Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 41:8 - ಪರಿಶುದ್ದ ಬೈಬಲ್‌

8 ಆದರೆ ಉಳಿದ ಹತ್ತು ಜನರು ಇಷ್ಮಾಯೇಲನಿಗೆ, “ನಮ್ಮನ್ನು ಕೊಲ್ಲಬೇಡ, ನಮ್ಮಲ್ಲಿ ಗೋಧಿ, ಜವೆಗೋಧಿ, ಎಣ್ಣೆ ಮತ್ತು ಜೇನುತುಪ್ಪ ಇವೆ. ನಾವು ಆ ವಸ್ತುಗಳನ್ನು ಒಂದು ಹೊಲದಲ್ಲಿ ಬಚ್ಚಿಟ್ಟಿದ್ದೇವೆ” ಎಂದು ಹೇಳಿದರು. ಆದ್ದರಿಂದ ಇಷ್ಮಾಯೇಲನು ಆ ಹತ್ತು ಮಂದಿಯನ್ನು ಬಿಟ್ಟುಬಿಟ್ಟನು. ಅವನು ಬೇರೆಯವರೊಂದಿಗೆ ಅವರನ್ನು ಕೊಲ್ಲಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ಆದರೆ ಆ ಎಂಭತ್ತು ಮಂದಿಯಲ್ಲಿ ಹತ್ತು ಜನರು ಇಷ್ಮಾಯೇಲನಿಗೆ, “ನಮ್ಮನ್ನು ಕೊಲ್ಲಬೇಡ; ಗೋದಿ, ಜವೆಗೋದಿ, ಎಣ್ಣೆ, ಜೇನುತುಪ್ಪ, ಇವುಗಳನ್ನು ಕಾಡಿನಲ್ಲಿ ಬಹಳವಾಗಿ ಬಚ್ಚಿಟ್ಟಿದ್ದೇವೆ” ಎಂದು ಬಿನ್ನೈಸಲು ಅವನು ಅವರನ್ನು ಅವರ ಜೊತೆಯವರಂತೆ ಕೊಲ್ಲದೆ ಬಿಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

8 ಆದರೆ ಆ ಎಂಬತ್ತು ಮಂದಿಯಲ್ಲಿ ಹತ್ತು ಜನರು ಇಷ್ಮಾಯೇಲನಿಗೆ, “ನಮ್ಮನ್ನು ಕೊಲ್ಲಬೇಡಿ; ಗೋದಿ, ಜವೆಗೋದಿ, ಎಣ್ಣೆ, ಜೇನುತುಪ್ಪ ಇವುಗಳನ್ನು ಕಾಡಿನಲ್ಲಿ ರಾಶಿಯಾಗಿ ಬಚ್ಚಿಟ್ಟಿದ್ದೇವೆ,” ಎಂದು ಬಿನ್ನವಿಸಿದರು. ಈ ಕಾರಣ ಅವರನ್ನು ಅವರ ಜೊತೆಯವರಂತೆ ಕೊಲ್ಲದೆ ಬಿಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

8 ಆದರೆ ಆ ಎಂಭತ್ತು ಮಂದಿಯಲ್ಲಿ ಹತ್ತು ಜನರು ಇಷ್ಮಾಯೇಲನಿಗೆ - ನಮ್ಮನ್ನು ಕೊಲ್ಲಬೇಡ; ಗೋದಿ, ಜವೆಗೋದಿ, ಎಣ್ಣೆ, ಜೇನುತುಪ್ಪ, ಇವುಗಳನ್ನು ಕಾಡಿನಲ್ಲಿ ಬಹಳವಾಗಿ ಬಚ್ಚಿಟ್ಟಿದ್ದೇವೆ ಎಂದು ಬಿನ್ನೈಸಲು ಅವನು ಅವರನ್ನು ಅವರ ಜೊತೆಯವರಂತೆ ಕೊಲ್ಲದೆ ಬಿಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

8 ಆದರೆ ಆ ಎಂಬತ್ತು ಮಂದಿಯಲ್ಲಿ ಹತ್ತು ಜನರು ಇಷ್ಮಾಯೇಲನಿಗೆ, “ನಮ್ಮನ್ನು ಕೊಂದು ಹಾಕಬೇಡ. ಏಕೆಂದರೆ ನಮಗೆ ಹೊಲದಲ್ಲಿ ಗೋಧಿ, ಜವೆಗೋಧಿ, ಎಣ್ಣೆ, ಜೇನು ಇವುಗಳನ್ನು ಬಚ್ಚಿಟ್ಟಿದ್ದೇವೆ” ಎಂದು ಬಿನ್ನವಿಸಿದರು. ಆದ್ದರಿಂದ ಅವನು ಹಿಂದೆಗೆದು ಅವರನ್ನು, ಅವರ ಸಹೋದರರ ಮಧ್ಯದಲ್ಲಿ ಕೊಂದುಹಾಕಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 41:8
9 ತಿಳಿವುಗಳ ಹೋಲಿಕೆ  

ಐಶ್ವರ್ಯವಂತರು ತಮ್ಮ ಜೀವವನ್ನು ಕಾಪಾಡಿಕೊಳ್ಳಲು ಈಡುಕೊಡಬೇಕಾಗುವುದು. ಆದರೆ ಬಡವನಿಗೆ ಅಂಥಾ ಯಾವ ಬೆದರಿಕೆಗಳೂ ಇರುವುದಿಲ್ಲ.


ಅದಕ್ಕೆ ಸೈತಾನನು, “ಚರ್ಮಕ್ಕೆ ಚರ್ಮ! ಎಂಬಂತೆ ಮನುಷ್ಯನು ತನ್ನ ಪ್ರಾಣವನ್ನು ಉಳಿಸಿಕೊಳ್ಳುವುದಕ್ಕೆ ತನ್ನ ಸರ್ವಸ್ವವನ್ನೂ ಕೊಡುವನು.


ಒಬ್ಬನು ಪ್ರಪಂಚವನ್ನೆಲ್ಲಾ ಗಳಿಸಿಕೊಂಡು ತನ್ನ ಆತ್ಮವನ್ನೇ ಕಳೆದುಕೊಂಡರೆ ಅದರಿಂದ ಅವನಿಗೇನು ಪ್ರಯೋಜನ? ಮನುಷ್ಯನು ತನ್ನ ಆತ್ಮವನ್ನು ಕೊಂಡುಕೊಳ್ಳಲು ಏನನ್ನು ತಾನೇ ಕೊಡಬಲ್ಲನು?


“ಆದ್ದರಿಂದ ನಿಮ್ಮ ಪ್ರಾಣಧಾರಣೆಗೆ ಬೇಕಾದ ಆಹಾರಕ್ಕಾಗಲಿ ದೇಹಕ್ಕೆ ಬೇಕಾದ ಬಟ್ಟೆಗಾಗಲಿ ನೀವು ಚಿಂತಿಸಬಾರದು. ಪ್ರಾಣವು ಆಹಾರಕ್ಕಿಂತಲೂ ದೇಹವು ಬಟ್ಟೆಗಿಂತಲೂ ಬಹಳ ಮುಖ್ಯವಾದದ್ದೆಂದು ನಾನು ನಿಮಗೆ ಹೇಳುತ್ತೇನೆ.


ಕತ್ತಲೆಯಲ್ಲಿ ಕೂಡಿಸಿಟ್ಟಿದ್ದ ಐಶ್ವರ್ಯವನ್ನೂ ಗುಪ್ತವಾಗಿಟ್ಟಿದ್ದ ನಿಕ್ಷೇಪವನ್ನೂ ನಾನು ನಿನಗೆ ಕೊಡುವೆನು. ನಾನೇ ಯೆಹೋವನೆಂದು ನೀನು ತಿಳಿಯುವಂತೆ ಇದನ್ನು ಮಾಡುವೆನು. ನಾನೇ ಇಸ್ರೇಲರ ದೇವರಾದ ಯೆಹೋವನು. ನಿನ್ನನ್ನು ಹೆಸರೆತ್ತಿ ಕರೆಯುತ್ತಿದ್ದೇನೆ.


ಇಷ್ಮಾಯೇಲನು ಶವಗಳನ್ನು ಆ ಬಾವಿಯೊಳಗೆ ಹಾಕಿದನು. ಆ ಬಾವಿಯು ಬಹಳ ದೊಡ್ಡದಾಗಿತ್ತು. ಅದನ್ನು ಯೆಹೂದದ ರಾಜನಾದ ಆಸನು ತೋಡಿಸಿದ್ದನು. ಯುದ್ಧದ ಸಮಯದಲ್ಲಿ ನಗರದಲ್ಲಿ ನೀರು ಸಾಕಷ್ಟು ಇರಬೇಕೆಂಬ ಉದ್ದೇಶದಿಂದ ರಾಜನಾದ ಆಸನು ಈ ಬಾವಿಯನ್ನು ತೋಡಿಸಿದ್ದನು. ರಾಜನಾದ ಆಸನು ತನ್ನ ನಗರವನ್ನು ಇಸ್ರೇಲಿನ ರಾಜನಾದ ಬಾಷನಿಂದ ರಕ್ಷಿಸುವುದಕ್ಕಾಗಿ ಇದನ್ನು ಕಟ್ಟಿಸಿದ್ದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು