Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 4:1 - ಪರಿಶುದ್ದ ಬೈಬಲ್‌

1 ಇದು ಯೆಹೋವನ ಸಂದೇಶ: “ಇಸ್ರೇಲೇ, ನೀನು ಹಿಂತಿರುಗಿ ಬರಲು ಇಚ್ಛಿಸಿದರೆ ನನ್ನಲ್ಲಿಗೆ ಹಿಂತಿರುಗಿ ಬಾ. ನಿನ್ನ ವಿಗ್ರಹಗಳನ್ನು ಎಸೆದುಬಿಡು. ನನ್ನಿಂದ ದೂರಸರಿದು ಅಲೆದಾಡಬೇಡ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ಯೆಹೋವನು, “ಇಸ್ರಾಯೇಲೇ, ನೀನು ತಿರುಗಿಕೊಂಡರೆ ನನ್ನ ಬಳಿಗೇ ಬರುವಿ; ನನ್ನ ಕಣ್ಣೆದುರಿನಿಂದ ನಿನ್ನ ಅಸಹ್ಯವಸ್ತುಗಳನ್ನು ತೆಗೆದುಬಿಟ್ಟರೆ, ನೀನು ಇನ್ನು ದಿಕ್ಕು ದೆಸೆಗಳಿಲ್ಲದೆ ನರಳುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

1 ಸರ್ವೇಶ್ವರ ಸ್ವಾಮಿ ಹೀಗೆನ್ನುತ್ತಾರೆ : “ಇಸ್ರಯೇಲಿನ ಜನರೇ, ನೀವು ಹಿಂದಿರುಗುವಿರಾದರೆ ನನ್ನ ಬಳಿಗೆ ಬನ್ನಿ. ಅಸಹ್ಯವಾದ ನಿಮ್ಮ ಮೂರ್ತಿ ಪೂಜಾವಸ್ತುಗಳನ್ನು ನನ್ನ ಕಣ್ಣೆದುರಿನಿಂದ ತೆಗೆದುಬಿಡಿ. ಆಗ ನೀವು ಅತ್ತಿತ್ತ ತೂರಾಡಲಾರಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

1 ಯೆಹೋವನು ಹೀಗನ್ನುತ್ತಾನೆ - ಇಸ್ರಾಯೇಲೇ, ನೀನು ಹಿಂದಿರುಗುವಿಯಾದರೆ ನನ್ನ ಬಳಿಗೇ ಬರುವಿ; ನನ್ನ ಕಣ್ಣೆದುರಿನಿಂದ ನಿನ್ನ ಅಸಹ್ಯವಸ್ತುಗಳನ್ನು ತೆಗೆದುಬಿಟ್ಟರೆ ನೀನು ಇನ್ನು ದಿಕ್ಕಾಪಾಲಾಗಿರುವದಿಲ್ಲ;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

1 “ಇಸ್ರಾಯೇಲೇ, ನೀನು ಹಿಂದಿರುಗುವಿಯಾದರೆ ನನ್ನ ಕಡೆ ಹಿಂದಿರುಗಿ ಬಾ,” ಎಂದು ಯೆಹೋವ ದೇವರು ನುಡಿಯುತ್ತಾರೆ. “ನೀನು ನಿನ್ನ ಅಸಹ್ಯಗಳನ್ನು ನನ್ನ ಎದುರಿನಿಂದ ತೆಗೆದುಬಿಟ್ಟರೆ, ಅಲೆದಾಡದೆ ಇರುವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 4:1
38 ತಿಳಿವುಗಳ ಹೋಲಿಕೆ  

ಇದು ಯೆಹೋವನ ಸಂದೇಶ: “ನಿಮ್ಮ ಪೂರ್ಣಹೃದಯದಿಂದ ನನ್ನ ಬಳಿಗೆ ಬನ್ನಿರಿ, ನೀವು ದುಷ್ಟತ್ವವನ್ನು ನಡಿಸಿರುವದರಿಂದ ದುಃಖಿಸಿರಿ, ಅಳಿರಿ, ಉಪವಾಸ ಮಾಡಿರಿ.


ಇದಲ್ಲದೆ ಯೆಹೋವನು, “ಅಪನಂಬಿಗಸ್ತರಾದ ಜನರೇ, ನನ್ನಲ್ಲಿಗೆ ಹಿಂತಿರುಗಿ ಬನ್ನಿ. ನನಗೆ ವಿಶ್ವಾಸದ್ರೋಹ ಮಾಡಿದುದಕ್ಕೆ ನಾನು ಕ್ಷಮಿಸುವೆನು, ಹಿಂತಿರುಗಿ ಬನ್ನಿ” ಎಂದು ಹೇಳುತ್ತಾನೆ. “ಅದಕ್ಕೆ ಜನರು, ‘ಆಗಲಿ ನಿನ್ನಲ್ಲಿಗೆ ಬರುತ್ತೇವೆ. ನೀನೇ ನಮ್ಮ ದೇವರಾದ ಯೆಹೋವನು.


ಈಗ ಅವರು ತಮ್ಮ ಲೈಂಗಿಕ ಪಾಪಗಳನ್ನು ತೆಗೆದುಬಿಡಲಿ ಮತ್ತು ತಮ್ಮ ರಾಜರ ಹೆಣಗಳನ್ನೂ ನನ್ನಿಂದ ದೂರಮಾಡಲಿ. ಆಗ ನಾನು ಅವರೊಂದಿಗೆ ನಿರಂತರವಾಗಿ ವಾಸಿಸುವೆನು.


ಆ ಪ್ರವಾದಿಗಳು, “ನಿಮ್ಮ ಜೀವನಕ್ರಮವನ್ನು ಬದಲಾಯಿಸಿಕೊಳ್ಳಿರಿ. ದುಷ್ಕೃತ್ಯಗಳನ್ನು ಮಾಡುವದನ್ನು ನಿಲ್ಲಿಸಿಬಿಡಿ. ನೀವು ಬದಲಾದರೆ, ಯೆಹೋವನು ನಿಮಗೂ ನಿಮ್ಮ ಪೂರ್ವಿಕರಿಗೂ ಬಹಳ ಹಿಂದೆ ಕೊಟ್ಟ ಭೂಮಿಯಲ್ಲಿ ನೀವು ನೆಲೆಸಬಹುದು. ನೀವು ಶಾಶ್ವತವಾಗಿ ವಾಸಿಸಬೇಕೆಂದು ಆತನು ಈ ಭೂಮಿಯನ್ನು ಕೊಟ್ಟಿದ್ದಾನೆ.


ಯೆರೆಮೀಯನೇ, ಹೋಗು. ಈ ಸಂದೇಶವನ್ನು ಉತ್ತರದಿಕ್ಕಿನಲ್ಲಿ ಸಾರು. ಯೆಹೋವನು ಹೀಗೆ ಹೇಳುತ್ತಾನೆ: “‘ವಿಶ್ವಾಸದ್ರೋಹಿಗಳಾದ ಇಸ್ರೇಲಿನ ಜನರೇ, ಹಿಂತಿರುಗಿ ಬನ್ನಿ.’ ‘ನಾನು ಕೋಪಮುಖದಿಂದ ನಿಮ್ಮನ್ನು ನೋಡುವುದನ್ನು ನಿಲ್ಲಿಸುವೆನು. ನಾನು ಕರುಣಾಶಾಲಿ, ನಿತ್ಯಕೋಪಿಯಲ್ಲ.’ ಇದು ಯೆಹೋವನ ನುಡಿ.


ಯೆಹೋವನು ಹೀಗೆ ನುಡಿದನು: “ಒಬ್ಬನು ತನ್ನ ಹೆಂಡತಿಯೊಂದಿಗೆ ವಿವಾಹವಿಚ್ಛೇದನ ಮಾಡಿಕೊಂಡ ಮೇಲೆ ಅವಳು ಮತ್ತೊಬ್ಬನನ್ನು ಮದುವೆಯಾದರೆ ಆ ಮೊದಲನೆಯ ಗಂಡನು ಪುನಃ ಅವಳಲ್ಲಿಗೆ ಬರಲು ಸಾಧ್ಯವೇ? ಇಲ್ಲ. ಆ ಮನುಷ್ಯನು ಪುನಃ ಆ ಸ್ತ್ರೀಯಲ್ಲಿಗೆ ಹೋದರೆ ಆ ದೇಶವು ಪರಿಪೂರ್ಣವಾಗಿ ಅಪವಿತ್ರವಾಗುತ್ತದೆ. ಯೆಹೂದವೇ, ನೀನು ಬಹು ಜನರೊಂದಿಗೆ ಕಾಮದಾಟವಾಡಿದ ವೇಶ್ಯಾ ಸ್ತ್ರೀಯಂತೆ ವರ್ತಿಸಿದೆ. ಈಗ ನೀನು ಪುನಃ ನನ್ನಲ್ಲಿಗೆ ಬರಲು ಇಚ್ಛಿಸುವಿಯಾ?” ಇದು ಯೆಹೋವನ ನುಡಿ.


ಆದ್ದರಿಂದ ಯಾಕೋಬನು ತನ್ನ ಕುಟುಂಬದವರಿಗೂ ತನ್ನ ಎಲ್ಲಾ ಸೇವಕರಿಗೂ, “ನಿಮ್ಮಲ್ಲಿರುವ ಮರದ ಮತ್ತು ಲೋಹದ ಎಲ್ಲಾ ಅನ್ಯದೇವರುಗಳನ್ನು ನಾಶಮಾಡಿರಿ. ನಿಮ್ಮನ್ನು ಶುದ್ಧಿ ಮಾಡಿಕೊಂಡು ಶುದ್ಧವಾದ ಬಟ್ಟೆಗಳನ್ನು ಧರಿಸಿಕೊಳ್ಳಿರಿ.


ಇಸ್ರೇಲೇ, ನೀನು ಜಾರಿಬಿದ್ದು ದೇವರಿಗೆ ವಿರುದ್ಧವಾಗಿ ಪಾಪಮಾಡಿದಿ. ನಿನ್ನ ದೇವರಾದ ಯೆಹೋವನ ಬಳಿಗೆ ಹಿಂದಿರುಗಿ ಬಾ.


“ನಿಮ್ಮ ತಾಯಿಯೊಂದಿಗೆ ವಾದಿಸಿರಿ. ಯಾಕೆಂದರೆ ಆಕೆ ನನ್ನ ಹೆಂಡತಿಯಲ್ಲ. ನಾನು ಆಕೆಯ ಗಂಡನಲ್ಲ. ವೇಶ್ಯೆಯ ಹಾಗೆ ಆಕೆ ವರ್ತಿಸುವದನ್ನು ನಿಲ್ಲಿಸು ಎಂದು ಹೇಳಿರಿ. ಆಕೆಯ ಸ್ತನಗಳ ಮಧ್ಯದಿಂದ ಆಕೆಯ ಪ್ರಿಯತಮರನ್ನು ತೆಗೆದುಹಾಕಲು ಹೇಳಿರಿ.


ನಾನು ಮೋಶೆಯ ಮೂಲಕ ಕೊಟ್ಟಿರುವ ನಿಯಮಗಳಿಗೆ ಮತ್ತು ಆಜ್ಞೆಗಳಿಗೆ ಇಸ್ರೇಲರು ವಿಧೇಯರಾಗಿರುವುದಾದರೆ, ಅವರ ಪೂರ್ವಿಕರಿಗೆ ಕೊಡಲು ನಾನು ಆರಿಸಿಕೊಂಡ ದೇಶದಿಂದ ಅವರನ್ನು ತೆಗೆದುಬಿಡುವುದೇ ಇಲ್ಲ” ಎಂದು ಹೇಳಿದನು.


ಪ್ರವಾದಿಯಾದ ಓಬೇದನು ತಂದ ಸಂದೇಶವನ್ನು ಆಸನು ಕೇಳಿ ತುಂಬಾ ಪ್ರೋತ್ಸಾಹಗೊಂಡನು. ಅನಂತರ ಯೆಹೂದ ಮತ್ತು ಬೆನ್ಯಾಮೀನ್ ಪ್ರಾಂತ್ಯದಲ್ಲಿದ್ದ ಎಲ್ಲಾ ವಿಗ್ರಹಗಳನ್ನು ತೆಗೆದುಹಾಕಿಸಿದನು. ಗೆದ್ದಿದ್ದ ಎಫ್ರಾಯೀಮ್ ಬೆಟ್ಟಪ್ರದೇಶಗಳಲ್ಲಿದ್ದ ವಿಗ್ರಹಗಳನ್ನು ತೆಗೆದುಹಾಕಿಸಿದನು. ದೇವಾಲಯದ ಮಂಟಪದೆದುರು ಇದ್ದ ಯೆಹೋವನ ಯಜ್ಞವೇದಿಕೆಯನ್ನು ಸರಿಪಡಿಸಿದನು.


ಯೋಷೀಯನು ಮಾಂತ್ರಿಕರನ್ನು, ತಾಂತ್ರಿಕರನ್ನು, ಮನೆಯ ದೇವರುಗಳನ್ನು, ವಿಗ್ರಹಗಳನ್ನು, ಯೆಹೂದದಲ್ಲಿ ಮತ್ತು ಜೆರುಸಲೇಮಿನಲ್ಲಿ ಜನರು ಪೂಜಿಸುತ್ತಿದ್ದ ತೆರಾಫೀಮ್ ಎಂಬ ಗೊಂಬೆಗಳನ್ನು ನಾಶಪಡಿಸಿದನು. ಯಾಜಕನಾದ ಹಿಲ್ಕೀಯನಿಗೆ ದೇವಾಲಯದಲ್ಲಿ ಸಿಕ್ಕಿದ ಧರ್ಮಶಾಸ್ತ್ರದಲ್ಲಿ ಬರೆದಿರುವ ನಿಯಮಗಳಿಗೆ ವಿಧೇಯನಾಗಿರಲು ಯೋಷೀಯನು ಹೀಗೆ ಮಾಡಿದನು.


ಪೂರ್ವಕಾಲದಲ್ಲಿ, ರಾಜನಾದ ಸೊಲೊಮೋನನು ಜೆರುಸಲೇಮಿನ ಬಳಿಯಲ್ಲಿದ್ದ ವಿಘ್ನಪರ್ವತದ ಮೇಲೆ ಕೆಲವು ಉನ್ನತಸ್ಥಳಗಳನ್ನು ನಿರ್ಮಿಸಿದ್ದನು. ಆ ಉನ್ನತಸ್ಥಳಗಳು ಪರ್ವತದ ದಕ್ಷಿಣದಿಕ್ಕಿನ ಮೇಲಿದ್ದವು. ರಾಜನಾದ ಸೊಲೊಮೋನನು ಚೀದೋನ್ಯರ ಅಷ್ಟೋರೆತ್, ಮೋವಾಬ್ಯರ ಕೆಮೋಷ್, ಅಮ್ಮೋನಿಯರ ಮಿಲ್ಕೋಮ್ ಎಂಬ ಅಸಹ್ಯ ವಿಗ್ರಹಗಳಿಗಾಗಿ ಆ ಉನ್ನತಸ್ಥಳಗಳನ್ನು ನಿರ್ಮಿಸಿದ್ದನು. ಆದರೆ ರಾಜನಾದ ಯೋಷೀಯನು ಆ ಪೂಜಾಸ್ಥಳಗಳನ್ನೆಲ್ಲಾ ನಾಶಪಡಿಸಿದನು.


ಸಮುವೇಲನು ಇಸ್ರೇಲರಿಗೆ, “ನೀವು ಯೆಹೋವನ ಬಳಿಗೆ ಪೂರ್ಣಮನಸ್ಸಿನಿಂದ ಮತ್ತೆ ಬರುವುದಾದರೆ ನಿಮ್ಮ ಬಳಿಯಿರುವ ಅನ್ಯದೇವರುಗಳನ್ನು ಎಸೆಯಬೇಕು. ನೀವು ಅಷ್ಟೋರೆತ್ ದೇವತೆಯ ವಿಗ್ರಹಗಳನ್ನು ತ್ಯಜಿಸಬೇಕು. ನೀವು ನಿಮ್ಮನ್ನು ಯೆಹೋವನಿಗೆ ಸಂಪೂರ್ಣವಾಗಿ ಒಪ್ಪಿಸಿಕೊಟ್ಟು ಆತನ ಸೇವೆಯನ್ನು ಮಾತ್ರ ಮಾಡಬೇಕು. ಆಗ ಆತನು ನಿಮ್ಮನ್ನು ಫಿಲಿಷ್ಟಿಯರಿಂದ ರಕ್ಷಿಸುತ್ತಾನೆ” ಎಂದು ಹೇಳಿದನು.


ಆಗ ಇಸ್ರೇಲರು ಅನ್ಯದೇವರುಗಳನ್ನು ತೊರೆದು ಯೆಹೋವನನ್ನು ಆರಾಧಿಸಲು ಆರಂಭಿಸಿದರು. ಅವರು ಕಷ್ಟಪಡುತ್ತಿರುವುದನ್ನು ನೋಡಿ ಯೆಹೋವನು ಮರುಕಪಟ್ಟನು.


ಅವರು ದೇವರಲ್ಲದ್ದಕ್ಕೆ ತಿರುಗಿಕೊಂಡರು. ಮೋಸದ ಬಿಲ್ಲಿನಂತೆ ಅವರಾದರು. ಅವರ ನಾಯಕರು ತಮ್ಮ ಶಕ್ತಿಯ ಬಗ್ಗೆ ಹೆಚ್ಚಳಪಟ್ಟರು. ಆದರೆ ಅವರು ಕತ್ತಿಯಲ್ಲಿ ಸಾಯುವರು. ಆಗ ಈಜಿಪ್ಟಿನ ಜನರು ಅವರನ್ನು ನೋಡಿ ನಗಾಡುವರು.


ಆ ಕೆಟ್ಟ ಮಗನಿಂದ ಯಾರಾದರೂ ಸಾಲ ತೆಗೆದುಕೊಂಡಿದ್ದರೆ ಅವನು ಅವರಿಂದ ಬಡ್ಡಿಯನ್ನು ಕಡ್ಡಾಯವಾಗಿ ವಸೂಲು ಮಾಡಿದ್ದಿರಬಹುದು. ಹೀಗಿರುವದರಿಂದ ಆ ಕೆಟ್ಟ ಮಗನು ಹೆಚ್ಚುಕಾಲ ಬದುಕುವುದಿಲ್ಲ. ಅವನು ಭಯಂಕರ ಕೃತ್ಯಗಳನ್ನು ಮಾಡಿರುವದರಿಂದ ಕೊಲ್ಲಲ್ಪಡುವನು. ಅವನ ಮರಣಕ್ಕೆ ಅವನೇ ಜವಾಬ್ದಾರನು.


ನನ್ನ ಜನರು ಹಿಂದಕ್ಕೆ ಬಂದಾಗ ದೇಶದಲ್ಲಿರುವ ಎಲ್ಲಾ ಹೊಲಸು ವಿಗ್ರಹಗಳನ್ನು ತೆಗೆದುಹಾಕುವರು.


ನಾನು ಮಾಡಬೇಕೆಂದು ಯೋಚಿಸಿರುವುದನ್ನು ಯೆಹೂದ ಕುಲದವರು ಕೇಳಿಸಿಕೊಳ್ಳಬಹುದು. ಅವರು ಮಾಡುತ್ತಿರುವ ದುಷ್ಕೃತ್ಯಗಳನ್ನು ನಿಲ್ಲಿಸಬಹುದು. ಅವರು ಹಾಗೆ ಮಾಡಿದರೆ ಅವರು ಮಾಡಿದ ಪಾಪಗಳನ್ನು ನಾನು ಕ್ಷಮಿಸುವೆನು.”


ನಾನು ನನ್ನ ಸೇವಕರಾದ ಪ್ರವಾದಿಗಳನ್ನು ಇಸ್ರೇಲಿಗೆ ಮತ್ತು ಯೆಹೂದಕ್ಕೆ ಕಳುಹಿಸಿಕೊಟ್ಟೆ. ನಾನು ಅವರನ್ನು ನಿಮ್ಮಲ್ಲಿಗೆ ಪುನಃಪುನಃ ಕಳುಹಿಸಿಕೊಟ್ಟೆ. ಆ ಪ್ರವಾದಿಗಳು, “ಇಸ್ರೇಲಿನ ಮತ್ತು ಯೆಹೂದದ ಪ್ರತಿಯೊಬ್ಬರೂ ದುಷ್ಕೃತ್ಯಗಳನ್ನು ಮಾಡುವದನ್ನು ನಿಲ್ಲಿಸಬೇಕು. ನೀವು ಒಳ್ಳೆಯವರಾಗಿರಬೇಕು. ಬೇರೆ ದೇವರುಗಳನ್ನು ಅನುಸರಿಸಬಾರದು. ಅವುಗಳನ್ನು ಪೂಜಿಸಬಾರದು. ಅವುಗಳ ಸೇವೆಮಾಡಬಾರದು ಎಂದು ಹೇಳಿದರು. ನನ್ನ ಆಜ್ಞೆಯನ್ನು ಪಾಲಿಸಿದರೆ ನಾನು ನಿಮಗೂ ಮತ್ತು ನಿಮ್ಮ ಪೂರ್ವಿಕರಿಗೂ ಕೊಟ್ಟ ಪ್ರದೇಶದಲ್ಲಿ ನೀವು ವಾಸಿಸಬಹುದು” ಎಂದು ಹೇಳಿದ್ದೆ. ಆದರೆ ನೀವು ನನ್ನ ಸಂದೇಶದ ಕಡೆಗೆ ಗಮನ ಕೊಡಲಿಲ್ಲ.


ನಾನು ಆ ಜನರನ್ನು ದಂಡಿಸುವೆನು. ಆ ಶಿಕ್ಷೆಯು ಭೂಲೋಕದ ಎಲ್ಲಾ ಜನರಲ್ಲಿ ಭೀತಿಯನ್ನು ಉಂಟು ಮಾಡುವುದು. ಜನರು ಯೆಹೂದದ ಜನರನ್ನು ಗೇಲಿಮಾಡುವರು. ನಾನು ಅವರನ್ನು ತಳ್ಳಿದ ಎಲ್ಲಾ ದೇಶಗಳಲ್ಲಿ ಜನರು ಅವರ ಬಗ್ಗೆ ಪರಿಹಾಸ್ಯದ ಮಾತುಗಳನ್ನು ಆಡುವರು; ಅವರನ್ನು ಶಪಿಸುವರು.


ಯೆಹೂದದ ಜನರನ್ನು ಭೂಲೋಕದ ಎಲ್ಲಾ ಜನರಿಗೆ ಒಂದು ಭಯಾನಕವಾದ ಉದಾಹರಣೆಯಾಗುವಂತೆ ಮಾಡುತ್ತೇನೆ. ಮನಸ್ಸೆಯು ಜೆರುಸಲೇಮಿನಲ್ಲಿ ಮಾಡಿದ ಪಾಪಕೃತ್ಯಗಳ ಫಲವಾಗಿ ನಾನು ಯೆಹೂದದಲ್ಲಿ ಹೀಗೆ ಮಾಡುತ್ತೇನೆ. ಮನಸ್ಸೆಯು ರಾಜನಾದ ಹಿಜ್ಕೀಯನ ಮಗನಾಗಿದ್ದನು. ಮನಸ್ಸೆಯು ಯೆಹೂದದ ರಾಜನಾಗಿದ್ದನು.’


ಯೆಹೋವನ ಮನುಷ್ಯರಾಗಿರಿ, ನಿಮ್ಮ ಹೃದಯ ಪರಿವರ್ತನೆ ಮಾಡಿಕೊಳ್ಳಿರಿ. ಯೆಹೂದದ ಜನಗಳೇ, ಜೆರುಸಲೇಮಿನ ಜನರೇ, ನೀವು ಬದಲಾಗದಿದ್ದರೆ ನನಗೆ ವಿಪರೀತ ಕೋಪ ಬರುವುದು. ನನ್ನ ಕೋಪವು ಬೆಂಕಿಯ ಜ್ವಾಲೆಯಂತೆ ಭರದಿಂದ ಹಬ್ಬುವದು. ನನ್ನ ಕೋಪವು ನಿಮ್ಮನ್ನು ಸುಟ್ಟು ಬೂದಿ ಮಾಡುವುದು. ಯಾರಿಂದಲೂ ಆ ಬೆಕಿಯನ್ನು ಆರಿಸುವುದು ಸಾಧ್ಯವಾಗುವದಿಲ್ಲ. ಇದೆಲ್ಲ ಏಕೆ ನಡೆಯುವುದು? ನೀವು ಮಾಡಿದ ದುಷ್ಕೃತ್ಯಗಳಿಂದಲೇ.”


“ವಿಶ್ವಾಸದ್ರೋಹಿಗಳಾದ ಜನರೇ, ನನ್ನಲ್ಲಿಗೆ ಹಿಂತಿರುಗಿ ಬನ್ನಿ” ಇದು ಯೆಹೋವನ ನುಡಿಯಾಗಿತ್ತು. “ನಾನೇ ನಿಮ್ಮ ಒಡೆಯನು. ನಾನು ಪ್ರತಿಯೊಂದು ನಗರದಿಂದ ಒಬ್ಬ ವ್ಯಕ್ತಿಯನ್ನು ಮತ್ತು ಪ್ರತಿಯೊಂದು ಕುಲದಿಂದ ಇಬ್ಬರನ್ನು ಆರಿಸಿ ಚೀಯೋನಿಗೆ ಕರೆದು ತರುವೆನು.


ದೇವರಿಗೆ ವಿರುದ್ಧವಾಗಿರುವ ಇಸ್ರೇಲಿನ ಮಕ್ಕಳೇ, ನೀವು ದೇವರ ಬಳಿಗೆ ಹಿಂತಿರುಗಿ ಬನ್ನಿರಿ.


ತರುವಾಯ ಯೆಹೋಶುವನು ಜನರಿಗೆ, “ಈಗ ನೀವು ಯೆಹೋವನ ಮಾತುಗಳನ್ನು ಕೇಳಿದ್ದೀರಿ. ನೀವು ಆತನಲ್ಲಿ ಭಯಭಕ್ತಿಯಿಂದಿರಬೇಕು. ನಿಮ್ಮ ಪೂರ್ವಿಕರು ಯೂಫ್ರೇಟೀಸ್ ನದಿಯ ಆಚೆಯಲ್ಲಿಯೂ ಈಜಿಪ್ಟಿನಲ್ಲಿಯೂ ಪೂಜಿಸುತ್ತಿದ್ದ ಸುಳ್ಳುದೇವರುಗಳನ್ನು ಎಸೆದುಬಿಡಿ. ಈಗ ನೀವು ಯೆಹೋವನ ಸೇವೆಯನ್ನು ಮಾತ್ರ ಮಾಡಬೇಕು.


“‘ಸುಳ್ಳುದೇವರನ್ನು ಮಾಡಿ ಗುಪ್ತ ಸ್ಥಳದಲ್ಲಿಡುವವನು ಶಾಪಗ್ರಸ್ತನಾಗಲಿ; ಆ ದೇವರುಗಳು ಮನುಷ್ಯನ ಕೈಕೆಲಸವೇ; ಕಲ್ಲು, ಮರ, ಹಿತ್ತಾಳೆಗಳಿಂದ ಮಾಡಿದವುಗಳೇ. ಯೆಹೋವನು ಅವುಗಳನ್ನು ದ್ವೇಷಿಸುತ್ತಾನೆ.’ “ಆಗ ಎಲ್ಲಾ ಜನರು, ‘ಆಮೆನ್’ ಎಂದು ಹೇಳಬೇಕು.


ನೀವು ಕಷ್ಟದಲ್ಲಿ ಬಿದ್ದಾಗ, ಅವೆಲ್ಲಾ ನಿಮಗೆ ಸಂಭವಿಸಿದಾಗ ನೀವು ನಿಮ್ಮ ದೇವರಾದ ಯೆಹೋವನ ಬಳಿಗೆ ಹಿಂದಿರುಗಿಬಂದು ಆತನಿಗೆ ವಿಧೇಯರಾಗುವಿರಿ.


ಯೆಹೋವನು ಇಸ್ರೇಲರ ದೇವರು. ಸರ್ವಶಕ್ತನಾದ ದೇವರು ಹೀಗೆ ಹೇಳುತ್ತಾನೆ: ನಿಮ್ಮ ನಡತೆಯನ್ನು ಬದಲಾಯಿಸಿರಿ; ಒಳ್ಳೆಯದನ್ನು ಮಾಡಿರಿ. ಆಗ ನೀವು ಇಲ್ಲಿರಲು ಆಸ್ಪದ ಕೊಡುತ್ತೇನೆ.


ನೀವು ನಿಮ್ಮ ನಡತೆಯನ್ನು ಬದಲಾಯಿಸಿ ಸತ್ಕಾರ್ಯಗಳನ್ನು ಮಾಡಿದರೆ ನಾನು ನಿಮಗೆ ಈ ಸ್ಥಳದಲ್ಲಿ ವಾಸಿಸಲು ಆಸ್ಪದಕೊಡುತ್ತೇನೆ. ನೀವು ಒಬ್ಬರಿಗೊಬ್ಬರು ನ್ಯಾಯವಾದ ರೀತಿಯಲ್ಲಿ ವ್ಯವಹರಿಸಬೇಕು.


ನೀವು ನನ್ನ ಆಜ್ಞೆಯನ್ನು ಪಾಲಿಸಿದರೆ ಇಲ್ಲಿರಲು ನಾನು ನಿಮಗೆ ಆಸ್ಪದ ಕೊಡುತ್ತೇನೆ. ನಾನು ಈ ಪ್ರದೇಶವನ್ನು ನಿಮ್ಮ ಪೂರ್ವಿಕರಿಗೆ ಶಾಶ್ವತವಾದ ಸ್ವಾಸ್ತ್ಯವಾಗಿ ಕೊಟ್ಟಿದ್ದೇನೆ.


ಆಗ ಯೆಹೋವನು ಹೇಳಿದನು: “ಯೆರೆಮೀಯನೇ, ನೀನು ಬದಲಾವಣೆ ಹೊಂದಿ ನನ್ನಲ್ಲಿಗೆ ಬಂದರೆ ನಾನು ನಿನ್ನನ್ನು ದಂಡಿಸುವುದಿಲ್ಲ. ನೀನು ಬದಲಾವಣೆ ಹೊಂದಿ ನನ್ನಲ್ಲಿಗೆ ಬಂದರೆ ನೀನು ನನ್ನ ಸೇವೆ ಮಾಡಬಹುದು. ಹುರುಳಿಲ್ಲದ ಮಾತುಗಳನ್ನು ಬಿಟ್ಟು ಮುಖ್ಯವಾದ ವಿಷಯಗಳನ್ನು ಕುರಿತು ಮಾತನಾಡುವದಾದರೆ ನೀನು ನನ್ನ ಪರವಾಗಿ ಮಾತನಾಡಬಹುದು. ಯೆರೆಮೀಯನೇ, ಯೆಹೂದದ ಜನರು ಬದಲಾವಣೆ ಹೊಂದಿ ನಿನ್ನಲ್ಲಿಗೆ ಬರಬೇಕು. ಆದರೆ ನೀನು ಬದಲಾವಣೆ ಹೊಂದಿ ಅವರಂತೆ ಆಗಬಾರದು.


“ಯೆರೆಮೀಯನೇ, ಯೆಹೂದದ ಜನರಿಗೆ ಮತ್ತು ಜೆರುಸಲೇಮಿನಲ್ಲಿ ವಾಸಿಸುವ ಜನರಿಗೆ ಯೆಹೋವನು ಹೀಗೆನ್ನುವನು: ‘ಈಗಲೇ ನಾನು ನಿಮಗೋಸ್ಕರ ತೊಂದರೆಗಳನ್ನು ಎಬ್ಬಿಸುತ್ತೇನೆ. ನಿಮ್ಮ ವಿರುದ್ಧ ಯೋಜನೆಗಳನ್ನು ಹಾಕುತ್ತಿದ್ದೇನೆ. ಆದ್ದರಿಂದ ನೀವು ಮಾಡುತ್ತಿರುವ ದುಷ್ಕೃತ್ಯಗಳನ್ನು ನಿಲ್ಲಿಸಬೇಕು. ಪ್ರತಿಯೊಬ್ಬನು ಪರಿವರ್ತನೆ ಹೊಂದಿ ಒಳ್ಳೆಯ ಕೆಲಸಗಳನ್ನು ಮಾಡಲು ಪ್ರಾರಂಭಿಸಬೇಕು’ ಎಂದು ಹೇಳು.


ಯೆಹೋವನು ಹೀಗೆನ್ನುತ್ತಾನೆ: “ನಿಮ್ಮ ಪೂರ್ವಿಕರಂತೆ ಆಗಬೇಡಿರಿ. ಹಿಂದಿನ ಕಾಲದಲ್ಲಿ ಪ್ರವಾದಿಗಳು ಅವರ ಸಂಗಡ ಮಾತನಾಡಿದರು. ಅವರು, ‘ಸರ್ವಶಕ್ತನಾದ ಯೆಹೋವನು ನಿಮ್ಮ ಕೆಟ್ಟಜೀವಿತವನ್ನು ಬದಲಾಯಿಸಲು ಇಷ್ಟಪಡುತ್ತಾನೆ. ದುಷ್ಕೃತ್ಯಗಳನ್ನು ಮಾಡುವದನ್ನು ನಿಲ್ಲಿಸಿರಿ.’ ಆದರೆ ನಿಮ್ಮ ಪೂರ್ವಿಕರು ನನ್ನ ಮಾತುಗಳನ್ನು ಕೇಳಲಿಲ್ಲ.” ಇದು ಯೆಹೋವನ ನುಡಿ.


ಇಸ್ರೇಲ್ ಜನರ ಬಳಿ ನಾನಾ ಜನಾಂಗದವರ ವಿಗ್ರಹಗಳಿದ್ದವು. ಆದರೆ ಯೋಷೀಯನು ಆ ವಿಗ್ರಹಗಳನ್ನೆಲ್ಲಾ ನಾಶಮಾಡಿದನು. ಇಸ್ರೇಲರು ದೇವರಾದ ಯೆಹೋವನ ಸೇವೆಮಾಡುವಂತೆ ಯೋಷೀಯನು ಮಾಡಿದನು. ಯೋಷೀಯನು ಬದುಕಿದ್ದಷ್ಟು ಕಾಲ ಇಸ್ರೇಲರು ತಮ್ಮ ಪೂರ್ವಿಕರ ದೇವರಾದ ಯೆಹೋವನ ಸೇವೆಮಾಡಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು