Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 4:8 - ಪರಿಶುದ್ದ ಬೈಬಲ್‌

8 ಆದ್ದರಿಂದ ಗೋಣಿತಟ್ಟನ್ನು ಸುತ್ತಿಕೊಳ್ಳಿರಿ. ದೊಡ್ಡ ಧ್ವನಿಯಿಂದ ಗೋಳಾಡಿರಿ. ಏಕೆಂದರೆ ಯೆಹೋವನು ನಮ್ಮ ಮೇಲೆ ತುಂಬ ಕೋಪಗೊಂಡಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ಇದರ ನಿಮಿತ್ತ ಗೋಣಿತಟ್ಟನ್ನು ಸುತ್ತಿಕೊಳ್ಳಿರಿ. ಪ್ರಲಾಪಿಸಿರಿ, ಗೋಳಾಡಿರಿ; ಯೆಹೋವನ ರೋಷಾಗ್ನಿಯು ನಮ್ಮನ್ನು ಬಿಟ್ಟಿಲ್ಲವಲ್ಲಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

8 ಈ ನಿಮಿತ್ತ ಗೋಣಿತಟ್ಟನ್ನು ಸುತ್ತಿಕೊಳ್ಳಿರಿ, ಅತ್ತುಗೋಳಾಡಿರಿ. ಸರ್ವೇಶ್ವರ ಸ್ವಾಮಿಯ ಕೋಪ ಅಗ್ನಿಯು ಜುದೇಯವನ್ನು ಬಿಟ್ಟುಹೋಗಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

8 ಇದರ ನಿವಿುತ್ತ ಗೋಣಿತಟ್ಟನ್ನು ಸುತ್ತಿಕೊಳ್ಳಿರಿ, ಹಲುಬಿ ಗೋಳಾಡಿರಿ; ಯೆಹೋವನ ರೋಷಾಗ್ನಿಯು ನಮ್ಮನ್ನು ಬಿಟ್ಟಿಲ್ಲವಲ್ಲಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

8 ಇದಕ್ಕಾಗಿ ಗೋಣಿತಟ್ಟನ್ನು ಕಟ್ಟಿಕೊಳ್ಳಿರಿ. ಪ್ರಲಾಪಿಸಿರಿ, ಗೋಳಾಡಿರಿ. ಯೆಹೋವ ದೇವರ ಉಗ್ರಕೋಪದ ಉರಿಯು ನಮ್ಮಿಂದ ಹಿಂದಿರುಗಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 4:8
22 ತಿಳಿವುಗಳ ಹೋಲಿಕೆ  

ಅಯ್ಯೋ ನನ್ನ ಜನರೇ, ಗೋಣಿತಟ್ಟನ್ನು ಸುತ್ತಿಕೊಂಡು ಬೂದಿಯಲ್ಲಿ ಹೊರಳಾಡಿರಿ. ಸತ್ತವರಿಗಾಗಿ ದೊಡ್ಡ ಧ್ವನಿಯಲ್ಲಿ ರೋದಿಸಿರಿ. ಇದ್ದೊಬ್ಬ ಮಗನನ್ನು ಕಳೆದುಕೊಂಡಂತೆ ಬೋರ ಪ್ರಲಾಪ ಮಾಡಿರಿ. ವಿನಾಶಕನು ತಕ್ಷಣ ನಮ್ಮ ಮೇಲೆರಗುವನು.


ನನ್ನ ಒಡೆಯನೂ ಸರ್ವಶಕ್ತನೂ ಆಗಿರುವ ಯೆಹೋವನು ಜನರಿಗೆ, ಅವರ ಸತ್ತುಹೋದ ಸ್ನೇಹಿತರಿಗೋಸ್ಕರ ರೋಧಿಸಿ ದುಃಖಿಸಿರಿ ಎಂದು ಹೇಳುವನು. ಜನರು ತಮ್ಮ ತಲೆಗಳನ್ನು ಬೋಳಿಸಿ ಶೋಕವಸ್ತ್ರಗಳನ್ನು ಧರಿಸುವರು.


ಸ್ತ್ರೀಯರೇ, ನೀವೀಗ ಶಾಂತರಾಗಿದ್ದೀರಿ. ಆದರೆ ನೀವು ಭಯಪಡುವವರಾಗಿರಬೇಕು. ನೀವು ಈಗ ಸುರಕ್ಷಿತರಾಗಿದ್ದೀರಿ, ಆದರೆ ನೀವು ಚಿಂತಿಸುವವರಾಗಿರಬೇಕು. ನಿಮ್ಮ ಒಳ್ಳೆಯ ವಸ್ತ್ರಗಳನ್ನು ತೆಗೆದಿಟ್ಟು ಶೋಕಬಟ್ಟೆಯನ್ನು ಧರಿಸಿರಿ. ಆ ಬಟ್ಟೆಗಳನ್ನು ನಿಮ್ಮ ಸೊಂಟಕ್ಕೆ ಕಟ್ಟಿಕೊಳ್ಳಿರಿ.


ನೀವು ಕೈದಿಗಳಂತೆ ತಲೆತಗ್ಗಿಸುವಿರಿ, ಸತ್ತಹೆಣಗಳಂತೆ ನೆಲದ ಮೇಲೆ ಬೀಳುವಿರಿ. ಆದರೆ ಅದರಿಂದ ನಿಮಗೆ ಪ್ರಯೋಜನವಾಗದು. ದೇವರು ನಿಮ್ಮ ಮೇಲೆ ಬಹಳವಾಗಿ ಕೋಪಗೊಂಡಿದ್ದಾನೆ. ನಿಮ್ಮನ್ನು ಇನ್ನೂ ಶಿಕ್ಷಿಸಲು ಸಿದ್ಧನಾಗಿದ್ದಾನೆ.


ಆದ್ದರಿಂದ ಯೆಹೋವನು ತನ್ನ ಜನರ ಮೇಲೆ ಬಹಳವಾಗಿ ಕೋಪಗೊಂಡಿದ್ದಾನೆ. ಯೆಹೋವನು ತನ್ನ ಕೈಗಳನ್ನೆತ್ತಿ ಅವರನ್ನು ಶಿಕ್ಷಿಸುವನು. ಆಗ ಪರ್ವತಗಳೂ ಹೆದರಿಕೊಳ್ಳುವವು; ಹೆಣಗಳು ಕಸದಂತೆ ರಸ್ತೆಗಳಲ್ಲಿ ಬಿದ್ದುಕೊಂಡಿರುವವು. ಆದರೆ ದೇವರು ಅವರ ಮೇಲೆ ಕೋಪಿಸಿಕೊಂಡೇ ಇರುವನು. ಜನರನ್ನು ಶಿಕ್ಷಿಸಲು ಆತನ ಕೈಗಳು ಮೇಲೆತ್ತಲ್ಪಟ್ಟಿರುವವು.


ನಿಮ್ಮ ಸಂತಸದ ದಿವಸಗಳನ್ನು ಸತ್ತವರಿಗಾಗಿ ರೋದಿಸುವ ದಿವಸಗಳನ್ನಾಗಿ ಮಾಡುವೆನು. ನಿಮ್ಮ ಹಾಡುಗಳೆಲ್ಲಾ ಶೋಕಗೀತೆಯಾಗುವವು. ಎಲ್ಲರೂ ಶೋಕಬಟ್ಟೆಯನ್ನು ಧರಿಸುವಂತೆ ಮಾಡುವೆನು. ಪ್ರತಿ ತಲೆಯನ್ನು ಬೋಳು ತಲೆಯನ್ನಾಗಿ ಮಾಡುವೆನು. ಒಬ್ಬನೇ ಮಗನನ್ನು ಕಳೆದುಕೊಳ್ಳುವಾಗ ರೋದಿಸುವ ಹಾಗೆ ಗಟ್ಟಿಯಾಗಿ ರೋದಿಸುವಂತೆ ಮಾಡುತ್ತೇನೆ. ಅದರ ಅಂತ್ಯ ಕಹಿಯಾಗಿರುವುದು.”


“ನರಪುತ್ರನೇ, ನನ್ನ ಪರವಾಗಿ ಮಾತನಾಡು, ‘ನನ್ನ ಒಡೆಯನಾದ ಯೆಹೋವನು ಹೀಗೆನ್ನುತ್ತಾನೆ’ ಎಂದು ಹೇಳು. “‘ಅಳುತ್ತಾ, “ಭಯಂಕರ ದಿವಸಗಳು ಬರುತ್ತವೆ” ಎಂದು ಹೇಳು.


“‘ಬೊಬ್ಬೆಹಾಕು, ಕಿರುಚು, ಓ ನರಪುತ್ರನೇ, ಯಾಕೆಂದರೆ ಖಡ್ಗವು ನನ್ನ ಜನರ ಮೇಲೆ ಮತ್ತು ಇಸ್ರೇಲಿನ ಎಲ್ಲಾ ಅಧಿಪತಿಗಳ ಮೇಲೆ ಉಪಯೋಗಿಸಲ್ಪಡುವುದು. ಇಸ್ರೇಲನ್ನು ಆಳುವವರಿಗೆ ಯುದ್ಧವು ಬೇಕು. ಆಗ ಅವರು ಖಡ್ಗವು ಬಂದಾಗ ನನ್ನ ಜನರೊಂದಿಗೆ ಇರಬಹುದು. ಆದ್ದರಿಂದ ನಿನ್ನ ತೊಡೆಗೆ ಬಡಿದು ಗಟ್ಟಿಯಾದ ಸ್ವರದಿಂದ ನಿನ್ನ ದುಃಖವನ್ನು ಪ್ರದರ್ಶಿಸು.


“ಮೋವಾಬು ಹಾಳಾಗುವುದು; ಅದು ನಾಚಿಕೆಪಡುವುದು. ಮೋವಾಬು ಸತತವಾಗಿ ಗೋಳಾಡುವುದು. ಮೋವಾಬು ಹಾಳಾಯಿತೆಂದು ಅರ್ನೋನ್ ನದಿಯ ತೀರದಲ್ಲಿ ಸಾರಿರಿ.


ಜನರನ್ನು ಸಂಪೂರ್ಣವಾಗಿ ಶಿಕ್ಷಿಸುವವರೆಗೆ ಯೆಹೋವನು ಕೋಪಿಷ್ಟನಾಗಿಯೇ ಇರುವನು. ಯೆಹೂದದ ಜನರಾದ ನೀವು ಅದನ್ನು ಕೊನೆಯ ದಿನಗಳಲ್ಲಿ ತಿಳಿದುಕೊಳ್ಳುವಿರಿ.


ಯೆಹೋವನ ದಿನವು ಹತ್ತಿರವಾಗಿದೆ. ಆದ್ದರಿಂದ ದುಃಖಿಸಿರಿ, ರೋಧಿಸಿರಿ. ವೈರಿಯು ಬಂದು ನಿಮ್ಮ ಐಶ್ವರ್ಯವನ್ನು ಸೂರೆಮಾಡುವ ಸಮಯವು ಬರುತ್ತದೆ. ಸರ್ವಶಕ್ತನಾದ ದೇವರು ಅದನ್ನು ನೆರವೇರಿಸುವನು.


ಇದರರ್ಥವೇನೆಂದರೆ ಮನಸ್ಸೆಯು ಎಫ್ರಾಯೀಮನೊಡನೆ ಯುದ್ಧ ಮಾಡುವನು ಮತ್ತು ಎಫ್ರಾಯೀಮನು ಮನಸ್ಸೆಯೊಂದಿಗೆ ಯುದ್ಧಮಾಡುವನು. ಆಮೇಲೆ ಅವರಿಬ್ಬರೂ ಸೇರಿ ಯೆಹೂದದೊಂದಿಗೆ ಯುದ್ಧ ಮಾಡುವರು. ಯೆಹೋವನು ಇಸ್ರೇಲರ ಮೇಲೆ ಇನ್ನೂ ಕೋಪದಿಂದಿದ್ದಾನೆ; ತನ್ನ ಜನರನ್ನು ಇನ್ನೂ ಶಿಕ್ಷಿಸಲು ಸಿದ್ಧನಾಗಿದ್ದಾನೆ.


ಜನರೆಲ್ಲರೂ ದುಷ್ಟರಾಗಿದ್ದಾರೆ. ಆದ್ದರಿಂದ ಯೆಹೋವನು ಯುವಕರಲ್ಲಿ ಸಂತೋಷಿಸುವದಿಲ್ಲ. ಅವರ ವಿಧವೆಯರಿಗೆ ಮತ್ತು ಅನಾಥರಿಗೆ ದೇವರು ದಯೆ ತೋರಿಸುವುದಿಲ್ಲ; ಯಾಕೆಂದರೆ ಎಲ್ಲಾ ಜನರು ದುಷ್ಟರಾಗಿದ್ದಾರೆ. ಅವರು ದೇವರಿಗೆ ವಿರುದ್ಧವಾಗಿ ನಡೆಯುತ್ತಾರೆ. ಅವರು ಸುಳ್ಳಾಡುತ್ತಾರೆ. ಆದ್ದರಿಂದ ದೇವರು ಅವರ ಮೇಲೆ ಕೋಪದಿಂದಲೇ ಇರುವನು; ಅವರನ್ನು ದಂಡಿಸುತ್ತಲೇ ಇರುವನು.


ಯೆಹೋವನು ಪೂರ್ವದಿಂದ ಅರಾಮ್ಯರನ್ನೂ ಪಶ್ಚಿಮದಿಂದ ಫಿಲಿಷ್ಟಿಯರನ್ನೂ ಕರೆತರುವನು. ಆ ಶತ್ರುಗಳು ಇಸ್ರೇಲರನ್ನು ಅವರ ಸೈನ್ಯದೊಂದಿಗೆ ಸೋಲಿಸಿಬಿಡುವರು. ಆದರೆ ಯೆಹೋವನು ಇಸ್ರೇಲರ ಮೇಲೆ ಕೋಪಗೊಂಡಿರುವುದರಿಂದ ಅವರನ್ನು ಶಿಕ್ಷಿಸಲು ಇನ್ನೂ ಸಿದ್ಧನಾಗಿರುವನು.


ಆತನು ಈಜಿಪ್ಟ್ ಜನರಿಗೆ ತನ್ನ ಭಯಂಕರವಾದ ಕೋಪವನ್ನು ತೋರಿದನು. ಆತನು ತನ್ನ ಸಂಹಾರ ದೂತರನ್ನು ಅವರಿಗೆ ವಿರೋಧವಾಗಿ ಕಳುಹಿಸಿದನು.


ಯೆಹೋವನು ಮೋಶೆಗೆ, “ನೀನು ಜನರ ನಾಯಕರನ್ನೆಲ್ಲ ಬಂಧಿಸಿ ಯೆಹೋವನ ಮುಂದೆ ಬಹಿರಂಗವಾಗಿ ಅವರನ್ನು ನೇಣುಗಂಬಕ್ಕೆ ಏರಿಸು. ಹೀಗೆ ಯೆಹೋವನ ಕೋಪಾಗ್ನಿಯನ್ನು ಇಸ್ರೇಲರಿಂದ ತೊಲಗಿಸಬೇಕು” ಎಂದು ಹೇಳಿದನು.


ರಸ್ತೆಯಲ್ಲಿ ಹಾದುಹೋಗುವ ಜನರೇ, ನೀವು ನನ್ನ ಬಗ್ಗೆ ಯೋಚಿಸುವುದಿಲ್ಲವೆಂದು ತೋರುತ್ತದೆ. ನನ್ನ ಕಡೆಗೆ ಗಮನ ಕೊಡಿ. ನನ್ನ ನೋವಿನಂಥ ನೋವು ಮತ್ತೊಂದು ಇದೆಯೇ? ನನಗೆ ಬಂದಂಥ ನೋವು ಇನ್ನಾವುದಾದರೂ ಇದೆಯೇ? ದಂಡನೆಯಾಗಿ ಯೆಹೋವನು ನನಗೆ ಕೊಟ್ಟ ನೋವಿನಂಥ ನೋವು ಮತ್ತೊಂದು ಇದೆಯೇ? ಆತನು ತನ್ನ ಮಹಾಕೋಪದ ದಿನದಂದು ನನ್ನನ್ನು ದಂಡಿಸಿರುವನು.


ಯಾಜಕರೇ, ನೀವು ನಿಮ್ಮ ಶೋಕವಸ್ತ್ರವನ್ನು ಧರಿಸಿ ಗಟ್ಟಿಯಾಗಿ ರೋಧಿಸಿರಿ. ವೇದಿಕೆಯಲ್ಲಿ ಸೇವೆಮಾಡುವವರೇ, ಗಟ್ಟಿಯಾಗಿ ರೋಧಿಸಿರಿ. ನನ್ನ ದೇವರ ಸೇವಕರೇ, ನೀವು ನಿಮ್ಮ ಶೋಕವಸ್ತ್ರಗಳಲ್ಲಿಯೇ ನಿದ್ರೆಮಾಡಿರಿ. ಯಾಕೆಂದರೆ ಇನ್ನು ದೇವಾಲಯದಲ್ಲಿ ಧಾನ್ಯ ಮತ್ತು ಪಾನಸಮರ್ಪಣೆ ಇಲ್ಲ.


ಕುರುಬರೇ, ನೀವು ಕುರಿಗಳಿಗೆ (ಜನಗಳಿಗೆ) ಮುಂದಾಳಾಗಿ ನಡೆಯಬೇಕು. ಮಹಾನಾಯಕರೇ, ನೀವು ಗೋಳಾಡಲು ಪ್ರಾರಂಭಿಸಿರಿ. ಕುರಿಗಳ ಮುಂದಾಳುಗಳಾದ ನೀವು ನೋವಿನಿಂದ ನೆಲದ ಮೇಲೆ ಹೊರಳಾಡಿರಿ. ಏಕೆಂದರೆ ಈಗ ನಿಮ್ಮನ್ನು ವಧಿಸುವ ಕಾಲ ಬಂದಿದೆ. ನಾನು ನಿಮ್ಮ ಕುರಿಗಳನ್ನು ದಿಕ್ಕಾಪಾಲು ಮಾಡಿಬಿಡುತ್ತೇನೆ. ಅವುಗಳು ಒಡೆದ ಪಾತ್ರೆಯ ಚೂರುಗಳಂತೆ ಚೆಲ್ಲಾಪಿಲ್ಲಿಯಾಗುತ್ತವೆ.


ನಿನ್ನ ಕೂದಲನ್ನು ಬೋಳಿಸು; ಯಾಕೆಂದರೆ ನೀನು ಪ್ರೀತಿಸುವ ಮಕ್ಕಳಿಗಾಗಿ ನೀನು ಅಳುವೆ. ಗಿಡುಗನಂತೆ ನಿನ್ನ ತಲೆ ಬೋಳಾಗಲಿ. ನಿನ್ನ ದುಃಖವನ್ನು ಪ್ರದರ್ಶಿಸು. ಯಾಕೆಂದರೆ ನಿನ್ನ ಮಕ್ಕಳು ನಿನ್ನಿಂದ ತೆಗೆಯಲ್ಪಡುವರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು