Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 40:7 - ಪರಿಶುದ್ದ ಬೈಬಲ್‌

7 ಜೆರುಸಲೇಮ್ ನಗರವನ್ನು ನಾಶಮಾಡಿದಾಗ ಯೆಹೂದದ ಕೆಲವು ಜನ ಸೈನ್ಯಾಧಿಕಾರಿಗಳು ಮತ್ತು ಅವನ ಸೈನಿಕರು ಇನ್ನೂ ಕಾಡುಮೇಡುಗಳಲ್ಲಿದ್ದರು. ಬಾಬಿಲೋನಿನ ರಾಜನು ಅಹೀಕಾಮನ ಮಗನಾದ ಗೆದಲ್ಯನನ್ನು ಅಳಿದುಳಿದ ಜನರ ಮೇಲ್ವಿಚಾರಕನನ್ನಾಗಿ ನೇಮಿಸಿದ್ದಾನೆಂಬ ಸಮಾಚಾರ ಕಿವಿಗೆ ಬಿತ್ತು. ಇಲ್ಲಿ ಅಳಿದುಳಿದವರು ಬಹಳ ಬಡವರಾದ ಗಂಡಸರು, ಹೆಂಗಸರು ಮತ್ತು ಮಕ್ಕಳು. ಅವರನ್ನು ಬಂಧಿಗಳನ್ನಾಗಿ ಮಾಡಿಕೊಂಡು ಬಾಬಿಲೋನಿಗೆ ತೆಗೆದುಕೊಂಡು ಹೋಗಿರಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ಬಾಬೆಲಿನ ಅರಸನು ಅಹೀಕಾಮನ ಮಗನಾದ ಗೆದಲ್ಯನನ್ನು ದೇಶಾಧಿಪತಿಯನ್ನಾಗಿ ನೇಮಿಸಿ, ಬಾಬಿಲೋನಿಗೆ ಸೆರೆಯೊಯ್ಯಲ್ಪಡದ ದೇಶೀಯರಲ್ಲಿ ಬಡ, ದಿಕ್ಕಿಲ್ಲದ ಗಂಡಸರನ್ನೂ, ಹೆಂಗಸರನ್ನೂ ಮತ್ತು ಮಕ್ಕಳನ್ನೂ ಅವನ ಅಧಿಕಾರಕ್ಕೆ ಒಪ್ಪಿಸಿದನೆಂಬ ಸುದ್ದಿಯನ್ನು ಕಾಡುಮೇಡುಗಳಲ್ಲಿದ್ದ ಸಕಲ ಯೆಹೂದ ಸೈನಿಕರೂ ಮತ್ತು ಸೇನಾಪತಿಗಳು ಕೇಳಿ ಮಿಚ್ಪದಲ್ಲಿ ವಾಸವಾಗಿದ್ದ ಅವನ ಬಳಿಗೆ ಹೋದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

7 ಬಾಬಿಲೋನಿಯದ ಅರಸನು ಅಹೀಕಾಮನ ಮಗನಾದ ಗೆದಲ್ಯನನ್ನು ನಾಡಿನ ರಾಜ್ಯಪಾಲನನ್ನಾಗಿ ನೇಮಿಸಿದ್ದಾನೆಂಬ ಸುದ್ದಿ ಹಾಗು ಬಾಬಿಲೋನಿಗೆ ಸೆರೆಹೋಗದ ನಾಡಿಗರಲ್ಲಿ ಬಡವರಾದ ಗಂಡಸರನ್ನೂ ಹೆಂಗಸರನ್ನೂ ಮಕ್ಕಳನ್ನೂ ಅವನ ಅಧಿಕಾರಕ್ಕೆ ಒಪ್ಪಿಸಿದ್ದಾನೆಂಬ ಸುದ್ದಿ ಹರಡಿತು. ಕಾಡುಮೇಡುಗಳಲ್ಲಿದ್ದ ಎಲ್ಲ ಯಹೂದ್ಯ ಸೈನಿಕರೂ ಸೇನಾಪತಿಗಳೂ ಇದನ್ನು ಕೇಳಿ ಮಿಚ್ಪದಲ್ಲಿ ವಾಸವಾಗಿದ್ದ ಗೆದಲ್ಯನ ಬಳಿಗೆ ಹೋದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

7 ಬಾಬೆಲಿನ ಅರಸನು ಅಹೀಕಾಮನ ಮಗನಾದ ಗೆದಲ್ಯನನ್ನು ದೇಶಾಧಿಪತಿಯನ್ನಾಗಿ ನೇವಿುಸಿ ಬಾಬೆಲಿಗೆ ಸೆರೆಯೊಯ್ಯಲ್ಪಡದ ದೇಶೀಯರಲ್ಲಿ ದರಿದ್ರರಾದ ಗಂಡಸರನ್ನೂ ಹೆಂಗಸರನ್ನೂ ಮಕ್ಕಳನ್ನೂ ಅವನ ಅಧಿಕಾರಕ್ಕೆ ಒಪ್ಪಿಸಿದನೆಂಬ ಸುದ್ದಿಯನ್ನು ಕಾಡುಮೇಡುಗಳಲ್ಲಿದ್ದ ಸಕಲ ಯೆಹೂದ ಸೈನಿಕರೂ ಸೇನಾಪತಿಗಳೂ ಕೇಳಿ ವಿುಚ್ಪದಲ್ಲಿ ವಾಸವಾಗಿದ್ದ ಅವನ ಬಳಿಗೆ ಹೋದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

7 ಬಾಬಿಲೋನಿನ ಅರಸನು ಅಹೀಕಾಮನ ಮಗ ಗೆದಲ್ಯನನ್ನು ರಾಜ್ಯಪಾಲನಾಗಿ ಮಾಡಿದ್ದಾನೆಂಬ ಸುದ್ದಿಯನ್ನು ಮತ್ತು ಬಾಬಿಲೋನಿಗೆ ಸೆರೆಹೋಗದೆ ಇದ್ದ ದೇಶಿಯರಲ್ಲಿ ಬಡವರಾದ ಗಂಡಸರನ್ನೂ, ಹೆಂಗಸರನ್ನೂ, ಮಕ್ಕಳನ್ನೂ ಅವನ ಅಧಿಕಾರಕ್ಕೆ ಒಪ್ಪಿಸಿದ್ದಾನೆಂಬ ಸುದ್ದಿಯನ್ನು ಉಳಿದಿದ್ದ ಯೆಹೂದ ಸೇನಾಧಿಪತಿಗಳೂ ಅವರ ಜನರೂ ಕೇಳಿದಾಗ,

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 40:7
14 ತಿಳಿವುಗಳ ಹೋಲಿಕೆ  

ಆದರೆ ಬಾಬಿಲೋನ್ ರಾಜನ ವಿಶೇಷ ರಕ್ಷಕದಳದ ಅಧಿಪತಿಯಾದ ನೆಬೂಜರದಾನನು ಯೆಹೂದದ ಕೆಲ ಬಡಜನರನ್ನು ಅಲ್ಲಿಯೇ ಬಿಟ್ಟನು. ಆ ಜನಗಳಿಗೆ ಯಾವ ಆಸ್ತಿಪಾಸ್ತಿ ಇದ್ದಿರಲಿಲ್ಲ. ಆದ್ದರಿಂದ ಅಂದು ನೆಬೂಜರದಾನನು ಯೆಹೂದದ ಆ ಬಡಜನರಿಗೆ ದ್ರಾಕ್ಷಿತೋಟಗಳನ್ನು ಮತ್ತು ಹೊಲಗಳನ್ನು ಕೊಟ್ಟನು.


“ಇಸ್ರೇಲಿನಲ್ಲಿರುವ ಪ್ರತಿಯೊಬ್ಬನು ಈ ಕಾಣಿಕೆಯನ್ನು ಇಸ್ರೇಲಿನ ಅಧಿಪತಿಗೆ ಕೊಡಬೇಕು.


ಯೆಹೂದದ ರಾಜನಾದ ಚಿದ್ಕೀಯನು ಬಾಬಿಲೋನಿನ ಆ ಅಧಿಕಾರಿಗಳನ್ನು ನೋಡಿದನು. ಅವನು ಮತ್ತು ಅವನ ಜೊತೆಗಿದ್ದ ಸೈನಿಕರು ಓಡಿಹೋದರು. ಅವರು ರಾತ್ರಿಯಲ್ಲಿ ಜೆರುಸಲೇಮ್ ನಗರವನ್ನು ಬಿಟ್ಟು ರಾಜನ ಉದ್ಯಾನದ ಮಾರ್ಗವಾಗಿ ಹೊರಗೆ ಹೋದರು. ಅವರು ಎರಡು ಗೋಡೆಗಳ ಮಧ್ಯದಲ್ಲಿದ್ದ ಬಾಗಿಲಿನಿಂದ ಹೊರಗೆ ಬಂದು ಮರುಭೂಮಿಯ ಕಡೆಗೆ ಹೊರಟರು.


ಆಗ ನೆಬೂಕದ್ನೆಚ್ಚರನ ಸೇನೆಯು ನಗರದ ಗೋಡೆಯಲ್ಲಿ ಒಂದು ರಂಧ್ರವನ್ನು ಕೊರೆದರು. ಅಂದಿನ ರಾತ್ರಿ ರಾಜನಾದ ಚಿದ್ಕೀಯ ಮತ್ತು ಅವನ ಸೈನಿಕರೆಲ್ಲರೂ ಓಡಿಹೋದರು. ಅವರು ರಾಜನ ತೋಟದ ಎರಡು ಗೋಡೆಗಳ ಮಧ್ಯಭಾಗದ ರಹಸ್ಯ ಬಾಗಿಲಿನ ಮೂಲಕ ಓಡಿಹೋದರು. ಬಾಬಿಲೋನ್ ಸೇನೆಯು ನಗರವನ್ನು ಸುತ್ತುವರಿದಿತ್ತು. ಆದರೆ ಚಿದ್ಕೀಯ ಮತ್ತು ಅವನ ಸೇನೆಯು ಮರುಭೂಮಿಯ ರಸ್ತೆಯಲ್ಲಿ ತಪ್ಪಿಸಿಕೊಂಡರು.


ಸಾಮಾನ್ಯ ಜನರಲ್ಲಿ ತೀರ ಬಡವರಾದ ಜನರನ್ನು ಮಾತ್ರ ನೆಬೂಜರದಾನನು ಅಲ್ಲಿಯೇ ನೆಲೆಸಲು ಬಿಟ್ಟನು. ಆ ಬಡಜನರು ಅಲ್ಲಿಯೇ ನೆಲೆಸಿ, ಬೇಸಾಯಮಾಡಿ ದ್ರಾಕ್ಷಿಯನ್ನು ಬೆಳೆಯಲು ಅವರನ್ನು ಬಿಟ್ಟುಬಿಟ್ಟನು.


ಕಾರೇಹನ ಮಗನಾದ ಯೋಹಾನಾನನೂ ಅವನೊಂದಿಗಿದ್ದ ಸಕಲ ಸೇನಾಪತಿಗಳೂ ಇಷ್ಮಾಯೇಲನು ಮಾಡಿದ ಎಲ್ಲಾ ದುಷ್ಕೃತ್ಯಗಳ ಬಗ್ಗೆ ಕೇಳಿದರು.


ಈಗ ಯೋಹಾನಾನ ಮತ್ತು ಎಲ್ಲಾ ಸೈನ್ಯಾಧಿಕಾರಿಗಳು, ಎಲ್ಲಾ ಗಂಡಸರು, ಹೆಂಗಸರು ಮತ್ತು ಮಕ್ಕಳನ್ನು ಈಜಿಪ್ಟಿಗೆ ತೆಗೆದುಕೊಂಡು ಹೋದರು. ಆ ಜನಗಳಲ್ಲಿ ರಾಜನ ಹೆಣ್ಣುಮಕ್ಕಳಿದ್ದರು. (ನೆಬೂಜರದಾನನು ಗೆದಲ್ಯನನ್ನು ಆ ಜನರ ಮೇಲ್ವಿಚಾರಕನನ್ನಾಗಿ ನೇಮಿಸಿದ್ದನು. ನೆಬೂಜರದಾನನು ಬಾಬಿಲೋನಿನ ರಾಜನ ವಿಶೇಷ ರಕ್ಷಕದಳದ ಅಧಿಪತಿಯಾಗಿದ್ದನು). ಯೋಹಾನಾನನು ಪ್ರವಾದಿಯಾದ ಯೆರೆಮೀಯನನ್ನು ಮತ್ತು ನೇರೀಯನ ಮಗನಾದ ಬಾರೂಕನನ್ನು ತೆಗೆದುಕೊಂಡು ಹೋದನು.


ಆದರೆ ಕೆಲವು ಕಡುಬಡವರನ್ನು ನೆಬೂಜರದಾನನು ಆ ಪ್ರದೇಶದಲ್ಲಿಯೇ ಬಿಟ್ಟುಹೋದನು. ಅವನು ಆ ಜನರನ್ನು ದ್ರಾಕ್ಷಿತೋಟಗಳಲ್ಲಿ ಮತ್ತು ಹೊಲಗಳಲ್ಲಿ ಕೆಲಸ ಮಾಡಲು ಬಿಟ್ಟುಹೋದನು.


ಬಾಬಿಲೋನಿನ ರಾಜನ ವಿಶೇಷ ರಕ್ಷಕದಳದ ಅಧಿಪತಿಯಾದ ನೆಬೂಜರದಾನನೆಂಬವನು ಜೆರುಸಲೇಮಿನಲ್ಲಿ ಉಳಿದ ಜನರನ್ನು ಹಿಡಿದು ಬಂಧಿಗಳನ್ನಾಗಿ ಮಾಡಿದ್ದನು. ಅವರನ್ನು ಅವನು ಬಾಬಿಲೋನಿಗೆ ತೆಗೆದುಕೊಂಡು ಹೋದನು. ಈ ಮೊದಲೆ ಅವನಿಗೆ ಶರಣಾಗತರಾದವರನ್ನೂ ಸಹ ನೆಬೂಜರದಾನನು ಬಂಧಿಗಳನ್ನಾಗಿ ಮಾಡಿದನು. ಅವನು ಜೆರುಸಲೇಮಿನ ಉಳಿದವರೆಲ್ಲರನ್ನು ಬಂಧಿಗಳನ್ನಾಗಿ ಮಾಡಿ ಬಾಬಿಲೋನಿಗೆ ತೆಗೆದುಕೊಂಡು ಹೋದನು.


ಅವರು ಯೆರೆಮೀಯನನ್ನು ಕಾರಾಗೃಹದ ಅಂಗಳದಿಂದ ಹೊರಗೆ ಕರೆದು ತಂದರು. ಬಾಬಿಲೋನಿನ ಆ ಸೈನ್ಯಾಧಿಕಾರಿಗಳು ಯೆರೆಮೀಯನನ್ನು ಗೆದಲ್ಯನ ವಶಕ್ಕೆ ಕೊಟ್ಟರು. ಗೆದಲ್ಯನು ಅಹೀಕಾಮನ ಮಗ ಮತ್ತು ಅಹೀಕಾಮನು ಶಾಫಾನನ ಮಗನಾಗಿದ್ದನು. ಯೆರೆಮೀಯನನ್ನು ಮನೆಗೆ ಕರೆದುಕೊಂಡು ಹೋಗಬೇಕೆಂದು ಗೆದಲ್ಯನಿಗೆ ಆಜ್ಞಾಪಿಸಲಾಯಿತು. ಅದರಂತೆ ಯೆರೆಮೀಯನನ್ನು ಮನೆಗೆ ಕರೆದುಕೊಂಡು ಹೋಗಲಾಯಿತು; ಅವನು ತನ್ನ ಜನರೊಂದಿಗೆ ವಾಸಿಸತೊಡಗಿದನು.


ಏಳನೇ ತಿಂಗಳಿನಲ್ಲಿ ನೆತನ್ಯನ ಮಗನೂ ಎಲೀಷಾಮನ ಮೊಮ್ಮಗನೂ ಆದ ಇಷ್ಮಾಯೇಲನು ಅಹೀಕಾಮನ ಮಗನಾದ ಗೆದಲ್ಯನಲ್ಲಿಗೆ ಬಂದನು. ಇಷ್ಮಾಯೇಲನು ತನ್ನ ಹತ್ತು ಮಂದಿಯೊಂದಿಗೆ ಬಂದನು. ಆ ಜನರು ಮಿಚ್ಫ ಪಟ್ಟಣಕ್ಕೆ ಬಂದರು. ಇಷ್ಮಾಯೇಲನು ರಾಜವಂಶೀಯನಾಗಿದ್ದನು. ಅವನು ಯೆಹೂದದ ರಾಜನ ಒಬ್ಬ ಅಧಿಕಾರಿಯಾಗಿದ್ದನು. ಇಷ್ಮಾಯೇಲ್ ಮತ್ತು ಅವನ ಜನರು ಗೆದಲ್ಯನೊಂದಿಗೆ ಊಟಮಾಡಿದರು.


ಮಿಚ್ಫ ನಗರದಲ್ಲಿ ಉಳಿದೆಲ್ಲ ಜನರನ್ನು ಇಷ್ಮಾಯೇಲನು ವಶಪಡಿಸಿಕೊಂಡನು. ಅವರಲ್ಲಿ ರಾಜನ ಹೆಣ್ಣಮಕ್ಕಳು ಮತ್ತು ಅಲ್ಲಿದ್ದ ಬೇರೆ ಜನರೂ ಸೇರಿದ್ದರು. ಆ ಜನರನ್ನು ನೋಡಿಕೊಳ್ಳಲೆಂದು ನೆಬೂಜರದಾನನು ಗೆದಲ್ಯನನ್ನು ನೇಮಿಸಿದ್ದನು. ನೆಬೂಜರದಾನನು ಬಾಬೆಲಿನ ರಾಜನ ವಿಶೇಷ ರಕ್ಷಕದಳದ ಅಧಿಪತಿಯಾಗಿದ್ದನು. ಇಷ್ಮಾಯೇಲನು ಆ ಜನರನ್ನು ಸೆರೆಹಿಡಿದು ಅವರನ್ನು ತೆಗೆದುಕೊಂಡು ಅಮ್ಮೋನ್ಯರ ಸೀಮೆಗೆ ಹೊರಟನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು