Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 4:14 - ಪರಿಶುದ್ದ ಬೈಬಲ್‌

14 ಜೆರುಸಲೇಮಿನ ಜನರೇ, ನಿಮ್ಮ ಹೃದಯದ ಕೆಟ್ಟತನವನ್ನು ತೊಳೆದುಕೊಳ್ಳಿರಿ. ರಕ್ಷಣೆಹೊಂದಲು ನಿಮ್ಮ ಹೃದಯಗಳನ್ನು ಪವಿತ್ರಗೊಳಿಸಿರಿ. ದುರಾಲೋಚನೆಗಳನ್ನು ಮುಂದುವರಿಸಬೇಡಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

14 ಯೆರೂಸಲೇಮೇ, ನಿನಗೆ ರಕ್ಷಣೆಯಾಗುವಂತೆ ನಿನ್ನ ಹೃದಯದ ಕೆಟ್ಟತನವನ್ನು ತೊಳೆದುಕೋ. ದುರಾಲೋಚನೆಗಳು ನಿನ್ನಲ್ಲಿ ಇನ್ನೆಷ್ಟರವರೆಗೆ ತಂಗಿರುವವು?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

14 ಜೆರುಸಲೇಮ್, ನೀನು ತಪ್ಪಿಸಿಕೊಳ್ಳಬೇಕಾದರೆ ನಿನ್ನ ಹೃದಯದಲ್ಲಿರುವ ಕೆಟ್ಟತನವನ್ನು ತೊಳೆದುಬಿಡು. ದುರಾಲೋಚನೆಗಳನ್ನು ನಿನ್ನ ಮನದಲ್ಲಿ ಇನ್ನೆಷ್ಟರವರೆಗೆ ಇಟ್ಟುಕೊಂಡಿರುವೆ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

14 ಯೆರೂಸಲೇಮೇ, ನಿನಗೆ ರಕ್ಷಣೆಯಾಗುವಂತೆ ನಿನ್ನ ಹೃದಯದ ಕೆಟ್ಟತನವನ್ನು ತೊಳೆದುಕೋ. ದುರಾಲೋಚನೆಗಳು ನಿನ್ನಲ್ಲಿ ಇನ್ನೆಷ್ಟರವರೆಗೆ ತಂಗಿರುವವು?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

14 ಯೆರೂಸಲೇಮೇ, ನಿನಗೆ ರಕ್ಷಣೆಯಾಗುವ ಹಾಗೆ ನಿನ್ನ ಹೃದಯದ ಕೆಟ್ಟತನವನ್ನು ತೊಳೆದುಕೋ; ನಿನ್ನ ವ್ಯರ್ಥ ಆಲೋಚನೆಗಳು ಎಷ್ಟರವರೆಗೆ ನಿನ್ನಲ್ಲಿ ತಂಗುವುವು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 4:14
22 ತಿಳಿವುಗಳ ಹೋಲಿಕೆ  

ದೇವರ ಸಮೀಪಕ್ಕೆ ಬನ್ನಿ, ಆಗ ದೇವರು ನಿಮ್ಮ ಸಮೀಪಕ್ಕೆ ಬರುತ್ತಾನೆ. ನೀವು ಪಾಪಿಗಳು, ಆದ್ದರಿಂದ ನಿಮ್ಮ ಜೀವಿತಗಳಿಂದ ಪಾಪಗಳನ್ನು ತೊಳೆದು ಹಾಕಿರಿ. ನೀವು ದೇವರನ್ನು ಮತ್ತು ಈ ಲೋಕವನ್ನು ಏಕಕಾಲದಲ್ಲಿ ಅನುಸರಿಸಲು ಪ್ರಯತ್ನಿಸುತ್ತಿರುವಿರಿ. ನಿಮ್ಮ ಆಲೋಚನೆಗಳನ್ನು ಪರಿಶುದ್ಧಗೊಳಿಸಿರಿ.


ನಿನ್ನ ಹೃದಯವನ್ನು ಮಾರ್ಪಡಿಸಿಕೊ! ನೀನು ಮಾಡಿದ ಕೆಟ್ಟಕಾರ್ಯದಿಂದ ತಿರುಗಿಕೊ. ಪ್ರಭುವಿನಲ್ಲಿ ಪ್ರಾರ್ಥಿಸು. ನೀನು ಹೀಗೆ ಆಲೋಚಿಸಿದ್ದನ್ನು ಆತನು ಕ್ಷಮಿಸಬಹುದು.


ಕೆಟ್ಟಜನರು ಕೆಟ್ಟತನದಲ್ಲಿ ಜೀವಿಸುವದನ್ನು ನಿಲ್ಲಿಸಲಿ. ಅವರು ಕೆಟ್ಟ ಆಲೋಚನೆಗಳನ್ನು ಮಾಡದಿರಲಿ. ಅವರು ಯೆಹೋವನ ಬಳಿಗೆ ಹಿಂತಿರುಗಲಿ. ಆಗ ಯೆಹೋವನು ಅವರನ್ನು ಆದರಿಸುವನು. ದೇವರಾದ ಯೆಹೋವನು ಕ್ಷಮಿಸುವುದರಿಂದ ಅವರು ಆತನ ಬಳಿಗೆ ಬರಲಿ.


“ಪ್ರಭುವು ಜ್ಞಾನಿಗಳ ಆಲೋಚನೆಗಳನ್ನು ತಿಳಿದಿದ್ದಾನೆ. ಅವರ ಆಲೋಚನೆಗಳು ನಿಷ್ಪ್ರಯೋಜಕವೆಂದು ಆತನಿಗೆ ಗೊತ್ತಿದೆ” ಎಂದು ಸಹ ಪವಿತ್ರ ಗ್ರಂಥದಲ್ಲಿ ಬರೆಯಲ್ಪಟ್ಟಿದೆ.


ಜನರು ದೇವರನ್ನು ತಿಳಿದಿದ್ದರೂ ದೇವರನ್ನು ಮಹಿಮೆಪಡಿಸಲಿಲ್ಲ, ಆತನಿಗೆ ಕೃತಜ್ಞತೆಯನ್ನು ಸಲ್ಲಿಸಲಿಲ್ಲ. ಜನರ ಆಲೋಚನೆಯು ನಿಷ್ಪ್ರಯೋಜಕವಾಯಿತು. ಅವರ ಮೂಢಮನಸ್ಸುಗಳು ಕತ್ತಲೆಯಿಂದ ತುಂಬಿಹೋದವು.


ಪ್ರಭುವು (ಯೇಸು) ಅವನಿಗೆ ಹೇಳಿದ್ದೇನೆಂದರೆ: “ಫರಿಸಾಯರಾದ ನೀವು ಪಾತ್ರೆಯ ಮತ್ತು ಬಟ್ಟಲಿನ ಹೊರಭಾಗವನ್ನು ಶುಚಿಮಾಡುತ್ತೀರಿ. ಆದರೆ ನಿಮ್ಮ ಒಳಭಾಗವು ಮೋಸದಿಂದಲೂ ಕೆಟ್ಟತನದಿಂದಲೂ ತುಂಬಿಹೋಗಿದೆ.


ನೀನು ಮಾಡಿದ ಭಯಾನಕ ಕೃತ್ಯಗಳನ್ನು ನಾನು ನೋಡಿದ್ದೇನೆ. ನಿನ್ನ ಪ್ರಿಯತಮರ ಜೊತೆಗೆ ನಗುವದನ್ನೂ ಕಾಮದಾಟವಾಡುವದನ್ನೂ ನಾನು ನೋಡಿದ್ದೇನೆ. ನೀನು ವೇಶ್ಯೆಯಂತೆ ನಡೆದುಕೊಳ್ಳಬೇಕೆಂದು ಯೋಚನೆ ಮಾಡಿದ್ದು ನನಗೆ ಗೊತ್ತು. ನೀನು ಹೊಲಗಳಲ್ಲಿಯೂ ಬೆಟ್ಟಗಳಲ್ಲಿಯೂ ಮಾಡಿದ ಅಸಹ್ಯಕೃತ್ಯಗಳನ್ನು ನಾನು ನೋಡಿದ್ದೇನೆ. ಜೆರುಸಲೇಮೇ, ಇದರಿಂದ ನಿನಗೆ ತುಂಬಾ ಕೇಡಾಗುವದು. ನೀನು ಎಷ್ಟು ದಿನ ಹೀಗೆಯೇ ನಿನ್ನ ಪಾಪಕೃತ್ಯಗಳನ್ನು ಮುಂದುವರಿಸುವೆ ಎಂದು ನಾನು ಯೋಚಿಸುತ್ತಿದ್ದೇನೆ.”


“ನೀವು ಮೂಢಜನರು. ಇನ್ನೆಷ್ಟುಕಾಲ ನೀವು ನಿಮ್ಮ ಮೂಢತನದಲ್ಲಿ ಆನಂದಿಸುವಿರಿ? ಇನ್ನೆಷ್ಟುಕಾಲ ನೀವು ವಿವೇಕವನ್ನು ಹಾಸ್ಯಮಾಡಬೇಕೆಂದಿದ್ದೀರಿ? ಇನ್ನೆಷ್ಟುಕಾಲ ನೀವು ಜ್ಞಾನವನ್ನು ದ್ವೇಷ ಮಾಡಬೇಕೆಂದಿದ್ದೀರಿ?


ನನ್ನ ಶುದ್ಧಹೃದಯವನ್ನು ಕಂಡು ಯೆಹೋವನು ಕಿವಿಗೊಟ್ಟನು.


“ನಿಮಗೆ ಒಳ್ಳೆಯ ಫಲ ಬೇಕಾಗಿದ್ದರೆ ನೀವು ಒಳ್ಳೆಯ ಮರ ಹೊಂದಿರಬೇಕು. ನಿಮ್ಮ ಮರ ಒಳ್ಳೆಯದಾಗಿಲ್ಲದಿದ್ದರೆ ಅದು ಕೆಟ್ಟ ಫಲವನ್ನೇ ಬಿಡುವುದು. ಮರವನ್ನು ಅದರಲ್ಲಿ ಬಿಡುವ ಫಲದಿಂದಲೇ ತಿಳಿದುಕೊಳ್ಳಬಹುದು.


ನಿಮ್ಮ ದಂಗೆಕೋರತನದ ಮಾರ್ಗಗಳನ್ನೆಲ್ಲ ತೊರೆದುಬಿಟ್ಟು ನಿಮ್ಮ ಹೃದಯವನ್ನೂ ಸ್ವಭಾವವನ್ನೂ ನೂತನ ಮಾಡಿಕೊಳ್ಳಿರಿ. ಇಸ್ರೇಲ್ ಜನರೇ, ನೀವು ಮರಣವನ್ನು ಬರಮಾಡಿಕೊಳ್ಳುವುದೇಕೆ?


ನಿನಗೆ ಪೂರ್ಣವಾಗಿ ನಂಬಿಗಸ್ತರಾಗಿಲ್ಲದವರನ್ನು ದ್ವೇಷಿಸುವೆನು. ನಾನಾದರೋ ನಿನ್ನ ಉಪದೇಶಗಳನ್ನು ಪ್ರೀತಿಸುವೆನು.


ನನ್ನ ದೋಷವನ್ನು ತೊಳೆದುಬಿಡು. ನನ್ನ ಪಾಪವನ್ನು ಪರಿಹರಿಸಿ ನನ್ನನ್ನು ಮತ್ತೆ ಶುದ್ಧೀಕರಿಸು!


ನೀನು ಚೌಳನಿಂದ ತೊಳೆದುಕೊಂಡರೂ ಹೆಚ್ಚು ಸೋಪನ್ನು ಉಪಯೋಗಿಸಿದರೂ ನಾನು ನಿನ್ನ ದೋಷವನ್ನು ಕಂಡುಹಿಡಿಯಬಲ್ಲೆ” ಅನ್ನುತ್ತಾನೆ ಯೆಹೋವನು.


ಭೂಲೋಕದ ಜನರೇ, ಕೇಳಿರಿ, ಆ ಜನರು ಮಾಡಿದ ಎಲ್ಲಾ ಕುಯುಕ್ತಿಗಳಿಗಾಗಿ ನಾನು ಯೆಹೂದ ಜನರಿಗೆ ವಿನಾಶವನ್ನು ತರುವೆನು. ಅವರು ನನ್ನ ಸಂದೇಶಗಳಿಗೆ ಗಮನ ಕೊಡದೆ ಇದ್ದುದರಿಂದ, ಅವರು ನನ್ನ ಧರ್ಮಶಾಸ್ತ್ರವನ್ನು ಅಸಡ್ಡೆ ಮಾಡಿದ್ದರಿಂದ ಇದೆಲ್ಲ ನಡೆಯುವುದು.”


“ಯೆಹೂದದ ಜನರ ಅಪರಾಧ ಅಳಿಸಲಾಗದ ಸ್ಥಳದಲ್ಲಿ ಬರೆಯಲಾಗಿದೆ. ಆ ಅಪರಾಧಗಳು ಕಬ್ಬಿಣದ ಲೇಖನಿಯಿಂದ ಕಲ್ಲಿನ ಮೇಲೆ ಕೆತ್ತಲಾಗಿವೆ. ಅವರ ಪಾಪಗಳು ವಜ್ರದ ಮೊನೆಯುಳ್ಳ ಲೇಖನಿಯಿಂದ ಕಲ್ಲಿನ ಮೇಲೆ ಕೆತ್ತಲಾಗಿವೆ. ಅವರ ಹೃದಯವೇ ಆ ಕಲ್ಲು, ಆ ಪಾಪಗಳು ಅವರ ಯಜ್ಞವೇದಿಕೆಗಳ ಕೊಂಬುಗಳಲ್ಲಿ ಕೆತ್ತಿವೆ.


ನಿಮ್ಮ ನೆರೆಯವನಿಗೆ ಹಾನಿಮಾಡುವುದನ್ನು ಗುಟ್ಟಾಗಿ ಆಲೋಚಿಸಬೇಡಿರಿ. ಸುಳ್ಳು ವಾಗ್ದಾನ ಮಾಡಬೇಡಿರಿ. ಅವುಗಳನ್ನೆಲ್ಲಾ ಮಾಡುವದರಲ್ಲಿ ಆನಂದಿಸಬೇಡಿರಿ. ಯಾಕೆಂದರೆ ಅವುಗಳನ್ನು ನಾನು ದ್ವೇಷಿಸುತ್ತೇನೆ.” ಇದು ಯೆಹೋವನ ನುಡಿ.


“ಯೆರೆಮೀಯನೇ, ಯೆಹೂದದ ಜನರಿಗೆ ಮತ್ತು ಜೆರುಸಲೇಮಿನಲ್ಲಿ ವಾಸಿಸುವ ಜನರಿಗೆ ಯೆಹೋವನು ಹೀಗೆನ್ನುವನು: ‘ಈಗಲೇ ನಾನು ನಿಮಗೋಸ್ಕರ ತೊಂದರೆಗಳನ್ನು ಎಬ್ಬಿಸುತ್ತೇನೆ. ನಿಮ್ಮ ವಿರುದ್ಧ ಯೋಜನೆಗಳನ್ನು ಹಾಕುತ್ತಿದ್ದೇನೆ. ಆದ್ದರಿಂದ ನೀವು ಮಾಡುತ್ತಿರುವ ದುಷ್ಕೃತ್ಯಗಳನ್ನು ನಿಲ್ಲಿಸಬೇಕು. ಪ್ರತಿಯೊಬ್ಬನು ಪರಿವರ್ತನೆ ಹೊಂದಿ ಒಳ್ಳೆಯ ಕೆಲಸಗಳನ್ನು ಮಾಡಲು ಪ್ರಾರಂಭಿಸಬೇಕು’ ಎಂದು ಹೇಳು.


ಆಗ ಸೀಮೋನ್ ಪೇತ್ರನು, “ಪ್ರಭುವೇ, ನನ್ನ ಪಾದಗಳನ್ನು ಮಾತ್ರವಲ್ಲದೆ ನನ್ನ ಕೈಗಳನ್ನು ಮತ್ತು ತಲೆಯನ್ನೂ ತೊಳೆ!” ಎಂದು ಕೇಳಿಕೊಂಡನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು