Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 4:10 - ಪರಿಶುದ್ದ ಬೈಬಲ್‌

10 ಆಗ ಯೆರೆಮೀಯನೆಂಬ ನಾನು, “ನನ್ನ ಒಡೆಯನಾದ ಯೆಹೋವನೇ, ನೀನು ಯೆಹೂದ ಮತ್ತು ಜೆರುಸಲೇಮಿನ ಜನರಿಗೆ ಮೋಸ ಮಾಡಿದೆ, ‘ನೀವು ಶಾಂತಿಯಿಂದ ಇರುವಿರಿ’ ಎಂದು ನೀನು ಅವರಿಗೆ ಹೇಳಿದೆ. ಆದರೆ ಈಗ ಅವರ ಕತ್ತಿನ ಮೇಲೆ ಖಡ್ಗ ಇದೆ” ಅಂದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 ಆಗ ನಾನು, “ಅಯ್ಯೋ, ಕರ್ತನಾದ ಯೆಹೋವನೇ, ನೀನು ಈ ಜನರಿಗೂ ಮತ್ತು ಯೆರೂಸಲೇಮಿಗೂ, ‘ನಿಮಗೆ ಸಮಾಧಾನವಾಗುವುದು’ ಎಂದು ಹೇಳಿ ನಿಶ್ಚಯವಾಗಿ ಇವರನ್ನು ಬಹಳ ಮೋಸಗೊಳಿಸಿದ್ದಿ; ಖಡ್ಗವು ಪ್ರಾಣದ ಮಟ್ಟಿಗೂ ಇಳಿಯುತ್ತದಲ್ಲಾ” ಅಂದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

10 ಆಗ ನಾನು, “ಅಯ್ಯೋ, ಸ್ವಾಮಿ ಸರ್ವೇಶ್ವರಾ, ನೀವು ನಿಶ್ಚಯವಾಗಿಯೂ ಈ ಜನರನ್ನು ಹಾಗೂ ಜೆರುಸಲೇಮಿನವರನ್ನು ಮೋಸಗೊಳಿಸಿದ್ದೀರಿ. ‘ನಿಮಗೆ ಸಮಾಧಾನವಾಗುವುದು’ ಎಂದು ಅವರಿಗೆ ಹೇಳಿದಿರಿ, ಆದರೆ ಕತ್ತಿ ಅವರ ಕುತ್ತಿಗೆಗೆ ಬಂದಿದೆ” ಎಂದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

10 ಆಗ ನಾನು - ಅಯ್ಯೋ, ಕರ್ತನಾದ ಯೆಹೋವನೇ, ನೀನು ಈ ಜನರಿಗೂ ಯೆರೂಸಲೇವಿುಗೂ ನಿಮಗೆ ಸಮಾಧಾನವಾಗುವದೆಂದು ಹೇಳಿ ನಿಶ್ಚಯವಾಗಿ ಇವರನ್ನು ಬಹಳ ಮೋಸಗೊಳಿಸಿದ್ದೀ; ಖಡ್ಗವು ಪ್ರಾಣದ ಮಟ್ಟಿಗೂ ಇಳಿಯುತ್ತದಲ್ಲಾ ಅಂದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

10 ಆಗ ನಾನು ಹೇಳಿದ್ದೇನೆಂದರೆ, “ಹಾ, ಸಾರ್ವಭೌಮ ಯೆಹೋವ ದೇವರೇ, ನಿಶ್ಚಯವಾಗಿ ನೀವು ಈ ಜನರಿಗೂ, ಯೆರೂಸಲೇಮಿಗೂ, ‘ನಿಮಗೆ ಸಮಾಧಾನವಾಗುವುದು,’ ಎಂದು ಹೇಳಿ, ಬಹಳ ಮೋಸ ಮಾಡಿದಿರಿ. ಖಡ್ಗವು ಅವರ ಕುತ್ತಿಗೆಗೆ ಬಂದಿದೆ” ಎಂದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 4:10
21 ತಿಳಿವುಗಳ ಹೋಲಿಕೆ  

“ಆ ಜನರು ಯೆಹೋವನ ಬಗ್ಗೆ ಸುಳ್ಳು ಹೇಳಿದ್ದಾರೆ. ‘ಯೆಹೋವನು ನಮಗೇನೂ ಮಾಡುವುದಿಲ್ಲ. ನಮಗೆ ಕೆಟ್ಟದ್ದೇನೂ ಆಗುವದಿಲ್ಲ. ಯಾವ ಸೈನ್ಯವೂ ನಮ್ಮ ಮೇಲೆ ಧಾಳಿ ಮಾಡುವುದಿಲ್ಲ; ನಾವೆಂದೂ ಉಪವಾಸಬೀಳುವದಿಲ್ಲ’ ಎಂದು ಅವರು ಹೇಳಿದ್ದಾರೆ.


ನಾನು ಈ ಪಟ್ಟಣವನ್ನು ರಕ್ಷಿಸಿ ಕಾಪಾಡುವೆನು. ನನಗೋಸ್ಕರವಾಗಿಯೇ ಇದನ್ನು ಮಾಡುವೆನು. ನನ್ನ ಸೇವಕನಾದ ದಾವೀದನಿಗೋಸ್ಕರವಾಗಿಯೂ ಇದನ್ನು ಮಾಡುವೆನು.”


ದೇವರ ನಿಜ ಜ್ಞಾನವನ್ನು ಹೊಂದಿಕೊಳ್ಳಲು ಅವರಿಗೆ ಇಷ್ಟವಿಲ್ಲದ್ದರಿಂದ ದೇವರು ಅವರನ್ನು ಅವರ ಅಯೋಗ್ಯ ಭಾವಕ್ಕೆ ಒಪ್ಪಿಸಿಕೊಟ್ಟನು. ಆದ್ದರಿಂದ ಅವರು ತಾವು ಮಾಡಬಾರದ ಕೆಲಸಗಳನ್ನು ಮಾಡುತ್ತಾರೆ.


ಅವರು ಆ ರೀತಿ ವರ್ತಿಸಿದ್ದರಿಂದಲೇ, ದೇವರು ಅವರನ್ನು ನಾಚಿಕೆಕರವಾದ ಕಾಮಾಭಿಲಾಷೆಗೆ ಬಿಟ್ಟುಕೊಟ್ಟನು. ಅವರ ಸ್ತ್ರೀಯರು ಪುರಷರೊಂದಿಗೆ ಪಡೆಯುತ್ತಿದ್ದ ಸಹಜವಾದ ಲೈಂಗಿಕ ಸಂಪರ್ಕವನ್ನು ನಿಲ್ಲಿಸಿ, ಸಲಿಂಗಕಾಮಿಗಳಾದರು.


ಪಾಪಗಳಿಂದ ತುಂಬಿಹೋಗಿದ್ದ ಅವರು ದುಷ್ಕೃತ್ಯಗಳನ್ನೇ ಮಾಡಬಯಸಿದರು. ಆದ್ದರಿಂದ ಪಾಪಮಾರ್ಗದಲ್ಲೇ ಹೋಗಲೆಂದು ದೇವರು ಅವರನ್ನು ಬಿಟ್ಟುಬಿಟ್ಟನು. ಅದರಿಂದಾಗಿ ಅವರು ತಮ್ಮತಮ್ಮಲ್ಲೇ ತಮ್ಮ ದೇಹಗಳಿಂದ ಲೈಂಗಿಕ ಪಾಪಗಳನ್ನು ಮಾಡಿದರು.


ನಾನು ದೇವರ ಪರವಾಗಿ ಮಾತನಾಡುವದನ್ನು ನಿಲ್ಲಿಸಿದ ಕೂಡಲೇ, ಬೆನಾಯನ ಮಗನಾದ ಪೆಲತ್ಯನು ಸತ್ತನು. ನಾನು ನೆಲದ ಮೇಲೆ ಬಗ್ಗಿ, “ನನ್ನ ಒಡೆಯನಾದ ಯೆಹೋವನೇ, ನೀನು ಇಸ್ರೇಲಿನಲ್ಲಿ ಅಳಿದುಳಿದವರನ್ನು ಸಂಪೂರ್ಣವಾಗಿ ನಾಶಮಾಡುವಿಯೋ?” ಎಂದು ಗಟ್ಟಿಯಾಗಿ ಕೂಗಿಕೊಂಡೆನು.


ಬೀದಿಗಳಲ್ಲಿ ತರುಣರು ಮತ್ತು ವೃದ್ಧರು ನೆಲದ ಮೇಲೆ ಬಿದ್ದಿದ್ದಾರೆ. ನನ್ನ ಯುವತಿಯರು ಮತ್ತು ಯುವಕರು ಖಡ್ಗದಿಂದ ಹತರಾಗಿದ್ದಾರೆ. ಯೆಹೋವನೇ, ನಿನಗೆ ಕೋಪಬಂದ ದಿನ ಅವರನ್ನು ಕೊಂದುಬಿಟ್ಟೆ; ಕರುಣೆ ತೋರದೆ ಅವರನ್ನು ಸಂಹರಿಸಿದೆ.


“ದೇವರಾದ ಯೆಹೋವನೇ, ನೀನು ಭೂಮ್ಯಾಕಾಶಗಳನ್ನು ಸೃಷ್ಟಿಸಿದೆ. ಅವುಗಳನ್ನು ನೀನು ನಿನ್ನ ಅಪಾರವಾದ ಶಕ್ತಿಯಿಂದ ಸೃಷ್ಟಿಸಿದೆ. ನಿನಗೆ ಅಸಾಧ್ಯವಾದುದು ಯಾವುದೂ ಇಲ್ಲ.


ಕೆಲವು ಜನರು ಯೆಹೋವನ ನಿಜವಾದ ಸಂದೇಶಗಳನ್ನು ದ್ವೇಷಿಸುತ್ತಾರೆ. ಆದ್ದರಿಂದ ಆ ಪ್ರವಾದಿಗಳು ಆ ಜನರಿಗೆ ಬೇರೆಯದನ್ನೇ ಹೇಳುತ್ತಾರೆ. ಅವರು ‘ನಿಮಗೆ ಶುಭವಾಗುವುದು’ ಎನ್ನುತ್ತಾರೆ. ಕೆಲವು ಜನರು ಬಹಳ ಮೊಂಡರಾಗಿದ್ದಾರೆ. ಅವರು ತಮ್ಮ ಮನಸ್ಸಿಗೆ ಬಂದುದನ್ನೇ ಮಾಡುತ್ತಾರೆ. ಅವರಿಗೆ ಈ ಪ್ರವಾದಿಗಳು ‘ನಿಮಗೆ ಯಾವ ಕೇಡೂ ಸಂಭವಿಸುವದಿಲ್ಲ’ ಎಂದು ಹೇಳುತ್ತಾರೆ.


ಪ್ರವಾದಿಗಳು ಮತ್ತು ಯಾಜಕರು ನಮ್ಮ ಜನರ ಆಳವಾದ ಗಾಯಗಳನ್ನು ಕೇವಲ ಅಲ್ಪಗಾಯಗಳಂತೆ ಪರಿಗಣಿಸಿ ಚಿಕಿತ್ಸೆ ಕೊಡುತ್ತಿದ್ದಾರೆ. “ಎಲ್ಲಾ ಚೆನ್ನಾಗಿದೆ, ಎಲ್ಲಾ ಚೆನ್ನಾಗಿದೆ” ಎಂದು ಅವರು ಹೇಳುತ್ತಾರೆ. ಆದರೆ ಎಲ್ಲಾ ಚೆನ್ನಾಗಿಲ್ಲ.


ಪ್ರವಾದಿಗಳು ಮತ್ತು ಯಾಜಕರು ನನ್ನ ಜನರಿಗಾದ ದೊಡ್ಡ ಗಾಯಗಳಿಗೆ ಚಿಕ್ಕಗಾಯಗಳಿಗೋ ಎಂಬಂತೆ ಚಿಕಿತ್ಸೆ ಮಾಡುತ್ತಾರೆ. ವಾಸಿಯಾಗಿಲ್ಲದಿದ್ದರೂ ‘ವಾಸಿಯಾಗಿದೆ’ ಎನ್ನುತ್ತಾರೆ.


“ನಿನ್ನ ನಡತೆಯೂ ನಿನ್ನ ಕೃತ್ಯಗಳೂ ನಿನಗೆ ಈ ಕಷ್ಟವನ್ನು ತಂದವು. ನಿನ್ನ ದುಷ್ಟತನವೇ ನಿನ್ನ ಜೀವನವನ್ನು ಇಷ್ಟು ಕಷ್ಟಕರವನ್ನಾಗಿ ಮಾಡಿದೆ. ನಿನ್ನ ದುಷ್ಟತನವೇ ನಿನ್ನ ಮನಸ್ಸಿಗೆ ಆಳವಾದ ನೋವನ್ನು ಉಂಟುಮಾಡಿದೆ.”


ಆಗ ಯೆರೆಮೀಯನೆಂಬ ನಾನು, “ಸರ್ವಶಕ್ತನಾದ ಯೆಹೋವನೇ, ಹೇಗೆ ಮಾತನಾಡಬೇಕೆಂಬುದೇ ನನಗೆ ತಿಳಿಯದು. ನಾನು ಕೇವಲ ಹುಡುಗನಷ್ಟೇ” ಎಂದು ಹೇಳಿದೆ.


ಯೆಹೋವನೇ, ನೀನು ನಮ್ಮನ್ನು ನಿನ್ನಿಂದ ದೂರ ಮಾಡಿರುವೆ. ನಾವು ನಿನ್ನನ್ನು ಹಿಂಬಾಲಿಸಬೇಕೆಂದರೂ ಹಾಗೆ ಆಗದಂತೆ ಅದನ್ನೇಕೆ ಕಷ್ಟಕರವಾಗಿ ಮಾಡಿರುವೆ? ಯೆಹೋವನೇ, ನಮ್ಮ ಬಳಿಗೆ ಹಿಂದಿರುಗಿ ಬಾ. ನಾವು ನಿನ್ನ ಸೇವಕರಾಗಿದ್ದೇವೆ. ನಮ್ಮ ಬಳಿಗೆ ಬಂದು ಸಹಾಯಮಾಡು. ನಮ್ಮ ಕುಟುಂಬಗಳು ನಿನ್ನವೇ.


ಅವರು ಪ್ರವಾದಿಗಳಿಗೆ, “ನಾವು ಮಾಡಬೇಕಿರುವ ಕಾರ್ಯಗಳ ಬಗ್ಗೆ ದೈವೋಕ್ತಿ ನುಡಿಯಬೇಡಿ, ನಮಗೆ ಸತ್ಯವನ್ನು ತಿಳಿಸಬೇಡಿ. ನಮಗೊಪ್ಪುವ ಮನರಂಜನೆಯ ಮಾತುಗಳನ್ನಾಡಿ. ನಮಗೋಸ್ಕರ ಒಳ್ಳೆಯ ಸಂಗತಿಗಳನ್ನೇ ನಿಮ್ಮ ದರ್ಶನಗಳಲ್ಲಿ ನೋಡಿರಿ.


ಇಲ್ಲವಾದರೆ, ನಾನು ನಿನ್ನ ವಿರುದ್ಧವಾಗಿಯೂ ನಿನ್ನ ಅಧಿಕಾರಿಗಳ ವಿರುದ್ಧವಾಗಿಯೂ ನಿನ್ನ ಜನರ ವಿರುದ್ಧವಾಗಿಯೂ ನನ್ನ ಪೂರ್ಣಶಕ್ತಿಯಿಂದ ಉಪದ್ರವಗಳನ್ನು ಕಳುಹಿಸುವೆನು. ಆಗ ನನ್ನಂಥ ದೇವರು ಲೋಕದಲ್ಲಿ ಇಲ್ಲವೇ ಇಲ್ಲವೆಂದು ನೀನು ತಿಳಿದುಕೊಳ್ಳುವೆ.


ಆಗ ಮೋಶೆಯು ಯೆಹೋವನಿಗೆ ಪ್ರಾರ್ಥಿಸಿ, “ಯೆಹೋವನೇ, ನಿನ್ನ ಜನರಿಗೆ ಈ ಕೇಡನ್ನು ಏಕೆ ಮಾಡಿದೆ? ನನ್ನನ್ನು ಯಾಕೆ ಇಲ್ಲಿಗೆ ಕಳುಹಿಸಿದೆ?


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು