ಯೆರೆಮೀಯ 39:13 - ಪರಿಶುದ್ದ ಬೈಬಲ್13 ರಾಜನ ವಿಶೇಷ ರಕ್ಷಕದಳದ ಅಧಿಪತಿಯಾದ ನೆಬೂಜರದಾನ್, ಬಾಬಿಲೋನಿನ ಸೈನ್ಯದ ಒಬ್ಬ ಮುಖ್ಯ ಅಧಿಕಾರಿಯಾದ ನೆಬೂಷಜ್ಜಾನ್, ದೊಡ್ಡ ಅಧಿಕಾರಿಯಾದ ನೇರ್ಗಲ್ ಸರೆಚರ್ ಮತ್ತು ಬಾಬಿಲೋನಿನ ಇನ್ನುಳಿದ ಸೈನ್ಯಾಧಿಕಾರಿಗಳು ಯೆರೆಮೀಯನನ್ನು ಹುಡುಕಲು ಜನರನ್ನು ಕಳುಹಿಸಿದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201913 ಅದಕ್ಕೆ ಕಾವಲುದಂಡಿನ ಅಧಿಪತಿಯಾದ ನೆಬೂಜರದಾನ್, ಕಂಚುಕಿಯರ ಮುಖ್ಯಸ್ಥನಾದ ನೆಬೂಷಜ್ಬಾನ್, ಜೋಯಿಸರ ಮುಖ್ಯಸ್ಥನಾದ ನೇರ್ಗಲ್ ಸರೆಚರ್ ಅಂತು ಬಾಬೆಲಿನ ಅರಸನ ಸಮಸ್ತ ಮುಖ್ಯಾಧಿಕಾರಿಗಳು, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)13 ಅಂತೆಯೇ ನೆಬೂಜರದಾನನು ಹಾಗು ಕಂಚುಕಿಯರ ಮುಖ್ಯಸ್ಥ ನೆಬೂಷಜ್ಬಾನ್, ಜೋಯಿಸರ ಮುಖ್ಯಸ್ಥ ನೇರ್ಗಲ್ಸರೆಚರ್ ಮತ್ತು ಬಾಬಿಲೋನಿಯರ ಅರಸನ ಎಲ್ಲ ಪದಾಧಿಕಾರಿಗಳು ಸೇರಿ ಯೆರೆಮೀಯನನ್ನು ಕಾರಾಗೃಹದಿಂದ ಕರೆತರಿಸಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)13 ಕಾವಲುದಂಡಿನ ಅಧಿಪತಿಯಾದ ನೆಬೂಜರದಾನ್, ಕಂಚುಕಿಯರ ಮುಖ್ಯಸ್ಥನಾದ ನೆಬೂಷಜ್ಬಾನ್, ಜೋಯಿಸರ ಮುಖ್ಯಸ್ಥನಾದ ನೇರ್ಗಲ್ಸರೆಚರ್ ಅಂತು ಬಾಬೆಲಿನ ಅರಸನ ಸಮಸ್ತ ಮುಖ್ಯಾಧಿಕಾರಿಗಳು ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ13 ಹೀಗೆ ಕಾವಲು ದಂಡಿನ ಅಧಿಪತಿಯಾದ ನೆಬೂಜರದಾನನನ್ನೂ, ಕಂಚುಕಿಯರ ಮುಖ್ಯಸ್ಥನಾದ ನೆಬೂಷಜ್ಬಾನ್, ಜೋಯಿಸರ ಮುಖ್ಯಸ್ಥನಾದ ನೇರ್ಗಲ್ ಸರೆಚರ್ ಅಂತು ಬಾಬೆಲಿನ ಅರಸನ ಸಮಸ್ತ ಮುಖ್ಯಾಧಿಕಾರಿಗಳನ್ನೂ ಕಳುಹಿಸಿದನು. ಅಧ್ಯಾಯವನ್ನು ನೋಡಿ |
ಬಾಬಿಲೋನಿನ ರಾಜನ ವಿಶೇಷ ರಕ್ಷಕದಳದ ಅಧಿಪತಿಯಾದ ನೆಬೂಜರದಾನನೆಂಬವನು ಜೆರುಸಲೇಮಿನಲ್ಲಿ ಉಳಿದ ಜನರನ್ನು ಹಿಡಿದು ಬಂಧಿಗಳನ್ನಾಗಿ ಮಾಡಿದ್ದನು. ಅವರನ್ನು ಅವನು ಬಾಬಿಲೋನಿಗೆ ತೆಗೆದುಕೊಂಡು ಹೋದನು. ಈ ಮೊದಲೆ ಅವನಿಗೆ ಶರಣಾಗತರಾದವರನ್ನೂ ಸಹ ನೆಬೂಜರದಾನನು ಬಂಧಿಗಳನ್ನಾಗಿ ಮಾಡಿದನು. ಅವನು ಜೆರುಸಲೇಮಿನ ಉಳಿದವರೆಲ್ಲರನ್ನು ಬಂಧಿಗಳನ್ನಾಗಿ ಮಾಡಿ ಬಾಬಿಲೋನಿಗೆ ತೆಗೆದುಕೊಂಡು ಹೋದನು.
ಅವರು ಯೆರೆಮೀಯನನ್ನು ಕಾರಾಗೃಹದ ಅಂಗಳದಿಂದ ಹೊರಗೆ ಕರೆದು ತಂದರು. ಬಾಬಿಲೋನಿನ ಆ ಸೈನ್ಯಾಧಿಕಾರಿಗಳು ಯೆರೆಮೀಯನನ್ನು ಗೆದಲ್ಯನ ವಶಕ್ಕೆ ಕೊಟ್ಟರು. ಗೆದಲ್ಯನು ಅಹೀಕಾಮನ ಮಗ ಮತ್ತು ಅಹೀಕಾಮನು ಶಾಫಾನನ ಮಗನಾಗಿದ್ದನು. ಯೆರೆಮೀಯನನ್ನು ಮನೆಗೆ ಕರೆದುಕೊಂಡು ಹೋಗಬೇಕೆಂದು ಗೆದಲ್ಯನಿಗೆ ಆಜ್ಞಾಪಿಸಲಾಯಿತು. ಅದರಂತೆ ಯೆರೆಮೀಯನನ್ನು ಮನೆಗೆ ಕರೆದುಕೊಂಡು ಹೋಗಲಾಯಿತು; ಅವನು ತನ್ನ ಜನರೊಂದಿಗೆ ವಾಸಿಸತೊಡಗಿದನು.