Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 40:9 - ಪರಿಶುದ್ದ ಬೈಬಲ್‌

9 ಅಹೀಕಾಮನ ಮಗನೂ ಶಾಫಾನನ ಮೊಮ್ಮಗನೂ ಆದ ಗೆದಲ್ಯನು, ಆ ಸೈನಿಕರು ಮತ್ತು ಅವರ ಜನರು ಈಗ ಅಲ್ಲಿ ಹೆಚ್ಚು ಸುರಕ್ಷಿತರೆಂದು ನಂಬಿಕೆಹುಟ್ಟುವ ಹಾಗೆ ಆಣೆಮಾಡಿ ಹೇಳಿದನು. ಗೆದಲ್ಯನು ಹೀಗೆ ಹೇಳಿದನು. “ಸೈನಿಕರೇ, ಬಾಬಿಲೋನಿನ ಜನರ ಸೇವೆಮಾಡಲು ಭಯಪಡಬೇಡಿ. ಈ ಪ್ರದೇಶದಲ್ಲಿ ನೆಲೆಸಿ ಬಾಬಿಲೋನಿನ ರಾಜನ ಸೇವೆಮಾಡಿರಿ. ನೀವು ಹೀಗೆ ಮಾಡಿದರೆ ನಿಮಗೆಲ್ಲ ಒಳ್ಳೆಯದಾಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 ಅಹೀಕಾಮನ ಮಗನೂ ಶಾಫಾನನ ಮೊಮ್ಮಗನೂ ಆದ ಗೆದಲ್ಯನು ಇವರಿಗೂ ಇವರ ಸೈನಿಕರಿಗೂ, “ಕಸ್ದೀಯರಿಗೆ ಅಧೀನರಾಗಿರಲಿಕ್ಕೆ ಹೆದರಬೇಡಿರಿ; ಬಾಬೆಲಿನ ಅರಸನಿಗೆ ಅಧೀನರಾಗಿ ಇಲ್ಲಿಯೇ ವಾಸಿಸಿರಿ; ಆಗ ನಿಮಗೆ ಸುಖವಾಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

9 ಇವರಿಗೂ ಇವರ ಜನರಿಗೂ ಅಹೀಕಾಮನ ಮಗನೂ ಶಾಫಾನನ ಮೊಮ್ಮಗನೂ ಆದ ಗೆದಲ್ಯನು, “ಬಾಬಿಲೋನಿಯರಿಗೆ ಅಧೀನರಾಗಿರಲು ಹೆದರಬೇಡಿ, ಬಾಬಿಲೋನಿನ ಅರಸನಿಗೆ ಅಧೀನರಾಗಿ ಅಲ್ಲಿಯೇ ವಾಸಮಾಡಿ. ಆಗ ನಿಮಗೆ ಒಳ್ಳೆಯದಾಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

9 ಅಹೀಕಾಮನ ಮಗನೂ ಶಾಫಾನನ ಮೊಮ್ಮಗನೂ ಆದ ಗೆದಲ್ಯನು ಇವರಿಗೂ ಇವರ ಸೈನಿಕರಿಗೂ - ಕಸ್ದೀಯರಿಗೆ ಅಧೀನರಾಗಿರಲಿಕ್ಕೆ ಹೆದರಬೇಡಿರಿ; ಬಾಬೆಲಿನ ಅರಸನಿಗೆ ಅಧೀನರಾಗಿ ಇಲ್ಲಿಯೇ ವಾಸಿಸಿರಿ; ಆಗ ನಿಮಗೆ ಸುಖವಾಗುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

9 ಆಗ ಶಾಫಾನನ ಮಗ ಅಹೀಕಾಮನ ಮಗ ಗೆದಲ್ಯನು ಅವರಿಗೂ, ಅವರ ಜನರಿಗೂ ಪ್ರಮಾಣಮಾಡಿ, “ ‘ಬಾಬಿಲೋನಿಯರಿಗೆ ಸೇವೆ ಮಾಡುವುದಕ್ಕೆ ಭಯಪಡಬೇಡಿರಿ; ದೇಶದಲ್ಲಿ ವಾಸವಾಗಿದ್ದು, ಬಾಬಿಲೋನಿನ ಅರಸನಿಗೆ ಸೇವೆಮಾಡಿರಿ; ಆಗ ನಿಮಗೆ ಒಳ್ಳೆಯದಾಗುವುದು,’ ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 40:9
9 ತಿಳಿವುಗಳ ಹೋಲಿಕೆ  

“‘ಆದರೆ ಬಾಬಿಲೋನ್ ರಾಜನ ನೊಗಕ್ಕೆ ತಮ್ಮ ಹೆಗಲನ್ನು ಕೊಡುವ ಮತ್ತು ಅವನ ಆಜ್ಞೆಯನ್ನು ಪಾಲಿಸುವ ಜನಾಂಗಗಳು ಬದುಕುವವು. ಆ ಜನಾಂಗಗಳವರು ತಮ್ಮ ದೇಶದಲ್ಲಿಯೇ ಇದ್ದುಕೊಂಡು ಬಾಬಿಲೋನಿನ ರಾಜನ ಸೇವೆ ಮಾಡುವ ಅವಕಾಶವನ್ನು ಮಾಡಿಕೊಡುತ್ತೇನೆ. ಆ ಜನಾಂಗಗಳ ಜನರು ತಮ್ಮ ದೇಶದಲ್ಲಿಯೇ ವ್ಯವಸಾಯ ಮಾಡಿಕೊಂಡಿರುವರು.’” ಇದು ಯೆಹೋವನ ನುಡಿ.


ನಂತರ ಗೆದಲ್ಯನು ಈ ಸೇನಾಧಿಪತಿಗಳಿಗೆ ಮತ್ತು ಅವರ ಜನರಿಗೆ, “ಬಾಬಿಲೋನ್ ಅಧಿಕಾರಿಗಳಿಗೆ ನೀವು ಹೆದರಬೇಡಿ. ನೀವು ದೇಶದಲ್ಲಿ ವಾಸಿಸುತ್ತ ಬಾಬಿಲೋನ್ ರಾಜನ ಸೇವೆಯನ್ನು ಮಾಡಿ. ಆಗ ನಿಮಗೇನೂ ತೊಂದರೆಯಾಗುವುದಿಲ್ಲ” ಎಂದು ಪ್ರಮಾಣ ಮಾಡಿದನು.


ನೀನು ದುಡಿದು ಸಂಪಾದಿಸಿದ್ದನ್ನು ನೀನೇ ಅನುಭವಿಸುವೆ. ನೀನು ಸಂತೋಷದಿಂದಿರುವೆ. ನಿನಗೆ ಒಳ್ಳೆಯದಾಗುವುದು.


ನೀನು ಯೆಹೋವನಲ್ಲಿ ಭರವಸವಿಟ್ಟು ಒಳ್ಳೆಯ ಕಾರ್ಯಗಳನ್ನು ಮಾಡಿದರೆ, ದೀರ್ಘಕಾಲ ಬದುಕುವೆ; ಭೂಮಿಯ ಅನೇಕ ಫಲಗಳನ್ನು ಅನುಭವಿಸುವೆ.


ಅವನು ತನ್ನ ವಿಶ್ರಾಂತಿಗೆ ಅನುಕೂಲವಾಗಿರುವ ಮತ್ತು ಪ್ರಶಾಂತವಾಗಿರುವ ನಾಡನ್ನು ನೋಡುವನು. ಅವನು ಭಾರವಾದ ಹೊರೆಗಳನ್ನು ಹೊರುವುದಕ್ಕೂ ಗುಲಾಮನಂತೆ ದುಡಿಯುವುದಕ್ಕೂ ಒಪ್ಪಿಕೊಳ್ಳುವನು.”


ಒಂದು ಕಾಲದಲ್ಲಿ ಜೆರುಸಲೇಮ್ ಜನಭರಿತವಾದ ನಗರವಾಗಿತ್ತು. ಆದರೆ ಈಗ ಆ ನಗರವು ಹಾಳುಬಿದ್ದಿದೆ. ಒಂದು ಕಾಲದಲ್ಲಿ ಜೆರುಸಲೇಮ್ ಅತ್ಯಂತ ದೊಡ್ಡನಗರಗಳಲ್ಲಿ ಒಂದಾಗಿತ್ತು. ಆದರೆ ಈಗ ಅದು ವಿಧವೆಯಂತೆ ಆಗಿದೆ. ಒಂದು ಕಾಲದಲ್ಲಿ ಅವಳು ಎಲ್ಲ ನಗರಗಳ ನಡುವೆ ರಾಜಕುಮಾರಿಯಂತೆ ಇದ್ದಳು. ಆದರೆ ಈಗ ಅವಳನ್ನು ದಾಸಿಯನ್ನಾಗಿ ಮಾಡಲಾಗಿದೆ.


ಆಹಾರಕ್ಕಾಗಿ ನಾವು ನಮ್ಮ ಪ್ರಾಣಗಳನ್ನೇ ಆಪತ್ತಿಗೆ ಗುರಿ ಮಾಡಿಕೊಳ್ಳುತ್ತೇವೆ. ಊರ ಹೊರಗೆ ಖಡ್ಗಗಳನ್ನು ಹಿಡಿದುಕೊಂಡಿರುವ ಜನರಿದ್ದಾರೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು