Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 42:18 - ಪರಿಶುದ್ದ ಬೈಬಲ್‌

18 “ಸರ್ವಶಕ್ತನೂ ಇಸ್ರೇಲರ ದೇವರೂ ಆಗಿರುವ ಯೆಹೋವನು ಹೀಗೆಂದನು: ‘ನಾನು ಜೆರುಸಲೇಮಿನ ಮೇಲೆ ನನ್ನ ಕೋಪವನ್ನು ತೋರಿಸಿದೆ. ಜೆರುಸಲೇಮಿನಲ್ಲಿ ವಾಸಿಸುವ ಜನರನ್ನು ನಾನು ದಂಡಿಸಿದೆ. ಅದೇ ರೀತಿ, ಈಜಿಪ್ಟಿಗೆ ಹೋಗುವವರೆಲ್ಲರ ಮೇಲೂ ನಾನು ನನ್ನ ಕೋಪವನ್ನು ತೋರಿಸುವೆನು. ಬೇರೆಯವರಿಗೆ ಕೆಟ್ಟದಾಗಲಿ ಎಂದು ಹೇಳಬೇಕಾದಾಗ ಜನರು ನಿಮ್ಮಂತೆ ಆಗಲಿ ಎಂದು ನಿಮ್ಮ ಉದಾಹರಣೆಯನ್ನು ಕೊಡುವರು. ನೀವು ಒಂದು ಶಾಪದ ಶಬ್ದವಾಗುವಿರಿ. ಜನರು ನಿಮ್ಮಿಂದ ನಾಚಿಕೆಪಟ್ಟುಕೊಳ್ಳುವರು. ಜನರು ನಿಮ್ಮನ್ನು ಅಪಮಾನ ಮಾಡುವರು. ಯೆಹೂದವನ್ನು ಪುನಃ ನೀವು ಎಂದೂ ನೋಡುವದಿಲ್ಲ.’

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

18 ಇಸ್ರಾಯೇಲಿನ ದೇವರೂ ಸೇನಾಧೀಶ್ವರನೂ ಆದ ಯೆಹೋವನು ಇಂತೆನ್ನುತ್ತಾನೆ, ನನ್ನ ಉಗ್ರರೋಷಾಗ್ನಿಯು ಯೆರೂಸಲೇಮಿನವರ ಮೇಲೆ ಹೇಗೆ ಸುರಿಯಿತೋ ಹಾಗೆಯೇ ನೀವು ಐಗುಪ್ತದಲ್ಲಿ ಕಾಲಿಟ್ಟ ಕೂಡಲೆ ನನ್ನ ರೋಷಾಗ್ನಿಯು ನಿಮ್ಮ ಮೇಲೆಯೂ ಸುರಿಯುವುದು; ನೀವು ಅಪವಾದ, ವಿಸ್ಮಯ, ಶಾಪ ಮತ್ತು ದೂಷಣೆಗಳಿಗೆ ಗುರಿಯಾಗುವಿರಿ; ಈ ಸ್ಥಳವು ಮತ್ತೆ ನಿಮ್ಮ ಕಣ್ಣಿಗೆ ಬೀಳದು.’”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

18 “ಇಸ್ರಯೇಲಿನ ದೇವರೂ ಸೇನಾಧೀಶ್ವರರೂ ಆದ ಸರ್ವೇಶ್ವರ ಇಂತೆನ್ನುತ್ತಾರೆ: ‘ನನ್ನ ರೌದ್ರ ಕೋಪಾಗ್ನಿಯು ಜೆರುಸಲೇಮಿನ ಮೇಲೆ ಹೇಗೆ ಸುರಿಯಿತೋ ಹಾಗೆಯೆ ನೀವು ಈಜಿಪ್ಟಿನಲ್ಲಿ ಕಾಲಿಟ್ಟ ಕೂಡಲೆ ನನ್ನ ಕೋಪಾಗ್ನಿ ನಿಮ್ಮ ಮೇಲೆಯೂ ಸುರಿಯುವುದು. ನೀವು ಅಪವಾದ, ಅಪಹಾಸ್ಯಕ್ಕೂ, ಶಾಪ, ನಿಂದೆ, ದೂಷಣೆಗಳಿಗೂ ಗುರಿಯಾಗುವಿರಿ. ಈ ನಾಡನ್ನು ನೀವು ಮತ್ತೆ ನೋಡಲಾರಿರಿ.’

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

18 ಇಸ್ರಾಯೇಲಿನ ದೇವರೂ ಸೇನಾಧೀಶ್ವರನೂ ಆದ ಯೆಹೋವನು ಇಂತೆನ್ನುತ್ತಾನೆ - ನನ್ನ ಉಗ್ರರೋಷಾಗ್ನಿಯು ಯೆರೂಸಲೇವಿುನವರ ಮೇಲೆ ಹೇಗೆ ಸುರಿಯಿತೋ ಹಾಗೆಯೇ ನೀವು ಐಗುಪ್ತದಲ್ಲಿ ಕಾಲಿಟ್ಟ ಕೂಡಲೆ ನನ್ನ ರೋಷಾಗ್ನಿಯು ನಿಮ್ಮ ಮೇಲೆಯೂ ಸುರಿಯುವದು; ನೀವು ಅಪವಾದ ವಿಸ್ಮಯ ಶಾಪ ದೂಷಣೆಗಳಿಗೆ ಗುರಿಯಾಗುವಿರಿ; ಈ ಸ್ಥಳವು ಮತ್ತೆ ನಿಮ್ಮ ಕಣ್ಣಿಗೆ ಬೀಳದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

18 ಇಸ್ರಾಯೇಲಿನ ದೇವರೂ, ಸರ್ವಶಕ್ತರೂ ಆದ ಯೆಹೋವ ದೇವರು ಹೀಗೆ ಹೇಳುತ್ತಾರೆ: ‘ನನ್ನ ರೌದ್ರ ಕೋಪಾಗ್ನಿಯು ಯೆರೂಸಲೇಮಿನ ಮೇಲೆ ಹೇಗೆ ಸುರಿಯಿತೋ, ಹಾಗೆಯೇ ನೀವು ಈಜಿಪ್ಟಿನಲ್ಲಿ ಕಾಲಿಟ್ಟ ಕೂಡಲೇ, ನನ್ನ ಕೋಪಾಗ್ನಿ ನಿಮ್ಮ ಮೇಲೆಯೂ ಸುರಿಯುವುದು. ನೀವು ಅಪವಾದ, ಅಪಹಾಸ್ಯಕ್ಕೂ, ಶಾಪ, ನಿಂದೆ, ದೂಷಣೆಗಳಿಗೂ ಗುರಿಯಾಗುವಿರಿ. ಈ ಸ್ಥಳವನ್ನು ನೀವು ಮತ್ತೆ ನೋಡಲಾರಿರಿ.’

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 42:18
38 ತಿಳಿವುಗಳ ಹೋಲಿಕೆ  

ಯೆಹೋವನು ಹೀಗೆಂದನು: “ನಾನು ಈ ಸ್ಥಳಕ್ಕೆ ವಿರೋಧವಾಗಿ ನನ್ನ ಕೋಪವನ್ನು ತೋರಿಸುವೆನು. ನಾನು ಜನರನ್ನೂ ಪ್ರಾಣಿಗಳನ್ನೂ ದಂಡಿಸುವೆನು. ಕಾಡಿನ ಮರಗಳನ್ನೂ ಹೊಲದ ಬೆಳೆಗಳನ್ನೂ ದಂಡಿಸುವೆನು. ನನ್ನ ಕೋಪವು ಉರಿಯುವ ಬೆಂಕಿಯಂತಿರುವದು; ಅದನ್ನು ತಡೆಯಲು ಯಾರಿಗೂ ಸಾಧ್ಯವಿಲ್ಲ.”


ಇನ್ನೂ ಜೆರುಸಲೇಮಿನಲ್ಲಿರುವ ಜನರಿಗೆ ಖಡ್ಗ, ಹಸಿವು ಮತ್ತು ಭಯಂಕರವಾದ ವ್ಯಾಧಿಗಳಿಂದೊಡಗೂಡಿ ಬೆನ್ನಟ್ಟುವೆನು. ಆ ಜನರ ದುರ್ಗತಿಯನ್ನು ನೋಡಿ ಭೂಲೋಕದ ಸಮಸ್ತ ರಾಜ್ಯಗಳಿಗೆ ಭಯ ಉಂಟಾಗುವಂತೆ ಮಾಡುವೆನು. ಆ ಜನರನ್ನು ನಾಶಮಾಡುವೆನು. ನಡೆದ ವಿಷಯಗಳ ಬಗ್ಗೆ ಕೇಳಿ ಜನರು ಬೆರಗಾಗಿ ಸಿಳ್ಳುಹಾಕುವರು. ಯಾರಿಗಾದರೂ, ಕೇಡಾಗಲಿ ಎಂದು ಹೇಳಬೇಕಾದರೆ ಜನರು ಅವರ ಉದಾಹರಣೆಯನ್ನು ಕೊಡುವರು. ನಾನು ಅವರನ್ನು ಅಟ್ಟಿದ ಎಲ್ಲೆಡೆಯಲ್ಲಿಯೂ ಜನರು ಅವರನ್ನು ಅವಮಾನಗೊಳಿಸುವರು.


ಆದ್ದರಿಂದ ಯೆಹೂದ್ಯರ ದೇಶವು ಬರಿದಾದ ಮರುಭೂಮಿಯಾಗುವುದು. ಜನರು ಇಲ್ಲಿಂದ ಹಾದುಹೋಗುವಾಗಲೆಲ್ಲಾ ಸಿಳ್ಳುಹಾಕಿ ತಲೆಯಾಡಿಸುವರು. ದೇಶವು ಹಾಳಾದುದನ್ನು ನೋಡಿ ಬೆರಗಾಗುವರು.


ಯೆಹೂದದಲ್ಲಿ ಅಳಿದುಳಿದ ಕೆಲವು ಜನರಿದ್ದರು. ಆ ಜನರು ಈಜಿಪ್ಟಿನಲ್ಲಿ ನೆಲೆಸಲು ಬಂದರು. ಆದರೆ ನಾನು ಯೆಹೂದಕುಲದ ಆ ಕೆಲವು ಅಳಿದುಳಿದವರನ್ನು ನಾಶಮಾಡುವೆನು. ಅವರು ಕತ್ತಿಗಳಿಂದ ಕೊಲ್ಲಲ್ಪಡುವರು; ಹಸಿವಿನಿಂದ ಸತ್ತುಹೋಗುವರು. ಬೇರೆ ಜನಾಂಗಗಳ ಜನರು ಅವರ ಬಗ್ಗೆ ನಿಂದಿಸುವಂತೆ ಅವರ ಸ್ಥಿತಿ ಆಗುವುದು. ಅವರಿಗೆ ಉಂಟಾದ ದುರ್ಗತಿಯನ್ನು ನೋಡಿ ಬೇರೆ ಜನಾಂಗದ ಜನರು ಭಯಪಡುವರು. ಆ ಜನರು ಶಾಪದ ಶಬ್ಧವಾಗುವರು. ಬೇರೆ ಜನಾಂಗದವರು ಯೆಹೂದದ ಆ ಜನರಿಗೆ ಅಪಮಾನ ಮಾಡುವರು.


ನಾನು ಆ ಜನರನ್ನು ದಂಡಿಸುವೆನು. ಆ ಶಿಕ್ಷೆಯು ಭೂಲೋಕದ ಎಲ್ಲಾ ಜನರಲ್ಲಿ ಭೀತಿಯನ್ನು ಉಂಟು ಮಾಡುವುದು. ಜನರು ಯೆಹೂದದ ಜನರನ್ನು ಗೇಲಿಮಾಡುವರು. ನಾನು ಅವರನ್ನು ತಳ್ಳಿದ ಎಲ್ಲಾ ದೇಶಗಳಲ್ಲಿ ಜನರು ಅವರ ಬಗ್ಗೆ ಪರಿಹಾಸ್ಯದ ಮಾತುಗಳನ್ನು ಆಡುವರು; ಅವರನ್ನು ಶಪಿಸುವರು.


ಯೆಹೋಯಾಚೀನನೇ, ನೀನು ನಿನ್ನ ದೇಶಕ್ಕೆ ಹಿಂದಿರುಗಬೇಕೆಂದು ಅಪೇಕ್ಷಿಸಿದರೂ ನಿನಗೆ ಬರಲು ಸಾಧ್ಯವಾಗದು.”


ನಿಮ್ಮ ಹೆಸರುಗಳು ನನ್ನ ಸೇವಕರಿಗೆ ಶಾಪವಾಗಿ ಉಪಯೋಗಿಸಲ್ಪಡುತ್ತವೆ.” ನನ್ನ ಒಡೆಯನಾದ ಯೆಹೋವನು ನಿಮ್ಮನ್ನು ಸಾಯಿಸುವನು. ಆತನು ತನ್ನ ಸೇವಕರನ್ನು ಹೊಸ ಹೆಸರಿನಿಂದ ಕರೆಯುವನು.


ಅವನು ದೇವರ ಕೋಪವೆಂಬ ದ್ರಾಕ್ಷಾರಸವನ್ನು ಕುಡಿಯುತ್ತಾನೆ. ದೇವರ ಕೋಪವೆಂಬ ಬಟ್ಟಲಿನಲ್ಲಿ ಈ ದ್ರಾಕ್ಷಾರಸವನ್ನು ಅದರ ಪೂರ್ಣಶಕ್ತಿಯ ಸಮೇತವಾಗಿ ತಯಾರಿಸಲಾಗಿದೆ. ಅವನನ್ನು ಪರಿಶುದ್ಧ ದೇವದೂತರ ಮತ್ತು ಕುರಿಮರಿಯಾದಾತನ ಮುಂದೆ ಉರಿಯುವ ಗಂಧಕದಿಂದ ಯಾತನೆಪಡಿಸಲಾಗುವುದು.


ಜನರು ಇಸ್ರೇಲ್ ಮತ್ತು ಯೆಹೂದದ ಹೆಸರುಗಳನ್ನು ಶಾಪ ಇಡುವದಕ್ಕಾಗಿ ಉಪಯೋಗಿಸುವರು. ಆದರೆ ನಾನು ಇಸ್ರೇಲ್ ಮತ್ತು ಯೆಹೂದವನ್ನು ಸಂರಕ್ಷಿಸುವೆನು. ಆ ಹೆಸರುಗಳು ಆಶೀರ್ವದಿಸುವದಕ್ಕಾಗಿ ಉಪಯೋಗಿಸಲ್ಪಡುವದು. ಆದ್ದರಿಂದ ಭಯಪಡಬೇಡಿ, ಬಲಶಾಲಿಗಳಾಗಿರಿ.”


ಯೆಹೋವನ ಮಹಾ ರೌದ್ರಕ್ಕೆದುರಾಗಿ ಯಾರೂ ನಿಲ್ಲಲಾರರು. ಯಾರೂ ಆ ಮಹಾ ಕೋಪವನ್ನು ಸಹಿಸಲು ಸಾಧ್ಯವಿಲ್ಲ. ಆತನ ಕೋಪವು ಬೆಂಕಿಯಂತೆ ದಹಿಸುವದು. ಆತನು ಬರುವಾಗ ಬಂಡೆಯು ಪುಡಿಯಾಗುವುದು.


“ಆಗ ಭವಿಷ್ಯತ್ತಿನ ನಾಯಕನು ಬಹುಜನರೊಂದಿಗೆ ಒಂದು ಒಪ್ಪಂದವನ್ನು ಮಾಡಿಕೊಳ್ಳುವನು. ಆ ಒಪ್ಪಂದ ಒಂದು ವಾರದವರೆಗೆ ಮುಂದುವರೆಯುವದು. ಅರ್ಧವಾರದವರೆಗೆ ಯಜ್ಞ ಮತ್ತು ನೈವೇದ್ಯಗಳನ್ನು ನಿಲ್ಲಿಸಲಾಗುವುದು. ಒಬ್ಬ ಘಾತುಕನು ಬರುವನು. ಅವನು ಬಹುವಿನಾಶಕಾರಿ ಕೆಲಸಗಳನ್ನು ಮಾಡುವನು. ಆದರೆ ಆ ಘಾತುಕನನ್ನು ಮುಗಿಸಿಬಿಡಬೇಕೆಂದು ದೇವರ ಆಜ್ಞೆಯಾಗಿದೆ” ಎಂದು ಹೇಳಿದನು.


ಇಸ್ರೇಲಿನ ಜನರಲ್ಲಿ ಒಬ್ಬರೂ ಸಹ ನಿನ್ನ ಉಪದೇಶವನ್ನು ಪಾಲಿಸಲಿಲ್ಲ. ಅವರೆಲ್ಲರೂ ಅದರಿಂದ ದೂರಾದರು. ಅವರು ನಿನ್ನ ಆಜ್ಞೆಯನ್ನು ಪಾಲಿಸಲಿಲ್ಲ. ಮೋಶೆಯ ಧರ್ಮಶಾಸ್ತ್ರದಲ್ಲಿ ಶಾಪಗಳ ಮತ್ತು ವಾಗ್ದಾನಗಳ ಬಗ್ಗೆ ಹೇಳಲಾಗಿದೆ. (ಮೋಶೆಯು ದೇವರ ಸೇವಕನಾಗಿದ್ದನು) ಆ ಶಾಪಗಳು ಧರ್ಮಶಾಸ್ತ್ರವನ್ನು ಪಾಲಿಸದಿದ್ದವರಿಗೆ ಆಗುವ ಶಿಕ್ಷೆಯಾಗಿದೆ. ಆ ಎಲ್ಲಾ ಶಿಕ್ಷೆಗಳು ನಮಗೆ ಆಗಿವೆ. ನಾವು ಯೆಹೋವನಾದ ನಿನ್ನ ವಿರುದ್ಧ ಪಾಪ ಮಾಡಿದ್ದರಿಂದ ನಮಗೆ ಹೀಗಾಯಿತು.


ಬೆಳ್ಳಿಯು ಕುಲುಮೆಯಲ್ಲಿ ಕರಗಿಹೋಗುವಂತೆಯೇ ನೀವು ಪಟ್ಟಣದಲ್ಲಿ ಕರಗಿಹೋಗುವಿರಿ. ಯೆಹೋವನಾದ ನಾನೇ ನನ್ನ ಕೋಪವನ್ನು ನಿಮ್ಮ ಮೇಲೆ ಸುರಿದೆನೆಂದು ಆಗ ನೀವು ಅರ್ಥಮಾಡಿಕೊಳ್ಳುವಿರಿ.’”


ಯೆಹೋವನು ತನ್ನ ಕೋಪವನ್ನೆಲ್ಲ ಉಪಯೋಗಿಸಿದನು; ತನ್ನ ಕೋಪವನ್ನೆಲ್ಲಾ ಸುರಿದುಬಿಟ್ಟನು. ಆತನು ಚೀಯೋನಿನಲ್ಲಿ ಬೆಂಕಿ ಹೊತ್ತಿಸಿದನು. ಆ ಬೆಂಕಿಯು ಚೀಯೋನಿನ ಅಡಿಪಾಯಗಳವರೆಗೂ ದಹಿಸಿಬಿಟ್ಟಿತು.


ಯೆಹೋವನು ವೈರಿಯಂತೆ ತನ್ನ ಬಿಲ್ಲನ್ನು ಬಾಗಿಸಿದನು. ತನ್ನ ಬಲಗೈಯಲ್ಲಿ ಖಡ್ಗವನ್ನು ಧರಿಸಿದನು: ಆತನು ಯೆಹೂದದ ಎಲ್ಲ ಆಕರ್ಷಕ ಜನರನ್ನು ಕೊಂದುಹಾಕಿದನು. ಆತನು ಶತ್ರುವಿನಂತೆ ಅವರನ್ನು ಕೊಂದನು. ಆತನು ತನ್ನ ರೋಷಾಗ್ನಿಯನ್ನು ಹೊರಸೂಸಿದನು. ಆತನು ಅದನ್ನು ಚೀಯೋನಿನ ಗುಡಾರಗಳ ಮೇಲೆ ಸುರಿಸಿದನು.


ಯೆಹೂದದ ಬಂಧಿಗಳೆಲ್ಲಾ ಬೇರೆಯವರಿಗೆ ಕೇಡಾಗಲಿ ಎಂದು ಕೇಳಿಕೊಳ್ಳುವಾಗ ಆ ಜನರ ಉದಾಹರಣೆ ಕೊಡುವರು. ಆ ಬಂಧಿಗಳು ಹೀಗೆನ್ನುವರು: ‘ಬಾಬಿಲೋನಿನ ರಾಜನು ಬೆಂಕಿಯಲ್ಲಿ ಸುಟ್ಟುಬಿಟ್ಟ ಚಿದ್ಕೀಯನ ಮತ್ತು ಅಹಾಬನ ಗತಿಯನ್ನು ಯೆಹೋವನು ನಿನಗೆ ತರಲಿ.’


ನೀವು ನನ್ನ ಆಜ್ಞಾಪಾಲನೆ ಮಾಡದಿದ್ದರೆ ಜೆರುಸಲೇಮಿನ ನನ್ನ ಈ ಆಲಯಕ್ಕೆ ಶಿಲೋವಿನ ನನ್ನ ಪವಿತ್ರವಾದ ಗುಡಾರದ ಗತಿಯನ್ನು ತರುತ್ತೇನೆ. ಜಗತ್ತಿನ ಜನರು ಬೇರೆ ನಗರಗಳಿಗೆ ದುರ್ಗತಿ ಬರಲಿ ಎಂದು ಕೇಳಿಕೊಳ್ಳುವಾಗ ಜೆರುಸಲೇಮನ್ನು ಜ್ಞಾಪಿಸಿಕೊಳ್ಳುವರು.’”


ಆದ್ದರಿಂದ ನಾನು ಉತ್ತರದ ಎಲ್ಲಾ ಜನಾಂಗಗಳನ್ನು ಕರೆಸುತ್ತೇನೆ.” ಇದು ಯೆಹೋವನ ಸಂದೇಶ. “ನಾನು ಬಾಬಿಲೋನಿನ ರಾಜನಾದ ನೆಬೂಕದ್ನೆಚ್ಚರನನ್ನು ಕೂಡಲೇ ಕರೆಸುವೆನು. ಅವನು ನನ್ನ ಸೇವಕ. ನಾನು ಆ ಜನರನ್ನು ಯೆಹೂದ ದೇಶದ ವಿರುದ್ಧವಾಗಿಯೂ ಯೆಹೂದ್ಯರ ವಿರುದ್ಧವಾಗಿಯೂ ತರುತ್ತೇನೆ. ನಾನು ನಿಮ್ಮ ಸುತ್ತಮುತ್ತಲಿನಲ್ಲಿದ್ದ ಜನಾಂಗಗಳ ವಿರುದ್ಧವಾಗಿಯೂ ಅವರನ್ನು ಕರೆತರುವೆನು. ನಾನು ಆ ದೇಶಗಳನ್ನೆಲ್ಲ ನಾಶಮಾಡುವೆನು. ನಾನು ಆ ಭೂಮಿಗಳನ್ನು ಶಾಶ್ವತವಾಗಿ ಬರಿದಾದ ಮರುಭೂಮಿಗಳನ್ನಾಗಿ ಮಾಡುವೆನು. ಜನರು ಆ ದೇಶಗಳನ್ನು ನೋಡಿ ಅವು ಹಾಳಾಗಿರುವುದನ್ನು ಕಂಡು ಬೆರಗಾಗಿ ಸಿಳ್ಳುಹಾಕುವರು.


ಯೆಹೋವನ ರೋಷವು ನನ್ನಲ್ಲಿ ತುಂಬಿತುಳುಕುತ್ತಿದೆ, ತಡೆದುತಡೆದು ನನಗೆ ಸಾಕಾಗಿದೆ. “ಬೀದಿಯಲ್ಲಾಡುವ ಮಕ್ಕಳ ಮೇಲೆ ಅದನ್ನು ಹೊಯ್ದುಬಿಡಬೇಕು. ಒಂದೆಡೆ ಸೇರುವ ತರುಣರ ಮೇಲೆ ಅದನ್ನು ಹೊಯ್ದುಬಿಡಬೇಕು. ಗಂಡಹೆಂಡತಿಯರಿಬ್ಬರನ್ನು ಅಪಹರಿಸಲಾಗುವುದು. ಮುದುಕರನ್ನೂ ಮುಪ್ಪಿನ ಮುದುಕರನ್ನೂ ಅಪಹರಿಸಲಾಗುವುದು.


ಯಾಕೆಂದರೆ ಜನರು ನನ್ನನ್ನು ತೊರೆದು ಸುಳ್ಳುದೇವರುಗಳಿಗೆ ಧೂಪಹಾಕಿದರು. ಅವರು ತಮ್ಮ ಕೆಟ್ಟಕಾರ್ಯಗಳಿಂದ ನನ್ನನ್ನು ರೇಗಿಸಿದ್ದಾರೆ. ಆದ್ದರಿಂದ ನನ್ನ ಕೋಪಾಗ್ನಿಯನ್ನು ಈ ಸ್ಥಳದ ಮೇಲೆ ಸುರಿಸುವೆನು. ಉರಿಯುವ ಬೆಂಕಿಯಂತಿರುವ ನನ್ನ ಕೋಪಾಗ್ನಿಯನ್ನು ಆರಿಸಲು ಸಾಧ್ಯವಿಲ್ಲ.’


ಅವಳು ಅಶುದ್ಧಳಾಗಿದ್ದರೆ ಮತ್ತು ತನ್ನ ಗಂಡನಿಗೆ ವಿರುದ್ಧವಾಗಿ ಪಾಪಮಾಡಿದ್ದರೆ, ನೀರು ಅವಳಿಗೆ ಹಾನಿಯನ್ನು ಉಂಟುಮಾಡುವುದು, ನೀರು ಅವಳೊಳಗೆ ಹೋಗಿ ಅವಳಿಗೆ ಮಹಾಸಂಕಟವನ್ನು ಉಂಟುಮಾಡುವುದು. ನೀರು ಅವಳನ್ನು ಆ ಕೂಡಲೇ ಬಂಜೆಯನ್ನಾಗಿ ಮಾಡುವುದು. ಅವಳು ತನ್ನ ಜನರ ಮಧ್ಯದಲ್ಲಿ ಶಾಪಗ್ರಸ್ತಳಾಗಿರುವಳು.


“ಆದರೆ ನಾನು ನಿಮಗೆ ಹೇಳುವುದೇನೆಂದರೆ, ಈಜಿಪ್ಟಿನಲ್ಲಿ ಅಡಗಿಕೊಂಡರೆ ಏನೂ ಪ್ರಯೋಜನವಾಗದು. ಈಜಿಪ್ಟು ನಿಮ್ಮನ್ನು ರಕ್ಷಿಸಲಾರದು.


ನಿಮಗೆ ಶಾಶ್ವತವಾದ ಅಪಕೀರ್ತಿಯನ್ನು ತರುವೆನು. ನೀವು ಈ ಅವಮಾನವನ್ನು ಎಂದಿಗೂ ಮರೆಯಲಾರಿರಿ.’”


“‘ಜೆರುಸಲೇಮಿನ ಜನರು ಅನೇಕ ದುಷ್ಕೃತ್ಯಗಳನ್ನು ಮಾಡಿದ್ದಾರೆ. ನಾನು ಅವರ ಮೇಲೆ ಕೋಪಗೊಂಡಿದ್ದೇನೆ; ಅವರಿಗೆ ವಿರುದ್ಧವಾಗಿದ್ದೇನೆ. ನಾನು ಅಲ್ಲಿ ಬಹಳ ಜನರನ್ನು ಕೊಂದುಹಾಕುವೆನು. ಬಾಬಿಲೋನಿನ ಸೈನ್ಯವು ಜೆರುಸಲೇಮಿನ ವಿರುದ್ಧ ಹೋರಾಡಲು ಬರುವುದು. ಜೆರುಸಲೇಮಿನ ಮನೆಗಳಲ್ಲಿ ಅನೇಕಾನೇಕ ಮೃತದೇಹಗಳು ಕಣ್ಣಿಗೆ ಬೀಳುವವು.


ಆದ್ದರಿಂದ ಆ ಜನರ ಮೇಲೆ ನಾನು ನನ್ನ ಕೋಪವನ್ನು ವ್ಯಕ್ತಪಡಿಸಿದೆ. ನಾನು ಯೆಹೂದದ ಪಟ್ಟಣಗಳನ್ನು ಮತ್ತು ಜೆರುಸಲೇಮಿನ ಬೀದಿಗಳನ್ನು ದಂಡಿಸಿದೆ. ನನ್ನ ಕೋಪವು ಜೆರುಸಲೇಮ್ ನಗರವನ್ನು ಮತ್ತು ಯೆಹೂದದ ಪಟ್ಟಣಗಳನ್ನು ಈಗಿದ್ದ ಕಲ್ಲಿನ ದಿಬ್ಬಗಳನ್ನಾಗಿ ಮಾಡಿತು.


ನೀವು ವಿಗ್ರಹಗಳನ್ನು ಮಾಡಿ ನನ್ನನ್ನು ಏಕೆ ಸಿಟ್ಟಿಗೆಬ್ಬಿಸುವಿರಿ? ಈಗ ನೀವು ಈಜಿಪ್ಟಿನಲ್ಲಿ ವಾಸಮಾಡುತ್ತಿರುವಿರಿ. ಈಗ ಈಜಿಪ್ಟಿನ ಸುಳ್ಳುದೇವರುಗಳಿಗೆ ನೈವೇದ್ಯವನ್ನು ಅರ್ಪಿಸಿ ನನಗೆ ಕೋಪ ಬರುವಂತೆ ಮಾಡುತ್ತಿರುವಿರಿ. ನೀವೇ ನಿಮ್ಮನ್ನು ನಾಶಮಾಡಿಕೊಳ್ಳುವಿರಿ. ಅದು ನಿಮ್ಮ ತಪ್ಪೇ ಆಗುವುದು. ಬೇರೆ ಜನಾಂಗದವರು ನಿಂದಿಸುವಂತೆ ನಿಮ್ಮನ್ನು ನೀವು ಮಾಡಿಕೊಳ್ಳುತ್ತಿದ್ದೀರಿ. ಭೂಮಂಡಲದ ಎಲ್ಲಾ ಜನಾಂಗಗಳು ನಿಮ್ಮನ್ನು ತಮಾಷೆ ಮಾಡುವಂತಾಗುವುದು.


ಯೆಹೋವನು ಇನ್ನು ಮುಂದೆ ತಾಳ್ಮೆಯಿಂದ ಇರಲಾರನು. ನೀವು ಮಾಡಿದ ಅಸಹ್ಯಕೃತ್ಯಗಳನ್ನು ಯೆಹೋವನು ದ್ವೇಷಿಸುತ್ತಾನೆ. ಆದ್ದರಿಂದ ಆತನು ನಿಮ್ಮ ದೇಶವನ್ನು ಬರಿದಾದ ಮರುಭೂಮಿಯನ್ನಾಗಿ ಮಾಡಿದ್ದಾನೆ, ಈಗ ಅಲ್ಲಿ ಯಾರೂ ವಾಸಿಸುವದಿಲ್ಲ. ಬೇರೆಯವರು ಆ ದೇಶದ ಬಗ್ಗೆ ಕೆಟ್ಟ ಮಾತುಗಳನ್ನಾಡುತ್ತಾರೆ.


ಪರದೇಶಗಳಿಂದ ನಾನು ನಿಮ್ಮನ್ನು ಹೊರತರುವೆನು. ನಾನು ಆ ದೇಶಗಳಲ್ಲಿ ನಿಮ್ಮನ್ನು ಚದರಿಸಿದೆನು. ಆದರೆ ಆ ದೇಶಗಳಿಂದ ನಾನು ನಿಮ್ಮನ್ನು ಒಟ್ಟುಗೂಡಿಸಿ ಹಿಂದಕ್ಕೆ ಬರಮಾಡುವೆನು. ನನ್ನ ಬಲವಾದ ಕೈಯನ್ನು ಮತ್ತು ಶಕ್ತಿಯುತವಾದ ತೋಳನ್ನು ಮೇಲೆತ್ತಿ ನಿಮ್ಮನ್ನು ಶಿಕ್ಷಿಸಿ ನನ್ನ ಕೋಪವನ್ನು ಪ್ರದರ್ಶಿಸುವೆನು.


ಯೆಹೋವನು ತನ್ನ ಸ್ವಂತ ಗುಡಾರವನ್ನು ಒಂದು ತೋಟವೋ ಎಂಬಂತೆ ಹಾಳುಮಾಡಿದ್ದಾನೆ. ಜನರು ಆತನನ್ನು ಆರಾಧಿಸಲು ಸೇರಿಬರುತ್ತಿದ್ದ ಸ್ಥಳವನ್ನು ನಾಶಪಡಿಸಿದ್ದಾನೆ. ಚೀಯೋನಿನಲ್ಲಿ ಜನರು ಮಹೋತ್ಸವಗಳನ್ನು ಮತ್ತು ವಿಶೇಷ ವಿಶ್ರಾಂತಿ ದಿನಗಳನ್ನು ಮರೆಯುವಂತೆ ಯೆಹೋವನು ಮಾಡಿದ್ದಾನೆ. ಯೆಹೋವನು ರಾಜನನ್ನು ಮತ್ತು ಯಾಜಕರನ್ನು ತಿರಸ್ಕರಿಸಿದ್ದಾನೆ. ಆತನು ತನ್ನ ಕಡುಕೋಪದಿಂದ ಅವರನ್ನು ತಿರಸ್ಕರಿಸಿದ್ದಾನೆ.


ಅವರು ದೇವರಲ್ಲದ್ದಕ್ಕೆ ತಿರುಗಿಕೊಂಡರು. ಮೋಸದ ಬಿಲ್ಲಿನಂತೆ ಅವರಾದರು. ಅವರ ನಾಯಕರು ತಮ್ಮ ಶಕ್ತಿಯ ಬಗ್ಗೆ ಹೆಚ್ಚಳಪಟ್ಟರು. ಆದರೆ ಅವರು ಕತ್ತಿಯಲ್ಲಿ ಸಾಯುವರು. ಆಗ ಈಜಿಪ್ಟಿನ ಜನರು ಅವರನ್ನು ನೋಡಿ ನಗಾಡುವರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು