Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 40:11 - ಪರಿಶುದ್ದ ಬೈಬಲ್‌

11 ಬಾಬಿಲೋನಿನ ರಾಜನು ಕೆಲವು ಜನ ಯೆಹೂದಿಯರನ್ನು ಆ ಪ್ರದೇಶದಲ್ಲಿ ಬಿಟ್ಟುಹೋಗಿದ್ದಾನೆ ಮತ್ತು ಅಹೀಕಾಮನ ಮಗನೂ ಶಾಫಾನನ ಮೊಮ್ಮಗನೂ ಆದ ಗೆದಲ್ಯನನ್ನು ಅವರ ಅಧಿಪತಿಯನ್ನಾಗಿ ನೇಮಿಸಿದ್ದಾನೆ ಎಂಬ ಸಮಾಚಾರವನ್ನು ಮೋವಾಬ್, ಎದೋಮ್, ಅಮ್ಮೋನ್ ಮೊದಲಾದ ದೇಶಗಳಲ್ಲಿ ಚದುರಿಹೋಗಿದ್ದ ಯೆಹೂದಿಯರು ಕೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 ಇದಲ್ಲದೆ ಅಮ್ಮೋನ್ಯರ ಮಧ್ಯದೊಳಗೂ, ಮೋವಾಬ್ ಮತ್ತು ಎದೋಮ್ ಮೊದಲಾದ ದೇಶಗಳಲ್ಲಿಯೂ ಚದುರಿ ಹೋಗಿದ್ದ ಯೆಹೂದ್ಯರೆಲ್ಲರೂ ಬಾಬೆಲಿನ ಅರಸನು ಯೆಹೂದದಲ್ಲಿ ಕೆಲವರನ್ನು ಉಳಿಸಿ ಅಹೀಕಾಮನ ಮಗನೂ ಶಾಫಾನನ ಮೊಮ್ಮಗನೂ ಆದ ಗೆದಲ್ಯನನ್ನು ಅವರಿಗೆ ಅಧಿಪತಿಯನ್ನಾಗಿ ನೇಮಿಸಿದ್ದಾನೆಂಬ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

11 ಇದಲ್ಲದೆ, ಅಮ್ಮೋನ್, ಮೋವಾಬ್, ಎದೋಮ್ ಮೊದಲಾದ ನಾಡುಗಳಲ್ಲಿ ಚದರಿಹೋಗಿದ್ದ ಯೆಹೂದ್ಯರೆಲ್ಲರು, ಬಾಬಿಲೋನಿನ ಅರಸನು ಯೆಹೂದ್ಯರಲ್ಲಿ ಕೆಲವರನ್ನು ಉಳಿಸಿ, ಅವರಿಗೆ ಅಹೀಕಾಮನ ಮಗನೂ ಶಾಫಾನನ ಮೊಮ್ಮಗನೂ ಆದ ಗೆದಲ್ಯನನ್ನು ರಾಜ್ಯಪಾಲನನ್ನಾಗಿ ನೇಮಿಸಿದ್ದಾನೆಂಬ ಸುದ್ದಿಯನ್ನು ಕೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

11 ಇದಲ್ಲದೆ ಅಮ್ಮೋನ್ಯರ ಮಧ್ಯದೊಳಗೂ ಮೋವಾಬ್ ಎದೋಮ್ ಮೊದಲಾದ ದೇಶಗಳಲ್ಲಿಯೂ ಚದರಿಹೋಗಿದ್ದ ಯೆಹೂದ್ಯರೆಲ್ಲರೂ ಬಾಬೆಲಿನ ಅರಸನು ಯೆಹೂದದಲ್ಲಿ ಕೆಲವರನ್ನು ಉಳಿಸಿ ಅಹೀಕಾಮನ ಮಗನೂ ಶಾಫಾನನ ಮೊಮ್ಮಗನೂ ಆದ ಗೆದಲ್ಯನನ್ನು ಅವರಿಗೆ ಅಧಿಪತಿಯನ್ನಾಗಿ ನೇವಿುಸಿದ್ದಾನೆಂಬ ವರ್ತಮಾನವನ್ನು ಕೇಳಿ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

11 ಹಾಗೆಯೇ ಮೋವಾಬಿನಲ್ಲಿಯೂ, ಅಮ್ಮೋನನ ಮಕ್ಕಳಲ್ಲಿಯೂ, ಎದೋಮಿನಲ್ಲಿಯೂ, ಸಕಲ ದೇಶಗಳಲ್ಲಿಯೂ ಇದ್ದ ಯೆಹೂದ್ಯರೆಲ್ಲರೂ ಬಾಬಿಲೋನಿನ ಅರಸನು ಯೆಹೂದದ ಒಂದು ಶೇಷವನ್ನು ಬಿಟ್ಟಿದ್ದನೆಂದೂ, ಶಾಫಾನನ ಮೊಮ್ಮಗ ಅಹೀಕಾಮನ ಮಗ ಗೆದಲ್ಯನನ್ನು ಅವರಿಗೆ ಅಧಿಪತಿಯನ್ನಾಗಿ ನೇಮಿಸಿದ್ದಾನೆಂದು ಕೇಳಿದಾಗ

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 40:11
23 ತಿಳಿವುಗಳ ಹೋಲಿಕೆ  

ತಮ್ಮ ಮನೆಯನ್ನು ಬಿಟ್ಟುಹೋಗುವಂತೆ ಮೋವಾಬಿನ ಆ ಜನರನ್ನು ಬಲವಂತ ಮಾಡಲಾಯಿತು. ಆದ್ದರಿಂದ ಅವರು ನಿಮ್ಮ ದೇಶದಲ್ಲಿ ವಾಸಿಸಲಿ. ಶತ್ರುಗಳ ಕೈಗೆ ಸಿಗದಂತೆ ಅವರನ್ನು ಅಡಗಿಸಿಡಿರಿ” ಎಂದು ಹೇಳುವರು. ದರೋಡೆಯು ನಿಂತುಹೋಗುವದು. ಶತ್ರುಗಳು ಸೋಲಿಸಲ್ಪಡುವರು. ಇತರರಿಗೆ ಕೇಡುಮಾಡುವವರು ದೇಶವನ್ನು ಬಿಟ್ಟುಹೋಗುವರು.


ಇಸ್ರೇಲ್ ರಾಜ್ಯವು ನಾಶವಾದಾಗ ನೀನು ಸಂತೋಷಪಟ್ಟಿರುವೆ. ನಾನು ಕೂಡ ಹಾಗೆಯೇ ಮಾಡುವೆನು. ಸೇಯೀರ್ ಪರ್ವತ ಮತ್ತು ಎದೋಮ್ ರಾಜ್ಯವೆಲ್ಲಾ ನಾಶವಾಗುವದು. ಆಗ ನಾನು ಯೆಹೋವನೆಂದು ನೀನು ತಿಳಿಯುವೆ.”


ಯಾಕೆಂದರೆ ನೀನು ಯಾವಾಗಲೂ ನನ್ನ ಜನಕ್ಕೆ ವಿರೋಧವಾಗಿರುವೆ. ನೀನು ಇಸ್ರೇಲರ ವಿರುದ್ಧವಾಗಿ ಕತ್ತಿಯನ್ನೆತ್ತಿರುವೆ. ಅವರು ಆಗ ಸಂಕಟದಲ್ಲಿದ್ದರು ಮತ್ತು ತಮ್ಮ ಶಿಕ್ಷೆಯ ಕಡೆಗಾಲದಲ್ಲಿದ್ದರು.’”


ನನ್ನ ಒಡೆಯನಾದ ಯೆಹೋವನು ಹೀಗೆ ಹೇಳುತ್ತಾನೆ: “ಎದೋಮ್ಯರು ಯೆಹೂದದ ಜನರು ಮೇಲೆ ಕ್ರೂರವಾದ ಸೇಡನ್ನು ತೀರಿಸಿಕೊಂಡಿದ್ದಾರೆ. ಅವರ ಮೇಲೆ ಸತತವಾಗಿ ಸೇಡು ತೀರಿಸಿಕೊಳ್ಳುವುದರ ಮೂಲಕ ಎದೋಮ್ಯರು ಮಹಾಪರಾಧ ಮಾಡಿದ ದೋಷಿಗಳಾಗಿದ್ದಾರೆ.”


ನನ್ನ ಒಡೆಯನಾದ ಯೆಹೋವನು ಹೀಗೆನ್ನುತ್ತಾನೆ: “ಮೋವಾಬ್ ಮತ್ತು ಸೇಯೀರ್, ‘ಯೆಹೂದ ಜನಾಂಗದವರು ಇತರ ಎಲ್ಲಾ ಜನಾಂಗಗಳವರಂತಿದ್ದಾರೆ.’ ಎಂದು ಹೇಳುತ್ತಾರೆ.


ಯೆಹೋವನು ಹೇಳುವುದೇನೆಂದರೆ: ಜೆರುಸಲೇಮ್ ನಾಶವಾಯಿತೆಂದು ನೀವು ಸಂತೋಷಪಟ್ಟಿರಿ. ನೀವು ಚಪ್ಪಾಳೆತಟ್ಟಿ ಕಾಲಿನಿಂದ ನೆಲವನ್ನು ಬಡಿದಿರಿ. ಇಸ್ರೇಲ್ ದೇಶವನ್ನು ಕಡೆಗಣಿಸಿ ನಗಾಡಿದಿರಿ.


“ನರಪುತ್ರನೇ, ಅಮ್ಮೋನಿನ ಕಡೆಗೆ ಮುಖಮಾಡಿ, ಅವರಿಗೆ ವಿರುದ್ಧವಾಗಿ ಪ್ರವಾದಿಸು.


ನಿನ್ನ ಜನರಲ್ಲಿ ಮೂರನೆ ಒಂದು ಭಾಗ ಪಟ್ಟಣದೊಳಗೆ ರೋಗದಿಂದಲೂ ಹಸಿವಿನಿಂದಲೂ ಸಾಯುವರು. ಮೂರರಲ್ಲಿ ಇನ್ನೊಂದು ಭಾಗ ಪಟ್ಟಣದ ಹೊರಗೆ ರಣರಂಗದಲ್ಲಿ ಸಾಯುವರು. ಅನಂತರ ನಾನು ನನ್ನ ಖಡ್ಗವನ್ನು ಇರಿದು ಉಳಿದವರನ್ನು ಬಹುದೂರದ ದೇಶಕ್ಕೆ ಅಟ್ಟಿಬಿಡುವೆನು.


ಆದರೆ ನೀನು ಅದರಿಂದ ಕೆಲವು ಕೂದಲನ್ನು ತೆಗೆದು ನಿನ್ನ ಮೇಲಂಗಿಯ ಅಂಚಿನಲ್ಲಿ ಸುತ್ತಿಡು. ನಾನು ನನ್ನ ಜನರಲ್ಲಿ ಕೆಲವರನ್ನು ರಕ್ಷಿಸುವೆನು ಎಂಬುದಕ್ಕೆ ಇದು ಗುರುತಾಗಿದೆ.


ನಾನು ಆ ಜನರನ್ನು ದಂಡಿಸುವೆನು. ಆ ಶಿಕ್ಷೆಯು ಭೂಲೋಕದ ಎಲ್ಲಾ ಜನರಲ್ಲಿ ಭೀತಿಯನ್ನು ಉಂಟು ಮಾಡುವುದು. ಜನರು ಯೆಹೂದದ ಜನರನ್ನು ಗೇಲಿಮಾಡುವರು. ನಾನು ಅವರನ್ನು ತಳ್ಳಿದ ಎಲ್ಲಾ ದೇಶಗಳಲ್ಲಿ ಜನರು ಅವರ ಬಗ್ಗೆ ಪರಿಹಾಸ್ಯದ ಮಾತುಗಳನ್ನು ಆಡುವರು; ಅವರನ್ನು ಶಪಿಸುವರು.


ಆದರೆ ಅಮ್ಮೋನಿಯರ ರಾಜನಾದ ನಾಹಾಷನು ನಿಮ್ಮ ವಿರುದ್ಧ ಹೋರಾಡಲು ಬರುತ್ತಿರುವುದನ್ನು ಕಂಡು ನೀವು, ‘ನಮ್ಮನ್ನಾಳಲು ನಮಗೆ ಒಬ್ಬ ರಾಜ ಬೇಕು’ ಎಂದು ಕೇಳಿದಿರಿ. ನಿಮ್ಮ ದೇವರಾದ ಯೆಹೋವನು ನಿಮ್ಮ ರಾಜನಾಗಿದ್ದರೂ ನೀವು ಹೀಗೆ ಕೇಳಿದಿರಿ.


ಅಮ್ಮೋನಿಯನಾದ ನಾಹಾಷನು ಒಂದು ತಿಂಗಳ ನಂತರ, ತನ್ನ ಸೈನ್ಯದೊಂದಿಗೆ ಯಾಬೇಷ್‌ಗಿಲ್ಯಾದಿಗೆ ಮುತ್ತಿಗೆ ಹಾಕಿದನು. ಯಾಬೇಷಿನ ಜನರೆಲ್ಲ ನಾಹಾಷನಿಗೆ, “ನೀನು ನಮ್ಮೊಂದಿಗೆ ಒಪ್ಪಂದ ಮಾಡಿಕೊಳ್ಳುವುದಾದರೆ, ನಾವು ನಿನ್ನ ಸೇವೆಮಾಡುತ್ತೇವೆ” ಎಂದು ಹೇಳಿದರು.


ಇಸ್ರೇಲರು ಅಖಾಸಿಯದ ಸಮೀಪದಲ್ಲಿ ಇಳಿದುಕೊಂಡಿದ್ದರು. ಅವರು ಅಲ್ಲಿದ್ದಾಗ ಮೋವಾಬ್ ಸ್ತ್ರೀಯರೊಡನೆ ಲೈಂಗಿಕ ಪಾಪಗಳನ್ನು ಮಾಡತೊಡಗಿದರು.


ಬಳಿಕ ಇಸ್ರೇಲರು ಹೊರಟು ಜೆರಿಕೊ ಪಟ್ಟಣದ ಎದುರಾಗಿದ್ದ ಯೊರ್ದನ್ ನದಿಯ ಆಚೆ ಕಡೆಯಲ್ಲಿರುವ ಮೋವಾಬ್ಯರ ಬಯಲುಗಳಲ್ಲಿ ಪಾಳೆಯ ಮಾಡಿಕೊಂಡರು.


ಮೋವಾಬ್ ಸ್ತ್ರೀಯರು ತಮ್ಮ ಸುಳ್ಳುದೇವರಿಗೆ ಮಾಡಿದ ಔತಣಯಜ್ಞಗಳಿಗೆ ಅವರನ್ನು ಆಮಂತ್ರಿಸಿದರು. ಆದ್ದರಿಂದ ಇಸ್ರೇಲರು ಅವರ ಯಜ್ಞಗಳ ಆಹಾರವನ್ನು ತಿಂದರು ಮತ್ತು ಅವರ ದೇವರನ್ನು ಪೂಜಿಸಿದರು. ಈ ರೀತಿ ಇಸ್ರೇಲರು ಸುಳ್ಳುದೇವರಾದ ಪೆಗೋರ್ ಬಾಳನ ಭಕ್ತರಾದರು. ಹೀಗಾಗಿ ಯೆಹೋವನು ಅವರ ಮೇಲೆ ಬಹಳವಾಗಿ ಕೋಪಗೊಂಡನು.


ಆದರೆ ಎಫ್ರಾಯೀಮ್ಯರು ಮತ್ತು ಯೆಹೂದ್ಯರು ಒಟ್ಟುಸೇರಿ ಫಿಲಿಷ್ಟಿಯರನ್ನು ಎದುರಿಸುವರು. ನೆಲದ ಮೇಲೆ ಇರುವ ಸಣ್ಣ ಪ್ರಾಣಿಯನ್ನು ಹಿಡಿಯಲು ಆಕಾಶದಿಂದ ಬರುವ ಹಕ್ಕಿಗಳಂತೆ ಈ ಎರಡು ರಾಷ್ಟ್ರಗಳಿರುವವು. ಅವರು ಒಟ್ಟಾಗಿ ಪೂರ್ವದ ಜನರ ಐಶ್ವರ್ಯವನ್ನು ಕಿತ್ತುಕೊಳ್ಳುವರು. ಎಫ್ರಾಯೀಮ್ ಮತ್ತು ಯೆಹೂದಗಳು ಏದೋಮನ್ನು, ಮೋವಾಬನ್ನು ಮತ್ತು ಅಮ್ಮೋನನ್ನು ತಮ್ಮ ಹತೋಟಿಯಲ್ಲಿಟ್ಟುಕೊಳ್ಳುವವು.


ನಾನು ಈಜಿಪ್ಟ್, ಯೆಹೂದ, ಎದೋಮ್, ಅಮ್ಮೋನ್, ಮೋವಾಬ್ ಜನಾಂಗಗಳ ಜನರ ಬಗ್ಗೆ ಮತ್ತು ಮರಳು ಪ್ರದೇಶದಲ್ಲಿ ವಾಸಮಾಡುತ್ತಿರುವ ಎಲ್ಲಾ ಜನಗಳ ಬಗ್ಗೆ ಮಾತನಾಡುತ್ತಿದ್ದೇನೆ. ಈ ಎಲ್ಲಾ ದೇಶಗಳ ಜನರಿಗೆ ದೈಹಿಕವಾಗಿ ಸುನ್ನತಿ ಆಗಿದ್ದಿಲ್ಲ. ಆದರೆ ಇಸ್ರೇಲ್ ವಂಶದವರು ಹೃದಯ ಸುನ್ನತಿಯಿಲ್ಲದವರು” ಎಂದು ಯೆಹೋವನು ಅನ್ನುತ್ತಾನೆ.


ಮಿಚ್ಫ ನಗರದಲ್ಲಿ ಉಳಿದೆಲ್ಲ ಜನರನ್ನು ಇಷ್ಮಾಯೇಲನು ವಶಪಡಿಸಿಕೊಂಡನು. ಅವರಲ್ಲಿ ರಾಜನ ಹೆಣ್ಣಮಕ್ಕಳು ಮತ್ತು ಅಲ್ಲಿದ್ದ ಬೇರೆ ಜನರೂ ಸೇರಿದ್ದರು. ಆ ಜನರನ್ನು ನೋಡಿಕೊಳ್ಳಲೆಂದು ನೆಬೂಜರದಾನನು ಗೆದಲ್ಯನನ್ನು ನೇಮಿಸಿದ್ದನು. ನೆಬೂಜರದಾನನು ಬಾಬೆಲಿನ ರಾಜನ ವಿಶೇಷ ರಕ್ಷಕದಳದ ಅಧಿಪತಿಯಾಗಿದ್ದನು. ಇಷ್ಮಾಯೇಲನು ಆ ಜನರನ್ನು ಸೆರೆಹಿಡಿದು ಅವರನ್ನು ತೆಗೆದುಕೊಂಡು ಅಮ್ಮೋನ್ಯರ ಸೀಮೆಗೆ ಹೊರಟನು.


ಆದರೆ ಯೆಹೋವನ ಆಜ್ಞೆಯನ್ನು ಉಲ್ಲಂಘಿಸಿ ಯೋಹಾನಾನನು ಮತ್ತು ಸೇನಾಧಿಪತಿಗಳು ಅಳಿದುಳಿದ ಜನರನ್ನು ಯೆಹೂದದಿಂದ ಈಜಿಪ್ಟಿಗೆ ಕರೆದುಕೊಂಡು ಹೋದರು. ಈ ಮುಂಚೆ ಶತ್ರುಗಳು ಆ ಜನರನ್ನು ಬೇರೆ ದೇಶಗಳಿಗೆ ತೆಗೆದುಕೊಂಡು ಹೋಗಿದ್ದರು. ಆದರೆ ಅವರು ಯೆಹೂದಕ್ಕೆ ತಿರುಗಿ ಬಂದಿದ್ದರು.


ಕುರುಬರೇ ಇಲ್ಲವಾದ್ದರಿಂದ ಎತ್ತರವಾದ ಎಲ್ಲಾ ಬೆಟ್ಟಗುಡ್ಡಗಳ ಮೇಲೆ ನನ್ನ ಮಂದೆಯು ಅಲೆದಾಡಿತು; ಭೂಮಂಡಲದ ಎಲ್ಲಾ ಕಡೆಗಳಲ್ಲಿ ಚದರಿ ಹೋಯಿತು.’”


ಈಗ ಯೋಹಾನಾನ ಮತ್ತು ಎಲ್ಲಾ ಸೈನ್ಯಾಧಿಕಾರಿಗಳು, ಎಲ್ಲಾ ಗಂಡಸರು, ಹೆಂಗಸರು ಮತ್ತು ಮಕ್ಕಳನ್ನು ಈಜಿಪ್ಟಿಗೆ ತೆಗೆದುಕೊಂಡು ಹೋದರು. ಆ ಜನಗಳಲ್ಲಿ ರಾಜನ ಹೆಣ್ಣುಮಕ್ಕಳಿದ್ದರು. (ನೆಬೂಜರದಾನನು ಗೆದಲ್ಯನನ್ನು ಆ ಜನರ ಮೇಲ್ವಿಚಾರಕನನ್ನಾಗಿ ನೇಮಿಸಿದ್ದನು. ನೆಬೂಜರದಾನನು ಬಾಬಿಲೋನಿನ ರಾಜನ ವಿಶೇಷ ರಕ್ಷಕದಳದ ಅಧಿಪತಿಯಾಗಿದ್ದನು). ಯೋಹಾನಾನನು ಪ್ರವಾದಿಯಾದ ಯೆರೆಮೀಯನನ್ನು ಮತ್ತು ನೇರೀಯನ ಮಗನಾದ ಬಾರೂಕನನ್ನು ತೆಗೆದುಕೊಂಡು ಹೋದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು