ಯೆರೆಮೀಯ 42:15 - ಪರಿಶುದ್ದ ಬೈಬಲ್15 ಯೆಹೂದದ ಶ್ರೇಷ್ಠ ಜನಗಳೇ, ನೀವು ಒಂದುವೇಳೆ ಹಾಗೆ ಹೇಳುವುದಾದರೆ ಯೆಹೋವನ ಸಂದೇಶವನ್ನು ಕೇಳಿರಿ: ಇಸ್ರೇಲರ ದೇವರೂ ಸರ್ವಶಕ್ತನೂ ಆಗಿರುವ ಯೆಹೋವನು ಹೀಗೆ ಹೇಳುತ್ತಾನೆ: ‘ನೀವು ಈಜಿಪ್ಟಿಗೆ ಹೋಗಿ ಅಲ್ಲಿ ವಾಸಮಾಡಬೇಕೆಂದು ತೀರ್ಮಾನಿಸಿದ್ದರೆ ಪರಿಸ್ಥಿತಿ ಹೀಗಾಗುವುದು: ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201915 ಯೆಹೂದ್ಯರಲ್ಲಿ ಉಳಿದವರೇ, ಯೆಹೋವನ ವಾಕ್ಯವನ್ನು ಈಗ ಕೇಳಿರಿ, ‘ಇಸ್ರಾಯೇಲಿನ ದೇವರೂ ಸೇನಾಧೀಶ್ವರನೂ ಆದ ಯೆಹೋವನು ಇಂತೆನ್ನುತ್ತಾನೆ, ನೀವು ಐಗುಪ್ತಕ್ಕೆ ಹೋಗಬೇಕೆಂದು ಹಟಹಿಡಿದು ಅಲ್ಲಿಗೆ ಸೇರಿ ವಾಸಮಾಡುವುದಾದರೆ, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)15 ಯೆಹೂದ್ಯರಲ್ಲಿ ಅಳಿದು ಉಳಿದವರೇ, ಸರ್ವೇಶ್ವರನ ವಾಕ್ಯವನ್ನು ಈಗ ಕೇಳಿ: ಇಸ್ರಯೇಲಿನ ದೇವರೂ ಸರ್ವೇಶ್ವರರೂ ಆದ ಸರ್ವೇಶ್ವರ ಹೇಳುವುದು ಇದು - ‘ನೀವು ಈಜಿಪ್ಟಿಗೆ ಹೋಗಬೇಕೆಂದು ಹಟಹಿಡಿದು ಅಲ್ಲಿಗೆ ಸೇರಿ ವಾಸಮಾಡುವುದಾದರೆ, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)15 ಯೆಹೂದ್ಯರಲ್ಲಿ ಉಳಿದವರೇ, ಯೆಹೋವನ ವಾಕ್ಯವನ್ನು ಈಗ ಕೇಳಿರಿ; ಇಸ್ರಾಯೇಲಿನ ದೇವರೂ ಸೇನಾಧೀಶ್ವರನೂ ಆದ ಯೆಹೋವನು ಇಂತೆನ್ನುತ್ತಾನೆ - ನೀವು ಐಗುಪ್ತಕ್ಕೆ ಹೋಗಬೇಕೆಂದು ಹಟಹಿಡಿದು ಅಲ್ಲಿಗೆ ಸೇರಿ ವಾಸಮಾಡುವದಾದರೆ ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ15 ಯೆಹೂದದ ಶೇಷವೇ, ಹಾಗಾದರೆ ಈಗ ಯೆಹೋವ ದೇವರ ವಾಕ್ಯವನ್ನು ಕೇಳಿರಿ. ಇಸ್ರಾಯೇಲಿನ ದೇವರಾದ ಸೇನಾಧೀಶ್ವರ ಯೆಹೋವ ದೇವರು ಹೀಗೆ ಹೇಳುತ್ತಾರೆ: ‘ನೀವು ನಿಶ್ಚಯವಾಗಿ ನಿಮ್ಮ ಮುಖಗಳನ್ನು ಈಜಿಪ್ಟಿಗೆ ಹೋಗುವಹಾಗೆ ಇಟ್ಟರೆ ಮತ್ತು ನೀವು ಅಲ್ಲಿ ತಂಗುವುದಕ್ಕೆ ಹೋದರೆ, ಅಧ್ಯಾಯವನ್ನು ನೋಡಿ |
ಉತ್ತರದ ರಾಜನು ತನ್ನ ಸರ್ವಶಕ್ತಿಯಿಂದ ದಕ್ಷಿಣದ ರಾಜನೊಂದಿಗೆ ಹೋರಾಡಲು ನಿರ್ಧರಿಸುವನು. ಅವನು ದಕ್ಷಿಣದ ರಾಜನೊಂದಿಗೆ ಒಂದು ಒಪ್ಪಂದವನ್ನು ಮಾಡಿಕೊಳ್ಳುವನು. ಉತ್ತರದ ರಾಜನು ತನ್ನ ಮಗಳನ್ನು ದಕ್ಷಿಣದ ರಾಜನಿಗೆ ಮದುವೆ ಮಾಡಿಕೊಡುವನು. ದಕ್ಷಿಣದ ರಾಜನನ್ನು ಸೋಲಿಸುವ ಉದ್ದೇಶದಿಂದ ಉತ್ತರದ ರಾಜನು ಹೀಗೆ ಮಾಡುವನು. ಆದರೆ ಅವನ ತಂತ್ರಗಳು ಯಶಸ್ವಿಯಾಗುವದಿಲ್ಲ. ಅವುಗಳಿಂದ ಅವನಿಗೆ ಸಹಾಯ ಸಿಕ್ಕುವದಿಲ್ಲ.
“‘ಆದರೆ ಈಗ ಕೆಲವು ಜನಾಂಗಗಳು ಅಥವಾ ರಾಜ್ಯಗಳು ಬಾಬಿಲೋನಿನ ರಾಜನಾದ ನೆಬೂಕದ್ನೆಚ್ಚರನನ್ನು ಸೇವಿಸಲು ಒಪ್ಪಲಿಲ್ಲ. ಅವುಗಳು ಅವನ ನೊಗವನ್ನು ತಮ್ಮ ಕತ್ತಿನ ಮೇಲೆ ಇಟ್ಟುಕೊಳ್ಳಲು ಒಪ್ಪಲಿಲ್ಲ. ಆದ್ದರಿಂದ ನಾನು ಆ ಜನಾಂಗವನ್ನು ಖಡ್ಗ, ಹಸಿವು ಮತ್ತು ಭಯಂಕರ ವ್ಯಾಧಿಗಳಿಂದ ಶಿಕ್ಷಿಸುತ್ತೇನೆ, ಇದು ಯೆಹೋವನಿಂದ ಬಂದ ಸಂದೇಶ. ನಾನು ಆ ಜನಾಂಗವನ್ನು ನಾಶಗೊಳಿಸುವವರೆಗೂ ಹಾಗೆ ಮಾಡುವೆನು. ಅವನ ವಿರುದ್ಧ ಹೋರಾಡುವ ಜನಾಂಗವನ್ನು ನಾಶಮಾಡುವದಕ್ಕಾಗಿ ನಾನು ನೆಬೂಕದ್ನೆಚ್ಚರನನ್ನು ಉಪಯೋಗಿಸುತ್ತೇನೆ.