Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 4:15 - ಪರಿಶುದ್ದ ಬೈಬಲ್‌

15 ಕೇಳಿರಿ, ದಾನ್ ಪ್ರದೇಶದಿಂದ ದೂತನ ಸ್ವರವು ಕೇಳಿಬರುತ್ತಿದೆ. ಎಫ್ರಾಯೀಮ್ ಬೆಟ್ಟಪ್ರದೇಶದಿಂದ ಒಬ್ಬನು ಕೆಟ್ಟ ಸಮಾಚಾರವನ್ನು ತರುತ್ತಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

15 ಆಹಾ, ದಾನ್ ನಗರದಿಂದ ಪ್ರಕಟಣೆಯ ಧ್ವನಿಯು ಕೇಳಿಬರುತ್ತದೆ, ಎಫ್ರಾಯೀಮಿನ ಬೆಟ್ಟದಲ್ಲಿಯೂ ಕೇಡನ್ನು ಸಾರುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

15 ದಾನ್ ನಗರದಿಂದ ಪ್ರಕಟನೆಯ ಧ್ವನಿ ಕೇಳಿ ಬರುತ್ತದೆ. ಎಫ್ರಯಿಮಿನ ಬೆಟ್ಟದಿಂದ ಕೇಡನ್ನು ಸಾರಲಾಗುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

15 ಆಹಾ, ದಾನಿನಿಂದ ಪ್ರಕಟನೆಯ ಧ್ವನಿಯು ಕೇಳಬರುತ್ತದೆ, ಎಫ್ರಾಯೀವಿುನ ಬೆಟ್ಟದಲ್ಲಿಯೂ ಕೇಡನ್ನು ಸಾರುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

15 ಏಕೆಂದರೆ ಒಂದು ಶಬ್ದವು ದಾನಿನಿಂದ ಪ್ರಕಟಮಾಡುತ್ತದೆ; ಎಫ್ರಾಯೀಮಿನ ಬೆಟ್ಟದಿಂದ ಆಪತ್ತನ್ನು ತಿಳಿಯಪಡಿಸುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 4:15
8 ತಿಳಿವುಗಳ ಹೋಲಿಕೆ  

ದಾನ್‌ಕುಲದವರ ಪ್ರದೇಶದಿಂದ ನಾವು ಶತ್ರುಗಳ ಕುದುರೆಗಳ ಕೆನೆತವನ್ನು ಕೇಳುತ್ತಿದ್ದೇವೆ. ಅವುಗಳ ಪಾದಗಳ ಬಡಿತದಿಂದ ಭೂಮಿ ನಡುಗುತ್ತಿದೆ. ಅವರು ನಮ್ಮ ಪ್ರದೇಶವನ್ನು ಮತ್ತು ಅಲ್ಲಿದ್ದ ಎಲ್ಲವನ್ನು ಹಾಳುಮಾಡಲು ಬಂದಿದ್ದಾರೆ. ಅವರು ನಗರವನ್ನು ಮತ್ತು ಅಲ್ಲಿದ್ದ ಎಲ್ಲಾ ಜನರನ್ನು ಹಾಳುಮಾಡಲು ಬಂದಿದ್ದಾರೆ.


ಬೆನ್ಯಾಮೀನನ ಕುಲದವರೇ, ನಿಮ್ಮ ಪ್ರಾಣ ರಕ್ಷಣೆಗಾಗಿ ಓಡಿಹೋಗಿರಿ; ಜೆರುಸಲೇಮ್ ನಗರದಿಂದ ಓಡಿಹೋಗಿರಿ. ತೆಕೋವ ನಗರದಲ್ಲಿ ಯುದ್ಧದ ತುತ್ತೂರಿಗಳನ್ನು ಊದಿರಿ; ಬೇತ್‌ಹಕ್ಕೆರೆಮಿನಲ್ಲಿ ಎಚ್ಚರಿಕೆಯ ಧ್ವಜಗಳನ್ನು ಹಾರಿಸಿರಿ. ಉತ್ತರದಿಕ್ಕಿನಿಂದ ವಿಪತ್ತು ಬರುತ್ತಿರುವುದರಿಂದ ಇವೆಲ್ಲವನ್ನು ಮಾಡಿರಿ. ಭಯಂಕರವಾದ ವಿನಾಶವು ನಿಮಗೆ ಬರುತ್ತಿದೆ.


ಇಸ್ರೇಲಿನ ಜನರೆಲ್ಲರೂ ಒಟ್ಟುಗೂಡಿದರು. ಮಿಚ್ಛೆ ನಗರದಲ್ಲಿ ಯೆಹೋವನ ಎದುರಿಗೆ ನಿಲ್ಲುವುದಕ್ಕಾಗಿ ಅವರು ಒಂದು ಕಡೆ ಸೇರಿದ್ದರು. ಇಸ್ರೇಲಿನ ಎಲ್ಲ ಕಡೆಯಿಂದಲೂ ಜನರು ಬಂದರು. ಗಿಲ್ಯಾದಿನಲ್ಲಿದ್ದ ಇಸ್ರೇಲರು ಸಹ ಅಲ್ಲಿ ಬಂದಿದ್ದರು.


ದಾನ್ಯರು ಆ ನಗರಕ್ಕೆ ಒಂದು ಹೊಸ ಹೆಸರನ್ನು ಕೊಟ್ಟರು. ಹಿಂದೆ ಅದರ ಹೆಸರು ಲಯಿಷ್ ಎಂದಿತ್ತು. ಆದರೆ ಅವರು ಅದಕ್ಕೆ ದಾನ್ ಎಂದು ಹೆಸರಿಟ್ಟರು. ಅವರು ತಮ್ಮ ಪೂರ್ವಿಕನಾದ ದಾನನ ಸ್ಮರಣಾರ್ಥವಾಗಿ ಆ ಹೆಸರನ್ನಿಟ್ಟರು. ದಾನನು ಇಸ್ರೇಲನ ಮಕ್ಕಳಲ್ಲಿ ಒಬ್ಬನು.


ಆದ್ದರಿಂದ ಇಸ್ರೇಲರು “ಆಶ್ರಯನಗರಗಳನ್ನಾಗಿ” ಕೆಲವು ನಗರಗಳನ್ನು ಆರಿಸಿದರು. ಅವು ಯಾವುವೆಂದರೆ: ನಫ್ತಾಲಿ ಕುಲದವರ ಪರ್ವತ ಪ್ರದೇಶವಾದ ಗಲಿಲಾಯ ಪ್ರಾಂತ್ಯದಲ್ಲಿನ ಕೆದೆಷ್; ಎಫ್ರಾಯೀಮ್ ಪರ್ವತ ಪ್ರದೇಶದಲ್ಲಿನ ಶೆಕೆಮ್; ಯೆಹೂದ್ಯರ ಬೆಟ್ಟದ ಸೀಮೆಯಲ್ಲಿನ ಹೆಬ್ರೋನ್ ಎಂಬ ಕಿರ್ಯತರ್ಬ.


ಯೆಹೋಶುವನು, “ನಿಮ್ಮಲ್ಲಿ ಬಹಳ ಜನರಿದ್ದರೆ ಬೆಟ್ಟಪ್ರದೇಶಕ್ಕೆ ಹೋಗಿ ಆ ಭೂಮಿಯನ್ನು ತೆಗೆದುಕೊಳ್ಳಿರಿ. ಆ ಭೂಮಿಯು ಈಗ ಪೆರಿಜ್ಜೀಯರ ಮತ್ತು ರೆಫಾಯರ ಸ್ವತ್ತಾಗಿದೆ. ನಿಮಗೆ ಕೊಟ್ಟಿರುವ ಎಫ್ರಾಯೀಮ್ ಬೆಟ್ಟಪ್ರದೇಶವು ಚಿಕ್ಕದೆನಿಸಿದರೆ ಹೋಗಿ ಆ ಭೂಮಿಯನ್ನು ತೆಗೆದುಕೊಳ್ಳಿರಿ” ಎಂದನು.


ಒಬ್ಬ ಸಂದೇಶವಾಹಕನು ಬೆಟ್ಟದ ಮೇಲಿನಿಂದ ಒಳ್ಳೆಯ ಸಮಾಚಾರವನ್ನು ತರುವದು ಎಷ್ಟೋ ಅಂದವಾಗಿದೆ. ಸಂದೇಶಕಾರನು, “ನಮಗೆ ಸಮಾಧಾನವಿದೆ, ನಾವು ರಕ್ಷಿಸಲ್ಪಟ್ಟಿದ್ದೇವೆ. ಚೀಯೋನೇ, ನಿನ್ನ ದೇವರು ಅರಸನಾಗಿದ್ದಾನೆ!” ಎಂಬ ಸಂದೇಶವನ್ನು ಕೇಳುವದು ಎಷ್ಟೋ ಸಂತೋಷ ಕೊಡುವದಾಗಿದೆ.


ಕೇಳಿರಿ, ಉತ್ತರ ದಿಕ್ಕಿನಿಂದ ಬರುತ್ತಿರುವ ಮಹಾಧ್ವನಿಯನ್ನು! ಇದು ಯೆಹೂದದ ನಗರಗಳನ್ನು ನಾಶಮಾಡುತ್ತದೆ. ಯೆಹೂದವು ಒಂದು ಬರಿದಾದ ಮರಳುಗಾಡಾಗುವದು, ನರಿಗಳ ನಿವಾಸವಾಗುವುದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು