತ್ತು ಯೆಹೂದದ ಜನರು ಯೆಹೋವನ ಸಂದೇಶಗಳಿಗೆ ಯಾವ ಗಮನವನ್ನೂ ಕೊಡಲಿಲ್ಲ.


ದೇವರೇ, ನಿಜವಾಗಿಯೂ ನಾನು ನಿನ್ನ ಸೇವೆಯನ್ನು ಚೆನ್ನಾಗಿ ಮಾಡಿದ್ದೇನೆ. ಕಷ್ಟದ ಕಾಲದಲ್ಲಿ ನನ್ನ ವೈರಿಗಳ ಬಗ್ಗೆ ನಾನು ನಿನ್ನಲ್ಲಿ ಪ್ರಾರ್ಥಿಸಿದ್ದೇನೆ.


ಆತನು ನಿನ್ನನ್ನು ಆರು ಆಪತ್ತುಗಳಿಂದ ರಕ್ಷಿಸುವನು; ಹೌದು, ಏಳನೆಯ ಆಪತ್ತಿನಿಂದಲೂ ನಿನಗೆ ಕೇಡಾಗದು.


ದೇವರು ಬಡವರನ್ನು ದುಷ್ಟರ ನಿಂದನೆಯಿಂದಲೂ ಬಲಿಷ್ಠರ ಕೈಯಿಂದಲೂ ಕಾಪಾಡುವನು.


ಹೀಗೆ ಬಡವನಿಗೆ ನಿರೀಕ್ಷೆ ಉಂಟಾಗುವುದು. ಅನ್ಯಾಯವು ತನ್ನ ಬಾಯನ್ನು ಮುಚ್ಚಿಕೊಳ್ಳುವುದು.


ಯಾರಿಗೂ ನೀನು ಹೆದರಬೇಡ, ನಾನೇ ನಿನ್ನ ಜೊತೆ ಇದ್ದೇನೆ. ನಾನು ನಿನ್ನನ್ನು ಕಾಪಾಡುತ್ತೇನೆ. ಈ ಮಾತನ್ನು ಯೆಹೋವನಾದ ನಾನೇ ಹೇಳುತ್ತಿದ್ದೇನೆ” ಎಂದನು.


ನಾನು ನಿನ್ನನ್ನು ಬಲಶಾಲಿಯನ್ನಾಗಿ ಮಾಡುತ್ತೇನೆ. ನೀನು ತಾಮ್ರದ ಗೋಡೆಯಂತೆ ಗಟ್ಟಿಯಾಗಿರುವೆ ಎಂದು ಆ ಜನರು ತಿಳಿದುಕೊಳ್ಳುವರು. ಯೆಹೂದದ ಜನರು ನಿನ್ನ ವಿರುದ್ಧ ಹೋರಾಡುವರು. ಆದರೆ ಅವರು ನಿನ್ನನ್ನು ಸೋಲಿಸಲಾರರು. ಏಕೆಂದರೆ ನಾನೇ ನಿನ್ನ ಜೊತೆಯಲ್ಲಿ ಇದ್ದೇನೆ. ನಾನು ನಿನಗೆ ಸಹಾಯಮಾಡುತ್ತೇನೆ ಮತ್ತು ನಾನು ನಿನ್ನನ್ನು ರಕ್ಷಿಸುತ್ತೇನೆ.” ಇದು ಯೆಹೋವನಿಂದ ಬಂದ ನುಡಿ.


ರಾಮನಗರದ ಹತ್ತಿರ ಅವನ ಬಿಡುಗಡೆಯಾದ ಮೇಲೆ ಯೆರೆಮೀಯನಿಗೆ ಯೆಹೋವನಿಂದ ಒಂದು ಸಂದೇಶ ಬಂದಿತು. ಬಾಬಿಲೋನಿನ ರಾಜನ ವಿಶೇಷ ರಕ್ಷಕ ದಳದ ಅಧಿಪತಿಯಾದ ನೆಬೂಜರದಾನನು ಯೆರೆಮೀಯನನ್ನು ರಾಮದಲ್ಲಿ ನೋಡಿದನು. ಯೆರೆಮೀಯನನ್ನು ಸಂಕೋಲೆಗಳಿಂದ ಬಿಗಿಯಲಾಗಿತ್ತು. ಅವನು ಜೆರುಸಲೇಮ್ ಮತ್ತು ಯೆಹೂದದ ಎಲ್ಲಾ ಸೆರೆಯಾಳುಗಳ ಜೊತೆಗಿದ್ದನು. ಆ ಸೆರೆಯಾಳುಗಳನ್ನು ಸೆರೆಹಿಡಿದು ಬಾಬಿಲೋನಿಗೆ ತೆಗೆದುಕೊಂಡು ಹೋಗಲಾಗುತ್ತಿತ್ತು.


ಯೆರೆಮೀಯನೇ, ನಾನು ಈಗ ನಿನ್ನನ್ನು ಬಿಡುಗಡೆ ಮಾಡುವೆನು. ನಾನು ನಿನ್ನ ಕೈಗಳಿಂದ ಸಂಕೋಲೆಗಳನ್ನು ಬಿಚ್ಚುವೆನು. ನೀನು ಇಷ್ಟಪಟ್ಟರೆ ನನ್ನ ಸಂಗಡ ಬಾಬಿಲೋನಿಗೆ ಬಾ, ನಾನು ನಿನ್ನನ್ನು ಚೆನ್ನಾಗಿ ನೋಡಿಕೊಳ್ಳುತ್ತೇನೆ. ನಿನಗೆ ನನ್ನ ಸಂಗಡ ಬರುವ ಇಷ್ಟವಿಲ್ಲದಿದ್ದರೆ ಬರಬೇಡ. ಇಡೀ ದೇಶದಲ್ಲಿ ನಿನಗೆ ಎಲ್ಲಿ ಇಷ್ಟವೋ ಅಲ್ಲಿಗೆ ಹೋಗು.


ನೆಬೂಕದ್ನೆಚ್ಚರನ ಆಳ್ವಿಕೆಯ ಹತ್ತೊಂಭತ್ತನೆ ವರ್ಷದ ಐದನೆ ತಿಂಗಳಿನ ಹತ್ತನೆ ದಿನ ಬಾಬಿಲೋನಿನ ವಿಶೇಷ ರಕ್ಷಕದಳದ ಅಧಿಪತಿಯಾದ ನೆಬೂಜರದಾನನು ಜೆರುಸಲೇಮಿಗೆ ಬಂದನು. ನೆಬೂಜರದಾನನು ಬಾಬಿಲೋನಿನ ಒಬ್ಬ ಪ್ರಮುಖ ವ್ಯಕ್ತಿಯಾಗಿದ್ದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು