Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 42:16 - ಪರಿಶುದ್ದ ಬೈಬಲ್‌

16 ನೀವು ಯುದ್ಧದ ಖಡ್ಗಕ್ಕೆ ಹೆದರುವಿರಿ. ಆದರೆ ಅದು ನಿಮ್ಮನ್ನು ಅಲ್ಲಿ ಸೋಲಿಸುವುದು. ನಿಮಗೆ ಹಸಿವಿನ ಬಗ್ಗೆ ಯೋಚನೆಯಿದೆ. ಆದರೆ ಈಜಿಪ್ಟಿನಲ್ಲಿ ನೀವು ಹಸಿವಿನಿಂದ ಬಳಲುವಿರಿ. ನೀವು ಅಲ್ಲಿ ಸತ್ತುಹೋಗುವಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

16 ಆಗ ನೀವು ಹೆದರುತ್ತಿರುವ ಖಡ್ಗವು ಐಗುಪ್ತದಲ್ಲಿಯೂ ನಿಮ್ಮನ್ನು ಹಿಂದಟ್ಟಿ ಹಿಡಿಯುವುದು, ನೀವು ಅಂಜುತ್ತಿರುವ ಕ್ಷಾಮವು ಅಲ್ಲಿಯೂ ನಿಮ್ಮ ಬೆನ್ನ ಹತ್ತುವುದು; ಅಲ್ಲೇ ಸಾಯುವಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

16 ನೀವು ಹೆದರುತ್ತಿರುವ ಖಡ್ಗ, ಈಜಿಪ್ಟಿನಲ್ಲೂ ನಿಮ್ಮನ್ನು ಹಿಂದಟ್ಟಿ ಬಂದು ಹಿಡಿಯುವುದು. ನೀವು ಅಂಜುತ್ತಿರುವ ಕ್ಷಾಮ ಅಲ್ಲಿಯೂ ನಿಮ್ಮ ಬೆನ್ನು ಹತ್ತುವುದು. ನೀವು ಅಲ್ಲೇ ಸಾಯುವಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

16 ಆಗ ನೀವು ಹೆದರುತ್ತಿರುವ ಖಡ್ಗವು ಐಗುಪ್ತದಲ್ಲಿಯೂ ನಿಮ್ಮನ್ನು ಹಿಂದಟ್ಟಿ ಹಿಡಿಯುವದು, ನೀವು ಅಂಜುತ್ತಿರುವ ಕ್ಷಾಮವು ಅಲ್ಲಿಯೂ ನಿಮ್ಮ ಬೆನ್ನು ಹತ್ತುವದು; ಅಲ್ಲೇ ಸಾಯುವಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

16 ನೀವು ಭಯಪಡುವ ಖಡ್ಗವು ಈಜಿಪ್ಟ್ ದೇಶದಲ್ಲಿ ನಿಮ್ಮನ್ನು ಹಿಡಿಯುವುದು. ನೀವು ಹೆದರಿಕೊಳ್ಳುವ ಕ್ಷಾಮವು ಈಜಿಪ್ಟ್ ದೇಶಕ್ಕೆ ನಿಮ್ಮನ್ನು ಹಿಂದಟ್ಟುವುದು, ನೀವು ಅಲ್ಲೇ ಸಾಯುವಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 42:16
13 ತಿಳಿವುಗಳ ಹೋಲಿಕೆ  

ನೀನು ಖಡ್ಗಕ್ಕೆ ಭಯಪಡುವವನಾದರೂ ನಾನು ನಿನ್ನ ಮೇಲೆ ಖಡ್ಗವನ್ನು ತರುವೆನು. ನಮ್ಮ ಒಡೆಯನಾದ ಯೆಹೋವನು ಈ ಮಾತುಗಳನ್ನು ನುಡಿದಿರುವದರಿಂದ ಇದು ನಡೆಯುವುದು.’”


ನಾನು ಯೆಹೂದದ ಜನರನ್ನು ಗಮನಿಸುತ್ತಿರುವುದು ಅವರನ್ನು ಕಾಪಾಡುವುದಕ್ಕಲ್ಲ. ನಾನು ಅವರನ್ನು ಗಮನಿಸುತ್ತಿರುವುದು ಅವರಿಗೆ ಕೇಡುಮಾಡುವುದಕ್ಕಾಗಿ. ಈಜಿಪ್ಟಿನಲ್ಲಿ ವಾಸಿಸುವ ಯೆಹೂದಿಯರು ಹಸಿವಿನಿಂದ ಸತ್ತುಹೋಗುವರು ಮತ್ತು ಖಡ್ಗಕ್ಕೆ ಬಲಿಯಾಗುವರು. ಅವರು ನಿರ್ನಾಮವಾಗುವವರೆಗೆ ಸಾಯುತ್ತಿರುವರು.


ಈ ಕಾರ್ಯಗಳನ್ನು ಮಾಡಲು ನಾವು ಅವನಿಗೆ ಅವಕಾಶ ಕೊಟ್ಟರೆ ಜನರೆಲ್ಲರೂ ಇವನಲ್ಲಿ ನಂಬಿಕೆ ಇಡುವರು. ಆಗ ರೋಮ್ ರಾಜ್ಯದವರು ಬಂದು ನಮ್ಮ ದೇವಾಲಯವನ್ನೂ ನಮ್ಮ ದೇಶವನ್ನೂ ವಶಪಡಿಸಿಕೊಳ್ಳುವರು” ಅಂದರು.


ಪ್ರವಾದಿಗಳು ನನ್ನ ಸೇವಕರು. ನಿಮ್ಮ ಪೂರ್ವಿಕರಿಗೆ ನ್ಯಾಯಪ್ರಮಾಣಗಳನ್ನು ಬೋಧಿಸಲು ನಾನು ಅವರನ್ನು ಉಪಯೋಗಿಸಿದೆನು. ನಿಮ್ಮ ಪೂರ್ವಿಕರು ಕಟ್ಟಕಡೆಗೆ ಪಾಠವನ್ನು ಕಲಿತರು. ಅವರು, ‘ಸರ್ವಶಕ್ತನಾದ ಯೆಹೋವನು ತಾನು ಹೇಳಿದ್ದನ್ನು ನೆರವೇರಿಸಿದನು. ನಮ್ಮ ದುಷ್ಕೃತ್ಯಗಳಿಗಾಗಿ ನಮ್ಮನ್ನು ಶಿಕ್ಷಿಸಿದನು’ ಎಂದು ಹೇಳಿದರು ಮತ್ತು ದೇವರ ಕಡೆಗೆ ತಿರುಗಿದರು.”


ಆದರೆ ‘ನಾವು ಯೆಹೂದದಲ್ಲಿ ವಾಸಿಸುವದಿಲ್ಲ’ವೆಂದು ನೀವು ಹೇಳಬಹುದು. ನೀವು ಹಾಗೆ ಹೇಳಿದರೆ ನೀವು ನಿಮ್ಮ ದೇವರಾದ ಯೆಹೋವನ ಮಾತನ್ನು ಮೀರಿದಂತಾಗುತ್ತದೆ.


ಪಾಪಿಗಳು ಹೋದಲ್ಲೆಲ್ಲಾ ಕೇಡು ಅವರನ್ನು ಹಿಂಬಾಲಿಸುವುದು. ಸಜ್ಜನರಿಗಾದರೋ ಒಳ್ಳೆಯದೇ ಆಗುತ್ತದೆ.


“ನಿಮ್ಮ ದೇವರಾದ ಯೆಹೋವನು ಹೇಳಿದ ಸಂಗತಿಗಳಿಗೆ ನೀವು ಕಿವಿಗೊಡದೆ ಹೋದದ್ದರಿಂದ, ಆತನು ಕೊಟ್ಟ ಆಜ್ಞೆಗಳಿಗೂ ನಿಯಮಗಳಿಗೂ ನೀವು ವಿಧೇಯರಾಗದಿದ್ದ ಕಾರಣ ಈ ಶಾಪಗಳೆಲ್ಲಾ ನಿಮ್ಮ ಮೇಲೆ ಬರುತ್ತವೆ. ನೀವು ನಾಶವಾಗುವವರೆಗೂ ಅವು ನಿಮ್ಮನ್ನು ಅಟ್ಟಿಸಿಕೊಂಡು ಬರುತ್ತವೆ.


ಜ್ವರ, ಬಾಧೆ, ದೇಹ ಊದಿಕೊಳ್ಳುವಿಕೆ ಇವುಗಳಿಂದ ನಿಮ್ಮನ್ನು ಶಿಕ್ಷಿಸುವನು. ನಿಮ್ಮ ದೇಶದೊಳಗೆ ಸಹಿಸಲಾರದ ಉಷ್ಣವನ್ನು ಕಳುಹಿಸಿ ಮಳೆಬೀಳದಂತೆ ಮಾಡುವನು. ನಿಮ್ಮ ಬೆಳೆ ರೋಗದಿಂದಲೂ ಬಿಸಿಲಿನಿಂದಲೂ ನಾಶವಾಗುವುದು. ಇವೆಲ್ಲಾ ನಿಮಗೆ ಉಂಟಾಗಿ ನೀವು ನಾಶವಾಗುವ ತನಕ ಮುಂದುವರಿಯುವವು.


“ನಿಮ್ಮ ದೇವರಾದ ಯೆಹೋವನು ನಿಮಗೆ ಕೊಡುವ ಆಜ್ಞೆ, ಕಟ್ಟಳೆಗಳಿಗೆ ನೀವು ವಿಧೇಯರಾಗದಿದ್ದರೆ ಈ ಕೆಟ್ಟ ಸಂಗತಿಗಳು ನಿಮಗೆ ತಟ್ಟುವವು:


“‘ಆದರೆ ಈಗ ಕೆಲವು ಜನಾಂಗಗಳು ಅಥವಾ ರಾಜ್ಯಗಳು ಬಾಬಿಲೋನಿನ ರಾಜನಾದ ನೆಬೂಕದ್ನೆಚ್ಚರನನ್ನು ಸೇವಿಸಲು ಒಪ್ಪಲಿಲ್ಲ. ಅವುಗಳು ಅವನ ನೊಗವನ್ನು ತಮ್ಮ ಕತ್ತಿನ ಮೇಲೆ ಇಟ್ಟುಕೊಳ್ಳಲು ಒಪ್ಪಲಿಲ್ಲ. ಆದ್ದರಿಂದ ನಾನು ಆ ಜನಾಂಗವನ್ನು ಖಡ್ಗ, ಹಸಿವು ಮತ್ತು ಭಯಂಕರ ವ್ಯಾಧಿಗಳಿಂದ ಶಿಕ್ಷಿಸುತ್ತೇನೆ, ಇದು ಯೆಹೋವನಿಂದ ಬಂದ ಸಂದೇಶ. ನಾನು ಆ ಜನಾಂಗವನ್ನು ನಾಶಗೊಳಿಸುವವರೆಗೂ ಹಾಗೆ ಮಾಡುವೆನು. ಅವನ ವಿರುದ್ಧ ಹೋರಾಡುವ ಜನಾಂಗವನ್ನು ನಾಶಮಾಡುವದಕ್ಕಾಗಿ ನಾನು ನೆಬೂಕದ್ನೆಚ್ಚರನನ್ನು ಉಪಯೋಗಿಸುತ್ತೇನೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು