Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 40:15 - ಪರಿಶುದ್ದ ಬೈಬಲ್‌

15 ಆಗ ಕಾರೇಹನ ಮಗನಾದ ಯೋಹಾನಾನನು ಮಿಚ್ಫದಲ್ಲಿ ಗೆದಲ್ಯನೊಂದಿಗೆ ರಹಸ್ಯವಾಗಿ ಮಾತನಾಡಿದನು. ಯೋಹಾನಾನನು ಗೆದಲ್ಯನಿಗೆ ಹೀಗೆ ಹೇಳಿದನು: “ನಾನು ಹೋಗಿ ನೆತನ್ಯನ ಮಗನಾದ ಇಷ್ಮಾಯೇಲನ ಕೊಲೆ ಮಾಡುವೆನು. ಯಾರಿಗೂ ಆ ವಿಷಯ ತಿಳಿಯುವುದಿಲ್ಲ. ನಾವು ಇಷ್ಮಾಯೇಲನಿಗೆ ನಿನ್ನನ್ನು ಕೊಲ್ಲುವ ಅವಕಾಶ ಕೊಡಬಾರದು. ಅದರಿಂದ ನಿನ್ನ ಆಶ್ರಯದಲ್ಲಿ ಬಂದು ನೆಲೆಸಿದ ಎಲ್ಲಾ ಯೆಹೂದ್ಯರು ಮತ್ತೆ ಬೇರೆಬೇರೆ ದೇಶಗಳಲ್ಲಿ ಚದುರಿ ಹೋಗಬೇಕಾಗುತ್ತದೆ. ಆಗ ಅಳಿದುಳಿದ ಕೆಲವೇ ಜನ ಯೆಹೂದಿಗಳು ಸಹ ಇಲ್ಲವಾಗುತ್ತಾರೆ.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

15 ಆಗ ಕಾರೇಹನ ಮಗನಾದ ಯೋಹಾನಾನ ಮಿಚ್ಪದಲ್ಲಿದ್ದ ಗೆದಲ್ಯನಿಗೆ, “ನಾನು ಹೋಗಿ ನೆತನ್ಯನ ಮಗನಾದ ಇಷ್ಮಾಯೇಲನನ್ನು ಕೊಲ್ಲಲಿಕ್ಕೆ ಅಪ್ಪಣೆಯಾಗಲಿ; ಇದು ನಿನ್ನ ಅಪ್ಪಣೆ ಎಂದು ಯಾರಿಗೂ ತಿಳಿದು ಬರುವುದಿಲ್ಲ; ಅವನು ನಿನ್ನನ್ನು ಕೊಂದರೆ ನಿನ್ನ ಆಶ್ರಯದ ಯೆಹೂದ್ಯರೆಲ್ಲರೂ ದಿಕ್ಕಾಪಾಲಾಗಿ ಯೆಹೂದದ ಶೇಷವು ನಿಶ್ಶೇಷವಾಗುವುದಲ್ಲಾ; ಏಕೆ ಹೀಗಾಗಬೇಕು?” ಎಂದು ರಹಸ್ಯವಾಗಿ ವಿಜ್ಞಾಪಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

15 ಆಗ ಕಾರೇಹನ ಮಗ ಯೋಹಾನಾನನು ಮಿಚ್ಪದಲ್ಲಿದ್ದ ಗೆದಲ್ಯನಿಗೆ, “ನಾನು ಹೋಗಿ ನೆತನ್ಯನ ಮಗ ಇಷ್ಮಾಯೇಲನನ್ನು ಕೊಲ್ಲಲು ಅಪ್ಪಣೆಯಾಗಬೇಕು. ಇದು ನಿಮ್ಮ ಅಪ್ಪಣೆಯೆಂದು ಯಾರಿಗೂ ತಿಳಿದುಬರುವುದಿಲ್ಲ. ಅವನು ನಿಮ್ಮನ್ನು ಕೊಂದರೆ ನಿಮ್ಮ ಆಶ್ರಯದ ಯೆಹೂದ್ಯರೆಲ್ಲರು ದಿಕ್ಕಾಪಾಲಾಗಿ ಜುದೇಯದ ಶೇಷವೂ ನಿಶ್ಶೇಷವಾಗುವುದು. ಹೀಗೆ ಆಗುವುದು ಸರಿಯೇ?” ಎಂದು ಗುಟ್ಟಾಗಿ ವಿನಂತಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

15 ಆಗ ಕಾರೇಹನ ಮಗನಾದ ಯೋಹಾನಾನನು ವಿುಚ್ಪದಲ್ಲಿ ಗೆದಲ್ಯನಿಗೆ - ನಾನು ಹೋಗಿ ನೆತನ್ಯನ ಮಗನಾದ ಇಷ್ಮಾಯೇಲನನ್ನು ಕೊಲ್ಲಲಿಕ್ಕೆ ಅಪ್ಪಣೆಯಾಗಲಿ; ಇದು ನಿನ್ನ ಅಪ್ಪಣೆ ಎಂದು ಯಾರಿಗೂ ತಿಳಿದು ಬರುವದಿಲ್ಲ; ಅವನು ನಿನ್ನನ್ನು ಕೊಂದರೆ ನಿನ್ನ ಆಶ್ರಯದ ಯೆಹೂದ್ಯರೆಲ್ಲರೂ ದಿಕ್ಕಾಪಾಲಾಗಿ ಯೆಹೂದದ ಶೇಷವು ನಿಶ್ಶೇಷವಾಗುವದಲ್ಲಾ; ಏಕೆ ಹೀಗಾಗಬೇಕು ಎಂದು ರಹಸ್ಯವಾಗಿ ವಿಜ್ಞಾಪಿಸಲು

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

15 ಆಗ ಕಾರೇಹನ ಮಗ ಯೋಹಾನಾನನು ಮಿಚ್ಪದಲ್ಲಿ ರಹಸ್ಯವಾಗಿ ಗೆದಲ್ಯನ ಸಂಗಡ ಮಾತನಾಡಿ, “ನನ್ನನ್ನು ಹೋಗಗೊಡಿಸು, ನಾನು ನೆತನ್ಯನ ಮಗ ಇಷ್ಮಾಯೇಲನನ್ನು ಯಾರಿಗೂ ತಿಳಿಯದ ಹಾಗೆ ಕೊಂದು ಹಾಕುತ್ತೇನೆ. ಅವನು ನಿನ್ನನ್ನು ಕೊಂದರೆ, ನಿನ್ನ ಬಳಿಗೆ ಕೂಡಿಕೊಳ್ಳುವ ಯೆಹೂದ್ಯರೆಲ್ಲರು ಚದರಿಹೋಗಿ, ಯೆಹೂದದಲ್ಲಿ ಉಳಿದವರು ನಾಶವಾಗುತ್ತಾರಲ್ಲಾ. ಏಕೆ ಹೀಗೆ ಆಗಬೇಕು?” ಎಂದು ವಿಜ್ಞಾಪಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 40:15
10 ತಿಳಿವುಗಳ ಹೋಲಿಕೆ  

ಆದರೆ ಚೆರೂಯಳ ಮಗನಾದ ಅಬೀಷೈ ಆ ಫಿಲಿಷ್ಟಿಯನನ್ನು ಕೊಂದು ದಾವೀದನನ್ನು ರಕ್ಷಿಸಿದನು. ಆಗ ದಾವೀದನ ಜನರು ಅವನಿಂದ ವಿಶೇಷ ಪ್ರಮಾಣವನ್ನು ಮಾಡಿಸಿದರು. ಅವರು ಅವನಿಗೆ, “ನೀನು ನಮ್ಮೊಂದಿಗೆ ಇನ್ನು ಮೇಲೆ ಯುದ್ಧಕ್ಕೆ ಬರಬಾರದು. ನೀನು ಯುದ್ಧಕ್ಕೆ ಹೋಗಿ ಕೊಲ್ಲಲ್ಪಟ್ಟರೆ, ಇಸ್ರೇಲಿನ ಅತ್ಯಂತ ಮಹಾಪುರುಷನನ್ನು ಕಳೆದುಕೊಂಡಂತಾಗುತ್ತದೆ” ಎಂದು ಹೇಳಿದರು.


ಅಬೀಷೈಯು, “ಯೆಹೋವನು ಈ ದಿನ ನಿನ್ನ ಶತ್ರುವನ್ನು ಸೋಲಿಸಲು ನಿನಗೆ ಒಪ್ಪಿಸಿದ್ದಾನೆ. ಸೌಲನನ್ನು ಅವನ ಭರ್ಜಿಯಿಂದಲೇ ಅವನನ್ನು ನೆಲಕ್ಕೆ ಹತ್ತಿಕೊಳ್ಳುವಂತೆ ತಿವಿಯಲು ನನಗೆ ಅವಕಾಶಕೊಡು. ನಾನು ಒಂದೇ ಸಲಕ್ಕೆ ಆ ಕಾರ್ಯವನ್ನು ಮುಗಿಸಿಬಿಡುತ್ತೇನೆ!” ಎಂದು ದಾವೀದನನ್ನು ಕೇಳಿದನು.


ಇಡೀ ಜನಾಂಗವು ನಾಶವಾಗುವುದಕ್ಕಿಂತ ಒಬ್ಬನು ಅವರಿಗೋಸ್ಕರವಾಗಿ ಸಾಯುವುದು ಉತ್ತಮ. ಆದರೆ ನೀವು ಇದನ್ನು ಅರ್ಥಮಾಡಿಕೊಳ್ಳುತ್ತಿಲ್ಲ” ಎಂದು ಹೇಳಿದನು.


ಅವರೆಲ್ಲರೂ ಅವನಿಗೆ, “ಯೆರೆಮೀಯನೇ, ನಮ್ಮ ಬೇಡಿಕೆಯನ್ನು ದಯವಿಟ್ಟು ಕೇಳು. ಯೆಹೂದ ಕುಲದಲ್ಲಿ ಅಳಿದುಳಿದ ಎಲ್ಲಾ ಜನರಿಗಾಗಿ ನಿನ್ನ ದೇವರಾದ ಯೆಹೋವನನ್ನು ಪ್ರಾರ್ಥಿಸು. ಯೆರೆಮೀಯನೇ, ನಮ್ಮಲ್ಲಿ ಈಗ ಬಹಳ ಜನ ಉಳಿದಿಲ್ಲವೆಂಬುದು ನಿನಗೆ ಗೊತ್ತಿದೆ. ಒಂದು ಕಾಲದಲ್ಲಿ ನಾವು ಬಹಳ ಜನರಿದ್ದೆವು.


ನಾನು ಅಪರಿಚಿತರಿಗೆ ಯಾವಾಗಲೂ ಊಟ ಕೊಟ್ಟದ್ದು ನನ್ನ ಮನೆಯಲ್ಲಿರುವ ಎಲ್ಲರಿಗೂ ಗೊತ್ತಿದೆ.


ಆದರೆ ಅವರು, “ಬೇಡ, ನೀನು ನಮ್ಮ ಜೊತೆ ಬರುವುದು ಬೇಡ. ಏಕೆಂದರೆ ನಾವು ಯುದ್ಧರಂಗದಿಂದ ಓಡಿಹೋಗಿಬಿಟ್ಟರೆ, ಅಬ್ಷಾಲೋಮನ ಜನರು ಲಕ್ಷಿಸುವುದಿಲ್ಲ. ನಮ್ಮಲ್ಲಿ ಅರ್ಧದಷ್ಟು ಜನರು ಸತ್ತರೂ, ಅಬ್ಷಾಲೋಮನ ಜನರು ಲಕ್ಷಿಸುವುದಿಲ್ಲ. ಆದರೆ ನೀನು ನಮ್ಮ ಹತ್ತು ಸಾವಿರ ಜನರಷ್ಟು ಬೆಲೆಯುಳ್ಳವನಾಗಿರುವೆ! ನೀನು ನಗರದಲ್ಲಿರುವುದೇ ಉತ್ತಮ. ಅಲ್ಲಿಂದಲೇ ನೀನು ನಮಗೆ ಸಹಾಯ ಮಾಡಬಹುದು” ಎಂದು ಹೇಳಿದರು.


ಜನರು ದಾವೀದನಿಗೆ, “ಯೆಹೋವನು ಈ ದಿನವನ್ನೇ ಕುರಿತು ನಿನ್ನೊಂದಿಗೆ ಮಾತನಾಡಿದನು. ಯೆಹೋವನು ನಿನಗೆ, ‘ನಾನು ನಿನ್ನ ಶತ್ರುವನ್ನು ನಿನಗೆ ಒಪ್ಪಿಸುತ್ತೇನೆ. ನಿನ್ನ ಇಷ್ಟದಂತೆ ಶತ್ರುವಿಗೆ ಏನು ಬೇಕಾದರೂ ಮಾಡು’ ಎಂದು ಹೇಳಿದನು” ಎಂದರು. ನಂತರ ದಾವೀದನು ಸೌಲನ ಹತ್ತಿರಕ್ಕೆ ತೆವಳುತ್ತಾ ಹೋಗಿ ಸೌಲನ ಅಂಗಿಯ ಒಂದು ಮೂಲೆಯನ್ನು ಕತ್ತರಿಸಿದನು. ದಾವೀದನನ್ನು ಸೌಲನು ನೋಡಲಿಲ್ಲ.


ಆ ಸೈನಿಕರು ಮಿಚ್ಫದಲ್ಲಿ ವಾಸವಾಗಿದ್ದ ಗೆದಲ್ಯನಲ್ಲಿಗೆ ಬಂದರು. ಆ ಸೈನಿಕರು ಯಾರೆಂದರೆ: ನೆತನ್ಯನ ಮಗನಾದ ಇಷ್ಮಾಯೇಲ, ಕಾರೇಹನ ಮಕ್ಕಳಾದ ಯೋಹಾನಾನ ಮತ್ತು ಅವನ ಸೋದರ ಯೋನಾಥಾನ, ತನ್ಹಮೆತನ ಮಗನಾದ ಸೆರಾಯ, ನೆಟೋಫದವನಾದ ಏಫಯನ ಮಕ್ಕಳು, ಮಾಕಾ ಊರಿನ ಯೆಜನ್ಯ ಮತ್ತು ಅವರ ಸಂಗಡ ಇದ್ದ ಜನರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು