Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 41:10 - ಪರಿಶುದ್ದ ಬೈಬಲ್‌

10 ಮಿಚ್ಫ ನಗರದಲ್ಲಿ ಉಳಿದೆಲ್ಲ ಜನರನ್ನು ಇಷ್ಮಾಯೇಲನು ವಶಪಡಿಸಿಕೊಂಡನು. ಅವರಲ್ಲಿ ರಾಜನ ಹೆಣ್ಣಮಕ್ಕಳು ಮತ್ತು ಅಲ್ಲಿದ್ದ ಬೇರೆ ಜನರೂ ಸೇರಿದ್ದರು. ಆ ಜನರನ್ನು ನೋಡಿಕೊಳ್ಳಲೆಂದು ನೆಬೂಜರದಾನನು ಗೆದಲ್ಯನನ್ನು ನೇಮಿಸಿದ್ದನು. ನೆಬೂಜರದಾನನು ಬಾಬೆಲಿನ ರಾಜನ ವಿಶೇಷ ರಕ್ಷಕದಳದ ಅಧಿಪತಿಯಾಗಿದ್ದನು. ಇಷ್ಮಾಯೇಲನು ಆ ಜನರನ್ನು ಸೆರೆಹಿಡಿದು ಅವರನ್ನು ತೆಗೆದುಕೊಂಡು ಅಮ್ಮೋನ್ಯರ ಸೀಮೆಗೆ ಹೊರಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 ಆ ಮೇಲೆ ನೆತನ್ಯನ ಮಗನಾದ ಇಷ್ಮಾಯೇಲನು ರಾಜಕುಮಾರ್ತೆಯರನ್ನು, ಕಾವಲುದಂಡಿನ ಅಧಿಪತಿಯಾದ ನೆಬೂಜರದಾನನು ಅಹೀಕಾಮನ ಮಗನಾದ ಗೆದಲ್ಯನಿಗೆ ಒಪ್ಪಿಸಿ, ಮಿಚ್ಪದ ಉಳಿದ ಜನರನ್ನು ಸೆರೆಹಿಡಿದು ಅಮ್ಮೋನ್ಯರ ಸೀಮೆಗೆ ಹೊರಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

10 ಬಳಿಕ ನೆತನ್ಯನ ಮಗ ಇಷ್ಮಾಯೇಲನು ರಾಜಕುವರಿಯರನ್ನು ಮತ್ತು ರಕ್ಷಾದಳದ ನಾಯಕನಾದ ನೆಬೂಜರದಾನನನ್ನು ಆಹೀಕಾಮನ ಮಗ ಗೆದಲ್ಯನಿಗೆ ಒಪ್ಪಿಸಿದ್ದ ಮಿಚ್ಪದ ಜನ ಶೇಷವನ್ನು, ಹೀಗೆ ಮಿಚ್ಪದಲ್ಲಿ ಅಳಿದುಳಿದಿದ್ದ ಎಲ್ಲರನ್ನು ಸೆರೆಹಿಡಿದು ಅಮ್ಮೋನ್ಯರ ನಾಡಿಗೆ ಹೊರಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

10 ಆಮೇಲೆ ನೆತನ್ಯನ ಮಗನಾದ ಇಷ್ಮಾಯೇಲನು ರಾಜಕುಮಾರ್ತೆಯರನ್ನು, ಕಾವಲು ದಂಡಿನ ಅಧಿಪತಿಯಾದ ನೆಬೂಜರದಾನನು ಅಹೀಕಾಮನ ಮಗನಾದ ಗೆದಲ್ಯನಿಗೆ ಒಪ್ಪಿಸಿದ ವಿುಚ್ಪದ ಜನಶೇಷವನ್ನು, ಅಂತು ವಿುಚ್ಪದಲ್ಲಿ ಉಳಿದವರೆಲ್ಲರನ್ನೂ ಸೆರೆಹಿಡಿದು ಅಮ್ಮೋನ್ಯರ ಸೀಮೆಗೆ ಹೊರಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

10 ಇಷ್ಮಾಯೇಲನು ಮಿಚ್ಪದಲ್ಲಿದ್ದ ಜನರ ಉಳಿದವರನ್ನೆಲ್ಲಾ ಅರಸನ ಪುತ್ರಿಯರನ್ನೂ, ಕಾವಲಿನವರ ಅಧಿಪತಿಯಾದ ನೆಬೂಜರದಾನನು ಅಹೀಕಾಮನ ಮಗನಾದ ಗೆದಲ್ಯನಿಗೆ ಒಪ್ಪಿಸಿಕೊಟ್ಟು, ಉಳಿದ ಜನರೆಲ್ಲರನ್ನು ಸೆರೆಯಾಗಿ ಒಯ್ದನು. ನೆತನ್ಯನ ಮಗನಾದ ಇಷ್ಮಾಯೇಲನು ಅವರನ್ನು ಸೆರೆಯಾಗಿ ಒಯ್ದು, ಅಮ್ಮೋನ್ಯರ ಬಳಿಗೆ ದಾಟಿಹೋಗುವುದಕ್ಕೆ ಹೊರಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 41:10
13 ತಿಳಿವುಗಳ ಹೋಲಿಕೆ  

ಯೋಹಾನಾನ ಮತ್ತು ಅವನ ಸಂಗಡ ಇದ್ದ ಅಧಿಕಾರಿಗಳು ಹೀಗೆಂದರು: “ಅಮ್ಮೋನ್ಯರ ರಾಜನಾದ ಬಾಲೀಸನು ನಿನ್ನನ್ನು ಕೊಲ್ಲಬಯಸುತ್ತಾನೆ. ಅವನು ನಿನ್ನನ್ನು ಕೊಲ್ಲುವದಕ್ಕಾಗಿ ನೆತನ್ಯನ ಮಗನಾದ ಇಷ್ಮಾಯೇಲನನ್ನು ಕಳುಹಿಸಿದ್ದಾನೆ ಎಂಬುದು ನಿನಗೆ ಗೊತ್ತಿದೆಯೇ?” ಆದರೆ ಅಹೀಕಾಮನ ಮಗನಾದ ಗೆದಲ್ಯನು ಅವರನ್ನು ನಂಬಲಿಲ್ಲ.


ಜೆರುಸಲೇಮ್ ನಗರವನ್ನು ನಾಶಮಾಡಿದಾಗ ಯೆಹೂದದ ಕೆಲವು ಜನ ಸೈನ್ಯಾಧಿಕಾರಿಗಳು ಮತ್ತು ಅವನ ಸೈನಿಕರು ಇನ್ನೂ ಕಾಡುಮೇಡುಗಳಲ್ಲಿದ್ದರು. ಬಾಬಿಲೋನಿನ ರಾಜನು ಅಹೀಕಾಮನ ಮಗನಾದ ಗೆದಲ್ಯನನ್ನು ಅಳಿದುಳಿದ ಜನರ ಮೇಲ್ವಿಚಾರಕನನ್ನಾಗಿ ನೇಮಿಸಿದ್ದಾನೆಂಬ ಸಮಾಚಾರ ಕಿವಿಗೆ ಬಿತ್ತು. ಇಲ್ಲಿ ಅಳಿದುಳಿದವರು ಬಹಳ ಬಡವರಾದ ಗಂಡಸರು, ಹೆಂಗಸರು ಮತ್ತು ಮಕ್ಕಳು. ಅವರನ್ನು ಬಂಧಿಗಳನ್ನಾಗಿ ಮಾಡಿಕೊಂಡು ಬಾಬಿಲೋನಿಗೆ ತೆಗೆದುಕೊಂಡು ಹೋಗಿರಲಿಲ್ಲ.


ಆದರೆ ಹೋರೋಬಿನ ಸನ್ಬಲ್ಲಟನು, ಅಮ್ಮೋನಿಯ ಅಧಿಕಾರಿಯಾದ ಟೋಬೀಯ ಮತ್ತು ಅರಬಿಯವನಾದ ಗೆಷೆಮ್ ಇವರುಗಳು ನಾವು ಪೌಳಿ ಗೋಡೆಯನ್ನು ಕಟ್ಟುತ್ತೇವೆಂಬ ಸುದ್ಧಿಯನ್ನು ಕೇಳಿ ಅಸಹ್ಯವಾಗಿ ಗೇಲಿಮಾಡಿ, “ನೀವು ಮಾಡುತ್ತಿರುವುದೇನು? ರಾಜನಿಗೆ ವಿರುದ್ಧವಾಗಿ ದಂಗೆ ಏಳುತ್ತಿರುವಿರೋ?” ಎಂದು ಕೇಳಿದರು.


ನಾನು ಏನು ಮಾಡುತ್ತಿದ್ದೇನೆಂದು ಸನ್ಬಲ್ಲಟ್ ಮತ್ತು ಟೋಬೀಯ ಎಂಬವರಿಬ್ಬರು ಕೇಳಿಸಿಕೊಂಡರು. ಇಸ್ರೇಲ್ ಜನರಿಗೆ ಸಹಾಯ ಮಾಡಲು ಬರುತ್ತಿದ್ದಾರೆಂಬ ವಿಷಯವು ಅವರನ್ನು ತಳಮಳಗೊಳಿಸಿತು ಮತ್ತು ಅವರಿಗೆ ಸಿಟ್ಟೂ ಬಂದಿತು. ಸನ್ಬಲ್ಲಟನು ಹೋರೋನಿನವನು ಮತ್ತು ಟೋಬೀಯನು ಅಮ್ಮೋನಿಯ ಅಧಿಕಾರಿಯಾಗಿದ್ದನು.


ರಿಬ್ಲದಲ್ಲಿ ಬಾಬಿಲೋನಿನ ರಾಜನು ಚಿದ್ಕೀಯನ ಕಣ್ಣೆದುರಿನಲ್ಲಿಯೇ ಅವನ ಗಂಡುಮಕ್ಕಳನ್ನು ಕೊಲ್ಲಿಸಿದನು. ಚಿದ್ಕೀಯನು ನೋಡುತ್ತಿದ್ದಂತೆಯೇ ನೆಬೂಕದ್ನೆಚ್ಚರನು ಯೆಹೂದದ ಎಲ್ಲಾ ರಾಜಾಧಿಕಾರಿಗಳನ್ನು ಕೊಲ್ಲಿಸಿದನು.


ಯೆಹೋವನು ಹೇಳುವುದೇನೆಂದರೆ: “ಯೆಹೋಯಾಚೀನನು ಮಕ್ಕಳಿಲ್ಲದವನೆಂದು ನೊಂದಾಯಿಸಿರಿ. ಯೆಹೋಯಾಚೀನನು ತನ್ನ ಜೀವನದಲ್ಲಿ ಯಶಸ್ವಿಯಾಗುವುದಿಲ್ಲ. ಅವನ ಮಕ್ಕಳಲ್ಲಿ ಯಾರೂ ದಾವೀದನ ಸಿಂಹಾಸನವನ್ನೇರುವದಿಲ್ಲ. ಅವನ ಮಕ್ಕಳಲ್ಲಿ ಯಾರೂ ಯೆಹೂದದಲ್ಲಿ ರಾಜ್ಯಭಾರ ಮಾಡುವುದಿಲ್ಲ.”


“ನಿನ್ನ ಎಲ್ಲಾ ಹೆಂಡತಿಯರನ್ನು ಮತ್ತು ಮಕ್ಕಳನ್ನು ಹೊರತರಲಾಗುವುದು. ಅವರನ್ನು ಬಾಬಿಲೋನಿನ ಸೈನಿಕರಿಗೆ ಒಪ್ಪಿಸಲಾಗುವುದು. ನೀನೂ ಬಾಬಿಲೋನಿನ ಸೈನಿಕರಿಂದ ತಪ್ಪಿಸಿಕೊಳ್ಳಲಾರೆ. ಬಾಬಿಲೋನಿನ ರಾಜನು ನಿನ್ನನ್ನು ವಶಪಡಿಸಿಕೊಳ್ಳುವನು ಮತ್ತು ಜೆರುಸಲೇಮ್ ನಗರವನ್ನು ಸುಟ್ಟುಹಾಕಲಾಗುವುದು” ಎಂದು ಉತ್ತರಿಸಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು