Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 4:6 - ಪರಿಶುದ್ದ ಬೈಬಲ್‌

6 ಚೀಯೋನಿನ ಕಡೆಗೆ ಧ್ವಜವನ್ನು ಎತ್ತಿ ಸಂಕೇತ ಕೊಡಿ. ನಿಲ್ಲಬೇಡಿ. ನಿಮ್ಮ ಜೀವ ರಕ್ಷಣೆಗಾಗಿ ಓಡಿರಿ. ನಾನು ಉತ್ತರದಿಂದ ವಿಪತ್ತನ್ನು ತರುತ್ತಿರುವುದರಿಂದ ನೀವು ಹೀಗೆ ಮಾಡಬೇಕು. ನಾನು ಭಯಂಕರವಾದ ವಿನಾಶವನ್ನು ಬರಮಾಡಲಿದ್ದೇನೆ.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ಚೀಯೋನಿನ ಕಡೆಗೆ ಧ್ವಜವನ್ನೆತ್ತಿರಿ, ತಡಮಾಡದೆ ವಲಸೆಹೋಗಿರಿ; ನಾನು ಉತ್ತರ ದಿಕ್ಕಿನಿಂದ ವಿಪತ್ತನ್ನು ಮತ್ತು ಘೋರನಾಶವನ್ನು ಬರಮಾಡುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

6 ಸಿಯೋನಿನ ಕಡೆಗೆ ಧ್ವಜವನ್ನೆತ್ತಿರಿ. ತಡಮಾಡದೆ ವಲಸೆಹೋಗಿರಿ. ಸರ್ವೇಶ್ವರ ಉತ್ತರದಿಂದ ವಿಪತ್ತನ್ನೂ ಘೋರ ನಾಶವನ್ನೂ ಬರಮಾಡುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

6 ಚೀಯೋನಿನ ಕಡೆಗೆ ಧ್ವಜವನ್ನೆತ್ತಿರಿ, ತಡಮಾಡದೆ ವಲಸೆಹೋಗಿರಿ; ನಾನು ಬಡಗಲಿಂದ ವಿಪತ್ತನ್ನೂ ಘೋರನಾಶನವನ್ನೂ ಬರಮಾಡುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

6 ಚೀಯೋನಿನ ಕಡೆಗೆ ಧ್ವಜವನ್ನೆತ್ತಿರಿ; ವಿಳಂಬವಿಲ್ಲದೆ ಸುರಕ್ಷತೆಗಾಗಿ ಓಡಿಹೋಗಿರಿ. ಏಕೆಂದರೆ ನಾನು ಉತ್ತರದಿಂದ ಕೇಡನ್ನೂ, ದೊಡ್ಡ ನಾಶವನ್ನೂ ತರುತ್ತೇನೆ.”

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 4:6
19 ತಿಳಿವುಗಳ ಹೋಲಿಕೆ  

“ಎಲ್ಲಾ ಜನಾಂಗಗಳಲ್ಲಿ ಪ್ರಚಾರಪಡಿಸಿರಿ, ಒಂದು ಧ್ವಜವನ್ನು ಹಾರಿಸಿ ಈ ಸಂದೇಶವನ್ನೆಲ್ಲಾ ಸಾರಿರಿ. ‘ಬಾಬಿಲೋನ್ ಜನಾಂಗವನ್ನು ವಶಪಡಿಸಿಕೊಳ್ಳಲಾಗುವುದು. ಬೇಲ್ ದೇವತೆ ನಾಚಿಕೆಪಡುವುದು. ಮೆರೋದಾಕ್ ದೇವತೆಯು ಭಯಪಡುವುದು. ಬಾಬಿಲೋನಿನ ವಿಗ್ರಹಗಳು ನಾಚಿಕೆಪಡುವವು. ಅಲ್ಲಿಯ ದೇವತೆಗಳು ಹೆದರಿಕೊಳ್ಳುವವು.’


“ಎಲ್ಲಾ ದೇಶಗಳಲ್ಲಿ ಯುದ್ಧದ ಧ್ವಜವನ್ನು ಹಾರಿಸಿರಿ. ಎಲ್ಲಾ ರಾಷ್ಟ್ರಗಳಲ್ಲಿ ತುತ್ತೂರಿಗಳನ್ನು ಊದಿರಿ. ಬಾಬಿಲೋನಿನ ವಿರುದ್ಧ ಹೋರಾಡಲು ಎಲ್ಲಾ ಜನಾಂಗಗಳನ್ನು ಸಿದ್ಧಗೊಳಿಸಿರಿ. ಅರರಾಟ್, ಮಿನ್ನಿ, ಅಷ್ಕೆನಜ್ ಎಂಬ ರಾಜ್ಯಗಳನ್ನು ಬಾಬಿಲೋನಿನ ವಿರುದ್ಧ ಯುದ್ಧಮಾಡಲು ಕರೆಯಿರಿ. ಸೈನ್ಯದ ಮುಂದಾಳಾಗಿರಲು ಒಬ್ಬ ಸೇನಾಧಿಪತಿಯನ್ನು ಆರಿಸಿರಿ. ಮಿಡತೆಯ ದಂಡಿನಂತೆ ಅಪಾರವಾಗಿರುವ ಅಶ್ವಬಲವನ್ನು ಕಳುಹಿಸಿರಿ.


ಬಾಬಿಲೋನಿನ ಕೋಟೆಗೋಡೆಯ ವಿರುದ್ಧ ಧ್ವಜವನ್ನು ಎತ್ತಿ ಹಾರಿಸಿರಿ. ಹೆಚ್ಚಿನ ಸಂಖ್ಯೆಯಲ್ಲಿ ಕಾವಲುಗಾರರನ್ನು ಕರೆದುತನ್ನಿರಿ. ಯೋಧರನ್ನು ಅವರವರ ಸ್ಥಾನಗಳಲ್ಲಿ ನಿಲ್ಲಿಸಿರಿ. ಗುಪ್ತವಾಗಿ ಧಾಳಿ ಮಾಡುವುದಕ್ಕೆ ಸಿದ್ಧರಾಗಿರಿ. ಯೆಹೋವನು ತನ್ನ ಯೋಜನೆಗಳಂತೆ ಕಾರ್ಯ ನೆರವೇರಿಸುವನು. ಯೆಹೋವನು ಬಾಬಿಲೋನಿನ ಜನರ ವಿರುದ್ಧ ಹೇಳಿರುವಂತೆಯೇ ಮಾಡುವನು.


ಆದ್ದರಿಂದ ನಾನು ಉತ್ತರದ ಎಲ್ಲಾ ಜನಾಂಗಗಳನ್ನು ಕರೆಸುತ್ತೇನೆ.” ಇದು ಯೆಹೋವನ ಸಂದೇಶ. “ನಾನು ಬಾಬಿಲೋನಿನ ರಾಜನಾದ ನೆಬೂಕದ್ನೆಚ್ಚರನನ್ನು ಕೂಡಲೇ ಕರೆಸುವೆನು. ಅವನು ನನ್ನ ಸೇವಕ. ನಾನು ಆ ಜನರನ್ನು ಯೆಹೂದ ದೇಶದ ವಿರುದ್ಧವಾಗಿಯೂ ಯೆಹೂದ್ಯರ ವಿರುದ್ಧವಾಗಿಯೂ ತರುತ್ತೇನೆ. ನಾನು ನಿಮ್ಮ ಸುತ್ತಮುತ್ತಲಿನಲ್ಲಿದ್ದ ಜನಾಂಗಗಳ ವಿರುದ್ಧವಾಗಿಯೂ ಅವರನ್ನು ಕರೆತರುವೆನು. ನಾನು ಆ ದೇಶಗಳನ್ನೆಲ್ಲ ನಾಶಮಾಡುವೆನು. ನಾನು ಆ ಭೂಮಿಗಳನ್ನು ಶಾಶ್ವತವಾಗಿ ಬರಿದಾದ ಮರುಭೂಮಿಗಳನ್ನಾಗಿ ಮಾಡುವೆನು. ಜನರು ಆ ದೇಶಗಳನ್ನು ನೋಡಿ ಅವು ಹಾಳಾಗಿರುವುದನ್ನು ಕಂಡು ಬೆರಗಾಗಿ ಸಿಳ್ಳುಹಾಕುವರು.


ಯೆಹೋವನು ಹೇಳುವುದೇನೆಂದರೆ: “ಉತ್ತರ ದಿಕ್ಕಿನಿಂದ ಒಂದು ಸೈನ್ಯವು ಬರಲಿದೆ. ಭೂಮಿಯ ಬಹುದೂರದ ಸ್ಥಳಗಳಿಂದ ಒಂದು ಮಹಾಜನಾಂಗವು ಬರಲಿದೆ.


ಬೆನ್ಯಾಮೀನನ ಕುಲದವರೇ, ನಿಮ್ಮ ಪ್ರಾಣ ರಕ್ಷಣೆಗಾಗಿ ಓಡಿಹೋಗಿರಿ; ಜೆರುಸಲೇಮ್ ನಗರದಿಂದ ಓಡಿಹೋಗಿರಿ. ತೆಕೋವ ನಗರದಲ್ಲಿ ಯುದ್ಧದ ತುತ್ತೂರಿಗಳನ್ನು ಊದಿರಿ; ಬೇತ್‌ಹಕ್ಕೆರೆಮಿನಲ್ಲಿ ಎಚ್ಚರಿಕೆಯ ಧ್ವಜಗಳನ್ನು ಹಾರಿಸಿರಿ. ಉತ್ತರದಿಕ್ಕಿನಿಂದ ವಿಪತ್ತು ಬರುತ್ತಿರುವುದರಿಂದ ಇವೆಲ್ಲವನ್ನು ಮಾಡಿರಿ. ಭಯಂಕರವಾದ ವಿನಾಶವು ನಿಮಗೆ ಬರುತ್ತಿದೆ.


ಯೆಹೋವನೇ, ಎಷ್ಟು ಹೊತ್ತಿನವರೆಗೆ ನಾನು ಯುದ್ಧ ಧ್ವಜಗಳನ್ನು ನೋಡಬೇಕು? ಎಷ್ಟು ಹೊತ್ತಿನವರೆಗೆ ನಾನು ಯುದ್ಧದ ತುತ್ತೂರಿಗಳ ಶಬ್ಧವನ್ನು ಕೇಳಬೇಕು?


ದ್ವಾರಗಳೊಳಗಿಂದ ಬನ್ನಿರಿ. ಜನರು ಬರುವದಕ್ಕೆ ದಾರಿಯನ್ನು ಸರಿಮಾಡಿರಿ. ರಸ್ತೆಯನ್ನು ಸಿದ್ಧಪಡಿಸಿರಿ. ಅದರ ಮೇಲಿರುವ ಕಲ್ಲುಗಳನ್ನು ತೆಗೆದುಬಿಡಿರಿ. ಜನಾಂಗಗಳು ಕಾಣುವಂತೆ ಧ್ವಜವನ್ನು ಏರಿಸಿರಿ.


ಯೆಹೋವನು ಇನ್ನೂ ಹೇಳುವುದೇನೆಂದರೆ, “ಆ ಸಮಯದಲ್ಲಿ ಜೆರುಸಲೇಮಿನ ಮೀನು ಬಾಗಿಲಲ್ಲಿ ಜನರು ಸಹಾಯಕ್ಕಾಗಿ ಮೊರೆಯಿಡುವರು. ನಗರದ ಇತರ ಕಡೆಗಳಿಂದ ಜನರು ರೋಧಿಸುವರು. ನಗರದ ಸುತ್ತಲಿರುವ ಬೆಟ್ಟಗಳಲ್ಲಿ ನಾಶವಾಗುವ ಶಬ್ದವನ್ನು ಜನರು ಕೇಳುವರು.


“ಬಾಬಿಲೋನಿನಲ್ಲಿ ಜನರು ರೋಧಿಸುವದನ್ನು ನಾವು ಕೇಳುವೆವು. ಬಾಬಿಲೋನ್ ಪ್ರದೇಶದಲ್ಲಿ ವಸ್ತುಗಳನ್ನು ನಾಶಮಾಡುವ ಜನರ ಧ್ವನಿಯನ್ನು ನಾವು ಕೇಳುವೆವು.


“ಯುದ್ಧದ ಆರ್ಭಟವು ದೇಶದಲ್ಲೆಲ್ಲ ಕೇಳಿಬರುತ್ತಿದೆ. ಅದು ಮಹಾವಿನಾಶದ ಧ್ವನಿಯಾಗಿದೆ.


“‘ಇದಾದ ಮೇಲೆ ನಾನು ಯೆಹೂದದ ರಾಜನಾದ ಚಿದ್ಕೀಯನನ್ನು ಮತ್ತು ಅಧಿಪತಿಗಳನ್ನು ಬಾಬಿಲೋನಿನ ರಾಜನಾದ ನೆಬೂಕದ್ನೆಚ್ಚರನಿಗೆ ಒಪ್ಪಿಸುತ್ತೇನೆ. ಜೆರುಸಲೇಮಿನ ಕೆಲವು ಜನರು ಭಯಂಕರವಾದ ರೋಗದಿಂದ ಸಾಯುವುದಿಲ್ಲ; ಕೆಲವು ಜನರು ಖಡ್ಗಗಳಿಗೆ ಆಹುತಿಯಾಗುವದಿಲ್ಲ; ಕೆಲವರು ಹಸಿವಿನಿಂದ ಸಾಯುವುದಿಲ್ಲ. ಅಂಥವರನ್ನು ನಾನು ನೆಬೂಕದ್ನೆಚ್ಚರನಿಗೆ ಕೊಡುತ್ತೇನೆ. ಯೆಹೂದದ ವೈರಿಯು ಗೆಲ್ಲುವಂತೆ ನಾನು ಮಾಡುತ್ತೇನೆ. ನೆಬೂಕದ್ನೆಚ್ಚರನ ಸೈನಿಕರು ಯೆಹೂದ್ಯರನ್ನು ಕೊಲ್ಲಬಯಸುತ್ತಾರೆ. ಆದ್ದರಿಂದ ಯೆಹೂದ ಮತ್ತು ಜೆರುಸಲೇಮಿನ ಜನರು ಖಡ್ಗಗಳಿಗೆ ಬಲಿಯಾಗುವರು. ನೆಬೂಕದ್ನೆಚ್ಚರನು ಸ್ವಲ್ಪವೂ ದಯೆ ತೋರುವದಿಲ್ಲ. ಆ ಜನರ ಸಲುವಾಗಿ ಅವನು ಮರುಗುವದಿಲ್ಲ.’


“ಯೆರೆಮೀಯನೇ, ಯೆಹೂದದ ಜನರಿಗೆ ಮತ್ತು ಜೆರುಸಲೇಮಿನಲ್ಲಿ ವಾಸಿಸುವ ಜನರಿಗೆ ಯೆಹೋವನು ಹೀಗೆನ್ನುವನು: ‘ಈಗಲೇ ನಾನು ನಿಮಗೋಸ್ಕರ ತೊಂದರೆಗಳನ್ನು ಎಬ್ಬಿಸುತ್ತೇನೆ. ನಿಮ್ಮ ವಿರುದ್ಧ ಯೋಜನೆಗಳನ್ನು ಹಾಕುತ್ತಿದ್ದೇನೆ. ಆದ್ದರಿಂದ ನೀವು ಮಾಡುತ್ತಿರುವ ದುಷ್ಕೃತ್ಯಗಳನ್ನು ನಿಲ್ಲಿಸಬೇಕು. ಪ್ರತಿಯೊಬ್ಬನು ಪರಿವರ್ತನೆ ಹೊಂದಿ ಒಳ್ಳೆಯ ಕೆಲಸಗಳನ್ನು ಮಾಡಲು ಪ್ರಾರಂಭಿಸಬೇಕು’ ಎಂದು ಹೇಳು.


ಅರಮನೆಯನ್ನು ಹಾಳುಮಾಡಲು ನಾನು ಜನರನ್ನು ಕಳುಹಿಸುತ್ತೇನೆ. ಪ್ರತಿಯೊಬ್ಬನ ಹತ್ತಿರ ಆ ಮನೆಯನ್ನು ಹಾಳುಮಾಡಲು ಬೇಕಾಗುವ ಸಾಧನಗಳಿರುವವು. ಆ ಜನರು ನಿನ್ನ ಸುಂದರವಾದ ಮತ್ತು ಗಟ್ಟಿಯಾದ ದೇವದಾರಿನ ತೊಲೆಗಳನ್ನು ಕಡಿದುಹಾಕುತ್ತಾರೆ. ಅವರು ಆ ತೊಲೆಗಳನ್ನು ಬೆಂಕಿಯಲ್ಲಿ ಎಸೆಯುತ್ತಾರೆ.


ಕಪ್ಪು ಕುದುರೆಗಳು ಉತ್ತರದಿಕ್ಕಿಗೆ ಹೋಗುವವು. ಕೆಂಪು ಕುದುರೆಗಳು ಪೂರ್ವದಿಕ್ಕಿಗೆ ಹೋಗುವವು. ಬಿಳಿ ಕುದುರೆಗಳು ಪಶ್ಚಿಮಕ್ಕೂ ಮಚ್ಚೆಯಿರುವ ಕುದುರೆಗಳು ದಕ್ಷಿಣ ದಿಕ್ಕಿಗೂ ಹೋಗುವವು.”


ಕೇಳಿರಿ, ಉತ್ತರ ದಿಕ್ಕಿನಿಂದ ಬರುತ್ತಿರುವ ಮಹಾಧ್ವನಿಯನ್ನು! ಇದು ಯೆಹೂದದ ನಗರಗಳನ್ನು ನಾಶಮಾಡುತ್ತದೆ. ಯೆಹೂದವು ಒಂದು ಬರಿದಾದ ಮರಳುಗಾಡಾಗುವದು, ನರಿಗಳ ನಿವಾಸವಾಗುವುದು.


ಆಮೇಲೆ ದೇವರು ಗಟ್ಟಿಯಾದ ಧ್ವನಿಯಿಂದ ಕರೆಯುವುದು ನನಗೆ ಕೇಳಿಸಿತು: “ಪಟ್ಟಣವನ್ನು ದಂಡಿಸಲು ನೇಮಕಗೊಂಡಿರುವವರೇ, ಇಲ್ಲಿಗೆ ಬನ್ನಿ. ನಿಮ್ಮಲ್ಲಿ ಪ್ರತಿಯೊಬ್ಬರೂ ನಾಶದ ಆಯುಧವನ್ನು ನಿಮ್ಮ ಕೈಯಲ್ಲಿ ಹಿಡಿದುಕೊಂಡು ಬನ್ನಿ.”


ಆಗ ಆರು ಮಂದಿ ಪುರುಷರು ಉತ್ತರದಿಕ್ಕಿನಲ್ಲಿದ್ದ ಮೇಲಿನ ದ್ವಾರದ ಮಾರ್ಗದಿಂದ ಬರುತ್ತಿರುವುದನ್ನು ನಾನು ನೋಡಿದೆನು. ಪ್ರತಿಯೊಬ್ಬನ ಕೈಯಲ್ಲಿ ಮಾರಕಾಸ್ತ್ರವಿತ್ತು. ಅವರಲ್ಲೊಬ್ಬನು ನಾರುಮಡಿಯನ್ನು ಧರಿಸಿದ್ದನು. ಅವನ ಸೊಂಟದಲ್ಲಿ ಲೇಖಕನ ಸಾಮಾಗ್ರಿಯ ಚಿಕ್ಕ ಚೀಲವಿತ್ತು. ಅವರು ಆಲಯದೊಳಗಿದ್ದ ತಾಮ್ರದ ವೇದಿಕೆಯ ಬಳಿ ಹೋಗಿ ನಿಂತುಕೊಂಡರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು